Sunday | May 31, 2026 |

ಆರ್‌ಎಸ್‌ಎಸ್‌; ತಪ್ಪು ಉತ್ತರ ನೀಡಿ ಸದನವನ್ನು ದಾರಿ ತಪ್ಪಿಸಿದ ಸಚಿವ ಸೋಮಶೇಖರ್‌?

ಬೆಂಗಳೂರು; ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕುರಿತು ಸಹಕಾರ ಸಚಿವ ಎಸ್‌ ಟಿ ಸೋಮಶೇಖರ್‌ ಅವರು ಸದನಕ್ಕೆ ತಪ್ಪು ಉತ್ತರ ನೀಡುವ ಮೂಲಕ ದಾರಿ ತಪ್ಪಿಸಿದ್ದಾರೆ ಎಂಬ ಬಲವಾದ ಆರೋಪಕ್ಕೆ ಗುರಿಯಾಗಿದ್ದಾರೆ.

2 ವರ್ಷದಿಂದಲೂ ಸಾಮಾಜಿಕ ಕಾರ್ಯಕರ್ತರು ಆರ್‌ಎಸ್‌ಎಸ್‌ ವಿರುದ್ಧ ಸರ್ಕಾರಕ್ಕೆ ಹಲವು ದೂರುಗಳು ಸಲ್ಲಿಸಿದ್ದರೂ ಯಾವುದೇ ದೂರುಗಳು ಸಲ್ಲಿಕೆಯಾಗಿಲ್ಲ ಎಂದು ತಪ್ಪು ಉತ್ತರ ನೀಡಿರುವುದು ಇದೀಗ ಬಹಿರಂಗವಾಗಿದೆ. ತಪ್ಪು ಉತ್ತರ ನೀಡುವ ಮೂಲಕ ಸದನವನ್ನು ತಪ್ಪು ದಾರಿಗೆಳೆದಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ವಿಶೇಷವೆಂದರೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಾಲುದಾರಿಕೆಯ ಮೈತ್ರಿ ಸರ್ಕಾರದ ಅವಧಿಯಲ್ಲೇ ಆರ್‌ಎಸ್‌ಎಸ್‌ ವ್ಯವಹಾರಗಳ ಕುರಿತು ದೂರು ಸಲ್ಲಿಕೆಯಾಗಿತ್ತು.

2 ವರ್ಷದ ಹಿಂದೆಯೇ ದೂರು ಸಲ್ಲಿಕೆ

ರಾಷ್ಟ್ರೀಯ ಸ್ವಯಂ ಸೇವಕ ಸಂಘದಲ್ಲಿನ ವ್ಯವಹಾರಗಳ ಕುರಿತು ಸಾಮಾಜಿಕ ಕಾರ್ಯಕರ್ತ ಹನುಮೇಗೌಡ ಅವರು 2018ರಲ್ಲೇ ದೂರು ಸಲ್ಲಿಸಿದ್ದಾರೆ. ಅಲ್ಲದೆ ಸಂಘಟನೆ ಕುರಿತು ತನಿಖೆ ನಡೆಸಬೇಕು ಎಂದು ದೂರಿನಲ್ಲಿ ಒತ್ತಾಯಿಸಿದ್ದರು. ಈ ದೂರು ಆಧರಿಸಿ ಸಹಕಾರ ಸಂಘಗಳ ಹೆಚ್ಚುವರಿ ನಿಬಂಧಕ ಎನ್‌ ಎಂ ಬೇಗಂ ಅವರು ‘ಕರ್ನಾಟಕ ಸಂಘಗಳ ನೋಂದಣಿ ಕಾಯ್ದೆ 1960ರ ಅಡಿ ಅರ್ಜಿದಾರರ ಮನವಿ ಕುರಿತು ಪರಿಶೀಲಿಸಿ ನಿಯಮಾನುಸಾರವಾಗಿ ಕ್ರಮವಿಡಬೇಕು,’ ಎಂದು 2018ರ ಆಗಸ್ಟ್‌ 25ರಂದು ಸಹಕಾರ ಸಂಘಗಳ ಉಪ ನಿಬಂಧಕರಿಗೆ ಪತ್ರ ಮುಖೇನ ಸೂಚಿಸಿದ್ದರು.

ಡಿಜಿಪಿಗೂ ಸಲ್ಲಿಕೆಯಾಗಿತ್ತು ದೂರು

ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಾಗೂ ಇನ್ನಿತರೆ ಸಂಘಟನೆಗಳು ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಹಾಗೂ ಅಕ್ರಮ ಚಟುವಟಿಕೆಗಳನ್ನು ನಡೆಸುತ್ತಿರುವ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಹನುಮೇಗೌಡ ಅವರು ಪೊಲೀಸ್‌ ಮಹಾನಿರ್ದೇಶಕರಿಗೆ 2018ರ ಜುಲೈ 19ರಂದು ದೂರು ಸಲ್ಲಿಸಿದ್ದರು. ಈ ದೂರು ಆಧರಿಸಿ ಡಿಜಿಪಿ ಕಚೇರಿಯ ಎಐಜಿಪಿ ರಾಧಿಕಾ ಜಿ ಅವರು ನಿಯಮಾನುಸಾರವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರು ನಗರದ ಪೊಲೀಸ್‌ ಆಯುಕ್ತರಿಗೆ 2018ರ ಅಕ್ಟೋಬರ್‌ 1ರಂದು ಪತ್ರ ಬರೆದಿದ್ದರು. ಇದರ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

ಸಹಕಾರ ಸಂಘಗಳ ಉಪ ನಿಬಂಧಕರು ಮತ್ತು ಡಿಜಿಪಿ ಕಚೇರಿಯ ಎಐಜಿಪಿ ಅವರ ಪತ್ರಗಳನ್ನಾಧರಿಸಿ ಈವರೆವಿಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ತಿಳಿದು ಬಂದಿದೆ.

ಇನ್ನು, ನೋಂದಣಿ, ವಾರ್ಷಿಕ ಲೆಕ್ಕಪತ್ರಗಳು ಸರ್ಕಾರಕ್ಕೆ ಸಲ್ಲಿಕೆಯಾಗುತ್ತಿದೆಯೇ ಅಥವಾ ಇಲ್ಲವೇ ಎಂಬುದು ಸೇರಿದಂತೆ ಅಧಿವೇಶನದಲ್ಲಿ ಹಲವು ಪ್ರಶ್ನೆಗಳನ್ನು ಎತ್ತಿದ್ದ ವಿಧಾನಪರಿಷತ್‌ ಸದಸ್ಯ ಬಿ ಕೆ ಹರಿಪ್ರಸಾದ್‌ ಅವರಿಗೆ ತಿಂಗಳಾದರೂ ಉತ್ತರ ನೀಡಿರಲಿಲ್ಲ. ಅಲ್ಲದೆ ವಿಧಾನಪರಿಷತ್‌ನ ಅಧಿಕೃತ ಜಾಲತಾಣದಲ್ಲಿ ಈವರೆವಿಗೂ ಉತ್ತರದ ಪ್ರತಿಯನ್ನು ಅಪ್‌ಲೋಡ್‌ ಮಾಡಿಲ್ಲ. ಈ ಕುರಿತು ‘ದಿ ಫೈಲ್‌’ ವರದಿ ಪ್ರಕಟಿಸುತ್ತಿದ್ದಂತೆ ಸಹಕಾರ ಇಲಾಖೆ ಸಚಿವ ಎಸ್‌ ಟಿ ಸೋಮಶೇಖರ್‌ ಅವರು, ಉತ್ತರವನ್ನು ಒದಗಿಸಿದ್ದಾರೆ. ಇದು ‘ದಿ ಫೈಲ್‌’ ವರದಿ ಪರಿಣಾಮ.

Hot this week

ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪ; ಆರೋಪಿತರಿಗೆ ಮುಖ್ಯ ಇಂಜಿನಿಯರ್ ಹುದ್ದೆಗೆ ನೇಮಕ, ಲೋಕಾ ದಾಳಿಯನ್ನೇ ಅಣಕಿಸಿದ ಸರ್ಕಾರ

ಬೆಂಗಳೂರು;  ಆದಾಯಕ್ಕೂ  ಮೀರಿದ ಆಸ್ತಿ ಗಳಿಕೆ ಆರೋಪದಡಿಯಲ್ಲಿ ಲೋಕಾಯುಕ್ತ ದಾಳಿಗೆ ಒಳಗಾಗಿದ್ದ ...

ಸಾರ್ವತ್ರಿಕ ರಜಾ ದಿನದ ವೇತನಕ್ಕೂ ಕತ್ತರಿ!; ಶಕ್ತಿ ಸೌಧದಲ್ಲೇ ಡೇಟಾ ಎಂಟ್ರಿ ಆಪರೇಟರ್‍‌ಗಳಿಗೆ ಶೋಷಣೆ, ದೌರ್ಜನ್ಯ ಆರೋಪ

ಬೆಂಗಳೂರು;  ಮುಖ್ಯಮಂತ್ರಿ ಸಚಿವಾಲಯವೂ ಸೇರಿದಂತೆ ಸಚಿವಾಲಯದ ಇತರೆ  ಕಚೇರಿಗಳಲ್ಲಿ ಹೊರಗುತ್ತಿಗೆಯಡಿಯಲ್ಲಿ  ಕಾರ್ಯನಿರ್ವಹಿಸುತ್ತಿರುವ...
Please Scan to make Your Contribution

Topics

ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪ; ಆರೋಪಿತರಿಗೆ ಮುಖ್ಯ ಇಂಜಿನಿಯರ್ ಹುದ್ದೆಗೆ ನೇಮಕ, ಲೋಕಾ ದಾಳಿಯನ್ನೇ ಅಣಕಿಸಿದ ಸರ್ಕಾರ

ಬೆಂಗಳೂರು;  ಆದಾಯಕ್ಕೂ  ಮೀರಿದ ಆಸ್ತಿ ಗಳಿಕೆ ಆರೋಪದಡಿಯಲ್ಲಿ ಲೋಕಾಯುಕ್ತ ದಾಳಿಗೆ ಒಳಗಾಗಿದ್ದ ...

ಸಾರ್ವತ್ರಿಕ ರಜಾ ದಿನದ ವೇತನಕ್ಕೂ ಕತ್ತರಿ!; ಶಕ್ತಿ ಸೌಧದಲ್ಲೇ ಡೇಟಾ ಎಂಟ್ರಿ ಆಪರೇಟರ್‍‌ಗಳಿಗೆ ಶೋಷಣೆ, ದೌರ್ಜನ್ಯ ಆರೋಪ

ಬೆಂಗಳೂರು;  ಮುಖ್ಯಮಂತ್ರಿ ಸಚಿವಾಲಯವೂ ಸೇರಿದಂತೆ ಸಚಿವಾಲಯದ ಇತರೆ  ಕಚೇರಿಗಳಲ್ಲಿ ಹೊರಗುತ್ತಿಗೆಯಡಿಯಲ್ಲಿ  ಕಾರ್ಯನಿರ್ವಹಿಸುತ್ತಿರುವ...

ಸರ್ಕಾರದ ಹಿತಾಸಕ್ತಿ, ಘನತೆಗೆ ಧಕ್ಕೆ ನೆಪ; ಸಮಿತಿ ರಚನೆಯಿಲ್ಲದೇ 21 ಪ್ಯಾಕೇಜ್‌ ಟೆಂಡರ್ ಅನುಮೋದನೆ, 4,791.95 ಕೋಟಿ ರು ಹಗರಣ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣೆಯ 21  ಪ್ಯಾಕೇಜ್‌ಗಳಿಗೆ ಟೆಂಡರ್‌ ಪ್ರಕ್ರಿಯೆಗೆ ಸಂಬಂಧಿಸಿದಂತೆ  ಐಎಎಸ್...

ಐಎಎಸ್‌ ವೃಂದದಲ್ಲಿ ಅನರ್ಹ 7 ಅಧಿಕಾರಿಗಳು ಮುಂದುವರಿಕೆ; ಬಂಡೆದ್ದ 25 ಕೆಎಎಸ್‌ ಅಧಿಕಾರಿಗಳು, ಅಖಾಡಕ್ಕಿಳಿದ ಡಿ ಕೆ ಶಿವಕುಮಾರ್

ಬೆಂಗಳೂರು;  ಕನಿಷ್ಟ 8 ವರ್ಷಗಳ ನಿಯಮಿತವಾಗಿ ಸೇವೆ ಸಲ್ಲಿಸಿರುವ  ಕೆಎಎಸ್‌ ಅಧಿಕಾರಿಗಳಿಗೆ...

Related Articles

Popular Categories

error: Content is protected !!