Friday | June 12, 2026 |

ಕೋವಿಡ್‌-19; ಮುಖ್ಯಮಂತ್ರಿ ಸೇರಿ 23 ಜಿಲ್ಲೆಗಳ ಶಾಸಕರು ಅನುದಾನ ಪ್ರಸ್ತಾವನೆಯನ್ನೇ ಸಲ್ಲಿಸಿಲ್ಲ

ಬೆಂಗಳೂರು; ಕೋವಿಡ್‌–19 ವೈರಾಣು ನಿಯಂತ್ರಿಸಲು ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನ ಬಳಕೆ ಮಾಡಿಕೊಳ್ಳುವ ಸಂಬಂಧ ತೀರ್ಮಾನ ಪ್ರಕಟಿಸಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈ ಸಂಬಂಧ ಶಿವಮೊಗ್ಗ ಜಿಲ್ಲಾಧಿಕಾರಿಗೆ ಯಾವ ಪ್ರಸ್ತಾವನೆಯನ್ನೂ ಸಲ್ಲಿಸಿಲ್ಲ.

ಹಾಗೆಯೇ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಕಾನೂನು ಸಚಿವ ಮಾಧುಸ್ವಾಮಿ, ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್‌ ಈಶ್ವರಪ್ಪ , ರಮೇಶ್‌ ಜಾರಕಿಹೊಳಿ ಸೇರಿದಂತೆ ಸಚಿವರು ಪ್ರತಿನಿಧಿಸಿರುವ ಕ್ಷೇತ್ರಗಳೂ ಸೇರಿದಂತೆ ಒಟ್ಟು 23 ಜಿಲ್ಲೆಗಳ ಶಾಸಕರು ಆಯಾ ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆಯನ್ನೇ ಸಲ್ಲಿಸದಿರುವುದು ಬಹಿರಂಗವಾಗಿದೆ.

ಆತಂಕಕಾರಿ ಕೋವಿಡ್‌–19 ವೈರಾಣು ನಿಯಂತ್ರಿಸಲು ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನ ಬಳಕೆ ಮಾಡಿಕೊಳ್ಳಲು ರಾಜ್ಯ ಸರ್ಕಾರ ತೀರ್ಮಾನಿಸಿತ್ತು. ಈ ತೀರ್ಮಾನ ಹೊರಬಿದ್ದ 5 ತಿಂಗಳ ನಂತರ (2020ರ ಸೆ.29ರ ಅಂತ್ಯಕ್ಕೆ) ಬೆರಳಣಿಕೆಯಷ್ಟು ಶಾಸಕರು ಮಾತ್ರ ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ.

ಈ ಕುರಿತು ವಿಧಾನಪರಿಷತ್‌ ಸದಸ್ಯ ಶ್ರೀನಿವಾಸ ಮಾನೆ ಅವರು ಕೇಳಿದ್ದ ಪ್ರಶ್ನೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನೀಡಿರುವ ಉತ್ತರವು, ಶಾಸಕರ ನಿರಾಸಕ್ತಿಯನ್ನು ಬಹಿರಂಗಪಡಿಸಿದೆ.

ಪ್ರಸ್ತಾವನೆ ಸಲ್ಲಿಸದ ಜಿಲ್ಲೆಗಳಿವು

ಬೀದರ್‌, ಚಿತ್ರದುರ್ಗ, ಕಲ್ಬುರ್ಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಧಾರವಾಡ, ಬಾಗಲಕೋಟೆ, ಉತ್ತರ ಕನ್ನಡ, ಗದಗ್‌ ಮತ್ತು ಬೆಳಗಾವಿ ಜಿಲ್ಲೆಯ ಯಾವೊಬ್ಬ ಶಾಸಕರು ಪ್ರಸ್ತಾವನೆಯನ್ನು ಸಲ್ಲಿಸಿಲ್ಲ ಎಂಬುದು ಯಡಿಯೂರಪ್ಪ ಅವರು ನೀಡಿರುವ ಉತ್ತರದಿಂದ ಗೊತ್ತಾಗಿದೆ.

ಬಳ್ಳಾರಿ ನಗರ ಶಾಸಕ ಜಿ ಸೋಮಶೇಖರ ರೆಡ್ಡಿ ಅವರು 2020-21ನೇ ಸಾಲಿನ ಕ್ಷೇತ್ರ ವ್ಯಾಪ್ತಿಯ ನಿಧಿಯನ್ನು ಕೋವಿಡ್‌-19 ಪರಿಹಾರ ನಿಧಿಗೆ ದೇಣಿಗೆ ನೀಡಲು ಒಪ್ಪಿದ್ದರು. ಆದರೆ ಆರ್ಥಿಕ ಇಲಾಖೆಯ ಹಿಂಬರಹದಂತೆ ಅದನ್ನು ತಡೆಹಿಡಿಯಲಾಗಿದೆ. ಅದೇ ರೀತಿ ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಅವರು 50.00 ಲಕ್ಷ ರು. ಅನುದಾನ ಬಳಕೆ ಮಾಡಲು ಪ್ರಸ್ತಾವನೆ ಸಲ್ಲಿಸಿದ್ದರೆ, ಬೆಂಗಳೂರು ನಗರ ಜಿಲ್ಲೆಯ ಜಯನಗರ ಕ್ಷೇತ್ರದ ಶಾಸಕಿ ಸೌಮ್ಯ ರೆಡ್ಡಿ ಪ್ರಸ್ತಾವನೆ ಸಲ್ಲಿಸಿದ್ದರು ಎಂಬುದು ತಿಳಿದು ಬಂದಿದೆ.

ಹಾಗೆಯೇ ಹಾವೇರಿ ಜಿಲ್ಲೆಯ ಸಿ ಎಂ ಉದಾಸಿ (27.71 ಲಕ್ಷ) ಮತ್ತು ವಿಧಾನಪರಿಷತ್‌ ಸದಸ್ಯ ಶ್ರೀನಿವಾಸ ಮಾನೆ (46.65 ಲಕ್ಷ)ಮ ವಿಜಯಪುರದ ಸುನೀಲ್‌ಗೌಡ (98.99 ಲಕ್ಷ), ಹಾಸನದ ಎಂ ಎ ಗೋಪಾಲಸ್ವಾಮಿ (19.50 ಲಕ್ಷ) ರು.ಗಳನ್ನು ಬಿಡುಗಡೆ ಮಾಡಿರುವುದು ಗೊತ್ತಾಗಿದೆ.

ಶಾಸಕರ ಕ್ಷೇತ್ರಾಭಿವೃದ್ಧಿ ಯೋಜನೆಯ ಪರಿಷ್ಕತ ಮಾರ್ಗಸೂಚಿ ಅನ್ವಯ ಪ್ರಕೃತಿ ವಿಕೋಪದಡಿ ಶಾಸಕರ ಸ್ಥಳೀಯ ಕ್ವೇತ್ರಾಭಿವೃದ್ಧಿ ಅನುದಾನ ಬಳಕೆ ಮಾಡಿಕೊಳ್ಳಲು ಅವಕಾಶವಿರುವುದರಿಂದ ಕೊರೊನಾ ವೈರಸ್‌ ತಡೆಯಲು 2020–21ನೇ ಸಾಲಿನಲ್ಲಿ ಮಾತ್ರ ಈ ಅನುದಾನ ಬಳಸಲು ಅನುಮತಿ ನೀಡಿ ಸರ್ಕಾರ ಆದೇಶ ಹೊರಡಿಸಿತ್ತು. ಅಲ್ಲದೆ ಶಾಸಕರು ಬಯಸಿದರೆ ತಮ್ಮ ಅನುದಾನವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ದೇಣಿಗೆ ನೀಡಬಹುದು ಎಂದು ಸರ್ಕಾರ ಆದೇಶದಲ್ಲಿ ತಿಳಿಸಿತ್ತು.

ಜಿಲ್ಲಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿರುವ ಶಾಸಕರನ್ನು ಸಂಪರ್ಕಿಸಿ, ಅವರ ಪ್ರಸ್ತಾವನೆಗಳಿಗೆ ತುರ್ತು ಲಭ್ಯವಿರುವ ಪಿ.ಡಿ ಖಾತೆಯ ಹಣದಿಂದ 2 ಕೋಟಿಗೆ ಸೀಮಿತಗೊಳಿಸಿ ಬಳಸಲು ಕ್ರಮ ಕೈಗೊಳ್ಳಬಹುದು ಎಂದು ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಆದೇಶದಲ್ಲಿ ತಿಳಿಸಿದ್ದನ್ನು ಸ್ಮರಿಸಬಹುದು.

2018–19ನೇ ಸಾಲಿನಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಶಾಸಕರಿಗೆ 481.69 ಕೋಟಿ ಬಿಡುಗಡೆ ಆಗಿದೆ. 2019– 20ನೇ 299.67 ಕೋಟಿ ರು. ಇದೆ. ಬಹುತೇಕ ಶಾಸಕರು ಲಭ್ಯವಿರುವ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡದ ಕಾರಣ ಜಿಲ್ಲಾಧಿಕಾರಿಗಳ ಪಿ.ಡಿ ಖಾತೆಯಲ್ಲಿ ಹಣ ಈಗಲೂ ಉಳಿದಿದೆ.

Hot this week

ತ್ಯಾಜ್ಯ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಅಕ್ರಮ ಆರೋಪ; ಮಧ್ಯಪ್ರವೇಶಕ್ಕೆ ಲೋಕಭವನ ಕದ ತಟ್ಟಿದ ಬಿಜೆಪಿ, ಸ್ವತಂತ್ರ ತನಿಖೆಗೆ ಮುಂದಾಗುವರೇ?

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸಮಗ್ರ ಘನ ತ್ಯಾಜ್ಯ ನಿರ್ವಹಣಾ...

ಕಸ ವಿಲೇವಾರಿ ಟೆಂಡರ್‍‌ನಲ್ಲಿ ಅಕ್ರಮ; 10,000 ಕೋಟಿ ಕಿಕ್‌ ಬ್ಯಾಕ್‌ ಆರೋಪ, ಹೈಕಮಾಂಡ್ ಕಪ್ಪದ ಟೆಂಡರ್, ರಾಜ್ಯಪಾಲರಿಗೆ ದೂರು, ದಿ ಫೈಲ್ ವರದಿ ಬೆನ್ನಲ್ಲೇ ತುಟಿ ಬಿಚ್ಚಿದ ಆರ್ ಅಶೋಕ್

ಬೆಂಗಳೂರು; ಸಮಗ್ರ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್‌ ಯೋಜಿಸಿದ್ದ ಟೆಂಡರ್ ಪ್ಯಾಕೇಜ್‌ಗಳಲ್ಲಿ...

ಒಂದು ರಾಷ್ಟ್ರ ಒಂದು ಚುನಾವಣೆ; ಸಂಸತ್‌ ಜಂಟಿ ಸಮಿತಿಗೆ 5 ತಿಂಗಳಾದರೂ ಮಾಹಿತಿ ನೀಡದ ರಾಜ್ಯ

ಬೆಂಗಳೂರು; ಒಂದು ರಾಷ್ಟ್ರ ಒಂದು ಚುನಾವಣೆಗೆ ಸಂಬಂಧಿಸಿದಂತೆ ಸಂವಿಧಾನದ 129ನೇ ತಿದ್ದುಪಡಿ...
Please Scan to make Your Contribution

Topics

ಕಸ ವಿಲೇವಾರಿ ಟೆಂಡರ್‍‌ನಲ್ಲಿ ಅಕ್ರಮ; 10,000 ಕೋಟಿ ಕಿಕ್‌ ಬ್ಯಾಕ್‌ ಆರೋಪ, ಹೈಕಮಾಂಡ್ ಕಪ್ಪದ ಟೆಂಡರ್, ರಾಜ್ಯಪಾಲರಿಗೆ ದೂರು, ದಿ ಫೈಲ್ ವರದಿ ಬೆನ್ನಲ್ಲೇ ತುಟಿ ಬಿಚ್ಚಿದ ಆರ್ ಅಶೋಕ್

ಬೆಂಗಳೂರು; ಸಮಗ್ರ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್‌ ಯೋಜಿಸಿದ್ದ ಟೆಂಡರ್ ಪ್ಯಾಕೇಜ್‌ಗಳಲ್ಲಿ...

ಒಂದು ರಾಷ್ಟ್ರ ಒಂದು ಚುನಾವಣೆ; ಸಂಸತ್‌ ಜಂಟಿ ಸಮಿತಿಗೆ 5 ತಿಂಗಳಾದರೂ ಮಾಹಿತಿ ನೀಡದ ರಾಜ್ಯ

ಬೆಂಗಳೂರು; ಒಂದು ರಾಷ್ಟ್ರ ಒಂದು ಚುನಾವಣೆಗೆ ಸಂಬಂಧಿಸಿದಂತೆ ಸಂವಿಧಾನದ 129ನೇ ತಿದ್ದುಪಡಿ...

ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌, ಸಿಎಂ ಜನಸ್ಪಂದನ, ಸಿ ಎಸ್ ಕಚೇರಿಯಲ್ಲಿ ಇತ್ಯರ್ಥವಾಗದ 37,782 ಅರ್ಜಿಗಳು; ನಿಷ್ಕ್ರೀಯವಾಯಿತೇ ಆಡಳಿತ?

ಬೆಂಗಳೂರು;  ಸಾರ್ವಜನಿಕರು ವಿವಿಧ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌,...

ಅತಿಥಿ ಶಿಕ್ಷಕರ ನೇಮಕ ಪದ್ಧತಿಗೆ ರಾಜ್ಯ ಶಿಕ್ಷಣ ನೀತಿ ಆಯೋಗ ವಿರೋಧ; ಪದ್ದತಿ ಸಂಪೂರ್ಣವಾಗಿ ತೆಗೆದು ಹಾಕದೇ ವರದಿಯನ್ನೇ ಮೂಲೆಗುಂಪು ಮಾಡಿತೇ ಸರ್ಕಾರ?

ಬೆಂಗಳೂರು; 'ರಾಜ್ಯದಲ್ಲಿ   ಬೇರೂರಿದ ಗುತ್ತಿಗೆ ಶಿಕ್ಷಕ ನೇಮಕ ಪದ್ಧತಿಯಿಂದಾಗಿ  ವೃತ್ತಿಪರತೆಯ ಕೊರತೆ...

ಕಸ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಬಹುಕೋಟಿ ಮೊತ್ತದ ಹಗರಣ; ಯತ್ನಾಳ್, ಶೋಭಾ ನಂತರ ಧೀರಜ್ ಮುನಿರಾಜು ದೂರು, ತುಟಿಬಿಚ್ಚದ ಪ್ರತಿಪಕ್ಷ ನಾಯಕ ಅಶೋಕ್

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬೆಂಗಳೂರಿನ ಸಮಗ್ರ ಘನತ್ಯಾಜ್ಯ ನಿರ್ವಹಣೆಗೆ...

Related Articles

Popular Categories

error: Content is protected !!