Friday | March 27, 2026 |

ಐಎಂಎ; ಚಾರ್ಜ್‌ಶೀಟ್‌ ಸಲ್ಲಿಕೆ ಬೆನ್ನಲ್ಲೇ ಹೊರಬಿತ್ತು ಅಧಿಕಾರಿ ಎಲ್‌ ಸಿ ನಾಗರಾಜು ಬಡ್ತಿ ಪ್ರಕರಣ

Support THE-FILE

spot_img

ಬೆಂಗಳೂರು: ಅಂದಾಜು ಒಂದು ಲಕ್ಷ ಠೇವಣಿದಾರರಿಗೆ 2,000 ಕೋಟಿ ರು. ವಂಚನೆ ಮಾಡಿರುವ ಐಎಂಎ ಪ್ರಕರಣದಲ್ಲಿ ದೋಷಾರೋಪಣೆ ಪಟ್ಟಿ ಸಲ್ಲಿಕೆ ಅನುಮತಿ ನೀಡಲು ರಾಜ್ಯ ಸರ್ಕಾರದ  ವಿಳಂಬವನ್ನೇ ಮುಂದಿಟ್ಟುಕೊಂಡು ಆರೋಪಿ ಕೆಎಎಸ್‌ ಅಧಿಕಾರಿ ಎಲ್‌ ಸಿ ನಾಗರಾಜ್‌ ಅವರು ಕೆಎಎಸ್‌ ಕಿರಿಯ ಶ್ರೇಣಿಯಿಂದ ಹಿರಿಯ ಶ್ರೇಣಿ ವೃಂದಕ್ಕೆ ಬಡ್ತಿ ಪಡೆಯಲು ಸಚಿವಾಲಯದಲ್ಲಿ ಪ್ರಯತ್ನ ನಡೆಸಿದ್ದರು ಎಂಬುದನ್ನು ‘ದಿ ಫೈಲ್‌’ ಇದೀಗ ಹೊರಗೆಡವುತ್ತಿದೆ.

ಎಲ್‌ ಸಿ ನಾಗರಾಜ್‌ ವಿರುದ್ಧ ಸಿಬಿಐ ದೋಷಾರೋಪಣೆ ಪಟ್ಟಿ ಸಲ್ಲಿಕೆಯಾದ ಬೆನ್ನಲ್ಲೇ ಬಡ್ತಿ ಪಡೆಯಲು ನಡೆಸಿದ್ದ ಪ್ರಯತ್ನಗಳು ಮುನ್ನೆಲೆಗೆ ಬಂದಿವೆ. ಸೇವಾ ಜೇಷ್ಠತೆಯಲ್ಲಿ ತಮಗಿಂತ ಕಿರಿಯ ಅಧಿಕಾರಿಗೆ ಬಡ್ತಿ ನೀಡುವುದನ್ನು ವಿರೋಧಿಸಿದ್ದ ಎಲ್‌ ಸಿ ನಾಗರಾಜ್‌ ಅವರು ಇದಕ್ಕಾಗಿ ತಮ್ಮ ವಿರುದ್ಧ ಸಿಬಿಐ ದೋಷಾರೋಪಣೆ ಪಟ್ಟಿ ಜಾರಿಯಾಗಿಲ್ಲ ಎಂಬುದು ಸೇರಿದಂತೆ ಹಲವು ಅಂಶಗಳನ್ನಿಡಿದು ವಾದವನ್ನು ಮುಂದೊಡ್ಡಿದ್ದರು ಎಂಬುದು ಬಹಿರಂಗವಾಗಿದೆ. ಇದಕ್ಕೆ ಸಂಬಂಧಿಸಿದಂತೆ ‘ದಿ ಫೈಲ್‌’ಗೆ ಟಿಪ್ಪಣಿ ಹಾಳೆಯೊಂದು ಲಭ್ಯವಾಗಿದೆ.

ಸಿಬಿಐ ದೋಷಾರೋಪಣೆ ಪಟ್ಟಿ ಸಲ್ಲಿಕೆ ಮಾಡುವ 2 ತಿಂಗಳ ಮೊದಲೇ ಎಲ್‌ ಸಿ ನಾಗರಾಜು ಅವರ ಅಮಾನತು ಆದೇಶವನ್ನು 2020ರ ಜುಲೈ 9ರಂದು ತೆರವುಗೊಳಿಸಿದ್ದ ಸರ್ಕಾರ, ಇವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ ಶಾಖೆಯ ಉಪ ನಿರ್ದೇಶಕರಾಗಿ ನೇಮಿಸಿತ್ತು. ಈ ಹುದ್ದೆಯಲ್ಲಿ 2 ತಿಂಗಳ ಅವಧಿ ಪೂರ್ಣಗೊಳ್ಳುವ ಮೊದಲೇ ಸಿಬಿಐ ಚಾರ್ಜ್‌ಶೀಟ್‌ ಕೂಡ ದಾಖಲಿಸಿ ಕೆಎಎಸ್‌ ಹಿರಿಯ ಶ್ರೇಣಿ ವೃಂದದ ಬಡ್ತಿಗೆ ತಡೆಯೊಡ್ಡಿದೆ.

ವಿಶೇಷವೆಂದರೆ ಎಲ್‌ ಸಿ ನಾಗರಾಜು ಅವರ ಬಡ್ತಿಗೆ ಸಂಬಂಧಿಸಿದಂತೆ ಆರೋಗ್ಯ, ಕುಟುಂಬ ಕಲ್ಯಾಣ ಸಚಿವ ಬಿ ಶ್ರೀರಾಮುಲು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಾರ್ಯದರ್ಶಿ ಅವರು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ಟಿಪ್ಪಣಿ ಹೊರಡಿಸಿದ್ದರು. ಸದ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವ್ಯಾಪ್ತಿಯ ರಾಷ್ಟ್ರೀಯ ಆರೋಗ್ಯ ಅಭಿಯಾನ ಶಾಖೆಯಲ್ಲಿ ಉಪ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ ಎಲ್‌ ಸಿ ನಾಗರಾಜು ಜೇಷ್ಠತೆ ಪಟ್ಟಿಗೆ ಸಂಬಂಧಿಸಿದಂತೆ ತಕರಾರು ಎತ್ತಿದ್ದರು ಎಂಬುದು ಟಿಪ್ಪಣಿ ಹಾಳೆಯಿಂದ ತಿಳಿದು ಬಂದಿದೆ.

ಎಲ್‌ ಸಿ ನಾಗರಾಜು ಮಂಡಿಸಿದ್ದ ವಾದದಲ್ಲೇನಿತ್ತು?

ಐಎಂಎ ಪ್ರಕರಣದಲ್ಲಿ ಸಿಬಿಐ ದೋಷಾರೋಪಣೆ ಪಟ್ಟಿ ಸಲ್ಲಿಕೆಯಲ್ಲಿ ಆಗಿದ್ದ ವಿಳಂಬವನ್ನು ಎಲ್‌ ಸಿ ನಾಗರಾಜು ಅವರಿಗೆ ಅನುಕೂಲಕರವಾಗಿತ್ತು ಎಂದು ಹೇಳಲಾಗಿದೆ. ಜೇಷ್ಠತಾ ಪಟ್ಟಿಯಲ್ಲಿ ತಮಗಿಂತ ಕಿರಿಯರಾಗಿದ್ದ ಬಿ ಆರ್‌ ರೂಪ ಅವರಿಗೆ ಬಡ್ತಿ ನೀಡಲು ಹೊರಟಿದ್ದ ವೇಳೆಯಲ್ಲಿ ತಕರಾರು ಎತ್ತಿದ್ದರು.

‘2020ರ ಜುಲೈ 9ರಂದು ನನ್ನ ವಿರುದ್ಧ ಅಮಾನತು ಆದೇಶವನ್ನು ತೆರವುಗೊಳಿಸಿ ನನಗೆ ಉಪ ನಿರ್ದೇಶಕರು, ರಾಷ್ಟ್ರೀಯ ಆರೋಗ್ಯ ಅಭಿಯಾನ ಶಾಖೆಗೆ ನೇಮಿಸಲಾಗಿದೆ. ನನ್ನ ವಿರುದ್ಧ ಪ್ರಸ್ತುತ ಚಾರ್ಜ್‌ ಲಿಸ್ಟ್‌ ಆಗಲಿ, ದೋಷಾರೋಪಣೆ ಪಟ್ಟಿಯಾಗಲಿ, ಜಾರಿಯಾಗಿರುವುದಿಲ್ಲ. ಇಲಾಖೆ ವಿಚಾರಣೆ ಇರುವುದಿಲ್ಲ. ಕ್ರಿಮಿನಲ್‌ ಮೊಕದ್ದಮೆ ಇರುವುದಿಲ್ಲ,’ ಎಂದು ಬಿ ಆರ್‌ ರೂಪ ಅವರಿಗೆ ನೀಡಿದ್ದ ಪದನ್ನೋತಿಗೆ ತಕರಾರು ಎತ್ತಿರುವುದು ಟಿಪ್ಪಣಿ ಹಾಳೆಯಿಂದ ಗೊತ್ತಾಗಿದೆ.

ಬಡ್ತಿ ಪ್ರಕರಣದ ಹಿನ್ನೆಲೆ

ಕೆಎಎಸ್‌ ಕಿರಿಯ ಶ್ರೇಣಿ ವೃಂದದ ಅಧಿಕಾರಿಗಳ ಬಡ್ತಿಗೆ ಸಂಬಂಧಿಸಿದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು 2019ರ ಆಗಸ್ಟ್‌ 31ರಂದು ಜೇಷ್ಠತಾ ಪಟ್ಟಿಯನ್ನು ಪ್ರಕಟಿಸಿತ್ತು. ಜೇಷ್ಠತಾ ಪಟ್ಟಿಯ ಕ್ರಮ ಸಂಖ್ಯೆ 934ರಲ್ಲಿ (ಜೇಷ್ಠತಾ ಕ್ರಮ ಸಂಖ್ಯೆ 1412) ಎಲ್‌ ಸಿ ನಾಗರಾಜು ಅವರ ಹೆಸರು ನಮೂದಾಗಿತ್ತು.

2019ರ ಸೆಪ್ಟಂಬರ್‌ 20ರಂದು ಹೊರಡಿಸಿದ್ದ ಅಧಿಸೂಚನೆಯಲ್ಲಿ ಕೆಎಎಸ್‌ (ಕಿ ಶ್ರೇ) ಅಧಿಕಾರಿಗಳನ್ನು ವೇತನ ಶ್ರೇಣಿ 74,000-1,09,600 ವೇತನ ಶ್ರೇಣಿಯ ಕೆಎಎಸ್‌(ಹಿ ಶ್ರೇ) ವೃಂದಕ್ಕೆ ಸ್ಥಾನಪನ್ನ ಬಡ್ತಿ ನೀಡಲಾಗಿದೆ. ಇದರ ಪ್ರಕಾರ ಕ್ರಮ ಸಂಖ್ಯೆ 53ರಲ್ಲಿ ರೂಪ ಬಿ ಆರ್‌ (ಜೇಷ್ಠತಾ ಕ್ರಮ ಸಂಖ್ಯೆ 1413) ಮತ್ತು 55ರಲ್ಲಿ ಶಾರದಾ ಸಿ ಕೋಲಕರ(ಜೇಷ್ಠತಾ ಕ್ರಮ ಸಂಖ್ಯೆ 1417) ಅವರಿಗೆ ಕೆಎಎಸ್‌ ಹಿರಿಯ ಶ್ರೇಣಿ ಹುದ್ದೆಗೆ ಪದನ್ನೋತಿ ನೀಡಲಾಗಿತ್ತು.
ಐಎಂಎ ವಂಚನೆ ಪ್ರಕರಣದಲ್ಲಿ ಆರೋಪಿಯಾಗಿ ಅಮಾನತುಗೊಂಡಿದ್ದರಿಂದ ಎಲ್‌ ಸಿ ನಾಗರಾಜು ಅವರನ್ನು ಈ ಪ್ರಕ್ರಿಯೆಗಳಲ್ಲಿ ಹೊರಗಿಡಲಾಗಿತ್ತು. 2019ರ ಜುಲೈ 6ರಿಂದ ಅಮಾನತಿನಲ್ಲಿದ್ದರಿಂದ ಎಲ್‌ ಸಿ ನಾಗರಾಜು ಅವರನ್ನು ಬಡ್ತಿಗೆ ಪರಿಗಣಿಸಿರಲಿಲ್ಲ ಎಂಬುದು ಟಿಪ್ಪಣಿ ಹಾಳೆಯಿಂದ ತಿಳಿದು ಬಂದಿದೆ.

ಉಪ ವಿಭಾಗಾಧಿಕಾರಿಯಾಗಿದ್ದ ಎಲ್‌ ಸಿ ನಾಗರಾಜ್‌ ಅವರು ಐಎಂಎ ನಿರ್ದೇಶಕ ಮೊಹಮ್ಮದ್‌ ಮನ್ಸೂರ್‌ ರಿಂದ 4.5 ಕೋಟಿ ಪಡೆದಿದ್ದರು ಎಂಬ ಆರೋಪ ಕೇಳಿ ಬಂದಿತ್ತು. 10 ಲಕ್ಷ ರು.ಪಡೆದಿದ್ದ ಗ್ರಾಮ ಲೆಕ್ಕಿಗ ಮಂಜುನಾಥ್‌, ನಾಗರಾಜ್‌ ಮತ್ತು ಮನ್ಸೂರ್‌ಖಾನ್‌ ಮಧ್ಯೆ ಸಭೆ ಏರ್ಪಡಿಸಿದ್ದ ಎಂದು ದೋಷಾರೋಪಣೆ ಪಟ್ಟಿಯಲ್ಲಿ ವಿವರಿಸಲಾಗಿದೆ ಎಂದು ಗೊತ್ತಾಗಿದೆ.

ಇದೇ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯಾಗಿದ್ದ ಬೆಂಗಳೂರು ನಗರ ಜಿಲ್ಲಾಧಿಕಾರಿ ವಿಜಯಶಂಕರ್, ಎಲ್‌ ಸಿ ನಾಗರಾಜ್‌ ಮತ್ತು ಮಂಜುನಾಥ್‌ ಅವರು ಐಎಂಎ ಕಂಪನಿಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ಸುಳ್ಳು ವರದಿ ನೀಡಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಸಿಬಿಐ ತನಿಖೆ ನಡೆಸುತ್ತಿದ್ದ ಅವಧಿಯಲ್ಲೇ ವಿಜಯಶಂಕರ್‌ ಅವರು ಜೂನ್‌ 24ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು.

ಐಎಂಎ ವಂಚನೆ ಪ್ರಕರಣ 2019ರ ಜೂನ್‌ನಲ್ಲಿ ಬಹಿರಂಗವಾಗಿತ್ತು. ಪ್ರಕರಣ ಬಯಲಾಗುತ್ತಿದ್ದಂತೆ ಮನ್ಸೂರ್‌ಖಾನ್‌ ದುಬೈಗೆ ಪರಾರಿಯಾಗಿದ್ದನಲ್ಲದೆ ಈ ಪ್ರಕರಣದಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು ಎಂದು ವಿಡಿಯೋ ಮೂಲಕ ಆರೋಪಿಸಿದ್ದ. ಈತ ಜುಲೈ 19ರಂದು ಬಂಧನಕ್ಕೊಳಗಾಗಿದ್ದ.
ಈ ಪ್ರಕರಣದಲ್ಲಿ ಮನ್ಸೂರ್‌ಖಾನ್‌ ಸೇರಿದಂತೆ ಒಟ್ಟು 25 ಮಂದಿಯನ್ನು ಈಗಾಗಲೇ ಬಂಧಿಸಲಾಗಿದೆ. ಅಲ್ಲದೆ 12 ನಿರ್ದೇಶಕರೂ ಇದ್ದಾರೆ. ಜತೆಗೆ ಕೆಲ ಫಲಾನುಭವಿಗಳೂ ಇದರಲ್ಲಿ ಸೇರಿದ್ದಾರೆ ಎಂದು ಹೇಳಲಾಗಿದೆ.

Hot this week

ಕದಂಬೋತ್ಸವ ಸೇರಿ ಸಾಂಸ್ಕೃತಿಕ ಉತ್ಸವಗಳಿಗೆ ಅನುದಾನ; 12.50 ಕೋಟಿ ರು ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಮೈಸೂರು ದಸರಾ ಸೇರಿದಂತೆ ಇನ್ನಿತರೆ ಜಿಲ್ಲಾಮಟ್ಟದ ವಿವಿಧ ಉತ್ಸವಗಳಿಗೆ 2024-25ಮತ್ತು...

ಪ್ರಚೋದನಕಾರಿ ಭಾಷಣ, ಕೋಮು ಗಲಭೆ; 3 ವರ್ಷದಲ್ಲಿ 50 ಪ್ರಕರಣಗಳು ದಾಖಲು, ಪಟ್ಟಿ ಬಹಿರಂಗ

ಬೆಂಗಳೂರು; ರಾಜ್ಯದ  ಕರಾವಳಿ ಭಾಗ ಸೇರಿದಂತೆ ವಿವಿಧೆಡೆ ಪ್ರಚೋದನಾಕಾರಿ ಭಾಷಣ ಮಾಡಿದವರು...

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

Topics

ಕದಂಬೋತ್ಸವ ಸೇರಿ ಸಾಂಸ್ಕೃತಿಕ ಉತ್ಸವಗಳಿಗೆ ಅನುದಾನ; 12.50 ಕೋಟಿ ರು ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಮೈಸೂರು ದಸರಾ ಸೇರಿದಂತೆ ಇನ್ನಿತರೆ ಜಿಲ್ಲಾಮಟ್ಟದ ವಿವಿಧ ಉತ್ಸವಗಳಿಗೆ 2024-25ಮತ್ತು...

ಪ್ರಚೋದನಕಾರಿ ಭಾಷಣ, ಕೋಮು ಗಲಭೆ; 3 ವರ್ಷದಲ್ಲಿ 50 ಪ್ರಕರಣಗಳು ದಾಖಲು, ಪಟ್ಟಿ ಬಹಿರಂಗ

ಬೆಂಗಳೂರು; ರಾಜ್ಯದ  ಕರಾವಳಿ ಭಾಗ ಸೇರಿದಂತೆ ವಿವಿಧೆಡೆ ಪ್ರಚೋದನಾಕಾರಿ ಭಾಷಣ ಮಾಡಿದವರು...

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

Related Articles

Popular Categories

error: Content is protected !!