Thursday | July 16, 2026 |

ಆರ್‌ಎಸ್‌ಎಸ್‌ ಲೆಕ್ಕಪತ್ರ ಸಲ್ಲಿಸುತ್ತಿದೆಯೇ?; ತಿಂಗಳಾದರೂ ಉತ್ತರಿಸದ ಸಹಕಾರ ಇಲಾಖೆ

ಬೆಂಗಳೂರು; ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನೋಂದಣಿ, ವಾರ್ಷಿಕ ಲೆಕ್ಕಪತ್ರಗಳು ಸರ್ಕಾರಕ್ಕೆ ಸಲ್ಲಿಕೆಯಾಗುತ್ತಿದೆಯೇ ಅಥವಾ ಇಲ್ಲವೇ ಎಂಬುದು ಸೇರಿದಂತೆ ಅಧಿವೇಶನದಲ್ಲಿ ಹಲವು ಪ್ರಶ್ನೆಗಳನ್ನು ಎತ್ತಿದ್ದ ವಿಧಾನಪರಿಷತ್‌ ಸದಸ್ಯ ಬಿ ಕೆ ಹರಿಪ್ರಸಾದ್‌ ಅವರಿಗೆ ಸಹಕಾರ ಇಲಾಖೆ ಸಚಿವ ಎಸ್‌ ಟಿ ಸೋಮಶೇಖರ್‌ ಅವರು ತಿಂಗಳಾದರೂ ಉತ್ತರ ನೀಡಿಲ್ಲ.

ಸೆಪ್ಟಂಬರ್‌ನಲ್ಲಿ ನಡೆದಿದ್ದ ವಿಧಾನ ಪರಿಷತ್‌ ಅಧಿವೇಶನದ ವೇಳೆಯಲ್ಲಿ ಪರಿಷತ್‌ ಸದಸ್ಯ ಬಿ ಕೆ ಹರಿಪ್ರಸಾದ್‌ ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕುರಿತು ಕೇಳಿದ್ದ 4 ಪ್ರಶ್ನೆಗಳ ಪೈಕಿ ಒಂದೇ ಒಂದು ಪ್ರಶ್ನೆಗೆ ಉತ್ತರ ನೀಡದಿರುವುದು ತಿಳಿದು ಬಂದಿದೆ.

ಹರಿಪ್ರಸಾದ್‌ ಕೇಳಿದ್ದ ಪ್ರಶ್ನೆಗಳೇನು?

1. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿರುದ್ಧ ಸರ್ಕಾರಕ್ಕೆ ದೂರುಗಳು ಬಂದಿವೆಯೇ?

2. ರಾಷ್ಟ್ರೀಯ ಸ್ವಯಂ ಸೇವಕ ಸಂಘ ನೋಂದಣಿಯಾಗಿದೆಯೇ? ಸದಸ್ಯತ್ವದ ಪಟ್ಟಿ ಸರ್ಕಾರಕ್ಕೆ ಸಲ್ಲಿಸಿ ಸಂವಿಧಾನಬದ್ಧವಾಗಿ ಪ್ರತಿ 3 ವರ್ಷಗಳಿಗೊಮ್ಮೆ ಸಂಘದ ಚುನಾವಣೆ ನಡೆಯುತ್ತಿದೆಯೇ ಮತ್ತು ವಾರ್ಷಿಕ ಲೆಕ್ಕಪತ್ರ ಸರ್ಕಾರಕ್ಕೆ ಸಲ್ಲಿಕೆಯಾಗಿದೆಯೇ?

3. ಸದರಿ ಸಂಘಟನೆಯು ರಾಜ್ಯದಲ್ಲಿ ಸ್ವಂತ ಅಥವಾ ಬಾಡಿಗೆ ಕಚೇರಿ ಹೊಂದಿದೆಯೇ?

4. ವಿಳಾಸವೇ ಇಲ್ಲದ ನೋಂದಣಿಯಾಗದ ಸದಸ್ಯತ್ವ ಪಟ್ಟಿ ಸಲ್ಲಿಸದ ಸಂವಿಧಾನಬದ್ಧವಾಗಿ ಚುನಾವಣೆ ನಡೆಸದ ಸಂಘಟನೆಯ ಆದಾಯ, ಖರ್ಚು ವೆಚ್ಚಗಳ ಬಗ್ಗೆ ಸರ್ಕಾರಕ್ಕೆ ಉತ್ತರದಾಯಿತ್ವ ಸಲ್ಲಿಸದ ಸಂಘಟನೆಗಳು ಸರ್ಕಾರಕ್ಕೆ ಅರ್ಥಾತ್‌ ಸಮಾಜಕ್ಕೆ ವಂಚಿಸಿದಂತಿದ್ದು ಸಮಾಜದ ಹಿತ ಕಾಪಾಡಬಲ್ಲುದೆ?

ರಾಷ್ಟ್ರೀಯ ಸ್ವಯಂ ಸೇವಕ ಸಂಘ, ಸಂಘ ಪರಿವಾರದ ಮಾತೃಸಂಸ್ಥೆ. ನಾಗಪುರದಲ್ಲಿ ಪ್ರಧಾನ ಕಚೇರಿ ಹೊಂದಿರುವ ಸಂಘವು, ಬೆಂಗಳೂರು ನಗರದ ಚಾಮರಾಜಪೇಟೆಯಲ್ಲಿ ಕೇಶವ ಕೃಪಾದಲ್ಲಿಯೂ ಕಚೇರಿಯನ್ನು ಹೊಂದಿದೆ. ಅಸಲಿಗೆ ಇಲ್ಲಿ ಯಾವುದೇ ಔಪಚಾರಿಕ ಸದಸ್ಯತ್ವವಿಲ್ಲ.

ದೆಹಲಿಯ ಉದಾಸೀನ್‌ ಆಶ್ರಮದಲ್ಲಿ 2012ರಿಂದಲೇ ಆರ್‌ಎಸ್‌ಎಸ್‌ ಕೇಂದ್ರ ಕಚೇರಿ ನಿರ್ಮಾಣ ಮಾಡುತ್ತಿದೆ ಎಂದು ಸಂಘ ತನ್ನ ವರದಿಯಲ್ಲಿ ತಿಳಿಸಿತ್ತು. ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್‌) ದೆಹಲಿಯಲ್ಲಿ ಕೇಂದ್ರ ಕಚೇರಿ ನಿರ್ಮಿಸಲು ಜನ ಸಾಮಾನ್ಯರ ಜೇಬಿಗೆ ಕೈ ಹಾಕಿತ್ತು ಎಂಬ ಆರೋಪವು ಕೇಳಿ ಬಂದಿತ್ತು. ಅದರಲ್ಲೂ ತುಂಬಾ ಮುಖ್ಯವಾಗಿ ಆರ್‌ಎಸ್‌ಎಸ್‌ ಸಿದ್ಧಾಂತವನ್ನು ಬೆಂಬಲಿಸುವ ಮಂದಿಯನ್ನು ಸಂಪರ್ಕಿಸಿದ್ದ ಸಂಘದ ನಾಯಕರು, ದೇಣಿಗೆ ಪಡೆಯುವುದರಲ್ಲಿ ನಿರತವಾಗಿತ್ತು ಎಂದು ಹೇಳಲಾಗಿತ್ತು.

ಸಂಘದ ಪ್ರತಿಯೊಂದು ಕೆಲಸಗಳನ್ನು ಸಮಾಜದ ಬೆಂಬಲದಿಂದ ಕೈಗೆತ್ತಿಕೊಳ್ಳಲಾಗುತ್ತಿದೆ. ಅಲ್ಲದೆ ದೇಣಿಗೆಗಳನ್ನು ಚೆಕ್‌ಗಳ ಮೂಲಕ ಪಡೆಯಲಾಗುತ್ತಿದೆ. ಸಂಘದ ಹಿತೈಷಿಗಳು ಕೊಡುಗೆಯಾಗಿ ನೀಡಿದ್ದನ್ನು ಮಾತ್ರ ತೆಗೆದುಕೊಳ್ಳಲಾಗುತ್ತಿದೆ ಎಂದು ಐಎನ್‌ಎಸ್‌ ಸುದ್ದಿಸಂಸ್ಥೆಗೆ ಆರ್‌ಎಸ್‌ಎಸ್‌ ಮುಖ್ಯಸ್ಥರು ತಿಳಿಸಿದ್ದನ್ನು ಸ್ಮರಿಸಿಕೊಳ್ಳಬಹುದು.

ಆರ್‌ಎಸ್‌ಎಸ್‌ ಯಾವುದೇ ನೋಂದಾಯಿತ ಎನ್‌ಜಿಒ ಅಲ್ಲ. ಹಾಗೆಯೇ ಯಾವುದೇ ಲೆಕ್ಕ ಪರಿಶೋಧನೆಗೂ ಒಳಪಡುವುದಿಲ್ಲ. ಅದೇ ರೀತಿ ಆದಾಯ ತೆರಿಗೆ ಕಾಯ್ದೆಯೂ ಅನ್ವಯವಾಗುವುದಿಲ್ಲ. ಆದರೂ ಹಣವನ್ನು ಮಾತ್ರ ಸಂಗ್ರಹಿಸುತ್ತಿದೆ. ಇದಲ್ಲದೆ ವಿದೇಶಿ ಹಣವನ್ನು ಹೇಗೆ ಪಡೆಯುತ್ತದೆ ಎಂಬುದು ಸಹ ಬಹಿರಂಗಗೊಳ್ಳುವುದಿಲ್ಲ ಎಂದು ಐಎನ್‌ಎಸ್‌ ವರದಿಯಲ್ಲಿ ವಿವರಿಸಲಾಗಿತ್ತು.

ಅದೇ ರೀತಿ ಆರ್ ಎಸ್ ಎಸ್ ಸಂಸ್ಥೆ ಕುರಿತು 2018ರ ಡಿಸೆಂಬರ್‌ನಲ್ಲಿ ಸಾಮಾಜಿಕ ಕಾರ್ಯಕರ್ತ ಪ್ರಕಾಶ್‌ ಅಂಬೇಡ್ಕರ್‌ ಅನೇಕ ಪ್ರಶ್ನೆಗಳನ್ನು ಎತ್ತಿದ್ದರು. ಸಂಸ್ಥೆಯನ್ನು ನೋಂದಾಯಿಸಿಲ್ಲವೇಕೆ ಮತ್ತು ಆದಾಯ ತೆರಿಗೆ ಏಕೆ ಪಾವತಿಸಿಲ್ಲ ಎಂಬ ಪ್ರಶ್ನೆಗಳನ್ನು ಕೇಳಿದ್ದರು ಎಂದು ಫ್ರೀ ಪ್ರೆಸ್ ಜರ್ನಲ್ ಸಂಸ್ಥೆ ವರದಿ ಮಾಡಿತ್ತು.

ಆರೆಸ್ಸಸ್ ಸಂಘಟನೆಯನ್ನು ಒಂದು ಸೀಕ್ರಟ್ ಸೊಸೈಟಿ ಎಂದು ಹೇಳಿದ್ದ ನೆಹರೂ ಅವರು ಆರೆಸ್ಸಸ್ ಮೂಲಭೂತವಾಗಿ ಸಾರ್ವಜನಿಕ ಮುಖವಾಡವನ್ನು ಹೊಂದಿದ ಒಂದು ಸೀಕ್ರೆಟ್ ಸಂಸ್ಥೆ. ಈ ಆರೆಸ್ಸಸ್ ಸಂಸ್ಥೆಯಲ್ಲಿ ಸದಸ್ಯರಿಲ್ಲ, ನೊಂದಣಿ ಇಲ್ಲ, ಅಸಂಖ್ಯಾತ ದೇಣಿಗೆಯನ್ನು ಪಡೆಯುತ್ತಿದ್ದರೂ ಅಲ್ಲಿ ಲೆಕ್ಕಪತ್ರಗಳಿಲ್ಲ ಎಂದು ಹೇಳಿದ್ದನ್ನು ಸ್ಮರಿಸಿಕೊಳ್ಳಬಹುದು.

ಭಾರತದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ 55 ಸಾವಿರ ಶಾಖೆಗಳಿದ್ದು, 1 ಲಕ್ಷ 70 ಸಾವಿರ ಚಟುವಟಿಕೆಗಳು ನಿತ್ಯ ನಡೆಯುತ್ತಿದೆ ಎನ್ನಲಾಗಿದೆ.

Hot this week

35,280 ಚಾಲ್ತಿಯಲ್ಲಿಲ್ಲದ ಬ್ಯಾಂಕ್‌ ಖಾತೆಗಳಲ್ಲಿ 239.66 ಕೋಟಿ; ಅಭಿವೃದ್ಧಿ ಯೋಜನೆಗಳಿಗೆ ಬಳಸದೇ ನಿರ್ಲಕ್ಷ್ಯ, 14.37 ಕೋಟಿ ಬಡ್ಡಿ ನಷ್ಟ

ಬೆಂಗಳೂರು; ರಾಜ್ಯದ ಗ್ರಾಮ ಪಂಚಾಯ್ತಿಗಳು  ಚಾಲ್ತಿಯಲ್ಲೇ ಇಲ್ಲದ 35,280  ಬ್ಯಾಂಕ್‌ ಖಾತೆಗಳಲ್ಲಿ ...

ಸರ್ಕಾರಿ ಲೆಕ್ಕಪತ್ರಗಳ ಮರು ಹೊಂದಾಣಿಕೆಯಲ್ಲಿ ಲೋಪ; ಆದಾಯ, ಸ್ವೀಕೃತಿ, ಬಂಡವಾಳ ವೆಚ್ಚದಲ್ಲಿ ವ್ಯತ್ಯಾಸ, ಕಳವಳ ವ್ಯಕ್ತಪಡಿಸಿದ ಲೆಕ್ಕಪರಿಶೋಧನಾ ಮಹಾನಿರ್ದೇಶಕ

ಬೆಂಗಳೂರು; ಸರ್ಕಾರಿ ಲೆಕ್ಕಪತ್ರಗಳಲ್ಲಿ ಸಂಪೂರ್ಣ ನಿಖರತೆ, ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಖಚಿತಪಡಿಸಬೇಕಿದ್ದ...

ಕಲ್ಲು ಸಕ್ಕರೆ, ಖರ್ಜೂರ ಪ್ರಸಾದ; ದುಪ್ಪಟ್ಟು ದರದಲ್ಲಿ ಮಾರಾಟ, ಭಕ್ತರಿಗೆ ಅನಗತ್ಯ ಆರ್ಥಿಕ ಹೊರೆ, ನ್ಯಾಯಾಲಯ ಆದೇಶವೂ ಉಲ್ಲಂಘನೆ

ಬೆಂಗಳೂರು; ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಪ್ರಾಧಿಕಾರವು ನಿಗದಿತ ದರಕ್ಕಿಂತಲೂ ಹೆಚ್ಚುವರಿ ಅಂದರೇ...

ನ್ಯಾಕ್‌, ಎನ್‌ಐಆರ್‍‌ಎಫ್‌ ಮಾನದಂಡ; ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟ ಆತಂಕದ ಪ್ರವೃತ್ತಿ, ಆಯೋಗ ಕಳವಳ

ಬೆಂಗಳೂರು; ನ್ಯಾಕ್‌ ಮತ್ತು ಎನ್‌ಐಆರ್‍‌ಎಫ್‌ ಪ್ರಕಾರ ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟವು...

ಎಬಿ-ಎಆರ್‍‌ಕೆ ಯೋಜನೆಯಲ್ಲಿ ಅಕ್ರಮ; ಜಿಮ್ಸ್‌ ಸಿಬ್ಬಂದಿ, ಖಾಸಗಿ ಆಸ್ಪತ್ರೆ ಶಾಮೀಲು, ರಾಜೀನಾಮೆ ನೀಡಿದ್ದ ವೈದ್ಯರ ಹೆಸರಿನಲ್ಲೂ ನಕಲಿ ಓಆರ್‍‌ಎಸ್‌ ಸೃಜನೆ; ತನಿಖಾ ವರದಿ

ಬೆಂಗಳೂರು; ಆಯುಷ್ಮಾನ್‌ ಭಾರತ್ ಮತ್ತು  ಎಆರ್‍‌ಕೆ ಯೋಜನೆಯಡಿಯಲ್ಲಿ  ಕಲ್ಬುರ್ಗಿ ಜಿಲ್ಲಾ  ಆಸ್ಪತ್ರೆಯಿಂದ...
Please Scan to make Your Contribution

Topics

35,280 ಚಾಲ್ತಿಯಲ್ಲಿಲ್ಲದ ಬ್ಯಾಂಕ್‌ ಖಾತೆಗಳಲ್ಲಿ 239.66 ಕೋಟಿ; ಅಭಿವೃದ್ಧಿ ಯೋಜನೆಗಳಿಗೆ ಬಳಸದೇ ನಿರ್ಲಕ್ಷ್ಯ, 14.37 ಕೋಟಿ ಬಡ್ಡಿ ನಷ್ಟ

ಬೆಂಗಳೂರು; ರಾಜ್ಯದ ಗ್ರಾಮ ಪಂಚಾಯ್ತಿಗಳು  ಚಾಲ್ತಿಯಲ್ಲೇ ಇಲ್ಲದ 35,280  ಬ್ಯಾಂಕ್‌ ಖಾತೆಗಳಲ್ಲಿ ...

ಸರ್ಕಾರಿ ಲೆಕ್ಕಪತ್ರಗಳ ಮರು ಹೊಂದಾಣಿಕೆಯಲ್ಲಿ ಲೋಪ; ಆದಾಯ, ಸ್ವೀಕೃತಿ, ಬಂಡವಾಳ ವೆಚ್ಚದಲ್ಲಿ ವ್ಯತ್ಯಾಸ, ಕಳವಳ ವ್ಯಕ್ತಪಡಿಸಿದ ಲೆಕ್ಕಪರಿಶೋಧನಾ ಮಹಾನಿರ್ದೇಶಕ

ಬೆಂಗಳೂರು; ಸರ್ಕಾರಿ ಲೆಕ್ಕಪತ್ರಗಳಲ್ಲಿ ಸಂಪೂರ್ಣ ನಿಖರತೆ, ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಖಚಿತಪಡಿಸಬೇಕಿದ್ದ...

ಕಲ್ಲು ಸಕ್ಕರೆ, ಖರ್ಜೂರ ಪ್ರಸಾದ; ದುಪ್ಪಟ್ಟು ದರದಲ್ಲಿ ಮಾರಾಟ, ಭಕ್ತರಿಗೆ ಅನಗತ್ಯ ಆರ್ಥಿಕ ಹೊರೆ, ನ್ಯಾಯಾಲಯ ಆದೇಶವೂ ಉಲ್ಲಂಘನೆ

ಬೆಂಗಳೂರು; ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಪ್ರಾಧಿಕಾರವು ನಿಗದಿತ ದರಕ್ಕಿಂತಲೂ ಹೆಚ್ಚುವರಿ ಅಂದರೇ...

ನ್ಯಾಕ್‌, ಎನ್‌ಐಆರ್‍‌ಎಫ್‌ ಮಾನದಂಡ; ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟ ಆತಂಕದ ಪ್ರವೃತ್ತಿ, ಆಯೋಗ ಕಳವಳ

ಬೆಂಗಳೂರು; ನ್ಯಾಕ್‌ ಮತ್ತು ಎನ್‌ಐಆರ್‍‌ಎಫ್‌ ಪ್ರಕಾರ ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟವು...

ಜಿಎಸ್‌ಡಿಪಿ 23,34,000 ಕೋಟಿ, ಉನ್ನತ ಶಿಕ್ಷಣಕ್ಕಾಗಿ ಕೇವಲ 5,646 ಕೋಟಿ ರು ಖರ್ಚು; ಇತರೆ ರಾಜ್ಯಗಳಿಗಿಂತ ಕೆಳಗಿಳಿದ ಕರ್ನಾಟಕ

ಬೆಂಗಳೂರು; ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿ ಆಗಿದ್ದ ಮೊದಲನೇ ಆರ್ಥಿಕ...

Related Articles

Popular Categories

error: Content is protected !!