Friday | May 1, 2026 |

ಲಾಕ್‌ಡೌನ್‌ ಸಂಕಷ್ಟ; ಪರಿಶಿಷ್ಟ ಜಾತಿಯವರಲ್ಲಿ 3 ಪಟ್ಟು ಉದ್ಯೋಗ ನಷ್ಟ

ಬೆಂಗಳೂರು; ದೇಶದಾದ್ಯಂತ ಲಾಕ್‌ಡೌನ್‌ ನಂತರ ಉದ್ಯೋಗ ಕಳೆದುಕೊಂಡಿರುವ ಅಂದಾಜು 100-120 ದಶಲಕ್ಷದ ಪೈಕಿ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದವರೇ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಕೂಡಿದ್ದಾರೆ ಎಂದು ಅಶೋಕ ವಿಶ್ವವಿದ್ಯಾಲಯದ ಅರ್ಥಶಾಸ್ತ್ರದ ಪ್ರಾಧ್ಯಾಪಕಿ ಅಶ್ವಿನಿ ದೇಶಪಾಂಡೆ ಅವರು ನಡೆಸಿರುವ ಸಂಶೋಧನೆ ಹೊರಗೆಡವಿದೆ.

ಆರ್ಥಿಕವಾಗಿ ದುರ್ಬಲ ವರ್ಗಗಳು ಮಾತ್ರವಲ್ಲದೆ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದವರ ಉದ್ಯೋಗದ ಮೇಲೆ ಲಾಕ್‌ಡೌನ್‌ ಹೆಚ್ಚಿನ ಪರಿಣಾಮ ಬೀರಿದೆ ಎಂದು ಇಂಡಿಯಾ ಸ್ಪೆಂಡ್‌ಗೆ ನೀಡಿದ ಸಂದರ್ಶನದಲ್ಲಿ ಈ ಕುರಿತು ವಿಸ್ತೃತವಾಗಿ ಚರ್ಚಿಸಿದ್ದಾರೆ.

ಲಾಕ್‌ಡೌನ್ ಪರಿಣಾಮಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಗುಂಪುಗಳ ಮೇಲೆ ಪ್ರಭಾವ ಬೀರಿದೆ ಎಂದು ಹೇಳಿರುವ ಅವರು ಮೇಲ್ವರ್ಗಗಳಲ್ಲಿ ಕಂಡು ಬಂದಿರುವ ಉದ್ಯೋಗ ನಷ್ಟಕ್ಕಿಂತ ಈ ವರ್ಗಗಳಲ್ಲಿ ಮೂರುಪಟ್ಟು ಹೆಚ್ಚು ನಷ್ಟವಾಗಿದೆ ಎಂದು ಅಧ್ಯಯನ ಮೂಲಕ ವಿವರಿಸಿದ್ದಾರೆ.

ಶಿಕ್ಷಣ, ಉದ್ಯೋಗ, ಬಾಲ್ಯದ ಆರೋಗ್ಯ ಸೂಚಕಗಳನ್ನಾಧರಿಸಿ ಉದ್ಯೋಗ ನಷ್ಟದ ಕುರಿತು ಸಂಶೋಧನೆ ಮಾಡಿರುವ ಅಶ್ವಿನಿ ದೇಶಪಾಂಡೆ ಅವರು ದೈನಂದಿನ ಮತ್ತು ವೇತನದ ಉದ್ಯೋಗಗಳು ಯಾವುದೇ ಸುರಕ್ಷತೆಯಿಲ್ಲದೇ ಅನಿಶ್ಚತೆಯಿಂದ ಕೂಡಿವೆ. ಶಿಕ್ಷಣದಲ್ಲಿ ಮೇಲ್ಜಾತಿಗಳಿಗೆ ಹೆಚ್ಚಿನ ಪ್ರವೇಶ ಇರುವ ಕಾರಣ ಉದ್ಯೋಗಗಳಲ್ಲಿ ಸುರಕ್ಷಿತವನ್ನು ಹೊಂದಿದ್ದಾರೆ. ಹೀಗಾಗಿ ಲಾಕ್‌ಡೌನ್‌ನಿಂದ ಮತ್ತು ಆ ನಂತರದ ಆರ್ಥಿಕ ಆಘಾತಗಳಿಗೆ ಕಡಿಮೆ ಗುರಿಯಾಗಿದ್ದಾರೆ ಎಂಬುದನ್ನು ಅಧ್ಯಯನ ಮೂಲಕ ಬೆಳಕಿಗೆ ತಂದಿದ್ದಾರೆ.

12 ವರ್ಷಗಳಿಗಿಂತ ಹೆಚ್ಚು ಶಾಲಾ ಶಿಕ್ಷಣವನ್ನು ಹೊಂದಿರುವ ವ್ಯಕ್ತಿಗಳ ಪಾಲು ಮೇಲ್ಜಾತಿಗಳಲ್ಲಿ ಶೇ.37ರಷ್ಟಿದ್ದರೆ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಶೇ.17ರಷ್ಟಿದೆ. ಮೇಲ್ಜಾತಿಗಳು ಶಿಕ್ಷಣಕ್ಕೆ ಹೆಚ್ಚಿನ ಪ್ರವೇಶವನ್ನು ಹೊಂದಿರುವುದರಿಂದಲೇ ಉದ್ಯೋಗಗಳಲ್ಲಿ ಹೆಚ್ಚಿನ ಸುರಕ್ಷತೆ ಹೊಂದಿದ್ದಾರೆ.

ಹೀಗಾಗಿ ಲಾಕ್‌ಡೌನ್‌ನಿಂದ ಸಂಭವಿಸಿರುವ ಆರ್ಥಿಕ ಆಘಾತಗಳು ಈ ವರ್ಗಗಳ ಮೇಲೆ ದೊಡ್ಡಮಟ್ಟದಲ್ಲಿ ಪರಿಣಾಮ ಬೀರುವುದಿಲ್ಲ. ಒಂದು ವೇಳೆ ಪರಿಣಾಮ ಬೀರಿದ್ದರೆ ಕಡಿಮೆ ಪ್ರಮಾಣದಲ್ಲಿವೆ ಎಂದು ಅಧ್ಯಯನ ವರದಿಯಲ್ಲಿ ಹೇಳಿದ್ದಾರೆ.

Hot this week

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

ಆಧಾರ್ ಕಾರ್ಡ್‌ಗಿಂತಲೂ ಶಕ್ತಿ ಸ್ಮಾರ್ಟ್‌ ದುಬಾರಿ, ಎಸ್‌ಪಿವಿ ರಚನೆಯಾದರೂ ಸಿಗದ ಕಾರ್ಡ್‌; 185 ಕೋಟಿ ವೆಚ್ಚ ಭರಿಸುವವರಾರು?

ಬೆಂಗಳೂರು; ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ  ಸೌಲಭ್ಯ ಕಲ್ಪಿಸುವ 'ಶಕ್ತಿ'...

ಟೆಲಿಕಾಂ ಕಂಪನಿಯಿಂದ ವಿಧಾನಸೌಧ ಟರೇಸ್‌ ಅನಧಿಕೃತ ಬಳಕೆ; ವಸೂಲಾಗದ ನೆಲಬಾಡಿಗೆ, ನಿಯಮ ಉಲ್ಲಂಘಿಸಿದ್ದರೂ ಕ್ರಮವಿಲ್ಲ

ಬೆಂಗಳೂರು; ಟೆಲಿಕಾಂ ಮೂಲಸೌಕರ್ಯ ಕಂಪನಿಗಳಲ್ಲಿ ಖ್ಯಾತಿ ಹೊಂದಿರುವ ಆಂಧ್ರ ಪ್ರದೇಶ ಮೂಲದ...

Topics

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

ಆಧಾರ್ ಕಾರ್ಡ್‌ಗಿಂತಲೂ ಶಕ್ತಿ ಸ್ಮಾರ್ಟ್‌ ದುಬಾರಿ, ಎಸ್‌ಪಿವಿ ರಚನೆಯಾದರೂ ಸಿಗದ ಕಾರ್ಡ್‌; 185 ಕೋಟಿ ವೆಚ್ಚ ಭರಿಸುವವರಾರು?

ಬೆಂಗಳೂರು; ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ  ಸೌಲಭ್ಯ ಕಲ್ಪಿಸುವ 'ಶಕ್ತಿ'...

ಟೆಲಿಕಾಂ ಕಂಪನಿಯಿಂದ ವಿಧಾನಸೌಧ ಟರೇಸ್‌ ಅನಧಿಕೃತ ಬಳಕೆ; ವಸೂಲಾಗದ ನೆಲಬಾಡಿಗೆ, ನಿಯಮ ಉಲ್ಲಂಘಿಸಿದ್ದರೂ ಕ್ರಮವಿಲ್ಲ

ಬೆಂಗಳೂರು; ಟೆಲಿಕಾಂ ಮೂಲಸೌಕರ್ಯ ಕಂಪನಿಗಳಲ್ಲಿ ಖ್ಯಾತಿ ಹೊಂದಿರುವ ಆಂಧ್ರ ಪ್ರದೇಶ ಮೂಲದ...

ನೀಟ್‌, ಕೆ-ಸಿಇಟಿ ತರಬೇತಿ; ಅಲ್ಪಸಂಖ್ಯಾತರ ಇಲಾಖೆಯಲ್ಲಿ ಟೆಂಡರ್ ನಿಯಮ ಉಲ್ಲಂಘನೆ, ನಿಯಮಬಾಹಿರ ಚಟುವಟಿಕೆ, ಸರ್ಕಾರಕ್ಕೆ ಲೀಗಲ್ ನೋಟೀಸ್‌

ಬೆಂಗಳೂರು; ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ವಸತಿ ಕಾಲೇಜು ವಿದ್ಯಾರ್ಥಿಗಳಿಗೆ ಆಫ್‌ಲೈನ್ ಮಾದರಿಯಲ್ಲಿ...

ವರ್ಗಾವಣೆ ರದ್ದುಗೊಳಿಸಲು ತಲಾ 20 ಲಕ್ಷಕ್ಕೆ ಬೇಡಿಕೆ ಆರೋಪ; ಟೆಂಡರ್ ಕಮಿಷನ್ ಆಪಾದನೆ ಬೆನ್ನಲ್ಲೇ ಕರೀಗೌಡರ ವಿರುದ್ಧ ದೂರು

ಬೆಂಗಳೂರು; ಒಂದೆಡೆ ಮಂಜೂರಾಗಿರುವ ಹುದ್ದೆಗಳನ್ನು  ಭರ್ತಿ ಮಾಡುತ್ತಿಲ್ಲ, ಶೇ. 40ರಷ್ಟು ಹುದ್ದೆಗಳು...

Related Articles

Popular Categories

error: Content is protected !!