Thursday | May 7, 2026 |

ಕೆ ಜಿ ಹಳ್ಳಿ; ಕರ್ಫ್ಯೂನಲ್ಲಿಯೂ ಧ್ವಜಾರೋಹಣ ಮಾಡಿದ ದಲಿತ ಶಿಕ್ಷಕನಿಗೆ ನೋಟೀಸ್‌

ಬೆಂಗಳೂರು; ಸ್ವಾತಂತ್ರ್ಯ ದಿನಾಚರಣೆಯಂದು ಏಕಪಕ್ಷೀಯವಾಗಿ ಧ್ವಜಾರೋಹಣ ಮಾಡಿದ್ದಾರೆ ಎಂಬ ಆರೋಪದ ಮೇರೆಗೆ ದಲಿತ ಶಿಕ್ಷಕ ಶ್ರೀನಿವಾಸನ್‌ ಎಂಬುವರಿಗೆ ಬೆಂಗಳೂರು ತಮಿಳ್‌ ಸಂಘಂ ಕಾರಣ ಕೇಳಿ ನೋಟೀಸ್‌ ಜಾರಿಗೊಳಿಸಿದೆ.

ಬೆಂಗಳೂರಿನ ಕೆ ಜಿ ಹಳ್ಳಿಯಲ್ಲಿ ತಮಿಳು ಸಂಘಂ ನಡೆಸುತ್ತಿರುವ ಶಾಲೆಯಲ್ಲಿ ಹಲವು ವರ್ಷಗಳಿಂದ ಶ್ರೀನಿವಾಸನ್‌ ಅವರು ಸಹ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಳೆದ ಆಗಸ್ಟ್‌ನಲ್ಲಿ ಕೆ ಜಿ ಹಳ್ಳಿ ಗಲಭೆಗೀಡಾಗಿದ್ದರಿಂದ 144 ಸೆಕ್ಷನ್‌ ಮತ್ತು ಕೆಲವು ಪ್ರದೇಶಗಳಲ್ಲಿ ಕರ್ಫ್ಯೂ ವಿಧಿಸಿತ್ತು.

ಆದರೂ ಆಗಸ್ಟ್‌ 15ರ ಸ್ವಾತಂತ್ರೋತ್ಸವ ದಿನದಂದು ಶಾಲೆಯ ಹಿರಿಯ ಸಹ ಶಿಕ್ಷಕ ಶ್ರೀನಿವಾಸನ್‌ ಅವರು ಧ್ವಜಾರೋಹಣ ಮಾಡಿದ್ದರು. ಇದಕ್ಕೆ ಶಾಲೆಯ ಮುಖ್ಯ ಶಿಕ್ಷಕಿ (ಪ್ರಭಾರ) ರಾಜೇಶ್ವರಿ ಎಂಬುವರು ಆಕ್ಷೇಪ ಎತ್ತಿದ್ದರು. ಅಲ್ಲದೆ ಮುಖ್ಯ ಶಿಕ್ಷಕರ ಅನುಮತಿ ಪಡೆಯದೇ ಏಕಪಕ್ಷೀಯವಾಗಿ ಧ್ವಜಾರೋಹಣ ಮಾಡಿದ್ದಾರೆ ಎಂದು ಶ್ರೀನಿವಾಸನ್‌ ಅವರಿಗೆ 2020ರ ಆಗಸ್ಟ್‌ 21ರಂದು ಕಾರಣ ಕೇಳಿ ನೋಟೀಸ್‌ ಜಾರಿಗೊಳಿಸಿದ್ದರು. ಇದರ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

‘ಸ್ವಾತಂತ್ರ್ಯ ದಿನಾಚರಣೆಯನ್ನು ಮುಖ್ಯ ಶಿಕ್ಷಕರ ನೇತೃತ್ವದಲ್ಲಿ ಆಚರಿಸುವುದು ಕ್ರಮಬದ್ಧವಾಗಿದೆ. ಆದರೆ ಮುಖ್ಯ ಶಿಕ್ಷಕರ ಅನುಮತಿ ಪಡೆಯದೇ ಏಕಪಕ್ಷೀಯವಾಗಿ ಧ್ವಜಾರೋಹಣವನ್ನು ಮಾಡಿದ್ದೀರಿ. ಮುಖ್ಯ ಶಿಕ್ಷಕರು ಬೆಳಗ್ಗೆ 6.30ಕ್ಕೆ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲು ಇತರ ಸಿಬ್ಬಂದಿಯೊಂದಿಗೆ ಶಾಲೆಗೆ ಬಂದಾಗ ನೀವು ಮುಂಚಿತವಾಗಿಯೇ ಬಂದು ಅನುಮತಿ ಇಲ್ಲದೆ ಧ್ವಜಾರೋಹಣ ಮಾಡಿ ಸಹ ಶಿಕ್ಷಕರ ಕರ್ತವ್ಯದ ಉಲ್ಲಂಘನೆ ಮಾಡಿ ಅಶಿಸ್ತಿನಿಂದ ವರ್ತಿಸಿದ್ದೀರಿ. ನಿಮ್ಮ ಈ ದುರ್ವರ್ತನೆಯನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಮುಖ್ಯ ಶಿಕ್ಷಕರ ಅನುಮತಿ ಇಲ್ಲದೆಯೇ ಏಕಪಕ್ಷೀಯವಾಗಿ ಧ್ವಜಾರೋಹಣ ಮಾಡುವ ಮೂಲಕ ಶಾಲೆಯ ಶಿಸ್ತನ್ನು ಉಲ್ಲಂಘಿಸಿದ್ದೀರಿ,’ ಎಂದು ನೋಟೀಸ್‌ನಲ್ಲಿ ಹೇಳಲಾಗಿದೆ.

ಈ ನೋಟೀಸ್‌ ಸಂಬಂಧ ಸಂಘದ ಆಡಳಿತಾಧಿಕಾರಿ ಮಂಜುನಾಥ್‌ ಸಿಂಗ್‌ ಅವರಿಗೆ 2020ರ ಆಗಸ್ಟ್‌ 31ರಂದು ಶ್ರೀನಿವಾಸನ್‌ ಲಿಖಿತ ಹೇಳಿಕೆಯನ್ನೂ ನೀಡಿದ್ದಾರೆ. ‘ಕೊರೊನಾ ಕಾಯಿಲೆ ನಿಮಿತ್ತವಾಗಿ ಶಾಲೆ ಹಾಗೂ ಇತರೆ ಸಂಸ್ಥೆಗಳು ರಜೆ ಘೋಷಿಸಿದೆ. ಇದಲ್ಲದೆ ಮುಖ್ಯವಾಗಿ ಆಗಸ್ಟ್‌ 15ರಂದು ನಮ್ಮ ಶಾಲೆ ಇರುವ ಪ್ರದೇಶಗಳು ಮತೀಯ ಗಲಭೆಯಿಂದ ತಲ್ಲಣಗೊಂಡು ಈ ಪ್ರದೇಶಗಳು 144 ಸೆಕ್ಷನ್‌ ಮತ್ತು ಕರ್ಫ್ಯೂ ಜಾರಿಯಲ್ಲಿದ್ದರಿಂದ ಇಡೀ ಪ್ರದೇಶವೇ ಬಂದ್ ಆಗಿತ್ತು. ಇಂತಹ ಪರಿಸ್ಥಿತಿಯಲ್ಲಿಯೂ ಮತ್ತು ಶಾಲೆ ಗಲಭೆ ಪೀಡಿತ ಪ್ರದೇಶದಲ್ಲಿದ್ದರೂ ಶಾಲೆಯ ಹಿರಿಯ ಶಿಕ್ಷಕನಾಗಿರುವ ನಾನು ದೇಶದ ಪ್ರಜೆಯಾಗಿ ಸ್ವಾತಂತ್ರ್ಯ ದಿನಾಚರಣೆಯಂದು ಧ್ವಜಾರೋಹಣ ಮಾಡಿ ನನ್ನ ದೇಶ ಪ್ರೇಮವನ್ನು ವ್ಯಕ್ತಪಡಿಸಿ ನನ್ನ ಕರ್ತವ್ಯವನ್ನು ಮಾಡಿದ್ದೇನೆ. ಇದರಲ್ಲಿ ತಪ್ಪೇನಿದೆ,’ ಎಂದೂ ಲಿಖಿತ ಹೇಳಿಕೆಯಲ್ಲಿ ಪ್ರಶ್ನಿಸಿದ್ದಾರೆ.

ಅಲ್ಲದೆ ಬೆಂಗಳೂರು ತಮಿಳ್‌ ಸಂಘಂ ಆಡಳಿತಾಧಿಕಾರಿ ಮಂಜುನಾಥ್‌ ಸಿಂಗ್‌ ಅವರೂ ಧ್ವಜಾರೋಹಣ ಮಾಡಿಲ್ಲ ಎಂದೂ ಶ್ರೀನಿವಾಸನ್‌ ಅವರು ಲಿಖಿತ ಹೇಳಿಕೆಯಲ್ಲಿ ಆರೋಪಿಸಿದ್ದಾರೆ.

ಹಾಗೆಯೇ ಬೆಂಗಳೂರು ತಮಿಳ್‌ ಸಂಘಂನ ಕಾರ್ಯವೈಖರಿ ಕುರಿತು ಶ್ರೀನಿವಾಸನ್‌ ಅವರು 2020ರ ಸೆಪ್ಟಂಬರ್‌ 2ರಂದು ಸಹಕಾರ ಸಂಘಗಳ ನಿಬಂಧಕರಿಗೂ ಲಿಖಿತ ದೂರು ಸಲ್ಲಿಸಿದ್ದಾರೆ. ಸಂಘದ ಆಡಳಿತ ಮಂಡಳಿಯಲ್ಲಿರುವ ಮಾಜಿ ಪದಾಧಿಕಾರಿಗಳಾದ ಜಿ ದಾಮೋದರನ್‌ ಮತ್ತು ರಾಮಸುಬ್ರಮಣಿಯನ್‌, ಶಾಲೆಯ ಶಿಕ್ಷಕಿ ಬಿ ಆರ್‌ ರಾಜೇಶ್ವರಿ, ಆಮುದ, ಭಾರತಿ ಮತ್ತು ಶ್ರೀಕಂಠಮೂರ್ತಿ ಎಂಬುವರು 2016ರಿಂದ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ತಮಿಳ್‌ ಸಂಘಂನಲ್ಲಿ ಹಲವು ಹಗರಣಗಳು ನಡೆದಿವೆ. ಸಂಘದ ಹಲವು ಅಜೀವ ಸದಸ್ಯರು ದೂರು ನೀಡಿದ್ದಾರೆ. ಕರ್ನಾಟಕ ಉಚ್ಛ ನ್ಯಾಯಾಲಯದ ತೀರ್ಪಿನಂತೆ ವಿಚಾರಣೆ ನಡೆಸಿ ಕಾರ್ಯಕಾರಿ ಸಮಿತಿಗೆ ಚುನಾವಣೆ ನಡೆಸಬೇಕಿತ್ತು. ಇದಕ್ಕಾಗಿ ನೇಮಕಗೊಂಡಿದ್ದ ನಿವೃತ್ತ ಹಿರಿಯ ಐಎಎಸ್‌ ಅಧಿಕಾರಿ ಡಾ ಅಶ್ವಥ್‌ ಅವರು ವಿಚಾರಣೆ ನಡೆಸಿ ಇಬ್ಬರು ಪದಾಧಿಕಾರಿಗಳಿಗೆ ದಂಡನೆ ವಿಧಿಸಿದ್ದಾರೆ ಎಂದೂ ದೂರಿನಲ್ಲಿ ವಿವರಿಸಿದ್ದಾರೆ.

ಅಶ್ವಥ್‌ ಅವರ ನಂತರ ನೇಮಕಗೊಂಡಿರುವ ಯಶಸ್ವಿನಿ ಮತ್ತು ಮಂಜುನಾಥ್‌ ಸಿಂಗ್‌ ಅವರು ನ್ಯಾಯಾಲಯದ ತೀರ್ಪನ್ನು ಉಲ್ಲಂಘಿಸಿದ್ದಾರಲ್ಲದೆ ಸಂಘದ ಕೆಲ ಪದಾಧಿಕಾರಿಗಳೊಂದಿಗೆ ಕೈಜೋಡಿಸಿದ್ದಾರೆ ಎಂದು ಶ್ರೀನಿವಾಸನ್‌ ಅವರು ಸಂದೇಹ ವ್ಯಕ್ತಪಡಿಸಿದ್ದಾರೆ. ಇದೇ ದೂರನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಉತ್ತರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೂ ಕಳಿಸಿದ್ದಾರೆ.

Hot this week

ಶೌಚಾಲಯ, ಸ್ನಾನದ ಗೃಹ, ಮೂತ್ರಾಲಯ ಶುಲ್ಕ ವಸೂಲಿ; ಸುಲಭ್‌ ಇಂಟರ್ ನ್ಯಾಷನಲ್‌, ಬಿಬಿಎಂಪಿ ಖಾತೆಗೆ ಹಣ ಜಮೆ ಮಾಡಿದೆಯೇ, ನುಂಗಿದೆಯೇ?

ಬೆಂಗಳೂರು;  ಸುಲಭ್ ಶೌಚಾಲಯ ಮತ್ತು ಸಾರ್ವಜನಿಕ ಮೂತ್ರಾಲಯ  ನಿರ್ವಹಣೆಗೆ ಸಂಬಂಧಿಸಿದಂತೆ ಗುತ್ತಿಗೆದಾರರು...

ಬಿಜೆಪಿ ಅವಧಿಯಲ್ಲಿದ್ದ 120 ಎಕರೆ ಗೋಮಾಳ, ಕಾಂಗ್ರೆಸ್‌ ಅವಧಿಯಲ್ಲಿ ಕಣ್ಮರೆ!; 24 ಕೋಟಿ ಮೌಲ್ಯದ ಜಮೀನು, ಖಾಸಗಿ ವ್ಯಕ್ತಿಗಳ ಪಾಲು?

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ...

ಒಂದೇ ಜಾಗದಲ್ಲಿ ಎರಡು ಫ್ಲೈ ಓವರ್, ಶೇ.50ರಷ್ಟು ಕಾಮಗಾರಿಯಾಗಿದ್ದರೂ ಪೂರ್ಣ ಪಾವತಿ; ಬ್ಯಾಂಕ್‌ ಗ್ಯಾರಂಟಿ ಮುಟ್ಟುಗೋಲಿಲ್ಲ, ಗುತ್ತಿಗೆದಾರರಿಗೆ ಲಾಭ, ಬಿಬಿಎಂಪಿ ನಿಧಿಗೆ ನಷ್ಟ

ಬೆಂಗಳೂರು;  ಈಜಿಪುರ ಮೇಲ್ಸೇತುವೆ ಎಲಿವೇಟೆಡ್‌ ಕಾರಿಡಾರ್  ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ  ಪೂರ್ಣಗೊಳಿಸದ...

ಅನುದಾನ ಬಿಡುಗಡೆಯಾಗಿದ್ದರೂ ಪೂರ್ಣಗೊಳ್ಳದ ಕಾಮಗಾರಿ; ತನಿಖಾ ವರದಿಗೆ ಮೆತ್ತಿಕೊಂಡ ಧೂಳು, ಕ್ರಮಕೈಗೊಳ್ಳದ ಸಚಿವ

ಬೆಂಗಳೂರು; ತುಮಕೂರು ಜಿಲ್ಲೆಯ ಶಿರಾ ಪಟ್ಟಣದಲ್ಲಿರುವ ಕಸ್ತೂರಿ ರಂಗಪ್ಪ ನಾಯಕ ಕೋಟೆಯ...
Please Scan to make Your Contribution

Topics

ಶೌಚಾಲಯ, ಸ್ನಾನದ ಗೃಹ, ಮೂತ್ರಾಲಯ ಶುಲ್ಕ ವಸೂಲಿ; ಸುಲಭ್‌ ಇಂಟರ್ ನ್ಯಾಷನಲ್‌, ಬಿಬಿಎಂಪಿ ಖಾತೆಗೆ ಹಣ ಜಮೆ ಮಾಡಿದೆಯೇ, ನುಂಗಿದೆಯೇ?

ಬೆಂಗಳೂರು;  ಸುಲಭ್ ಶೌಚಾಲಯ ಮತ್ತು ಸಾರ್ವಜನಿಕ ಮೂತ್ರಾಲಯ  ನಿರ್ವಹಣೆಗೆ ಸಂಬಂಧಿಸಿದಂತೆ ಗುತ್ತಿಗೆದಾರರು...

ಬಿಜೆಪಿ ಅವಧಿಯಲ್ಲಿದ್ದ 120 ಎಕರೆ ಗೋಮಾಳ, ಕಾಂಗ್ರೆಸ್‌ ಅವಧಿಯಲ್ಲಿ ಕಣ್ಮರೆ!; 24 ಕೋಟಿ ಮೌಲ್ಯದ ಜಮೀನು, ಖಾಸಗಿ ವ್ಯಕ್ತಿಗಳ ಪಾಲು?

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ...

ಅನುದಾನ ಬಿಡುಗಡೆಯಾಗಿದ್ದರೂ ಪೂರ್ಣಗೊಳ್ಳದ ಕಾಮಗಾರಿ; ತನಿಖಾ ವರದಿಗೆ ಮೆತ್ತಿಕೊಂಡ ಧೂಳು, ಕ್ರಮಕೈಗೊಳ್ಳದ ಸಚಿವ

ಬೆಂಗಳೂರು; ತುಮಕೂರು ಜಿಲ್ಲೆಯ ಶಿರಾ ಪಟ್ಟಣದಲ್ಲಿರುವ ಕಸ್ತೂರಿ ರಂಗಪ್ಪ ನಾಯಕ ಕೋಟೆಯ...

ಧರ್ಮಸ್ಥಳ ಪ್ರಕರಣಗಳ ತನಿಖೆ; ಎಸ್‌ಐಟಿ ವರದಿ ಪ್ರತಿ ಒದಗಿಸದ ಸರ್ಕಾರ, ಗೃಹ ಇಲಾಖೆ ಶಾಖೆಯಲ್ಲಿ ಸಭೆ ನಡವಳಿಯೂ ಲಭ್ಯವಿಲ್ಲ

ಬೆಂಗಳೂರು: ಧರ್ಮಸ್ಥಳದ ಸುತ್ತಮುತ್ತ ನಡೆದಿರುವ ಮಹಿಳೆಯರು ಮತ್ತು ಯುವತಿಯರ ಮೇಲಿನ ದೌರ್ಜನ್ಯ/ಕೊಲೆ,...

ವೈಟ್‌ ಟ್ಯಾಪಿಂಗ್‌ ಗೋಲ್ಮಾಲ್‌; ಅಗತ್ಯವಿರದಿದ್ದರೂ ಕಾಮಗಾರಿ, ತಾಂತ್ರಿಕ ಪರಿಶೀಲನೆಯಿಲ್ಲದಿದ್ದರೂ ಹೆಚ್ಚುವರಿ ವೆಚ್ಚ, ಗುತ್ತಿಗೆದಾರರಿಗೆ ಲಾಭ

ಬೆಂಗಳೂರು;  ವೈಟ್‌ ಟ್ಯಾಪಿಂಗ್ ಅಗತ್ಯವಿಲ್ಲದಿದ್ದರೂ  ಕಾಮಗಾರಿ ಆರಂಭಿಸಿದ ನಂತರ ತಾಂತ್ರಿಕ ಮಂಜೂರಾತಿ...

Related Articles

Popular Categories

error: Content is protected !!