Tuesday | May 12, 2026 |

ನೆಟ್‌, ಸ್ಲೆಟ್‌ ಅರ್ಹತೆ ಪಡೆದಿರುವ ಪಿ ಯು ಉಪನ್ಯಾಸಕರ ಬಡ್ತಿ ಕನಸು ನುಚ್ಚು ನೂರು ಮಾಡಿದ ಸರ್ಕಾರ

ಬೆಂಗಳೂರು; ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್‌ಇಟಿ) ಮತ್ತು ರಾಜ್ಯ ಅರ್ಹತಾ ಪರೀಕ್ಷೆ (ಎಸ್‌ಎಲ್‌ಇಟಿ)ಯಲ್ಲಿ ತೇರ್ಗಡೆ ಹೊಂದಿ ಅರ್ಹತೆ ಗಳಿಸಿದ್ದ ಪಿ ಯು ಉಪನ್ಯಾಸಕರು ಪದವಿ ಕಾಲೇಜುಗಳಿಗೆ ಬಡ್ತಿ ಹೊಂದುವ ಕನಸನ್ನು ಬಿಜೆಪಿ ಸರ್ಕಾರ ನುಚ್ಚು ನೂರು ಮಾಡಿದೆ. ನೆಟ್‌ ಮತ್ತು ಸ್ಲೆಟ್‌ ಪರೀಕ್ಷೆಯಲ್ಲಿ ಅರ್ಹತೆ ಗಳಿಸಿ ಪದವಿ ಕಾಲೇಜುಗಳಿಗೆ ಬಡ್ತಿ ಹೊಂದುವ ನಿರೀಕ್ಷೆಯಲ್ಲಿದ್ದ ಪಿ ಯು ಉಪನ್ಯಾಸಕರ ಆಸೆಗೆ ಉನ್ನತ ಶಿಕ್ಷಣ ಇಲಾಖೆ ತಣ್ಣೀರೆರಚಿದೆ.

ಪದವಿ ಪೂರ್ವ ಉಪನ್ಯಾಸಕರನ್ನು ಪದವಿ ಕಾಲೇಜಿಗೆ ಬಡ್ತಿ ನೀಡಬೇಕು ಎಂದು ಪ್ರಾಥಮಿಕ, ಪ್ರೌಢಶಿಕ್ಷಣ ಇಲಾಖೆಯ ಸರ್ಕಾರದ ಹಿಂದಿನ ಕಾರ್ಯದರ್ಶಿಯಾಗಿದ್ದ ಕುಮಾರ್‌ ನಾಯಕ್‌ ಅವರು ಮಾಡಿದ್ದ ಶಿಫಾರಸ್ಸನ್ನು ಉನ್ನತ ಶಿಕ್ಷಣ ಇಲಾಖೆ ಒಪ್ಪಿಕೊಂಡಿಲ್ಲ. ಅಲ್ಲದೆ ಈ ಶಿಫಾರಸ್ಸನ್ನು ಜಾರಿಗೆ ತರದಿರಲು ನಿರ್ಧರಿಸಿರುವ ಬಿಜೆಪಿ ಸರ್ಕಾರ, ಪಿಯು ಕಾಲೇಜು ಉಪನ್ಯಾಸಕರ ಕೆಂಗಣ್ಣಿಗೆ ಗುರಿಯಾಗಿದೆ.

ಕುಮಾರ್‌ ನಾಯಕ್‌ ಅವರು ಕಳೆದ 9 ವರ್ಷಗಳ ಹಿಂದೆ ಸರ್ಕಾರಕ್ಕೆ ಮಾಡಿದ್ದ ಒಟ್ಟು 6 ಶಿಫಾರಸ್ಸುಗಳ ಪೈಕಿ ಈಗಿನ ಸರ್ಕಾರ 2ನ್ನು ಮಾತ್ರ ಜಾರಿಗೊಳಿಸಿ ಇನ್ನೂ 4 ಶಿಫಾರಸ್ಸುಗಳನ್ನು ಪರಿಶೀಲನೆಯಲ್ಲಿಟ್ಟಿದೆ. ಈ ಪೈಕಿ 3 ಶಿಫಾರಸ್ಸುಗಳನ್ನು ಜಾರಿಗೆ ಸಂಬಂಧಿಸಿದಂತೆ ಇಲಾಖೆಗಳ ಸಹಮತಿ ಇನ್ನೂ ದೊರೆತಿಲ್ಲ ಎಂದು ತಿಳಿದು ಬಂದಿದೆ.

ಪದವಿಪೂರ್ವ ಶಿಕ್ಷಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮತ್ತು 15 ವರ್ಷಗಳ ಸೇವೆ ಪೂರೈಸಿರುವ ಹಾಗೂ ಬೋಧನಾ ವಿಷಯದಲ್ಲಿ ಶೇ.55ರಷ್ಟು ಅಂಕ ಗಳಿಸಿ ಎನ್‌ಇಟಿ/ಎಸ್‌ಎಲ್‌ಇಟಿ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಉಪನ್ಯಾಸಕರಿಗೆ ಪದವಿ ಕಾಲೇಜುಗಳ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡಲು ಉನ್ನತ ಶಿಕ್ಷಣ ಇಲಾಖೆಯ ಕಾಲೇಜು ಶಿಕ್ಷಣ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರುವುದು ಸೂಕ್ತ ಎಂದು ಕುಮಾರ್‌ ನಾಯಕ್‌ ಅವರು ಶಿಫಾರಸ್ಸು ಮಾಡಿದ್ದರು.

ಆದರೀಗ ‘ನೆಟ್‌, ಸ್ಲೆಟ್‌ ಪರೀಕ್ಷೆ ತೇರ್ಗಡೆ ಹೊಂದಿದ ಪದವಿ ಪೂರ್ವ ಉಪನ್ಯಾಸಕರುಗಳನ್ನು ಪದವಿ ಕಾಲೇಜಿಗೆ ಬಡ್ತಿ ನೀಡುವ ಶಿಫಾರಸ್ಸನ್ನು ಉನ್ನತ ಶಿಕ್ಷಣ ಇಲಾಖೆಯು ಒಪ್ಪದಿರುವುದರಿಂದ ಜಾರಿಗೆ ತರಲು ಸಾಧ್ಯವಿಲ್ಲ,’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ನಿರ್ಧರಿಸಿರುವುದು ಗೊತ್ತಾಗಿದೆ.

ಎಂ ಫಿಲ್‌ ಪಡೆದ ಉಪನ್ಯಾಸಕರಿಗೆ ಒಂದು ಹೆಚ್ಚುವರಿ ವಾರ್ಷಿಕ ವೇತನ ಬಡ್ತಿ ಹಾಗೂ ಪಿಎಚ್‌ಡಿ ಪಡೆದ ಉಪನ್ಯಾಸಕರಿಗೆ ಎರಡು ಹೆಚ್ಚುವರಿ ವಾರ್ಷಿಕ ವೇತಗನ ಬಡ್ತಿ ಮಂಜೂರು ಮಾಡುವ ಸಂಬಂಧ ಕುಮಾರ್‌ ನಾಯಕ್‌ ಅವರು ಮಾಡಿದ್ದ ಶಿಫಾರಸ್ಸು ಇನ್ನೂ ಸರ್ಕಾರದ ಹಂತದಲ್ಲೇ ಪರಿಶೀಲನೆಯಲ್ಲಿದೆ ಎಂದು ತಿಳಿದು ಬಂದಿದೆ.

ಅದೇ ರೀತಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ಪದವಿ ಪೂರ್ವ ಕಾಲೇಜುಗಳಲ್ಲಿ ಸೇವೆಯನ್ನು ಸಕ್ರಮಗೊಳಿಸುವ ಕುರಿತು ಸಂಬಂಧಿಸಿದ ಇಲಾಖೆ ಜತೆಗೆ ಪತ್ರ ವ್ಯವಹಾರವನ್ನು ಮುಂದುವರೆಸಿರುವ ಸರ್ಕಾರ, ಗುತ್ತಿಗೆ ಆಧಾರದಲ್ಲಿ ನೇಮಕವಾಗಿ ಸೇವಾ ಸಕ್ರಮಗೊಂಡ ಉಪನ್ಯಾಸಕರ ಕುರಿತಂಎ ವಿಧಾನಪರಿಷತ್ತಿನ ಸದಸ್ಯ ಕೆ ಟಿ ಶ್ರೀಕಂಠೇಗೌಡ ಅವರ ನೇತೃತ್ವದ ಸಮಿತಿ ವರದಿ ಸಲ್ಲಿಸಿದ ನಂತರ ಆ ಪ್ರಸ್ತಾವನೆಯನ್ನು ಪರಿಶೀಲಿಸಲು ನಿರ್ಧರಿಸಿದೆ ಎಂದು ಗೊತ್ತಾಗಿದೆ.

ಕುಮಾರ್‌ನಾಯಕ್‌ ಅವರು ಮಾಡಿದ್ದ ಶಿಫಾರಸ್ಸುಗಳ ಪೈಕಿ ಜೂನ್‌ 2016ರಂದು ಕಾರ್ಯನಿರ್ವಹಿಸುತ್ತಿರುವ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರುಗಳಿಗೆ ಒಂದು ಹೆಚ್ಚುವರಿ ವೇತನ ಬಡ್ತಿ ಮಂಜೂರಾಗಿದೆ. ನಿಯೋಜನೆ ಭತ್ಯೆಯನ್ನು 300 ರು.ಗಳಿಂದ 750 ಕ್ಕೆ ಹೆಚ್ಚಿಸಿ ಆದೇಶಿಸಿದೆ. ಪ್ರಸ್ತುತ 500 ರು. ಗಳ ವಿಶೇಷ ಭತ್ಯೆಯನ್ನು ಪಡೆಯುತ್ತಿರುವ ಉಪನ್ಯಾಸಕರುಗಳಿಗೂ ಇದನ್ನು ಮುಂದುವರೆಸಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಾಂಶುಪಾಲರಿಗೆ ಮಾಸಿಕ 1,000 ರು.ಗಳ ವಿಶೇಷ ಭತ್ಯೆಯನ್ನೂ ಮಂಜೂರು ಮಾಡಿದೆ.

ಸರ್ಕಾರಿ ಪದವಿಪೂರ್ವ ಕಾಲೇಜು ಉಪನ್ಯಾಸಕರು, ಪ್ರಾಂಶುಪಾಲರು ಹಾಗೂ ಪ್ರೌಢಶಾಲೆ ಸಹ ಶಿಕ್ಷಕರ ವೇತನ ತಾರತಮ್ಯ ಸರಿಪಡಿಸಲು ಕುಮಾರ್ ನಾಯಕ್ ವರದಿ ಅನುಷ್ಠಾನವಾಗಬೇಕಿದೆ. ಇದಕ್ಕಾಗಿ 190 ಕೋಟಿ ರೂ. ಅನುದಾನ ನೀಡಬೇಕು ಎಂದು ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವರಾಗಿದ್ದ ಕಿಮ್ಮನೆ ರತ್ನಾಕರ ಅವರು ಒತ್ತಾಯಿಸಿದ್ದರು.

ಅಲ್ಲದೆ ಪ್ರೌಢಶಿಕ್ಷಣ ಮತ್ತು ಪಿಯು ಕಾಲೇಜಿನ ಉಪನ್ಯಾಸಕರ ವೇತನ ತಾರತಮ್ಯಕ್ಕೆ ಸಂಬಂಧಿಸಿ ಜಿ.ಕುಮಾರ್‌ನಾಯಕ್ ವರದಿ ಅನುಷ್ಠಾನಕ್ಕೆ ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮತಿಸಿದ್ದನ್ನು ಸ್ಮರಿಸಬಹುದು.

Hot this week

ಘನತ್ಯಾಜ್ಯ ವಿಲೇವಾರಿ ಟಿಪ್ಪಿಂಗ್ ಶುಲ್ಕ; ರಾಮ್ಕಿ ಗ್ರೂಪ್‌ಗೆ ಅನುಕೂಲಕರ, ರಾಜ್ಯ ಸರ್ಕಾರವನ್ನು ಆರ್ಥಿಕ ದಿವಾಳಿತನದತ್ತ ತಳ್ಳಲಾಗಿದೆಯೇ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಟಿಪ್ಪಿಂಗ್ ಶುಲ್ಕದ ಆಧಾರದ ಮೇಲೆ...

ಶಾಂತಿನಗರ ಹೌಸಿಂಗ್‌ ಸೊಸೈಟಿ ಅಕ್ರಮ; 2,900 ಕೋಟಿ ಅಧಿಕ ಮೊತ್ತದ ಹಗರಣ ಕೆದಕಿದರೇ ಸತೀಶ್ ಜಾರಕಿಹೊಳಿ?

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರೊಂದಿಗೆ ತಳಕು ಹಾಕಿಕೊಂಡಿದ್ದ...

ಎಲ್‌ 1 ತಿರಸ್ಕೃತವಾದರೂ ನಡೆಯದ ಮರು ಟೆಂಡರ್, ಎಲ್ 2 ಗೆ ನೇರವಾಗಿ ಗುತ್ತಿಗೆಗೆ ಪರಿಗಣನೆ; 2,477.90 ಕೋಟಿ ರು ಹಗರಣ!

ಬೆಂಗಳೂರು; ಮಾಲೂರು-ಹೊಸಕೋಟೆ ವ್ಯಾಪ್ತಿಯನ್ನೂ ಸೇರಿದಂತೆ ಒಟ್ಟಾರೆ 123 ಕಿ ಮೀ ರಸ್ತೆಯನ್ನು ...

ನಕಲಿ ಶಿಕ್ಷಕರಿಗೆ ವೇತನ ಪಾವತಿ; ಆರೋಪಿತ ಅಧಿಕಾರಿಗಳ ವಿರುದ್ಧ ಇಲಾಖೆ ವಿಚಾರಣೆ ಕೈಬಿಟ್ಟ ಸರ್ಕಾರ!

ಬೆಂಗಳೂರು; ರಾಮನಗರ ಜಿಲ್ಲೆಯಲ್ಲಿ  2011ರಿಂದ 2014ರವರೆಗೆ ಹೆಚ್‌ಆರ್‍ಎಂಎಸ್‌ ಮೂಲಕ ನಕಲಿ ಶಿಕ್ಷಕರ...

120 ಎಕರೆ ಗೋಮಾಳ ಕಬಳಿಕೆ ಪ್ರಕರಣ; ಕಂದಾಯ ನಿರೀಕ್ಷಕರ ವರದಿಯನ್ನೇ ಮುಚ್ಚಿಟ್ಟ ತಹಶೀಲ್ದಾರ್, ಸಚಿವರ ಒತ್ತಡ?

ಬೆಂಗಳೂರು; ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ ಗ್ರಾಮದ ವಿವಿಧ ಸರ್ವೆ ನಂಬರ್‍‌ಗಳಲ್ಲಿರುವ...
Please Scan to make Your Contribution

Topics

ಘನತ್ಯಾಜ್ಯ ವಿಲೇವಾರಿ ಟಿಪ್ಪಿಂಗ್ ಶುಲ್ಕ; ರಾಮ್ಕಿ ಗ್ರೂಪ್‌ಗೆ ಅನುಕೂಲಕರ, ರಾಜ್ಯ ಸರ್ಕಾರವನ್ನು ಆರ್ಥಿಕ ದಿವಾಳಿತನದತ್ತ ತಳ್ಳಲಾಗಿದೆಯೇ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಟಿಪ್ಪಿಂಗ್ ಶುಲ್ಕದ ಆಧಾರದ ಮೇಲೆ...

ಶಾಂತಿನಗರ ಹೌಸಿಂಗ್‌ ಸೊಸೈಟಿ ಅಕ್ರಮ; 2,900 ಕೋಟಿ ಅಧಿಕ ಮೊತ್ತದ ಹಗರಣ ಕೆದಕಿದರೇ ಸತೀಶ್ ಜಾರಕಿಹೊಳಿ?

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರೊಂದಿಗೆ ತಳಕು ಹಾಕಿಕೊಂಡಿದ್ದ...

ಎಲ್‌ 1 ತಿರಸ್ಕೃತವಾದರೂ ನಡೆಯದ ಮರು ಟೆಂಡರ್, ಎಲ್ 2 ಗೆ ನೇರವಾಗಿ ಗುತ್ತಿಗೆಗೆ ಪರಿಗಣನೆ; 2,477.90 ಕೋಟಿ ರು ಹಗರಣ!

ಬೆಂಗಳೂರು; ಮಾಲೂರು-ಹೊಸಕೋಟೆ ವ್ಯಾಪ್ತಿಯನ್ನೂ ಸೇರಿದಂತೆ ಒಟ್ಟಾರೆ 123 ಕಿ ಮೀ ರಸ್ತೆಯನ್ನು ...

ನಕಲಿ ಶಿಕ್ಷಕರಿಗೆ ವೇತನ ಪಾವತಿ; ಆರೋಪಿತ ಅಧಿಕಾರಿಗಳ ವಿರುದ್ಧ ಇಲಾಖೆ ವಿಚಾರಣೆ ಕೈಬಿಟ್ಟ ಸರ್ಕಾರ!

ಬೆಂಗಳೂರು; ರಾಮನಗರ ಜಿಲ್ಲೆಯಲ್ಲಿ  2011ರಿಂದ 2014ರವರೆಗೆ ಹೆಚ್‌ಆರ್‍ಎಂಎಸ್‌ ಮೂಲಕ ನಕಲಿ ಶಿಕ್ಷಕರ...

120 ಎಕರೆ ಗೋಮಾಳ ಕಬಳಿಕೆ ಪ್ರಕರಣ; ಕಂದಾಯ ನಿರೀಕ್ಷಕರ ವರದಿಯನ್ನೇ ಮುಚ್ಚಿಟ್ಟ ತಹಶೀಲ್ದಾರ್, ಸಚಿವರ ಒತ್ತಡ?

ಬೆಂಗಳೂರು; ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ ಗ್ರಾಮದ ವಿವಿಧ ಸರ್ವೆ ನಂಬರ್‍‌ಗಳಲ್ಲಿರುವ...

ಕೌನ್ಸಲಿಂಗ್‌ಗೂ ಮುನ್ನವೇ ಪಿಡಿಒಗಳ ವರ್ಗಾವಣೆ; ಹಣ ಕೊಟ್ಟವರಿಗೆ ಆದೇಶ, ಕೊಡದವರಿಗೆ ಕೌನ್ಸಲಿಂಗ್, ಆರೋಪ

ಬೆಂಗಳೂರು; ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗಳ ವರ್ಗಾವಣೆಯನ್ನು ಕೌನ್ಸಲಿಂಗ್‌ ಮೂಲಕವೇ ನಡೆಸಲಾಗುವುದು ಎಂದು...

ಪಿಟಿಸಿಎಲ್, ಗೋಮಾಳ, ಅರಣ್ಯ ಜಮೀನು ಸ್ವರೂಪ ಮರೆಮಾಚಿ ಪರಿವರ್ತನೆ; ದಿ ಫೈಲ್ ವರದಿ ಬೆನ್ನಲ್ಲೇ ಸರ್ಕಾರದ ಮೆಟ್ಟಿಲೇರಿದ ಕೆಆರ್‍‌ಎಸ್‌

ಬೆಂಗಳೂರು; ಪಿಟಿಸಿಎಲ್,  ಸರ್ಕಾರಿ ಗೋಮಾಳ ಮತ್ತು ಅರಣ್ಯ ಪ್ರದೇಶದ ಜಮೀನುಗಳ ಸ್ವರೂಪವನ್ನೇ...

30 ವರ್ಷಗಳ ನಂತರ ಎಲ್‌ಎಸಿ ಪ್ರಕರಣ ದಾಖಲು; ಸರ್ಕಾರದ ಬೊಕ್ಕಸಕ್ಕೆ 80 ಕೋಟಿ ಆರ್ಥಿಕ ಹೊರೆ

ಬೆಂಗಳೂರು; ಮಂಡ್ಯ ತಾಲೂಕು ಕೊತ್ತತ್ತಿ ಹೋಬಳಿಯ ಗುತ್ತಲು ಗ್ರಾಮದಲ್ಲಿ 30 ವರ್ಷಗಳ...

Related Articles

Popular Categories

error: Content is protected !!