Sunday | March 29, 2026 |

ಕೋವಿಡ್‌-19; ದುಬಾರಿ ದರ ವಸೂಲಿ ನಡುವೆಯೂ ಖಾಸಗಿ ಆಸ್ಪತ್ರೆಗಳ ಆದಾಯ ಕುಸಿತ!

Support THE-FILE

spot_img

ಬೆಂಗಳೂರು; ಕೋವಿಡ್‌-19 ದೃಢಪಟ್ಟ ಸೋಂಕಿತರಿಗೆ ಚಿಕಿತ್ಸೆ ನೀಡಿದ್ದ ಖಾಸಗಿ ಅಸ್ಪತ್ರೆಗಳು ದುಬಾರಿ ದರವನ್ನು ವಸೂಲಿ ಮಾಡಿವೆ ಎಂಬ ಗುರುತರವಾದ ಆರೋಪಗಳ ನಡುವೆಯೇ ಇದೇ ಅವಧಿಯಲ್ಲಿ ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗಳು ಕೋಟ್ಯಂತರ ಮೊತ್ತದಲ್ಲಿ ನಿವ್ವಳ ನಷ್ಟ ಹೊಂದಿವೆ ಎಂಬ ಅಂಕಿ ಅಂಶಗಳು ಬಹಿರಂಗಗೊಂಡಿವೆ.

ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ಪ್ರತಿಷ್ಠಿತ ಎಂಬ ಹೆಗ್ಗಳಿಕೆ ಹೊಂದಿರುವ ಪೋರ್ಟಿಸ್‌ ಮತ್ತು ನಾರಾಯಣ ಹೃದಯಾಲಯ ಆಸ್ಪತ್ರೆಗಳು ನಿವ್ವಳ ನಷ್ಟ ಹೊಂದಿರುವುದು ಗೊತ್ತಾಗಿದೆ. ಫೋರ್ಟಿಸ್ ಹೆಲ್ತ್‌ಕೇರ್‌ 2019ರ ಏಪ್ರಿಲ್-ಜೂನ್‌ನಲ್ಲಿ 1,138.3 ಕೋಟಿ ರೂ. ಗಳಿಂದ 2020 ರ ಏಪ್ರಿಲ್-ಜೂನ್‌ನಲ್ಲಿ 606 ಕೋಟಿ ರೂ. ಗೆ ಕುಸಿದಿದೆ. ಒಟ್ಟು ಆದಾಯ 523.4 ಕೋಟಿ ರು ಅಥವಾ ಶೇ 46.8ರಷ್ಟು ಕುಸಿದಿದೆ. ಕೋವಿಡ್‌ ತ್ರೈಮಾಸಿಕದಲ್ಲಿ 178.9 ಕೋಟಿ ರು. ನಿವ್ವಳ ನಷ್ಟ ಹೊಂದಿದೆ ಎಂದು ಇಂಡಿಯಾ ಸ್ಪೆಂಡ್‌ ವರದಿ ಮಾಡಿದೆ.

ಅದೇ ರೀತಿ ನಾರಾಯಣ ಹೃದಯಾಲಯವು ತನ್ನ ಒಟ್ಟು ಆದಾಯದಲ್ಲಿ 383.9 ಕೋಟಿ ರು.ಗೆ ಕುಸಿದಿದೆ. (777.4 ಕೋಟಿಯಿಂದ 393.5 ಕೋಟಿ ರೂ.ಗೆ) ಹಿಂದಿನ ವರ್ಷದ ಇದೇ ತ್ರೈಮಾಸಿಕದಲ್ಲಿ 30.3ಕೋಟಿ ರು.ನಿವ್ವಳ ಲಾಭಕ್ಕೆ ಹೋಲಿಸಿದರೆ ಕೋವಿಡ್‌ ತ್ರೈಮಾಸಿಕದಲ್ಲಿ 119.7 ಕೋಟಿ ರು.ಗೆ ಕುಸಿದಿದೆ ಎಂದು ತಿಳಿದು ಬಂದಿದೆ.

ಕೋವಿಡ್‌-19 ಸಂಕೀರ್ಣ ಸಂದರ್ಭ. ನಿಯಮಿತವಾಗಿ ಪರೀಕ್ಷೆ, ತಪಾಸಣೆ, ಚಿಕಿತ್ಸೆಗೆಂದು ಹೋಗುತ್ತಿದ್ದವರು ಆಸ್ಪತ್ರೆಗಳಿಂದ ಹಲವು ತಿಂಗಳುಗಳಿಂದ ದೂರ ಉಳಿದಿದ್ದು ನಿಜ. ಹಾಗಾಗಿ ಆಸ್ಪತ್ರೆಗಳಿಗೆ ಆದಾಯ ಕುಂಠಿತವಾಗಿದ್ದರೆ ಅಚ್ಚರಿಯೇನಿಲ್ಲ. ಹಾಗೆಯೇ ಕೋವಿಡ್‌-19 ಕಾರಣವನ್ನು ಮುಂದಿಟ್ಟುಕೊಂಡು ಹಣವಂತರಿಂದ, ವಿಮೆ ಪಾಲಿಸಿದಾರರಿಂದ ಮತ್ತು ತೀವ್ರ ಜೀವ ಅಪಾಯದಲ್ಲಿರುವಂತಹ ರೋಗಿಗಳಿಂದ ಖಾಸಗಿ ಆಸ್ಪತ್ರೆಗಳು ಸುಲಿಗೆ ಮಾಡಿರುವುದನ್ನು ತಳ್ಳಿ ಹಾಕಲಾಗದು. ಒಟ್ಟಾರೆ ಸಮಾಜ ಬಹಳ ಜವಾಬ್ದಾರಿಯಿಂದ ಕಾಳಜಿಯಿಂದ ನಡೆದುಕೊಳ್ಳಬೇಕಾದ ಸಂದರ್ಭದಲ್ಲಿ ಸಣ್ಣತನ ಮತ್ತು ದುರಾಸೆಗೆ ಒಳಗಾಗಿ ನಡೆದುಕೊಂಡಿರುವುದು ನಮ್ಮಲ್ಲಿ ಆಗಿದೆ. ಇದು ಸಮಾಜ ತಲೆತಗ್ಗಿಸುವ ಘಟನೆಗಳಿಗೆ ಕಾರಣವಾಗಿದೆ.

ರವಿ ಕೃಷ್ಣಾರೆಡ್ಡಿ, ಕರ್ನಾಟಕ ರಾಷ್ಟ್ರಸಮಿತಿ

ಕೋವಿಡ್‌-19ರ ಹಿನ್ನೆಲೆಯಲ್ಲಿ ಘೋಷಿಸಿದ್ದ ಲಾಕ್‌ಡೌನ್‌ನಿಂದಾಗಿ ಬಹುತೇಕರು ಶಸ್ತ್ರ ಚಿಕಿತ್ಸೆಗಳನ್ನು ಮುಂದೂಡಿದ್ದರು. ಡಯಾಲಿಸಿಸ್, ಕಿಮೋಥೆರಪಿ, ರಕ್ತ ವರ್ಗಾವಣೆ, ದೀರ್ಘಕಾಲದ ಕಾಯಿಲೆ ಇರುವ ರೋಗಿಗಳು ಆಸ್ಪತ್ರೆಗಳಿಗೆ ದಾಖಲಾಗಲು ಹಿಂಜರಿತ, ಅದರಲ್ಲೂ ಅಂತರರಾಷ್ಟ್ರೀಯ ವಿಮಾನಗಳ ಸ್ಥಗಿತದಿಂದಾಗಿ ವಿದೇಶಿ ರೋಗಿಗಳು ಶಸ್ತ್ರಚಿಕಿತ್ಸೆಗಳಿಗಾಗಿ ಬೆಂಗಳೂರಿಗೆ ಭೇಟಿ ನೀಡುವುದನ್ನು ನಿಲ್ಲಿಸಿದರು. ಹೀಗಾಗಿ ನಿವ್ವಳ ನಷ್ಟದ ಪ್ರಮಾಣ ಹೆಚ್ಚಾಗಿದೆ ಎಂಬುದು ಖಾಸಗಿ ಆಸ್ಪತ್ರೆಗಳ ವಾದ.

‘ಆಸ್ಪತ್ರೆಗಳ ಆವರಣ ಸ್ವಚ್ಚಗೊಳಿಸುವ ಮತ್ತು ಆರೋಗ್ಯ ಸಿಬ್ಬಂದಿಗೆ ರಕ್ಷಣಾತ್ಮಕ ಸಾಧನಗಳ ಖರೀದಿಯೂ ಇರುವ ವೆಚ್ಚವನ್ನು ಹೆಚ್ಚಿಸಿದೆ. ಅಲ್ಲದೆ ರೋಗಿಗಳ ದಾಖಲಾತಿ ಕಡಿಮೆಯಾದ ಪರಿಣಾಮ ಇರುವ ಸಿಬ್ಬಂದಿ ಸಂಖ್ಯೆಯನ್ನೂ ಕಡಿತಗೊಳಿಸಲಾಗಿದೆ. ಇನ್ನು ಕೆಲವು ಅಸ್ಪತ್ರೆಗಳು ಕೋವಿಡ್‌ ಭೀತಿಯ ನಡುವೆಯೂ ವೈದ್ಯಕೀಯ ಸೇವೆಯಲ್ಲಿ ತೊಡಗಿಸಿಕೊಳ್ಳುವುದಕ್ಕಾಗಿ ಬೋನಸ್‌ಗಳನ್ನು ನೀಡಿದೆ ಎನ್ನುತ್ತಾರೆ ಖಾಸಗಿ ಅಸ್ಪತ್ರೆಯ ಹಣಕಾಸು ಅಧಿಕಾರಿಯೊಬ್ಬರು.

Hot this week

ಮನೆಗಳ ಹಂಚಿಕೆಯಲ್ಲಿ ಭ್ರಷ್ಟಾಚಾರ, ಹಣಕ್ಕೆ ಬೇಡಿಕೆ; ಪಾಟೀಲರ ಆರೋಪ, ಲೋಕಾ ತನಿಖೆಯಿಂದ ಸಾಬೀತು

ಬೆಂಗಳೂರು; ರಾಜೀವ್‌ ಗಾಂಧಿ ವಸತಿ ನಿಗಮದ ವ್ಯಾಪ್ತಿಯಲ್ಲಿ ಹಣ ಕೊಟ್ಟರಷ್ಟೇ ಮನೆಗಳನ್ನು ...

ಕದಂಬೋತ್ಸವ ಸೇರಿ ಸಾಂಸ್ಕೃತಿಕ ಉತ್ಸವಗಳಿಗೆ ಅನುದಾನ; 12.50 ಕೋಟಿ ರು ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಮೈಸೂರು ದಸರಾ ಸೇರಿದಂತೆ ಇನ್ನಿತರೆ ಜಿಲ್ಲಾಮಟ್ಟದ ವಿವಿಧ ಉತ್ಸವಗಳಿಗೆ 2024-25ಮತ್ತು...

ಪ್ರಚೋದನಕಾರಿ ಭಾಷಣ, ಕೋಮು ಗಲಭೆ; 3 ವರ್ಷದಲ್ಲಿ 50 ಪ್ರಕರಣಗಳು ದಾಖಲು, ಪಟ್ಟಿ ಬಹಿರಂಗ

ಬೆಂಗಳೂರು; ರಾಜ್ಯದ  ಕರಾವಳಿ ಭಾಗ ಸೇರಿದಂತೆ ವಿವಿಧೆಡೆ ಪ್ರಚೋದನಾಕಾರಿ ಭಾಷಣ ಮಾಡಿದವರು...

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

Topics

ಮನೆಗಳ ಹಂಚಿಕೆಯಲ್ಲಿ ಭ್ರಷ್ಟಾಚಾರ, ಹಣಕ್ಕೆ ಬೇಡಿಕೆ; ಪಾಟೀಲರ ಆರೋಪ, ಲೋಕಾ ತನಿಖೆಯಿಂದ ಸಾಬೀತು

ಬೆಂಗಳೂರು; ರಾಜೀವ್‌ ಗಾಂಧಿ ವಸತಿ ನಿಗಮದ ವ್ಯಾಪ್ತಿಯಲ್ಲಿ ಹಣ ಕೊಟ್ಟರಷ್ಟೇ ಮನೆಗಳನ್ನು ...

ಕದಂಬೋತ್ಸವ ಸೇರಿ ಸಾಂಸ್ಕೃತಿಕ ಉತ್ಸವಗಳಿಗೆ ಅನುದಾನ; 12.50 ಕೋಟಿ ರು ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಮೈಸೂರು ದಸರಾ ಸೇರಿದಂತೆ ಇನ್ನಿತರೆ ಜಿಲ್ಲಾಮಟ್ಟದ ವಿವಿಧ ಉತ್ಸವಗಳಿಗೆ 2024-25ಮತ್ತು...

ಪ್ರಚೋದನಕಾರಿ ಭಾಷಣ, ಕೋಮು ಗಲಭೆ; 3 ವರ್ಷದಲ್ಲಿ 50 ಪ್ರಕರಣಗಳು ದಾಖಲು, ಪಟ್ಟಿ ಬಹಿರಂಗ

ಬೆಂಗಳೂರು; ರಾಜ್ಯದ  ಕರಾವಳಿ ಭಾಗ ಸೇರಿದಂತೆ ವಿವಿಧೆಡೆ ಪ್ರಚೋದನಾಕಾರಿ ಭಾಷಣ ಮಾಡಿದವರು...

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

Related Articles

Popular Categories

error: Content is protected !!