Thursday | March 12, 2026 |

ಐಎಂಎ; ಹೇಮಂತ್‌ ನಿಂಬಾಳ್ಕರ್‌ ವಿರುದ್ಧ ಶಿಸ್ತುಕ್ರಮ ಜರುಗಿಸಲು ಮೀನಮೇಷ

Support THE-FILE

spot_img

ಬೆಂಗಳೂರು; ಐಎಂಎ (ಐ ಮಾನಿಟರಿ ಅಡ್ವೈಸರಿ) ಬಹುಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಗಂಭೀರ ಆರೋಪ ಎದುರಿಸುತ್ತಿರುವ ಹಿರಿಯ ಐಪಿಎಸ್‌ ಅಧಿಕಾರಿ ಹೇಮಂತ್‌ ಎಂ.ನಿಂಬಾಳ್ಕರ್ ಮತ್ತು ಅಜಯ್‌ ಹಿಲೊರಿ ಸೇರಿದಂತೆ ಒಟ್ಟು ಐವರು ಪೊಲೀಸ್‌ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು ಸಿಬಿಐ ಪತ್ರ ಬರೆದು 9 ತಿಂಗಳಾದರೂ ರಾಜ್ಯ ಸರ್ಕಾರ ಈವರೆವಿಗೂ ಕ್ರಮ ವಹಿಸದಿರುವುದು ಬಹಿರಂಗವಾಗಿದೆ.

ಹೇಮಂತ್‌ ನಿಂಬಾಳ್ಕರ್‌ ಸೇರಿದಂತೆ ಹಲವು ಅಧಿಕಾರಿಗಳನ್ನು ಪ್ರಾಸಿಕ್ಯೂಷನ್‌ಗೆ ಗುರಿಪಡಿಸಲು ಸಿಬಿಐಗೆ ಅನುಮತಿ ನೀಡಿ ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರ, ಶಿಸ್ತು ಕ್ರಮ ಜರುಗಿಸುವ ಸಂಬಂಧ ಕ್ರಮ ವಹಿಸದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಈ ಹಿಂದೆ ಇದೇ ಪ್ರಕರಣದಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ವಿಜಯಶಂಕರ್‌(ಈಗ ದಿವಂಗತರು) ಅವರನ್ನು ಅಮಾನತುಗೊಳಿಸಿದ್ದ ಸರ್ಕಾರ, ಐಪಿಎಸ್‌ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲು ಮೀನಮೇಷ ಎಣಿಸುತ್ತಿರುವುದು ಸಂಶಯಗಳಿಗೆ ಕಾರಣವಾಗಿದೆ.

ಸಿಬಿಐ ಎಸ್ಪಿ ಮತ್ತು ಮುಖ್ಯ ತನಿಖಾಧಿಕಾರಿ ಪಿ ಸೀಫಾಸ್‌ ಕಲ್ಯಾಣ್‌ ಅವರು 2019ರ ಡಿಸೆಂಬರ್‌ 18ರಂದು ಸರ್ಕಾರಕ್ಕೆ ಪತ್ರ ಬರೆದಿದ್ದರು. ಪತ್ರದ ಕ್ರಮ ಸಂಖ್ಯೆ 15.2ರಲ್ಲಿ ಎಲ್‌ ಸಿ ನಾಗರಾಜ್‌(ಎ-18), ಇ ಬಿ ಶ್ರೀಧರ್‌ (ಎ-31), ಹೇಮಂತ್‌ ನಿಂಬಾಳ್ಕರ್‌(ಎ-32), ಅಜಯ್‌ ಹಿಲೋರಿ (ಎ-33), ಎಂ ರಮೇಶ್‌ (ಎ-34) ಗೌರಿಶಂಕರ್‌(ಎ-35) ಇವರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು ಪತ್ರದಲ್ಲಿ ಪ್ರಸ್ತಾಪಿಸಿದ್ದರು. ಈ ಪತ್ರದ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

ಇದೇ ಪತ್ರದಲ್ಲಿ ವಿಚಾರಣೆಗೆ ಅನುಮತಿಯನ್ನೂ ಸಿಬಿಐ ಕ್ರಮ ಸಂಖ್ಯೆ 15.3ರಲ್ಲಿ ಕೋರಿತ್ತು. ಆದರೆ ರಾಜ್ಯ ಸರ್ಕಾರ ಕ್ರಮ ಸಂಖ್ಯೆ 15.3ರಲ್ಲಿನ ಸಿಬಿಐ ಕೋರಿಕೆಯನ್ನು ಪುರಸ್ಕರಿಸಿ ಆರೋಪಿತ ಅಧಿಕಾರಿಗಳ ವಿರುದ್ಧ ವಿಚಾರಣೆಗೆ ಅನುಮತಿ ನೀಡಿ ಆದೇಶಿಸಿತ್ತು.

‘ಇದೊಂದು ಬಹುದೊಡ್ಡ ಹಗರಣ. ಇದರಲ್ಲಿ ಸಾವಿರಾರು ಜನರಿಗೆ ಸಾವಿರಾರು ಕೋಟಿ ರು.ಮೊತ್ತದಲ್ಲಿ ವಂಚನೆಯಾಗಿದೆ ಎಂದು ಸಿಬಿಐ ಪ್ರಾಥಮಿಕ ವರದಿಯಲ್ಲಿ ಹೇಳಲಾಗಿದೆ. ಈ ಅವ್ಯವಹಾರದಲ್ಲಿ ಹೇಮಂತ್‌ ನಿಂಬಾಳ್ಕರ್‌, ಅಜಯ್‌ ಹಿಲ್ಹೋರಿ ಹಾಗೂ ಮತ್ತಿತರ ಪೊಲೀಸ್‌ ಅಧಿಕಾರಿಗಳು ಭಾಗಿಯಾಗಿರುವುದು ಪ್ರಾಥಮಿಕ ತನಿಖೆಯಲ್ಲಿ ಸಾಬೀತಾಗಿದೆ. ಈ ತನಿಖೆ ಆಧರಿಸಿ ಸಿಬಿಐ ಕಳೆದ ವರ್ಷ ಇವರ ವಿರುದ್ಧ ಶಿಸ್ತು ಕ್ರಮ ಜರುಗಿಸಿ ಎಂದು ಹಾಗೂ ವಿಚಾರಣೆಗೆ ಅನುಮತಿ ನೀಡಿ ಕೇಳಿತ್ತು. ಆದರೆ ಸರ್ಕಾರವು ಜಾಣತನದಿಂದ ವಿಚಾರಣೆಗೆ ಅನುಮತಿ ನೀಡಿತೇ ಹೊರತು ಅವರನ್ನು ಅಮಾನತುಗೊಳಿಸುವುದಾಗಲೀ, ರಜೆ ಮೇಲೆ ಕಳಿಸುವುದಾಗಲಿ ಸೇರಿದಂತೆ ಯಾವ ಶಿಸ್ತುಕ್ರಮವನ್ನು ಜರುಗಿಸಲ್ಲ. ಆದ್ದರಿಂದ ಈ ಆರೋಪಿಗಳನ್ನು ತನಿಖೆಗೆ ಒಳಪಡಿಸಲು ಸಿಬಿಐಗೆ ತಾಂತ್ರಿಕ ಅಡಚಣೆಗಳಿವೆ. ಈ ಐಪಿಎಸ್‌ ಅಧಿಕಾರಿಗಳನ್ನು ಸರ್ಕಾರ ತಕ್ಷಣವೇ ಅಮಾನತುಗೊಳಿಸಬೇಕು,’ ಎನ್ನುತ್ತಾರೆ ಸಾಮಾಜಿಕ ಕಾರ್ಯಕರ್ತ ಅಶೋಕಕುಮಾರ್‌ ಅಡಿಗ.

ಹಗರಣದಲ್ಲಿ ಈ ಅಧಿಕಾರಿಗಳು ಭಾಗಿಯಾಗಿರುವ ಬಗ್ಗೆ ತನಿಖೆ ವೇಳೆ ಸಾಕ್ಷ್ಯಗಳು ದೊರೆತಿವೆ. ಹೀಗಾಗಿ, ಈ ಅಧಿಕಾರಿಗಳ ವಿರುದ್ಧ, ‘ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಹೂಡಿಕೆದಾರರ ಹಿತರಕ್ಷಣೆ ಕಾಯ್ದೆ –2004’ (ಕೆಪಿಐಡಿಎಫ್‌ಇ) ಅಡಿ ಪ್ರಾಸಿಕ್ಯೂಷನ್‌ ಅನುಮತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸಿಬಿಐ ಪತ್ರ ಬರೆದಿತ್ತು. ಅಲ್ಲದೆ ಐಎಂಎ ಹಗರಣಕ್ಕೆ ಸಂಬಂಧಿಸಿ ಸಿಬಿಐ 2019ರ ಆಗಸ್ಟ್‌ 30ರಂದು ಎಫ್‌ಐಆರ್‌ ದಾಖಲಿಸಿಕೊಂಡಿತ್ತು. ಹಾಗೆಯೇ ಇದೇ ಫೆಬ್ರುವರಿಯಲ್ಲಿ ನಿಂಬಾಳ್ಕರ್ ಹಾಗೂ ಹಿಲೊರಿ ವಿರುದ್ಧವೂ ಎಫ್ಐಆರ್ ದಾಖಲಿಸಿತ್ತು. ಈ ಬಗ್ಗೆ ತನಿಖೆ ನಡೆಸಿದ್ದ ಸಿಬಿಐ, ಹೇಮಂತ್ ನಿಂಬಾಳ್ಕರ್ ಮತ್ತು ಅಜಯ ಹಿಲೊರಿ ಅವರು ಐಎಂಎ ಪರವಾಗಿ ವರದಿ ಸಿದ್ಧಪಡಿಸಿ ಕ್ಲೀನ್ ಚಿಟ್ ನೀಡಿದ್ದನ್ನು ಉಲ್ಲೇಖಿಸಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಸಿಬಿಐ ಪತ್ರ ಬರೆದಿದ್ದನ್ನು ಸ್ಮರಿಸಬಹುದು.

ಐಎಂಎ ಸಮೂಹದ ಕಂಪನಿಗಳ ವಿರುದ್ಧ ದೂರು ಕೇಳಿಬಂದಾಗ ಹೇಮಂತ್ ನಿಂಬಾಳ್ಕರ್ ತನಿಖೆ ನಡೆಸಿದ್ದರು. ಐಎಂಎ ಪರವಾಗಿ ವರದಿಗಳನ್ನು ಸಿದ್ಧಪಡಿಸಿದ್ದರು. ಹಾಗಾಗಿ, ಐಎಂಎ ವಿರುದ್ಧ ಕ್ರಮ ಜರುಗಿಸಲು ಯಾರೂ ಮುಂದಾಗಲಿಲ್ಲ. ಐಎಂಎ ವಂಚನೆ ಮುಂದುವರಿಯಲು ಇದು ಕಾರಣವಾಯಿತು ಎಂದೂ ಹೇಳಿತ್ತು.

ಅಕ್ರಮ ಎಸಗಲು ಐಎಂಎ ಮಾಲೀಕ ಮೊಹಮ್ಮದ್‌ ಮನ್ಸೂರ್‌ ಖಾನ್‌ ಅವರಿಂದ ಪೊಲೀಸ್‌ ಅಧಿಕಾರಿಗಳು ಹಣ ಪಡೆದಿರುವ ಬಗ್ಗೆಯೂ ಸಿಬಿಐ ಪತ್ರದಲ್ಲಿ ಉಲ್ಲೇಖಿಸಿತ್ತು. ಐಎಂಎ ವಂಚನೆ ನಡೆಸುತ್ತಿರುವ ಬಗ್ಗೆ ತನಿಖೆ ನಡೆಸಿದ್ದ ಕೆಳಹಂತದ ಅಧಿಕಾರಿಗಳಾಗಿದ್ದ ರಮೇಶ ಅವರು ನೀಡಿದ್ದ ವರದಿಯನ್ನು ಹಿಲೊರಿ ಮುಚ್ಚಿಹಾಕಲು ಯತ್ನಿಸಿದ್ದರು. ಇದಕ್ಕಾಗಿ, ಐಎಂಎಯಿಂದ ಅನೇಕ ಬಾರಿ ಹಣ, ಪೀಠೋಪಕರಣಗಳ ಬಿಲ್ ಪಾವತಿಯಂತಹ ಲಾಭ ಮಾಡಿಕೊಂಡಿದ್ದರು ಎಂದು ಸಿಬಿಐ ಉಲ್ಲೇಖಿಸಿದ್ದನ್ನು ಸ್ಮರಿಸಬಹುದು.

Hot this week

ಸರ್ಕಾರಿ ಜಮೀನು ಭೂಗಳ್ಳರ ಪಾಲು; ಪಿ ನಂಬರ್ ದುರಸ್ತಿ ಹೆಸರಿನಲ್ಲಿ ಅಕ್ರಮ, ತಹಶೀಲ್ದಾರ್‍‌ಗಳೇ ಭಾಗಿ, ಕ್ರಮವೇ ಇಲ್ಲ

ಬೆಂಗಳೂರು;  ಕೋಲಾರ ಜಿಲ್ಲೆಯ ಮಾಲೂರು ತಾಲೂಕು ಲಕ್ಕೂರು ಹೋಬಳಿ ಸಂಪಂಗೆರೆ ಗ್ರಾಮದಲ್ಲಿನ...

7ನೇ ವೇತನ ಆಯೋಗ ಶಿಫಾರಸ್ಸು; ಬದ್ಧ ವೆಚ್ಚದಲ್ಲಿ ಹೆಚ್ಚಳ, 15,000 ಕೋಟಿಯಿಂದ 20,000 ಕೋಟಿಗೆ ಏರಿಕೆ

ಬೆಂಗಳೂರು;  7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಿದಲ್ಲಿ  ಮುಂಬರುವ ವರ್ಷಗಳಲ್ಲಿ ಬದ್ಧ...

ವಿಚಾರಣೆಗಳಿಗೆ ಹಾಜರಾಗದಿದ್ದರೂ ಸಂಭಾವನೆ ಕೋರಿದ ಪಬ್ಲಿಕ್ ಪ್ರಾಸಿಕ್ಯೂಟರ್ಸ್‌: 590 ಪ್ರಕರಣ ಪತ್ತೆ

ಬೆಂಗಳೂರು; ನ್ಯಾಯಾಲಯದಲ್ಲಿ ಕ್ರಿಮಿನಲ್ ಪ್ರಕರಣಗಳ ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ...

ಹುದ್ದೆಗಳ ಸಂಖ್ಯೆಯಲ್ಲಿ ಗಣನೀಯ ಕಡಿತ, ಸಾಮಾಜಿಕ ನ್ಯಾಯಕ್ಕೆ ಪೆಟ್ಟು; ವಿವಿಗಳ ಅಭಿಪ್ರಾಯ ಬಹಿರಂಗ

ಬೆಂಗಳೂರು; ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇಮಕಾತಿ ಸಂದರ್ಭದಲ್ಲಿ  ವಿಶ್ವವಿದ್ಯಾಲಯವನ್ನು ಘಟಕವನ್ನಾಗಿ ಪರಿಗಣಿಸಿದ್ದಲ್ಲಿ ...

ದೇಶದ್ರೋಹಿ ಘೋಷಣೆ, ದೇಶ ವಿರೋಧಿ ಚಟುವಟಿಕೆ; 24 ಪ್ರಕರಣಗಳಲ್ಲಿ 3 ಬಿ ರಿಪೋರ್ಟ್

ಬೆಂಗಳೂರು; ದೇಶದ್ರೋಹಿ ಘೋಷಣೆ ಕೂಗಿದ ಆರೋಪಗಳಿಗೆ ಸಂಬಂಧಿಸಿದಂತೆ ರಾಜ್ಯದಲ್ಲಿ  ಕಳೆದ ಮೂರು...

Topics

ಸರ್ಕಾರಿ ಜಮೀನು ಭೂಗಳ್ಳರ ಪಾಲು; ಪಿ ನಂಬರ್ ದುರಸ್ತಿ ಹೆಸರಿನಲ್ಲಿ ಅಕ್ರಮ, ತಹಶೀಲ್ದಾರ್‍‌ಗಳೇ ಭಾಗಿ, ಕ್ರಮವೇ ಇಲ್ಲ

ಬೆಂಗಳೂರು;  ಕೋಲಾರ ಜಿಲ್ಲೆಯ ಮಾಲೂರು ತಾಲೂಕು ಲಕ್ಕೂರು ಹೋಬಳಿ ಸಂಪಂಗೆರೆ ಗ್ರಾಮದಲ್ಲಿನ...

7ನೇ ವೇತನ ಆಯೋಗ ಶಿಫಾರಸ್ಸು; ಬದ್ಧ ವೆಚ್ಚದಲ್ಲಿ ಹೆಚ್ಚಳ, 15,000 ಕೋಟಿಯಿಂದ 20,000 ಕೋಟಿಗೆ ಏರಿಕೆ

ಬೆಂಗಳೂರು;  7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಿದಲ್ಲಿ  ಮುಂಬರುವ ವರ್ಷಗಳಲ್ಲಿ ಬದ್ಧ...

ವಿಚಾರಣೆಗಳಿಗೆ ಹಾಜರಾಗದಿದ್ದರೂ ಸಂಭಾವನೆ ಕೋರಿದ ಪಬ್ಲಿಕ್ ಪ್ರಾಸಿಕ್ಯೂಟರ್ಸ್‌: 590 ಪ್ರಕರಣ ಪತ್ತೆ

ಬೆಂಗಳೂರು; ನ್ಯಾಯಾಲಯದಲ್ಲಿ ಕ್ರಿಮಿನಲ್ ಪ್ರಕರಣಗಳ ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ...

ಹುದ್ದೆಗಳ ಸಂಖ್ಯೆಯಲ್ಲಿ ಗಣನೀಯ ಕಡಿತ, ಸಾಮಾಜಿಕ ನ್ಯಾಯಕ್ಕೆ ಪೆಟ್ಟು; ವಿವಿಗಳ ಅಭಿಪ್ರಾಯ ಬಹಿರಂಗ

ಬೆಂಗಳೂರು; ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇಮಕಾತಿ ಸಂದರ್ಭದಲ್ಲಿ  ವಿಶ್ವವಿದ್ಯಾಲಯವನ್ನು ಘಟಕವನ್ನಾಗಿ ಪರಿಗಣಿಸಿದ್ದಲ್ಲಿ ...

ದೇಶದ್ರೋಹಿ ಘೋಷಣೆ, ದೇಶ ವಿರೋಧಿ ಚಟುವಟಿಕೆ; 24 ಪ್ರಕರಣಗಳಲ್ಲಿ 3 ಬಿ ರಿಪೋರ್ಟ್

ಬೆಂಗಳೂರು; ದೇಶದ್ರೋಹಿ ಘೋಷಣೆ ಕೂಗಿದ ಆರೋಪಗಳಿಗೆ ಸಂಬಂಧಿಸಿದಂತೆ ರಾಜ್ಯದಲ್ಲಿ  ಕಳೆದ ಮೂರು...

ಬಾಗಮನೆ ಡೆವಲಪರ್ಸ್‌ ಪ್ರಸ್ತಾವ ತಿರಸ್ಕೃತ; ಒತ್ತುವರಿ ಜಾಗ ವಶಕ್ಕೆ ಪಡೆಯಲು ಮೀನಮೇಷ

ಬೆಂಗಳೂರು; ಒತ್ತುವರಿ ಮಾಡಿಕೊಂಡಿರುವ ಜಮೀನಿಗೆ ಪ್ರತಿಯಾಗಿ ತಮ್ಮ ಸ್ವಂತ ಭೂಮಿಯನ್ನು ಸರ್ಕಾರಕ್ಕೆ...

ವಿವಿಗಳ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಚಟುವಟಿಕೆ, ಯುಜಿಸಿ ನಿಯಮ ಉಲ್ಲಂಘನೆ; ಒಪ್ಪಿಕೊಂಡ ಸರ್ಕಾರ

ಬೆಂಗಳೂರು;  ರಾಜ್ಯದ ಬಹುತೇಕ ವಿಶ್ವವಿದ್ಯಾಲಯಗಳು ಬೋಧಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಯುಜಿಸಿ...

ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ರಾಜ್ಯದ ಪಾಲು ಕುಸಿತ; ಕರ್ನಾಟಕಕ್ಕೆ ತೀವ್ರ ಸವಾಲು ಒಡ್ಡಲಿದೆಯೇ?

ಬೆಂಗಳೂರು;  ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ವರ್ಷದಿಂದ ವರ್ಷಕ್ಕೆ  ರಾಜ್ಯ ಪಾಲು ಕುಸಿತವಾಗುತ್ತಿರುವ...

Related Articles

Popular Categories

error: Content is protected !!