Saturday | May 2, 2026 |

ಪ್ರವಾಹ; ಕೇಂದ್ರದಿಂದ ಪರಿಹಾರ ಮೊತ್ತ ಇಳಿಕೆ, ರಾಜ್ಯ ಸರ್ಕಾರದ ಮೇಲೆ ಹೆಚ್ಚುವರಿ ದರದ ಹೊರೆ

ಬೆಂಗಳೂರು; ರಾಜ್ಯದ ಹಲವೆಡೆ ಆಗಸ್ಟ್‌ನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಇದರ ಬೆನ್ನಲ್ಲೇ ಪ್ರವಾಹದಿಂದ ಉಂಟಾದ ಮನೆಹಾನಿ ಪ್ರಕರಣಗಳಿಗೆ ನೀಡುತ್ತಿದ್ದ ಪರಿಹಾರ ಮೊತ್ತದಲ್ಲಿ ಕೇಂದ್ರ ಸರ್ಕಾರವು ಪ್ರಸಕ್ತ ಸಾಲಿನಿಂದಲೇ ಗಣನೀಯವಾಗಿ ಇಳಿಕೆ ಮಾಡಿರುವುದು ಇದೀಗ ಬಹಿರಂಗವಾಗಿದೆ.

ಕಳೆದ ಸಾಲಿನಲ್ಲಿ ಸಂಭವಿಸಿದ ಪ್ರವಾಹದಿಂದ ಸಂಪೂರ್ಣ ಮನೆ ಹಾನಿ, ಭಾಗಶಃ ಮನೆಹಾನಿ, ಅಲ್ಪಸ್ವಲ್ಪ ಮನೆಹಾನಿಗೆ ನೀಡುತ್ತಿದ್ದ ಪರಿಹಾರ ಮೊತ್ತವವನ್ನು ಕಡಿತಗೊಳಿಸಿರುವ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರದ ಮೇಲೆ ಇನ್ನಷ್ಟು ಹೊರೆ ಹೊರಿಸಿದೆ.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯಭಾಸ್ಕರ್‌ ಅಧ್ಯಕ್ಷತೆಯಲ್ಲಿ 2020ರ ಜುಲೈ 27ರಂದು ನಡೆದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪರಿಹಾರ ಮೊತ್ತ ಇಳಿಕೆಯಾಗಿರುವ ಸಂಗತಿ ಬಯಲಾಗಿದೆ.
‘ಪ್ರಸಕ್ತ ಸಾಲಿನ ಪ್ರವಾಹದಿಂದ ಉಂಟಾದ ಮನೆಹಾನಿ ಪ್ರಕರಣಗಳಿಗೆ ಕೇಂದ್ರ ಸರ್ಕಾರದ ಎಸ್‌ಡಿಆರ್‌ಎಫ್‌/ಎನ್‌ಡಿಆರ್‌ಎಫ್‌ ಮಾರ್ಗಸೂಚಿಯಂತೆ ಪೂರ್ಣ/ಭಾಗಶಃ ಮನೆಹಾನಿಗೆ 95,100 ರು., ಹಾಗೂ ಅಲ್ಪಸ್ವಲ್ಪ ಮನೆಹಾನಿಗೆ 5,200 ರು. ದರದಲ್ಲಿ ಪರಿಹಾರ ಪಾವತಿಸಬೇಕಾಗಿದೆ. ಹಾಗೆಯೇ ಮಾರ್ಗಸೂಚಿಗಿಂತ ಹೆಚ್ಚುವರಿ ದರವನ್ನು ರಾಜ್ಯ ಸರ್ಕಾರದಿಂದ ಭರಿಸಬೇಕು,’ ಎಂದು ಸಭೆಯಲ್ಲಿ ಭಾಗವಹಿಸಿದ್ದ ರಾಜ್ಯ ವಿಪತ್ತು ಪ್ರಾಧಿಕಾರದ ಆಯುಕ್ತರು ಮಾಹಿತಿ ಒದಗಿಸಿರುವುದು ಸಭೆಯ ನಡವಳಿಯಿಂದ ತಿಳಿದು ಬಂದಿದೆ.

ಕಳೆದ ಸಾಲಿನಂತೆ ಹೆಚ್ಚುವರಿ ದರದಲ್ಲಿ ಮನೆಹಾನಿ ಪರಿಹಾರ ಪಾವತಿಸುವ ಕುರಿತು ಮುಖ್ಯಮಂತ್ರಿ ಮತ್ತು ಕಂದಾಯ ಸಚಿವರ ಅನುಮೋದನೆ ಪಡೆಯಲು ರಾಜ್ಯ ಕಾರ್ಯಕಾರಿ ಸಮಿತಿ ತೀರ್ಮಾನಿಸಿತ್ತು.

ಕಳೆದ ಸಾಲಿನಲ್ಲಿ ಸಂಭವಿಸಿದ್ದ ಪ್ರವಾಹದಿಂದ ಸಂಪೂರ್ಣ ಮನೆಹಾನಿಗೆ 5.00 ಲಕ್ಷ ರು., ಭಾಗಶಃ ಮನೆಹಾನಿಗೆ 3.00 ಲಕ್ಷ ರು., ಅಲ್ಪಸ್ವಲ್ಪ ಮನೆಹಾನಿಗೆ 50,000 ರು.ನಂತೆ ವಿಶೇಷ ಪರಿಹಾರ ಪ್ಯಾಕೇಜ್‌ ಅಡಿ ಪರಿಹಾರ ಪಾವತಿಸಲಾಗಿತ್ತು. ಆದರೆ ಈ ಬಾರಿ ಕೇಂದ್ರ ಸರ್ಕಾರ ಹೊರಡಿಸಿರುವ ಮಾರ್ಗಸೂಚಿ ಪ್ರಕಾರ ಈ ಮೊತ್ತದಲ್ಲಿ ಇಳಿಕೆಯಾಗಿದೆ.

ರಾಜ್ಯದಾದ್ಯಂತ ಮಳೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಹಿಂದಿನ ರೀತಿಯ ಪ್ರಕಾರ ಸಂಪೂರ್ಣ ಮನೆಹಾನಿಗೆ 5.00 ಲಕ್ಷ ಪರಿಹಾರ ನೀಡಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರಾದರೂ ಕೇಂದ್ರ ಸರ್ಕಾರದ ಮಾರ್ಗಸೂಚಿಗಿಂತ ಹೆಚ್ಚುವರಿ ದರವನ್ನು ರಾಜ್ಯ ಸರ್ಕಾರವೇ ಭರಿಸುವುದು ಅನಿವಾರ್ಯವಾಗಿದೆ.

ಪ್ರಸಕ್ತ ಸಾಲಿನಲ್ಲಿ ಸಂಭವಿಸಿರುವ ಪ್ರವಾಹದಿಂದ 67 ಮಾನವ ಜೀವಹಾನಿ, 3,695 ಮನೆಹಾನಿ, 271 ಜಾನುವಾರ ಹಾನಿಯಾಗಿದೆ. ದಕ್ಷಿಣ ಒಳನಾಡು ಪ್ರದೇಶದಲ್ಲಿ ವಾಡಿಕೆಗಿಂತ ಶೇ.34ರಷ್ಟು ಹೆಚ್ಚು ಮಳೆಯಾಗಿದೆ. ಮಲೆನಾಡು ಪ್ರದೇಶದಲ್ಲಿ ವಾಡಿಕೆಗಿಂತ ಶೇ.33ರಷ್ಟು ಕಡಿಮೆ ಮಳೆಯಾಗಿದ್ದರೆ, ಕರಾವಳಿ ಪ್ರದೇಶದಲ್ಲಿಯೂ ವಾಡಿಕೆಗಿಂತ ಶೇ.13ರಷ್ಟು ಕಡಿಮೆ ಮಳೆಯಾಗಿದೆ. ಒಟ್ಟಾರೆಯಾಗಿ 25 ಜಿಲ್ಲೆಗಳಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿದೆ. ಆಗಸ್ಟ್‌ ತಿಂಗಳಲ್ಲಿ ರಾಜ್ಯದಲ್ಲಿ ವಾಡಿಕೆಗಿಂತಲೂ ಹೆಚ್ಚು ಮಳೆಯಾಗುವ ಸಾಧ್ಯತೆ ಇರುವುದು ಗೊತ್ತಾಗಿದೆ.

ಕಳೆದ ಬಾರಿ ಮಹಾರಾಷ್ಟ್ರ ರಾಜ್ಯದ ಜಲಾಶಯಗಳಿಂದ ಹೊರಬಿಟ್ಟಿದ್ದ ನೀರಿನಿಂದಾಗಿ ಉತ್ತರ, ಹೈದರಬಾದ್‌ ಕರ್ನಾಟಕ ಸಂಪೂರ್ಣ ಮುಳುಗಿ ಹೋಗಿತ್ತು. ಹೀಗಾಗಿ ಈ ಬಾರಿ ರಾಜ್ಯದ ಅಧಿಕಾರಿಗಳು ಮಹಾರಾಷ್ಟ್ರದ ಜಲಾಶಯಗಳಿಂದ ಹೊರಬರುತ್ತಿರುವ ನೀರಿನ ಮಾಹಿತಿಯನ್ನು ಸೂಕ್ಷ್ಮವಾಗಿ ಗಮನಿಸದೇ ಇದ್ದಲ್ಲಿ ಇನ್ನಷ್ಟು ಅನಾಹುತಗಳು ಸಂಭವಿಸಬಹುದು ಎಂದು ಅಧಿಕಾರಿಯೊಬ್ಬರು ‘ದಿ ಫೈಲ್‌’ಗೆ ತಿಳಿಸಿದರು.

ಮಹಾರಾಷ್ಟ್ರ ಮತ್ತು ಚಿಕ್ಕಮಗಳೂರಿನಲ್ಲಿ ಸತತವಾಗಿ ಮಳೆ ಸುರಿಯುತ್ತಿರುವ ಕಾರಣ ರಾಯಚೂರು ಸೇರಿದಂತೆ ಇದರ ಆಸುಪಾಸು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಬಿಗಡಾಯಿಸಲಿದೆ. ಈಗಾಗಲೇ ಕೃಷ್ಣಾ ನದಿ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಮುಂದಿನ ದಿನಗಳಲ್ಲಿ ಹೊರಹರಿವು ಹೆಚ್ಚಲಿದೆ. ಅದೇ ರೀತಿ ನಾರಾಯಣಪುರ ಜಲಾಶಯದಿಂದ ಈಗಾಗಲೇ 70 ಸಾವಿರ ಕ್ಯುಸೆಕ್‌ ಅಡಿ ಹೊರಬಿಡಲಾಗಿದೆ.

ಸದ್ಯ ಮುಂಬೈನಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆ, ಉತ್ತರ ಕರ್ನಾಟಕದ ಬಹುತೇಕ ಪ್ರದೇಶಗಳಲ್ಲಿ ಪ್ರವಾಹದ ಮಟ್ಟದಲ್ಲಿಯೂ ಭಾರೀ ಏರಿಕೆ ಆಗಬಹುದು ಎಂದು ಹೇಳಲಾಗುತ್ತಿದೆ. ಬೆಳಗಾವಿ ಜಿಲ್ಲೆಯಲ್ಲಿದ್ದ ವಾಹನ ಸಂಪರ್ಕ ಸೇತುವೆಗಳು ಈಗಾಗಲೇ ನೀರಿನಲ್ಲಿ ಮುಳುಗಿ ಹೋಗಿವೆ.

ಹಾಗೆಯೇ ತುಂಗಭದ್ರಾ ಬದಿಯಲ್ಲಿ ಪ್ರವಾಹ ಅರಂಭವಾಗಿದೆಯಲ್ಲದೆ ತುಂಗಭದ್ರಾ ಜಲಾಶಯದಿಂದ 8 ಸಾವಿರ ಕ್ಯುಸೆಕ್‌ ಅಡಿ ನೀರು ಹೊರಬಿಡಲಾಗುತ್ತಿದೆ. ಒಂದೂವರೆ ಲಕ್ಷ ಕ್ಯುಸೆಕ್‌ ದಾಟಿದರೆ ಸಿಂಧನೂರು, ಮಾನ್ವಿ ತಾಲೂಕಿನ ಹಲವು ಗ್ರಾಮಗಳಿಗೆ ನೀರು ನುಗ್ಗಲಿದೆ.

Hot this week

ವೈಟ್‌ ಟ್ಯಾಪಿಂಗ್‌ ಗೋಲ್ಮಾಲ್‌; ಅಗತ್ಯವಿರದಿದ್ದರೂ ಕಾಮಗಾರಿ, ತಾಂತ್ರಿಕ ಪರಿಶೀಲನೆಯಿಲ್ಲದಿದ್ದರೂ ಹೆಚ್ಚುವರಿ ವೆಚ್ಚ, ಗುತ್ತಿಗೆದಾರರಿಗೆ ಲಾಭ

ಬೆಂಗಳೂರು;  ವೈಟ್‌ ಟ್ಯಾಪಿಂಗ್ ಅಗತ್ಯವಿಲ್ಲದಿದ್ದರೂ  ಕಾಮಗಾರಿ ಆರಂಭಿಸಿದ ನಂತರ ತಾಂತ್ರಿಕ ಮಂಜೂರಾತಿ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

Topics

ವೈಟ್‌ ಟ್ಯಾಪಿಂಗ್‌ ಗೋಲ್ಮಾಲ್‌; ಅಗತ್ಯವಿರದಿದ್ದರೂ ಕಾಮಗಾರಿ, ತಾಂತ್ರಿಕ ಪರಿಶೀಲನೆಯಿಲ್ಲದಿದ್ದರೂ ಹೆಚ್ಚುವರಿ ವೆಚ್ಚ, ಗುತ್ತಿಗೆದಾರರಿಗೆ ಲಾಭ

ಬೆಂಗಳೂರು;  ವೈಟ್‌ ಟ್ಯಾಪಿಂಗ್ ಅಗತ್ಯವಿಲ್ಲದಿದ್ದರೂ  ಕಾಮಗಾರಿ ಆರಂಭಿಸಿದ ನಂತರ ತಾಂತ್ರಿಕ ಮಂಜೂರಾತಿ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

ಆಧಾರ್ ಕಾರ್ಡ್‌ಗಿಂತಲೂ ಶಕ್ತಿ ಸ್ಮಾರ್ಟ್‌ ದುಬಾರಿ, ಎಸ್‌ಪಿವಿ ರಚನೆಯಾದರೂ ಸಿಗದ ಕಾರ್ಡ್‌; 185 ಕೋಟಿ ವೆಚ್ಚ ಭರಿಸುವವರಾರು?

ಬೆಂಗಳೂರು; ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ  ಸೌಲಭ್ಯ ಕಲ್ಪಿಸುವ 'ಶಕ್ತಿ'...

ಟೆಲಿಕಾಂ ಕಂಪನಿಯಿಂದ ವಿಧಾನಸೌಧ ಟರೇಸ್‌ ಅನಧಿಕೃತ ಬಳಕೆ; ವಸೂಲಾಗದ ನೆಲಬಾಡಿಗೆ, ನಿಯಮ ಉಲ್ಲಂಘಿಸಿದ್ದರೂ ಕ್ರಮವಿಲ್ಲ

ಬೆಂಗಳೂರು; ಟೆಲಿಕಾಂ ಮೂಲಸೌಕರ್ಯ ಕಂಪನಿಗಳಲ್ಲಿ ಖ್ಯಾತಿ ಹೊಂದಿರುವ ಆಂಧ್ರ ಪ್ರದೇಶ ಮೂಲದ...

Related Articles

Popular Categories

error: Content is protected !!