Thursday | July 16, 2026 |

ಕೋವಿಡ್‌-19 ಜಾಹೀರಾತಿನ ಜಾಲ; 3 ತಿಂಗಳಲ್ಲಿ 11 ಕೋಟಿ ವೆಚ್ಚ

ಬೆಂಗಳೂರು; ಕೋವಿಡ್‌-19 ನಿರ್ವಹಣೆಗಾಗಿ ಹಣವಿಲ್ಲ, ಸಂಪನ್ಮೂಲ ಸ್ಥಗಿತಗೊಂಡಿದೆ, ಖಜಾನೆ ಬರಿದಾಗಿದೆ ಎಂದೆಲ್ಲಾ ದೈನೈಸಿ ಸ್ಥಿತಿಯನ್ನು ಮುಂದಿರಿಸಿದ್ದ ರಾಜ್ಯ ಬಿಜೆಪಿ ಸರ್ಕಾರ, 2020ರ ಮಾರ್ಚ್‌ನಿಂದ ಮೇ ವರೆಗೆ ಒಟ್ಟು 11 ಕೋಟಿ ರು.ಗಳನ್ನು ಜಾಹೀರಾತಿಗಾಗಿ ವೆಚ್ಚ ಮಾಡಿದೆ.

ಅಲ್ಲದೆ 2019-20 ಮತ್ತು 2020-21ನೇ ಸಾಲಿನ ಆಗಸ್ಟ್‌ ಅಂತ್ಯಕ್ಕೆ ಪತ್ರಿಕೆಗಳು, ಟಿ ವಿ , ರೇಡಿಯೋಗಳಲ್ಲಿ ಪ್ರಸಾರವಾಗಿರುವ ಜಾಹೀರಾತಿಗೆ ರಾಜ್ಯ ಸರ್ಕಾರ ಒಟ್ಟಾರೆ 37 ಕೋಟಿ ರು. ವೆಚ್ಚ ಮಾಡಿದೆ.

2019-20ನೇ ಸಾಲಿನಲ್ಲಿ 22.34 ಕೋಟಿ, 2020-21ನೇ ಸಾಲಿನಲ್ಲಿ 15.43 ಕೋಟಿ ವೆಚ್ಚ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸದನಕ್ಕೆ ಮಾಹಿತಿ ನೀಡಿದ್ದಾರೆ. 2020-21ನೇ ಸಾಲಿನ ಆಗಸ್ಟ್‌ ಅಂತ್ಯಕ್ಕೆ ವೆಚ್ಚವಾಗಿರುವ 15.43 ಕೋಟಿ ರು.ಪೈಕಿ, 11.48 ಕೋಟಿ ರು. ಕೋವಿಡ್‌ ಸಂದರ್ಭದಲ್ಲಿ ವೆಚ್ಚ ಮಾಡಿದೆ ಎಂದು ಉತ್ತರದಲ್ಲಿ ತಿಳಿಸಿದ್ದಾರೆ.

ಕೋವಿಡ್‌-19ರ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಮತ್ತು ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಸಂಬಂಧ ಜಾಹೀರಾತು ಬಿಡುಗಡೆ ಮಾಡಿದೆ. ಪತ್ರಿಕೆ, ಟಿ ವಿ, ರೇಡಿಯೋಗಳಿಗೆ ಜಾಹೀರಾತು ಹೆಸರಿನಲ್ಲಿ ಮಾಡಿರುವ ಒಟ್ಟು ವೆಚ್ಚದ ಮಾಹಿತಿಯನ್ನು ಒದಗಿಸಿರುವ ಯಡಿಯೂರಪ್ಪ ಅವರು, ಪತ್ರಿಕೆಗಳು, ಟಿ ವಿ ಗಳಿಗೆ ನೀಡಿರುವ ಜಾಹೀರಾತು ಮತ್ತು ಮಾಡಿರುವ ವೆಚ್ಚವನ್ನು ಪತ್ರಿಕೆವಾರು, ಟಿ ವಿ ಚಾನಲ್‌ವಾರು ಪ್ರತ್ಯೇಕವಾಗಿ ವಿವರ ನೀಡಿಲ್ಲ.

ಕೊರೊನಾ ವೈರಸ್‌ ರಾಜ್ಯಕ್ಕೆ ಪ್ರವೇಶ ಮಾಡಿದ ಮಾರ್ಚ್‌ನಲ್ಲಿ 4.36 ಕೋಟಿ, ಏಪ್ರಿಲ್‌ನಲ್ಲಿ 4.51 ಕೋಟಿ, ಮೇ ತಿಂಗಳಲ್ಲಿ 2.60 ಕೋಟಿ ರು.ಗಳನ್ನು ಜಾಹೀರಾತಿಗಾಗಿ ವ್ಯಯಿಸಿರುವುದು ಯಡಿಯೂರಪ್ಪ ಅವರು ನೀಡಿರುವ ಉತ್ತರದಿಂದ ತಿಳಿದು ಬಂದಿದೆ.

ಕೋವಿಡ್‌-19ರ ಕುರಿತು ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು 15 ನಿಮಿಷ ಅವಧಿಯ ವಿಶೇಷ ಕಾರ್ಯಕ್ರಮ, ಕೋವಿಡ್‌-19ರ ಮುಂಜಾಗ್ರತಾ ಕ್ರಮ ಕುರಿತು ಮುಖ್ಯಮಂತ್ರಿ ಮಾಡಿದ್ದ ಮನವಿ, ವೈದ್ಯರು, ಶುಶ್ರೂಷಕರು, ವೈದ್ಯಕೀಯ ಸಿಬ್ಬಂದಿ ಮನವಿ, ರೈತರು ಬೆಳೆದ ಉತ್ಪನ್ನ, ತರಕಾರಿ ಮಾರುಕಟ್ಟೆಗಳಲ್ಲಿ ಮಾರಾಟ ಕುರಿತು, ಕೋವಿಡ್‌-19ರ ಸಹಾಯವಾಣಿ ಕುರಿತು ಪತ್ರಿಕಾ ಜಾಹೀರಾತು, ಕೋವಿಡ್‌ ಸುಳ್ಳು ಸುದ್ದಿ ತಡೆಗಟ್ಟುವ ಕುರಿತು 30 ಸೆಕೆಂಡಿನ ರೇಡಿಯೋ ಜಾಹೀರಾತು, ಕೋವಿಡ್‌-19ರ ಮುಂಜಾಗ್ರತೆ ಕುರಿತು 60 ಸೆಕೆಂಡಿನ ಜಾಹೀರಾತು, ವಲಸೆ ಕಟ್ಟಡ ಕಾರ್ಮಿಕರಿಗೆ ನೆರವಿನ ಕುರಿತು ಪತ್ರಿಕಾ ಜಾಹೀರಾತು, ಅಸಂಘಟಿತ ಕಾರ್ಮಿಕರ ಹಿತರಕ್ಷಣೆ ಕುರಿತು 70 ಸೆಕೆಂಡಿನ ಟಿ ವಿ ಜಾಹೀರಾತು, ಜನ್‌ಧನ್‌ ಮಹಿಳಾ ಖಾತೆಗಳಿಗೆ ನೇರ ಹಣ ಪಾವತಿ, ಕೋವಿಡ್‌-19ರ ರೈತರ ಹಿತರಕ್ಷಣೆ, ಅಗ್ರಿ ವಾರ್‌ರೂಂ ಸ್ಥಾಪನೆ, ಎಪಿಎಂಸಿ ತೆರೆದಿರುವುದು ಸೇರಿದಂತೆ ಕೋವಿಡ್‌-19ರ ಹಿನ್ನೆಲೆಯಲ್ಲಿ ಮೂರ್ನಾಲ್ಕು ದಿನಗಳ ಕಾಲ ಪತ್ರಿಕೆಗಳಿಗೆ, ಟಿ ವಿ ಗಳಿಗೆ ಜಾಹೀರಾತು ನೀಡಿದೆ.

ಅತಿಥಿ ಉಪನ್ಯಾಸಕರಿಗೆ ಗೌರವ ಸಂಭಾವನೆ, ಆಟೋ ಚಾಲಕರು, ತರಕಾರಿ, ಹೂ ಬೆಳೆಗಾರರು, ನೇಕಾರರು, ಸವಿತಾ ಸಮಾಜ, ವಲಸೆ ಕಟ್ಟಡ ಕಾರ್ಮಿಕರು ಸೇರಿದಂತೆ ಇನ್ನಿತರರಿಗೆ ಪೂರ್ಣ ಪ್ರಮಾಣದಲ್ಲಿ ಪರಿಹಾರ ನೀಡದ ಸರ್ಕಾರ, ಜಾಹೀರಾತು ಹೆಸರಿನಲ್ಲಿ ಕೇವಲ 3 ತಿಂಗಳಲ್ಲಿ 11 ಕೋಟಿ ರು. ವೆಚ್ಚ ಮಾಡಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಟೀಕೆಗೆ ಗುರಿಯಾಗಿದೆ.

ಅದೇ ರೀತಿ ಅತಿವೃಷ್ಟಿ, ಅನಾವೃಷ್ಟಿ ಸಂದರ್ಭವನ್ನು ನಿಭಾಯಿಸುವಲ್ಲಿ ವಿಫಲವಾಗಿದೆ ಎಂದು ವಿಪಕ್ಷಗಳ ಟೀಕೆಗೆ ಗುರಿಯಾಗಿದ್ದರೂ 2019-20ರ ಪ್ರವಾಹ ಸಂದರ್ಭದಲ್ಲೂ ಒಟ್ಟು 22.34 ಕೋಟಿ ರು. ಜಾಹೀರಾತು ನೀಡಿದೆ. ಅತಿವೃಷ್ಟಿ ಸಂಬಂಧ ಮುಖ್ಯಮಂತ್ರಿ ಜನತೆಗೆ ಮಾಡಿದ್ದ ಮನವಿ, ಪ್ರಧಾನ ಮಂತ್ರಿ ಫಸಲ್‌ ಭೀಮಾ ಯೋಜನೆ, ಸಾಲಮನ್ನಾ ಕುರಿತು, ಬಾಗಿನ ಅರ್ಪಣೆ, ನೆರೆ ಸಂತ್ರಸ್ತರಿಗೆ ಪರಿಹಾರ ನೀಡಿರುವುದು, ಪ್ರವಾಹ ಪರಿಹಾರ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿರುವುದು ಸೇರಿದಂತೆ ವಿವಿಧ ಸಂದರ್ಭಗಳನ್ನು ಮುಂದಿರಿಸಿಕೊಂಡು ಜಾಹೀರಾತು ನೀಡಿರುವುದು ಉತ್ತರದಿಂದ ಗೊತ್ತಾಗಿದೆ.

Hot this week

35,280 ಚಾಲ್ತಿಯಲ್ಲಿಲ್ಲದ ಬ್ಯಾಂಕ್‌ ಖಾತೆಗಳಲ್ಲಿ 239.66 ಕೋಟಿ; ಅಭಿವೃದ್ಧಿ ಯೋಜನೆಗಳಿಗೆ ಬಳಸದೇ ನಿರ್ಲಕ್ಷ್ಯ, 14.37 ಕೋಟಿ ಬಡ್ಡಿ ನಷ್ಟ

ಬೆಂಗಳೂರು; ರಾಜ್ಯದ ಗ್ರಾಮ ಪಂಚಾಯ್ತಿಗಳು  ಚಾಲ್ತಿಯಲ್ಲೇ ಇಲ್ಲದ 35,280  ಬ್ಯಾಂಕ್‌ ಖಾತೆಗಳಲ್ಲಿ ...

ಸರ್ಕಾರಿ ಲೆಕ್ಕಪತ್ರಗಳ ಮರು ಹೊಂದಾಣಿಕೆಯಲ್ಲಿ ಲೋಪ; ಆದಾಯ, ಸ್ವೀಕೃತಿ, ಬಂಡವಾಳ ವೆಚ್ಚದಲ್ಲಿ ವ್ಯತ್ಯಾಸ, ಕಳವಳ ವ್ಯಕ್ತಪಡಿಸಿದ ಲೆಕ್ಕಪರಿಶೋಧನಾ ಮಹಾನಿರ್ದೇಶಕ

ಬೆಂಗಳೂರು; ಸರ್ಕಾರಿ ಲೆಕ್ಕಪತ್ರಗಳಲ್ಲಿ ಸಂಪೂರ್ಣ ನಿಖರತೆ, ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಖಚಿತಪಡಿಸಬೇಕಿದ್ದ...

ಕಲ್ಲು ಸಕ್ಕರೆ, ಖರ್ಜೂರ ಪ್ರಸಾದ; ದುಪ್ಪಟ್ಟು ದರದಲ್ಲಿ ಮಾರಾಟ, ಭಕ್ತರಿಗೆ ಅನಗತ್ಯ ಆರ್ಥಿಕ ಹೊರೆ, ನ್ಯಾಯಾಲಯ ಆದೇಶವೂ ಉಲ್ಲಂಘನೆ

ಬೆಂಗಳೂರು; ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಪ್ರಾಧಿಕಾರವು ನಿಗದಿತ ದರಕ್ಕಿಂತಲೂ ಹೆಚ್ಚುವರಿ ಅಂದರೇ...

ನ್ಯಾಕ್‌, ಎನ್‌ಐಆರ್‍‌ಎಫ್‌ ಮಾನದಂಡ; ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟ ಆತಂಕದ ಪ್ರವೃತ್ತಿ, ಆಯೋಗ ಕಳವಳ

ಬೆಂಗಳೂರು; ನ್ಯಾಕ್‌ ಮತ್ತು ಎನ್‌ಐಆರ್‍‌ಎಫ್‌ ಪ್ರಕಾರ ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟವು...

ಎಬಿ-ಎಆರ್‍‌ಕೆ ಯೋಜನೆಯಲ್ಲಿ ಅಕ್ರಮ; ಜಿಮ್ಸ್‌ ಸಿಬ್ಬಂದಿ, ಖಾಸಗಿ ಆಸ್ಪತ್ರೆ ಶಾಮೀಲು, ರಾಜೀನಾಮೆ ನೀಡಿದ್ದ ವೈದ್ಯರ ಹೆಸರಿನಲ್ಲೂ ನಕಲಿ ಓಆರ್‍‌ಎಸ್‌ ಸೃಜನೆ; ತನಿಖಾ ವರದಿ

ಬೆಂಗಳೂರು; ಆಯುಷ್ಮಾನ್‌ ಭಾರತ್ ಮತ್ತು  ಎಆರ್‍‌ಕೆ ಯೋಜನೆಯಡಿಯಲ್ಲಿ  ಕಲ್ಬುರ್ಗಿ ಜಿಲ್ಲಾ  ಆಸ್ಪತ್ರೆಯಿಂದ...
Please Scan to make Your Contribution

Topics

35,280 ಚಾಲ್ತಿಯಲ್ಲಿಲ್ಲದ ಬ್ಯಾಂಕ್‌ ಖಾತೆಗಳಲ್ಲಿ 239.66 ಕೋಟಿ; ಅಭಿವೃದ್ಧಿ ಯೋಜನೆಗಳಿಗೆ ಬಳಸದೇ ನಿರ್ಲಕ್ಷ್ಯ, 14.37 ಕೋಟಿ ಬಡ್ಡಿ ನಷ್ಟ

ಬೆಂಗಳೂರು; ರಾಜ್ಯದ ಗ್ರಾಮ ಪಂಚಾಯ್ತಿಗಳು  ಚಾಲ್ತಿಯಲ್ಲೇ ಇಲ್ಲದ 35,280  ಬ್ಯಾಂಕ್‌ ಖಾತೆಗಳಲ್ಲಿ ...

ಸರ್ಕಾರಿ ಲೆಕ್ಕಪತ್ರಗಳ ಮರು ಹೊಂದಾಣಿಕೆಯಲ್ಲಿ ಲೋಪ; ಆದಾಯ, ಸ್ವೀಕೃತಿ, ಬಂಡವಾಳ ವೆಚ್ಚದಲ್ಲಿ ವ್ಯತ್ಯಾಸ, ಕಳವಳ ವ್ಯಕ್ತಪಡಿಸಿದ ಲೆಕ್ಕಪರಿಶೋಧನಾ ಮಹಾನಿರ್ದೇಶಕ

ಬೆಂಗಳೂರು; ಸರ್ಕಾರಿ ಲೆಕ್ಕಪತ್ರಗಳಲ್ಲಿ ಸಂಪೂರ್ಣ ನಿಖರತೆ, ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಖಚಿತಪಡಿಸಬೇಕಿದ್ದ...

ಕಲ್ಲು ಸಕ್ಕರೆ, ಖರ್ಜೂರ ಪ್ರಸಾದ; ದುಪ್ಪಟ್ಟು ದರದಲ್ಲಿ ಮಾರಾಟ, ಭಕ್ತರಿಗೆ ಅನಗತ್ಯ ಆರ್ಥಿಕ ಹೊರೆ, ನ್ಯಾಯಾಲಯ ಆದೇಶವೂ ಉಲ್ಲಂಘನೆ

ಬೆಂಗಳೂರು; ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಪ್ರಾಧಿಕಾರವು ನಿಗದಿತ ದರಕ್ಕಿಂತಲೂ ಹೆಚ್ಚುವರಿ ಅಂದರೇ...

ನ್ಯಾಕ್‌, ಎನ್‌ಐಆರ್‍‌ಎಫ್‌ ಮಾನದಂಡ; ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟ ಆತಂಕದ ಪ್ರವೃತ್ತಿ, ಆಯೋಗ ಕಳವಳ

ಬೆಂಗಳೂರು; ನ್ಯಾಕ್‌ ಮತ್ತು ಎನ್‌ಐಆರ್‍‌ಎಫ್‌ ಪ್ರಕಾರ ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟವು...

ಜಿಎಸ್‌ಡಿಪಿ 23,34,000 ಕೋಟಿ, ಉನ್ನತ ಶಿಕ್ಷಣಕ್ಕಾಗಿ ಕೇವಲ 5,646 ಕೋಟಿ ರು ಖರ್ಚು; ಇತರೆ ರಾಜ್ಯಗಳಿಗಿಂತ ಕೆಳಗಿಳಿದ ಕರ್ನಾಟಕ

ಬೆಂಗಳೂರು; ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿ ಆಗಿದ್ದ ಮೊದಲನೇ ಆರ್ಥಿಕ...

Related Articles

Popular Categories

error: Content is protected !!