Saturday | April 11, 2026 |

ಕೋವಿಡ್‌-19 ಜಾಹೀರಾತಿನ ಜಾಲ; 3 ತಿಂಗಳಲ್ಲಿ 11 ಕೋಟಿ ವೆಚ್ಚ

ಬೆಂಗಳೂರು; ಕೋವಿಡ್‌-19 ನಿರ್ವಹಣೆಗಾಗಿ ಹಣವಿಲ್ಲ, ಸಂಪನ್ಮೂಲ ಸ್ಥಗಿತಗೊಂಡಿದೆ, ಖಜಾನೆ ಬರಿದಾಗಿದೆ ಎಂದೆಲ್ಲಾ ದೈನೈಸಿ ಸ್ಥಿತಿಯನ್ನು ಮುಂದಿರಿಸಿದ್ದ ರಾಜ್ಯ ಬಿಜೆಪಿ ಸರ್ಕಾರ, 2020ರ ಮಾರ್ಚ್‌ನಿಂದ ಮೇ ವರೆಗೆ ಒಟ್ಟು 11 ಕೋಟಿ ರು.ಗಳನ್ನು ಜಾಹೀರಾತಿಗಾಗಿ ವೆಚ್ಚ ಮಾಡಿದೆ.

ಅಲ್ಲದೆ 2019-20 ಮತ್ತು 2020-21ನೇ ಸಾಲಿನ ಆಗಸ್ಟ್‌ ಅಂತ್ಯಕ್ಕೆ ಪತ್ರಿಕೆಗಳು, ಟಿ ವಿ , ರೇಡಿಯೋಗಳಲ್ಲಿ ಪ್ರಸಾರವಾಗಿರುವ ಜಾಹೀರಾತಿಗೆ ರಾಜ್ಯ ಸರ್ಕಾರ ಒಟ್ಟಾರೆ 37 ಕೋಟಿ ರು. ವೆಚ್ಚ ಮಾಡಿದೆ.

2019-20ನೇ ಸಾಲಿನಲ್ಲಿ 22.34 ಕೋಟಿ, 2020-21ನೇ ಸಾಲಿನಲ್ಲಿ 15.43 ಕೋಟಿ ವೆಚ್ಚ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸದನಕ್ಕೆ ಮಾಹಿತಿ ನೀಡಿದ್ದಾರೆ. 2020-21ನೇ ಸಾಲಿನ ಆಗಸ್ಟ್‌ ಅಂತ್ಯಕ್ಕೆ ವೆಚ್ಚವಾಗಿರುವ 15.43 ಕೋಟಿ ರು.ಪೈಕಿ, 11.48 ಕೋಟಿ ರು. ಕೋವಿಡ್‌ ಸಂದರ್ಭದಲ್ಲಿ ವೆಚ್ಚ ಮಾಡಿದೆ ಎಂದು ಉತ್ತರದಲ್ಲಿ ತಿಳಿಸಿದ್ದಾರೆ.

ಕೋವಿಡ್‌-19ರ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಮತ್ತು ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಸಂಬಂಧ ಜಾಹೀರಾತು ಬಿಡುಗಡೆ ಮಾಡಿದೆ. ಪತ್ರಿಕೆ, ಟಿ ವಿ, ರೇಡಿಯೋಗಳಿಗೆ ಜಾಹೀರಾತು ಹೆಸರಿನಲ್ಲಿ ಮಾಡಿರುವ ಒಟ್ಟು ವೆಚ್ಚದ ಮಾಹಿತಿಯನ್ನು ಒದಗಿಸಿರುವ ಯಡಿಯೂರಪ್ಪ ಅವರು, ಪತ್ರಿಕೆಗಳು, ಟಿ ವಿ ಗಳಿಗೆ ನೀಡಿರುವ ಜಾಹೀರಾತು ಮತ್ತು ಮಾಡಿರುವ ವೆಚ್ಚವನ್ನು ಪತ್ರಿಕೆವಾರು, ಟಿ ವಿ ಚಾನಲ್‌ವಾರು ಪ್ರತ್ಯೇಕವಾಗಿ ವಿವರ ನೀಡಿಲ್ಲ.

ಕೊರೊನಾ ವೈರಸ್‌ ರಾಜ್ಯಕ್ಕೆ ಪ್ರವೇಶ ಮಾಡಿದ ಮಾರ್ಚ್‌ನಲ್ಲಿ 4.36 ಕೋಟಿ, ಏಪ್ರಿಲ್‌ನಲ್ಲಿ 4.51 ಕೋಟಿ, ಮೇ ತಿಂಗಳಲ್ಲಿ 2.60 ಕೋಟಿ ರು.ಗಳನ್ನು ಜಾಹೀರಾತಿಗಾಗಿ ವ್ಯಯಿಸಿರುವುದು ಯಡಿಯೂರಪ್ಪ ಅವರು ನೀಡಿರುವ ಉತ್ತರದಿಂದ ತಿಳಿದು ಬಂದಿದೆ.

ಕೋವಿಡ್‌-19ರ ಕುರಿತು ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು 15 ನಿಮಿಷ ಅವಧಿಯ ವಿಶೇಷ ಕಾರ್ಯಕ್ರಮ, ಕೋವಿಡ್‌-19ರ ಮುಂಜಾಗ್ರತಾ ಕ್ರಮ ಕುರಿತು ಮುಖ್ಯಮಂತ್ರಿ ಮಾಡಿದ್ದ ಮನವಿ, ವೈದ್ಯರು, ಶುಶ್ರೂಷಕರು, ವೈದ್ಯಕೀಯ ಸಿಬ್ಬಂದಿ ಮನವಿ, ರೈತರು ಬೆಳೆದ ಉತ್ಪನ್ನ, ತರಕಾರಿ ಮಾರುಕಟ್ಟೆಗಳಲ್ಲಿ ಮಾರಾಟ ಕುರಿತು, ಕೋವಿಡ್‌-19ರ ಸಹಾಯವಾಣಿ ಕುರಿತು ಪತ್ರಿಕಾ ಜಾಹೀರಾತು, ಕೋವಿಡ್‌ ಸುಳ್ಳು ಸುದ್ದಿ ತಡೆಗಟ್ಟುವ ಕುರಿತು 30 ಸೆಕೆಂಡಿನ ರೇಡಿಯೋ ಜಾಹೀರಾತು, ಕೋವಿಡ್‌-19ರ ಮುಂಜಾಗ್ರತೆ ಕುರಿತು 60 ಸೆಕೆಂಡಿನ ಜಾಹೀರಾತು, ವಲಸೆ ಕಟ್ಟಡ ಕಾರ್ಮಿಕರಿಗೆ ನೆರವಿನ ಕುರಿತು ಪತ್ರಿಕಾ ಜಾಹೀರಾತು, ಅಸಂಘಟಿತ ಕಾರ್ಮಿಕರ ಹಿತರಕ್ಷಣೆ ಕುರಿತು 70 ಸೆಕೆಂಡಿನ ಟಿ ವಿ ಜಾಹೀರಾತು, ಜನ್‌ಧನ್‌ ಮಹಿಳಾ ಖಾತೆಗಳಿಗೆ ನೇರ ಹಣ ಪಾವತಿ, ಕೋವಿಡ್‌-19ರ ರೈತರ ಹಿತರಕ್ಷಣೆ, ಅಗ್ರಿ ವಾರ್‌ರೂಂ ಸ್ಥಾಪನೆ, ಎಪಿಎಂಸಿ ತೆರೆದಿರುವುದು ಸೇರಿದಂತೆ ಕೋವಿಡ್‌-19ರ ಹಿನ್ನೆಲೆಯಲ್ಲಿ ಮೂರ್ನಾಲ್ಕು ದಿನಗಳ ಕಾಲ ಪತ್ರಿಕೆಗಳಿಗೆ, ಟಿ ವಿ ಗಳಿಗೆ ಜಾಹೀರಾತು ನೀಡಿದೆ.

ಅತಿಥಿ ಉಪನ್ಯಾಸಕರಿಗೆ ಗೌರವ ಸಂಭಾವನೆ, ಆಟೋ ಚಾಲಕರು, ತರಕಾರಿ, ಹೂ ಬೆಳೆಗಾರರು, ನೇಕಾರರು, ಸವಿತಾ ಸಮಾಜ, ವಲಸೆ ಕಟ್ಟಡ ಕಾರ್ಮಿಕರು ಸೇರಿದಂತೆ ಇನ್ನಿತರರಿಗೆ ಪೂರ್ಣ ಪ್ರಮಾಣದಲ್ಲಿ ಪರಿಹಾರ ನೀಡದ ಸರ್ಕಾರ, ಜಾಹೀರಾತು ಹೆಸರಿನಲ್ಲಿ ಕೇವಲ 3 ತಿಂಗಳಲ್ಲಿ 11 ಕೋಟಿ ರು. ವೆಚ್ಚ ಮಾಡಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಟೀಕೆಗೆ ಗುರಿಯಾಗಿದೆ.

ಅದೇ ರೀತಿ ಅತಿವೃಷ್ಟಿ, ಅನಾವೃಷ್ಟಿ ಸಂದರ್ಭವನ್ನು ನಿಭಾಯಿಸುವಲ್ಲಿ ವಿಫಲವಾಗಿದೆ ಎಂದು ವಿಪಕ್ಷಗಳ ಟೀಕೆಗೆ ಗುರಿಯಾಗಿದ್ದರೂ 2019-20ರ ಪ್ರವಾಹ ಸಂದರ್ಭದಲ್ಲೂ ಒಟ್ಟು 22.34 ಕೋಟಿ ರು. ಜಾಹೀರಾತು ನೀಡಿದೆ. ಅತಿವೃಷ್ಟಿ ಸಂಬಂಧ ಮುಖ್ಯಮಂತ್ರಿ ಜನತೆಗೆ ಮಾಡಿದ್ದ ಮನವಿ, ಪ್ರಧಾನ ಮಂತ್ರಿ ಫಸಲ್‌ ಭೀಮಾ ಯೋಜನೆ, ಸಾಲಮನ್ನಾ ಕುರಿತು, ಬಾಗಿನ ಅರ್ಪಣೆ, ನೆರೆ ಸಂತ್ರಸ್ತರಿಗೆ ಪರಿಹಾರ ನೀಡಿರುವುದು, ಪ್ರವಾಹ ಪರಿಹಾರ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿರುವುದು ಸೇರಿದಂತೆ ವಿವಿಧ ಸಂದರ್ಭಗಳನ್ನು ಮುಂದಿರಿಸಿಕೊಂಡು ಜಾಹೀರಾತು ನೀಡಿರುವುದು ಉತ್ತರದಿಂದ ಗೊತ್ತಾಗಿದೆ.

Hot this week

ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ; ಅಧಿಕಾರಿಗಳ ವಿರುದ್ಧ ದಾಖಲಾಗದ ಎಫ್‌ಐಆರ್, ವರದಿ ಸಲ್ಲಿಸಲು ಸೂಚನೆ

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ತವರು ಕ್ಷೇತ್ರದಲ್ಲಿ...

13 ಪರ್ಸೆಂಟ್ ಕಮಿಷನ್‌ಗೆ ಬೇಡಿಕೆ; ಗುತ್ತಿಗೆದಾರರ ಸಂಘದಿಂದ ಮತ್ತೊಂದು ಪತ್ರ, ಕೋರ್ಟ್‌ ಕದ ತಟ್ಟಿದ ಗುತ್ತಿಗೆದಾರರು

ಬೆಂಗಳೂರು;  ಮಹಾತ್ಮಗಾಂಂಧಿ ನಗರ ವಿಕಾಸ ಯೋಜನೆ -1 ರ ಅಡಿಯಲ್ಲಿ ಕಾಮಗಾರಿ...

ಬಳಕೆಯಾಗದ ಅನುದಾನ; ಸರ್ಕಾರದ ಬೊಕ್ಕಸಕ್ಕೆ ಸಂದಾಯವಾಗಿಲ್ಲ 10,546.42 ಕೋಟಿ, ಸಿಎಜಿ ಆಕ್ಷೇಪಣೆ

ಬೆಂಗಳೂರು; ಕೃಷಿ ಮತ್ತು ತೋಟಗಾರಿಕೆ ಇಲಾಖೆ ಸೇರಿದಂತೆ 2024-25ನೇ ಸಾಲಿನಲ್ಲಿ   ಒಟ್ಟು...

ತರಕಾರಿ ಬೀಜಗಳ ಕಿಟ್ ವಿತರಣೆ; ದಾಸ್ತಾನು ಇಲ್ಲದ ಏಜೆನ್ಸಿಗೆ 4 ಜಿ ವಿನಾಯಿತಿ, ಬಹುಕೋಟಿ ಅಕ್ರಮ, ಭ್ರಷ್ಟಾಚಾರ ಸುಳಿಯಲ್ಲಿ ಸರ್ಕಾರ?

ಬೆಂಗಳೂರು; 2023-24 ಮತ್ತು 2025-26ನೇ ಸಾಲಿನವರೆಗೆ  ತೋಟಗಾರಿಕೆ ಇಲಾಖೆಯು ಜಾರಿಗೊಳಿಸಿದ್ದ  ...

Topics

ಬಳಕೆಯಾಗದ ಅನುದಾನ; ಸರ್ಕಾರದ ಬೊಕ್ಕಸಕ್ಕೆ ಸಂದಾಯವಾಗಿಲ್ಲ 10,546.42 ಕೋಟಿ, ಸಿಎಜಿ ಆಕ್ಷೇಪಣೆ

ಬೆಂಗಳೂರು; ಕೃಷಿ ಮತ್ತು ತೋಟಗಾರಿಕೆ ಇಲಾಖೆ ಸೇರಿದಂತೆ 2024-25ನೇ ಸಾಲಿನಲ್ಲಿ   ಒಟ್ಟು...

13,646.51 ಕೋಟಿ ಹೆಚ್ಚುವರಿ ವೆಚ್ಚ; ಗೃಹ ಲಕ್ಷ್ಮಿಯದ್ದೇ ಸಿಂಹಪಾಲು, ಹೆಚ್ಚುವರಿ ಖರ್ಚಿಗೆ ಕಾರಣಗಳೇ ಇಲ್ಲ, ಸಿಎಜಿ ಆಕ್ಷೇಪ

ಬೆಂಗಳೂರು;  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಇಲಾಖೆಯು 2024-25ನೇ ಸಾಲಿನಲ್ಲಿ ...

2,298 ಕೋಟಿ ರು ಮೊತ್ತದ ಬಿಲ್‌ ಬಾಕಿ; 276 ಕಾಮಗಾರಿ ಅಪೂರ್ಣ, ಬೊಕ್ಕಸ ಬರಿದಾಯಿತೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು ಕೈಗೆತ್ತಿಕೊಂಡಿದ್ದ  ಕಾಮಗಾರಿಗಳು ನಿಗದಿತ ಅವಧಿಯಲ್ಲಿ...

ಪುಸ್ತಕಗಳ ಖರೀದಿಯಲ್ಲಿ ವಂಚನೆ, ಭ್ರಷ್ಟಾಚಾರ ಆರೋಪ;ಎಚ್ ಟಿ ಪೋತೆ ಅವರ ವಿರುದ್ಧ ಕ್ರಮಕ್ಕೆ ಮೀನಮೇಷ

ಬೆಂಗಳೂರು;  ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ...

Related Articles

Popular Categories

error: Content is protected !!