Tuesday | June 9, 2026 |

ಟರ್ಫ್‌ ಕ್ಲಬ್‌; ಸುಪ್ರೀಂ ಕೋರ್ಟ್‌ನಲ್ಲಿ ಅಡ್ವೋಕೇಟ್‌ ಜನರಲ್‌ ಸಲ್ಲಿಸಿದ್ದ ಮನವಿ ಏಕಪಕ್ಷೀಯವಾಗಿತ್ತೇ?

ಬೆಂಗಳೂರು; ಗುತ್ತಿಗೆ ಅವಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಟರ್ಫ್‌ ಕ್ಲಬ್‌ ಸಲ್ಲಿಸಿದ್ದ ವಿಶೇಷ ಮೇಲ್ಮನವಿ ಅರ್ಜಿ ವಿಚಾರಣೆ ಸಂಬಂಧ ಯಥಾ ಸ್ಥಿತಿ ಕಾಯ್ದುಕೊಳ್ಳಲು ರಾಜ್ಯ ಅಡ್ವೋಕೇಟ್‌ ಜನರಲ್‌ ಅವರು ಲೋಕೋಪಯೋಗಿ ಇಲಾಖೆಯ ಸೂಚನೆ ಇಲ್ಲದೆಯೇ ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಸಲ್ಲಿಸಿದ್ದರು ಎಂಬ ಮಾಹಿತಿಯನ್ನು ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ಹೊರಗೆಡವಿದೆ.

ಬೆಂಗಳೂರು ಟರ್ಫ್‌ ಕ್ಲಬ್‌ನಿಂದ 37.46 ಕೋಟಿ ಬಾಡಿಗೆ ಬಾಕಿ ಇರುವ ಬಗ್ಗೆಯೂ ಪಿಡಬ್ಲ್ಯೂಡಿ ಮತ್ತು ಕಾನೂನು ಇಲಾಖೆಯು ಸರ್ವೋಚ್ಛ ನ್ಯಾಯಾಲಯದ ಗಮನಕ್ಕೆ ತರದ ಕಾರಣ, ಪ್ರಕರಣವು ಇನ್ನೂ ಇತ್ಯರ್ಥಗೊಂಡಿಲ್ಲ ಎಂಬ ಅಂಶವನ್ನು ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ಬಹಿರಂಗಗೊಳಿಸಿದೆ.

ಎಚ್‌ ಕೆ ಪಾಟೀಲ್‌ ಅವರ ಅಧ್ಯಕ್ಷತೆಯ ಸಾರ್ವಜನಿಕ ಲೆಕ್ಕಪತ್ರ ಸಮಿತಿಯು 15ನೇ ವಿಧಾನಸಭೆಗೆ ಸಲ್ಲಿಸಿರುವ 4ನೇ ವರದಿಯು ಬೆಂಗಳೂರು ಟರ್ಫ್‌ ಕ್ಲಬ್‌ ಗುತ್ತಿಗೆ ಪ್ರಕರಣದ ಹಲವು ಆಯಾಮಗಳನ್ನು ಸಮಿತಿಯು ತೆರೆದಿಟ್ಟಿದೆ.

30 ವರ್ಷಗಳ ಗುತ್ತಿಗೆ ಅವಧಿಯು 2009ರಲ್ಲಿ ಪೂರ್ಣಗೊಂಡ ನಂತರ ಟರ್ಫ್‌ ಕ್ಲಬ್‌ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿದ್ದ ಕ್ಲಬ್‌ ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ಮೇಲ್ಮನವಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ಸಂದರ್ಭದಲ್ಲಿ ಗುತ್ತಿಗೆ ಪ್ರಕರಣದಲ್ಲಿ ಮುಂದಿನ ಆದೇಶದವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳಬಹುದು ಎಂದು 2010ರಲ್ಲಿದ್ದ ಅಡ್ವೋಕೇಟ್‌ ಜನರಲ್‌ ಅವರು ನ್ಯಾಯಾಲಯದಲ್ಲಿ ಮನವಿ ಸಲ್ಲಿಸಿದ್ದರು.

ಆದರೆ ಈ ಮನವಿಯನ್ನು ಸಲ್ಲಿಸುವ ಮುನ್ನ ಅಡ್ವೋಕೇಟ್‌ ಜನರಲ್‌ ಅವರು ಲೋಕೋಪಯೋಗಿ ಇಲಾಖೆಯಿಂದ ಲಿಖಿತ ರೂಪದಲ್ಲಾಗಲಿ ಅಥವಾ ಮೌಖಿಕವಾಗಲಿ ಸೂಚನೆ ನೀಡಿರಲಿಲ್ಲ ಎಂದು ಸಮಿತಿಗೆ ಇಲಾಖೆಯ ಅಧಿಕಾರಿಗಳು ಉತ್ತರಿಸಿರುವುದು ವರದಿಯಿಂದ ತಿಳಿದು ಬಂದಿದೆ.

ಅಡ್ವೋಕೇಟ್‌ ಜನರಲ್‌ ಅವರು ಸಲ್ಲಿಸಿದ್ದ ಮನವಿ ಹಿಂದೆ ಯಾವ ಒತ್ತಡ, ಪ್ರೇರಣೆ ಮತ್ತು ಪ್ರೋತ್ಸಾಹಕ್ಕಾಗಿ ಒಳಗಾಗಿ ವಕೀಲಿ ವೃತ್ತಿಯ ನೀತಿ ನಿಯಮಗಳನ್ನು ಮೀರಿ ಇಂತಹ ನಿರ್ಧಾರ ತೆಗೆದುಕೊಂಡಿದ್ದರು ಎಂಬ ಬಗ್ಗೆಯೂ ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ಪರಿಶೀಲನೆ ನಡೆಸಿತ್ತು.

‘ಲೋಕೋಪಯೋಗಿ ಇಲಾಖೆಯಿಂದಾಗಲಿ ಅಥವಾ ಕಾನೂನು ಇಲಾಖೆಯಿಂದಾಗಲಿ ಯಥಾಸ್ಥಿತಿ ಕಾಪಾಡುವಂತೆ ಅಡ್ವೋಕೇಟ್‌ ಜನರಲ್‌ ಅವರಿಗೆ ಮನವಿ ಸಲ್ಲಿಸಲು ತಿಳಿಸದಿದ್ದರೂ ಸರ್ವೋಚ್ಛ ನ್ಯಾಯಾಲಯದ ಮುಂದೆ ಆ ರೀತಿ ಮನವಿ ಸಲ್ಲಿಸಿದ್ದರಿಂದ ಸರ್ಕಾರ ಮತ್ತು ಅಡ್ವೋಕೇಟ್‌ ಜನರಲ್‌ರ ನಡುವೆ ಸಮನ್ವಯದ ಕೊರತೆಯೇ ಪ್ರಕರಣ ಇಲ್ಲಿಯವರೆಗೂ ಇತ್ಯರ್ಥವಾಗದಿರಲು ಕಾರಣ,’ ಎಂದು ಸಮಿತಿ ವರದಿಯಲ್ಲಿ ಅಭಿಪ್ರಾಯಿಸಿದೆ.

ಈ ಪ್ರಕರಣದಲ್ಲಿ ಇನ್ನಾದರೂ ಸರ್ಕಾರವು ಅಡ್ವೋಕೇಟ್‌ ಜನರಲ್‌ ಅವರಿಗೆ ಪ್ರಕರಣದ ಶೀಘ್ರ ವಿಲೇವಾರಿಗೆ ಸಂಬಂಧಿಸಿದಂತೆ ಸೂಕ್ತ ಸಲಹೆ ಮತ್ತು ಸೂಚನೆಗಳನ್ನು ನೀಡಬೇಕು ಎಂದು ಸಮಿತಿಯು ಶಿಫಾರಸ್ಸು ಮಾಡಿದೆ.

ಇನ್ನು, ಬೆಂಗಳೂರು ಟರ್ಫ್‌ ಕ್ಲಬ್‌ ಸಂಸ್ಥೆಯು ಸ್ಥಳಾಂತರಗೊಂಡರೆ ಅಲ್ಲಿನ ಕೆಲಸಗಾರರಿಗೆ, ಕುದುರೆಗಳನ್ನು ನೋಡಿಕೊಳ್ಳುವವರಿಗೆ ತೊಂದರೆಯಾಗಲಿದೆ ಎಂದು ಸಂಸ್ಥೆಯು 2015ರಲ್ಲಿ ಸಿವಿಲ್‌ ಪ್ರಕರಣದ ದಾಖಲಿಸಿತ್ತು. ಹೀಗಾಗಿ ಪ್ರಕರಣವು ಇತ್ಯರ್ಥವಾಗಿಲ್ಲ ಎಂಬುದು ಕಾನೂನು ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಸಮಿತಿಗೆ ಒದಗಿಸಿರುವ ಮಾಹಿತಿಯಿಂದ ತಿಳಿದು ಬಂದಿದೆ.

‘ಕಾನೂನು ಇಲಾಖೆ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಇಚ್ಛಾಶಕ್ತಿ ಇದ್ದಿದ್ದಲ್ಲಿ ಪ್ರಕರಣವು ಇಲ್ಲಿಯವರೆಗೂ ಮುಂದುವರೆಯುತ್ತಿರಲಿಲ್ಲ. ಬೆಂಗಳೂರು ಟರ್ಫ್‌ ಕ್ಲಬ್‌ನಿಂದ 37.46 ಕೋಟಿ ಬಾಡಿಗೆ ಬಾಕಿ ಇರುವ ಬಗ್ಗೆ 2010ರಲ್ಲೇ ಇಲಾಖೆಯು ಸರ್ವೋಚ್ಛ ನ್ಯಾಯಾಲಯದ ಗಮನಕ್ಕೆ ತಂದಿದ್ದರೆ ಪ್ರಕರಣವು ಇಷ್ಟರೊಳಗಾಗಿ ಮುಗಿಯುತ್ತಿತ್ತು,’ ಎಂದು ಸಮಿತಿಯು ಅಭಿಪ್ರಾಯಿಸಿದೆ.

ಹಾಗೆಯೇ ಟರ್ಫ್‌ ಕ್ಲಬ್‌ನಿಂದ ಬಾಕಿ ಇರುವ ಮೊತ್ತದ ಬಗ್ಗೆ ಅರಿವಿದ್ದರೂ ರೇಸ್‌ ಚಟುವಟಿಕೆಗಳನ್ನು ನಡೆಸಲು ಪರವಾನಗಿಯನ್ನು ಪ್ರತಿ ವರ್ಷವೂ ಆರ್ಥಿಕ ಇಲಾಖೆಯು ನವೀಕರಣಗೊಳಿಸುತ್ತಿರುವುದಕ್ಕೆ ಸಮಿತಿಯು ವಿಷಾದಿಸಿದೆ. ಅಲ್ಲದೆ ಪ್ರಕರಣವು ನ್ಯಾಯಾಲಯದಲ್ಲಿ ಬಾಕಿ ಇದ್ದಾಗ ಗುತ್ತಿಗೆ ಅವಧಿಯು ಪೂರ್ಣಗೊಂಡಿದ್ದರೂ ಯಥಾಸ್ಥಿತಿ ಕಾಪಾಡಿಕೊಳ್ಳುವ ಅದೇಶ ಮುಂದಿಟ್ಟುಕೊಂಡು ಕ್ಲಬ್‌ ಪರವಾನಗಿಯನ್ನು ನವೀಕರಣಗೊಳಿಸುತ್ತಿರುವುದು ಸಮಂಜಸವಲ್ಲ ಎಂದೂ ಅಭಿಪ್ರಾಯಿಸಿದೆ.

ಮೈಸೂರು ರೇಸ್‌ ಕೋರ್ಸ್‌ ಲೈಸೆನ್ಸಿಂಗ್‌ ಆಕ್ಟ್‌ 1952 ಮತ್ತು ಮೈಸೂರು ರೇಸ್‌ ಕೋರ್ಸ್‌ ಲೈಸೆನ್ಸಿಂಗ್‌ ರೂಲ್ಸ್‌ 1952ರ ನಿಯಮಗಳನ್ನು ಬೆಂಗಳೂರು ಟರ್ಫ್‌ ಕ್ಲಬ್‌ ಸಂಸ್ಥೆಯು ಸತತವಾಗಿ ಉಲ್ಲಂಘಿಸಿರುತ್ತಿದೆ. ಹೀಗಾಗಿ ಕ್ಲಬ್‌ನ ಪರವಾನಗಿಯನ್ನು ರದ್ದುಗೊಳಿಸಲು ಆರ್ಥಿಕ ಇಲಾಖೆಗೆ ಸಂಪೂರ್ಣ ಅಧಿಕಾರವಿದ್ದರೂ ಇಲ್ಲಿಯವರೆಗೂ ಯಾವುದೇ ಕ್ರಮ ವಹಿಸಿಲ್ಲ ಎಂಬುದು ವರದಿಯಿಂದ ಗೊತ್ತಾಗಿದೆ.

Hot this week

ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌, ಸಿಎಂ ಜನಸ್ಪಂದನ, ಸಿ ಎಸ್ ಕಚೇರಿಯಲ್ಲಿ ಇತ್ಯರ್ಥವಾಗದ 37,782 ಅರ್ಜಿಗಳು; ನಿಷ್ಕ್ರೀಯವಾಯಿತೇ ಆಡಳಿತ?

ಬೆಂಗಳೂರು;  ಸಾರ್ವಜನಿಕರು ವಿವಿಧ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌,...

ಅತಿಥಿ ಶಿಕ್ಷಕರ ನೇಮಕ ಪದ್ಧತಿಗೆ ರಾಜ್ಯ ಶಿಕ್ಷಣ ನೀತಿ ಆಯೋಗ ವಿರೋಧ; ಪದ್ದತಿ ಸಂಪೂರ್ಣವಾಗಿ ತೆಗೆದು ಹಾಕದೇ ವರದಿಯನ್ನೇ ಮೂಲೆಗುಂಪು ಮಾಡಿತೇ ಸರ್ಕಾರ?

ಬೆಂಗಳೂರು; 'ರಾಜ್ಯದಲ್ಲಿ   ಬೇರೂರಿದ ಗುತ್ತಿಗೆ ಶಿಕ್ಷಕ ನೇಮಕ ಪದ್ಧತಿಯಿಂದಾಗಿ  ವೃತ್ತಿಪರತೆಯ ಕೊರತೆ...

ಕಸ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಬಹುಕೋಟಿ ಮೊತ್ತದ ಹಗರಣ; ಯತ್ನಾಳ್, ಶೋಭಾ ನಂತರ ಧೀರಜ್ ಮುನಿರಾಜು ದೂರು, ತುಟಿಬಿಚ್ಚದ ಪ್ರತಿಪಕ್ಷ ನಾಯಕ ಅಶೋಕ್

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬೆಂಗಳೂರಿನ ಸಮಗ್ರ ಘನತ್ಯಾಜ್ಯ ನಿರ್ವಹಣೆಗೆ...

ಈಗಲ್‌ಟನ್‌ ರೆಸಾರ್ಟ್‌ನಿಂದ ಸರ್ಕಾರಿ ಜಮೀನು ಒತ್ತುವರಿ; 29 ವರ್ಷಗಳಾದರೂ ಪ್ರಕರಣ ಇತ್ಯರ್ಥವಾಗಿಲ್ಲ, 982 ಕೋಟಿಯೂ ವಸೂಲಾಗಿಲ್ಲ

ಬೆಂಗಳೂರು; ರಾಮನಗರ ತಾಲೂಕು ಬಿಡದಿ ಹೋಬಳಿ ಶ್ಯಾನುಮಂಗಲ, ಬಿಲ್ಲಕೆಂಪನಹಳ್ಳಿ, ಬಾನಂದೂರು ಗ್ರಾಮದ...
Please Scan to make Your Contribution

Topics

ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌, ಸಿಎಂ ಜನಸ್ಪಂದನ, ಸಿ ಎಸ್ ಕಚೇರಿಯಲ್ಲಿ ಇತ್ಯರ್ಥವಾಗದ 37,782 ಅರ್ಜಿಗಳು; ನಿಷ್ಕ್ರೀಯವಾಯಿತೇ ಆಡಳಿತ?

ಬೆಂಗಳೂರು;  ಸಾರ್ವಜನಿಕರು ವಿವಿಧ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌,...

ಅತಿಥಿ ಶಿಕ್ಷಕರ ನೇಮಕ ಪದ್ಧತಿಗೆ ರಾಜ್ಯ ಶಿಕ್ಷಣ ನೀತಿ ಆಯೋಗ ವಿರೋಧ; ಪದ್ದತಿ ಸಂಪೂರ್ಣವಾಗಿ ತೆಗೆದು ಹಾಕದೇ ವರದಿಯನ್ನೇ ಮೂಲೆಗುಂಪು ಮಾಡಿತೇ ಸರ್ಕಾರ?

ಬೆಂಗಳೂರು; 'ರಾಜ್ಯದಲ್ಲಿ   ಬೇರೂರಿದ ಗುತ್ತಿಗೆ ಶಿಕ್ಷಕ ನೇಮಕ ಪದ್ಧತಿಯಿಂದಾಗಿ  ವೃತ್ತಿಪರತೆಯ ಕೊರತೆ...

ಕಸ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಬಹುಕೋಟಿ ಮೊತ್ತದ ಹಗರಣ; ಯತ್ನಾಳ್, ಶೋಭಾ ನಂತರ ಧೀರಜ್ ಮುನಿರಾಜು ದೂರು, ತುಟಿಬಿಚ್ಚದ ಪ್ರತಿಪಕ್ಷ ನಾಯಕ ಅಶೋಕ್

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬೆಂಗಳೂರಿನ ಸಮಗ್ರ ಘನತ್ಯಾಜ್ಯ ನಿರ್ವಹಣೆಗೆ...

ಈಗಲ್‌ಟನ್‌ ರೆಸಾರ್ಟ್‌ನಿಂದ ಸರ್ಕಾರಿ ಜಮೀನು ಒತ್ತುವರಿ; 29 ವರ್ಷಗಳಾದರೂ ಪ್ರಕರಣ ಇತ್ಯರ್ಥವಾಗಿಲ್ಲ, 982 ಕೋಟಿಯೂ ವಸೂಲಾಗಿಲ್ಲ

ಬೆಂಗಳೂರು; ರಾಮನಗರ ತಾಲೂಕು ಬಿಡದಿ ಹೋಬಳಿ ಶ್ಯಾನುಮಂಗಲ, ಬಿಲ್ಲಕೆಂಪನಹಳ್ಳಿ, ಬಾನಂದೂರು ಗ್ರಾಮದ...

ಮಾಜಿ ಸಿಎಂ ಸಿದ್ದರಾಮಯ್ಯ, ಪಾರ್ವತಿ ವಿರುದ್ಧ ಭ್ರಷ್ಟಾಚಾರ, ಅಧಿಕಾರ ದುರುಪಯೋಗ ಆರೋಪ; 2 ವರ್ಷದಲ್ಲಿ 16 ಬಾರಿ ವಿಚಾರಣೆ, ಜುಲೈ 9ಕ್ಕೆ ವಿಚಾರಣೆಗೆ ದಿನಾಂಕ ನಿಗದಿ

ಬೆಂಗಳೂರು;  ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ಬದಲಿ ನಿವೇಶನ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಯಾಗಿದ್ದ...

ಎಂಎಸ್‌ಐಎಲ್‌ನಲ್ಲಿ ಅಕ್ರಮ; ನಿವೃತ್ತ ಐಎಎಸ್‌ ಜಿ ಸಿ ಪ್ರಕಾಶ್‌ ಸೇರಿ 7 ಮಂದಿ ಅಧಿಕಾರಿಗಳ ವಿರುದ್ಧ ಸಲ್ಲಿಕೆಯಾಗದ ಚಾರ್ಜ್‌ಶೀಟ್‌

ಬೆಂಗಳೂರು; ಮೈಸೂರು ಸೇಲ್ಸ್‌ ಇಂಟರ್ ನ್ಯಾ‍ಷನಲ್‌ ಲಿಮಿಟೆಡ್‌ನಲ್ಲಿ ನಡೆದಿದೆ ಎನ್ನಲಾದ ವಿವಿಧ...

Related Articles

Popular Categories

error: Content is protected !!