Wednesday | April 15, 2026 |

ಸಹಭಾಗಿ; ‘ದಿ ಫೈಲ್‌’ ವರದಿಯನ್ನು ವಿಸ್ತರಿಸಿದ ವಿಜಯ ಕರ್ನಾಟಕ

ಬೆಂಗಳೂರು; ನೀಲಗಿರಿ ಬೆಳೆಯುವುದನ್ನು ನಿಷೇಧಿಸಿ ಹೊರಡಿಸಿದ್ದ ಅಧಿಸೂಚನೆಯನ್ನು ಹಿಂಪಡೆದುಕೊಳ್ಳಲು ನಿರ್ಣಯಿಸಿರುವ ರಾಜ್ಯ ಬಿಜೆಪಿ ಸರ್ಕಾರದ ಧೋರಣೆಯನ್ನು ‘ದಿ ಫೈಲ್‌’ ನವೆಂಬರ್‌ 6ರಂದು ದಾಖಲೆ ಸಮೇತ ವರದಿ ಪ್ರಕಟಿಸಿತ್ತು.

‘ದಿ ಫೈಲ್‌’ ವರದಿ ಮಾಡಿದ ಬೆನ್ನಲ್ಲೇ ವಿಜಯಕರ್ನಾಟಕ ಇಂದಿನ ಆವೃತ್ತಿಯಲ್ಲಿ ‘ನೀಲಗಿರಿ ನಿಷೇಧ ತೆರವಿಗೆ ತರಾತುರಿ’ ಶೀರ್ಷಿಕೆಯಡಿಯಲ್ಲಿ ವರದಿ ಪ್ರಕಟಿಸುವ ಮೂಲಕ ನಮ್ಮ ವರದಿಯನ್ನು ಇನ್ನಷ್ಟು ವಿಸ್ತರಿಸುವ ಮೂಲಕ ಸಹಭಾಗಿ ಪತ್ರಿಕೋದ್ಯಮವನ್ನು ಮುಂದುವರೆಸಿದೆ. ಪರಿಸರ ವಿರೋಧಿ ಮತ್ತು ಜನ ವಿರೋಧಿ ನಿರ್ಣಯಗಳನ್ನು ಕೈಗೊಳ್ಳುವ ಸರ್ಕಾರಗಳ ವಿರುದ್ಧ ಸಹಭಾಗಿ ಪತ್ರಿಕೋದ್ಯಮ ಇನ್ನಷ್ಟು ವಿಸ್ತರಣೆಯಾಗಬೇಕು ಎಂಬುದೇ ‘ದಿ ಫೈಲ್‌’ ಆಶಯ.

ನೀಲಗಿರಿ ನಿಷೇಧ ಆದೇಶ ಹಿಂತೆಗೆತಕ್ಕೆ ನಿರ್ಣಯ; ನಿರ್ಬಂಧ ತೆಗೆದರೆ ಮಲೆನಾಡಿಗೆ ಆಘಾತ

ನೀಲಗಿರಿ ಬೆಳೆಯುವುದನ್ನು ನಿಷೇಧಿಸಿ ಹಿಂದಿನ ಕಾಂಗ್ರೆಸ್‌ ಹೊರಡಿಸಿದ್ದ ಅಧಿಸೂಚನೆಯನ್ನು ಹಿಂಪಡೆದುಕೊಳ್ಳಲು ರಾಜ್ಯ ಬಿಜೆಪಿ ಸರ್ಕಾರ ಮುಂದಾಗಿದೆ. ಅಂತರ್ಜಲ ಮಟ್ಟ ಹೆಚ್ಚಿರುವ ಮಲೆನಾಡಿನ ಪ್ರದೇಶಗಳಲ್ಲಿ ಈ ನಿರ್ಬಂಧನೆಯನ್ನು ತೆಗೆದು ಹಾಕುವ ಬಗ್ಗೆ ಪರಿಶೀಲಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಕೂಡ ಇಲಾಖೆ ಅಧಿಕಾರಿಗಳಿಗೆ 4 ತಿಂಗಳ ಹಿಂದೆಯೇ ಹೊರಡಿಸಿದ್ದ ಆದೇಶವನ್ನು ತರಾತುರಿಯಲ್ಲಿ ಅನುಷ್ಠಾನಗೊಳಿಸಲು ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳು ಮುಂದಾಗಿದ್ಧಾರೆ.

ಎಂಪಿಎಂ ಘಟಕದ ಪುನರುಜ್ಜೀವನ ಮತ್ತು ಅನಾನುಕೂಲತೆ ಕುರಿತು 2020ರ ಜುಲೈ 14ರಂದು ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದಿದ್ದ ಸಭೆ ನಡವಳಿ ಅಧರಿಸಿ ವರದಿ ಮಾಡಿದ್ದ ‘ದಿ ಫೈಲ್‌’ ಈ ಸಭೆಯಲ್ಲೇ ನೀಲಗಿರಿ ಬೆಳೆಯುವುದನ್ನು ನಿಷೇಧಿಸಲು ಹೊರಡಿಸಿದ್ದ ಅಧಿಸೂಚನೆಯನ್ನು ಹಿಂಪಡೆದುಕೊಳ್ಳುವ ಸಂಬಂಧ ನಡೆದಿದ್ದ ಚರ್ಚೆಯನ್ನು ಬಹಿರಂಗಗೊಳಿಸಿತ್ತು.

‘ರಾಜ್ಯದಲ್ಲಿ ನೀಲಗಿರಿ ಬೆಳೆಯುವುದನ್ನು ನಿಷೇಧಿಸುವ ಬಗ್ಗೆ ಇರುವ ಆದೇಶವನ್ನು ಹಿಂಪಡೆಯುವ ಬಗ್ಗೆ ಚರ್ಚಿಸಲಾಗಿದೆ. ಹೆಚ್ಚು ಮಳೆಯಾಗುವ ಮತ್ತು ಅಂತರ್ಜಲ ಮಟ್ಟ ಹೆಚ್ಚಿರುವ ಮಲೆನಾಡಿನ ಪ್ರದೇಶಗಳಿಗೆ ಈ ನಿರ್ಬಂಧನೆಯನ್ನು ತೆಗೆದುಹಾಕುವ ಬಗ್ಗೆ ಪರಿಶೀಲಿಸಬೇಕು ಎಂದು ಮುಖ್ಯಮಂತ್ರಿ ಹೊರಡಿಸಿದ್ದ ಆದೇಶವನ್ನು ಮುನ್ನೆಲೆಗೆ ತಂದಿತ್ತು.

‘ರಾಜ್ಯದಲ್ಲಿ ನೀಲಗಿರಿ ಬೆಳೆಯುವುದನ್ನು ನಿಷೇಧಿಸಲು ಬಲವಾದ ಕಾರಣಗಳು ಇಲ್ಲದಿರುವ ಬಗ್ಗೆ ಹಾಗೂ ಕರ್ನಾಟಕವನ್ನು ಹೊರತುಪಡಿಸಿ ದೇಶದ ಇತರೆ ರಾಜ್ಯಗಳಲ್ಲಿ ಎಲ್ಲಿಯೂ ನೀಲಗಿರಿ ಬೆಳೆಸಲು ನಿಷೇಧವಿಲ್ಲ,’ ಎಂಬುದನ್ನು ಸಭೆಯಲ್ಲಿ ಪ್ರಸ್ತಾಪವಾಗಿತ್ತು.

‘ನೀಲಗಿರಿ ಬೆಳೆಸುವುದರಿಂದ ಅಂತರ್ಜಲ ಮಟ್ಟಕ್ಕೆ ಯಾವುದೇ ಹಾನಿಯಾಗಿರುವ ಪ್ರಸಂಗಗಳು ಇಲ್ಲದಿರುವುದರಿಂದ ರಾಜ್ಯಾದ್ಯಂತ ನೀಲಗಿರಿ ಬೆಳೆಸಲು ಇರುವ ನಿಷೇಧ ತೆಗೆದುಹಾಕಲು ಒಮ್ಮತದಿಂದ ಅಭಿಪ್ರಾಯ ಕೈಗೊಳ್ಳಲಾಗಿದೆ,’ ಎಂದು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬರೆದಿರುವ ಪತ್ರವನ್ನು ಬಹಿರಂಗಗೊಳಿಸಿತ್ತು.

Hot this week

ಪಿಂಚಣಿಗೆ ಕೇಳಿದ್ದು 5.63 ಕೋಟಿ, ಬಜೆಟ್‌ನಲ್ಲಿ ನಿಗದಿಪಡಿಸಿದ್ದು ಕೇವಲ 1 ಲಕ್ಷ; ಆರ್ಥಿಕ ಮುಗ್ಗಟ್ಟಿಗೆ ಸಿಲುಕಲಿದೆಯೇ ವಿಶ್ವವಿದ್ಯಾಲಯ?

ಬೆಂಗಳೂರು; ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಪಿಂಚಣಿ  ಪಾವತಿಸಲು ವಿಶ್ವವಿದ್ಯಾಲಯಗಳು ಕೇಳಿದ್ದ ಸಹಾಯಾನುದಾನದ...

ಗ್ಯಾರಂಟಿ ಯೋಜನೆಗಳಿಗೆ ಜಾಹೀರಾತು; 3 ವರ್ಷದಲ್ಲಿ 348.25 ಕೋಟಿ ವೆಚ್ಚ

ಬೆಂಗಳೂರು; ಗ್ಯಾರಂಟಿ ಯೋಜನೆ ಜಾರಿಯಾದ ದಿನದಿಂದ ಜನವರಿ ಅಂತ್ಯದವರೆಗೆ ಜಾಹೀರಾತುಗಳ ಮೂಲಕ...

11,721 ಟ್ರಾನ್ಸ್‌ಫಾರ್ಮ್‌ರ್ ಖರೀದಿ; ಕೇರಳ ವಿದ್ಯುತ್ ಕಂಪನಿಗೆ 4 ಜಿ ವಿನಾಯಿತಿ ಅಧಿಸೂಚನೆ, ಕವಿಕಾಕ್ಕೆ 174.73 ಕೋಟಿ ಆದಾಯ ತಪ್ಪಿಸಿತೇ ಕಾಂಗ್ರೆಸ್ ಸರ್ಕಾರ?

ಬೆಂಗಳೂರು;  ರಾಜ್ಯದ ಬೆಂಗಳೂರು, ಹುಬ್ಬಳ್ಳಿ, ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗಳಿಗೆ ಅವಶ್ಯಕವಿರುವ 11,721...

ಗಾಲ್ಫ್‌ ಅಸೋಸಿಯೇಷನ್‌ನ ಜಮೀನಿನ ಸರ್ವೇ, ಆದಾಯ ಪರಿಶೀಲನೆ; ಜಿಬಿಎ ಮುಖ್ಯ ಆಯುಕ್ತ, ಜಿಲ್ಲಾಧಿಕಾರಿಗೆ ಪತ್ರ ಬರೆದ ಸರ್ಕಾರ

ಬೆಂಗಳೂರು;  ಕರ್ನಾಟಕ ಗಾಲ್ಫ್‌ ಅಸೋಸಿಯೇಷನ್ ಸಂಸ್ಥೆಗೆ ನೀಡಲಾಗಿರುವ ಜಮೀನಿನ ಸರ್ವೇ ನಡೆಸಲು...

Topics

ಪಿಂಚಣಿಗೆ ಕೇಳಿದ್ದು 5.63 ಕೋಟಿ, ಬಜೆಟ್‌ನಲ್ಲಿ ನಿಗದಿಪಡಿಸಿದ್ದು ಕೇವಲ 1 ಲಕ್ಷ; ಆರ್ಥಿಕ ಮುಗ್ಗಟ್ಟಿಗೆ ಸಿಲುಕಲಿದೆಯೇ ವಿಶ್ವವಿದ್ಯಾಲಯ?

ಬೆಂಗಳೂರು; ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಪಿಂಚಣಿ  ಪಾವತಿಸಲು ವಿಶ್ವವಿದ್ಯಾಲಯಗಳು ಕೇಳಿದ್ದ ಸಹಾಯಾನುದಾನದ...

ಗ್ಯಾರಂಟಿ ಯೋಜನೆಗಳಿಗೆ ಜಾಹೀರಾತು; 3 ವರ್ಷದಲ್ಲಿ 348.25 ಕೋಟಿ ವೆಚ್ಚ

ಬೆಂಗಳೂರು; ಗ್ಯಾರಂಟಿ ಯೋಜನೆ ಜಾರಿಯಾದ ದಿನದಿಂದ ಜನವರಿ ಅಂತ್ಯದವರೆಗೆ ಜಾಹೀರಾತುಗಳ ಮೂಲಕ...

11,721 ಟ್ರಾನ್ಸ್‌ಫಾರ್ಮ್‌ರ್ ಖರೀದಿ; ಕೇರಳ ವಿದ್ಯುತ್ ಕಂಪನಿಗೆ 4 ಜಿ ವಿನಾಯಿತಿ ಅಧಿಸೂಚನೆ, ಕವಿಕಾಕ್ಕೆ 174.73 ಕೋಟಿ ಆದಾಯ ತಪ್ಪಿಸಿತೇ ಕಾಂಗ್ರೆಸ್ ಸರ್ಕಾರ?

ಬೆಂಗಳೂರು;  ರಾಜ್ಯದ ಬೆಂಗಳೂರು, ಹುಬ್ಬಳ್ಳಿ, ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗಳಿಗೆ ಅವಶ್ಯಕವಿರುವ 11,721...

ಗಾಲ್ಫ್‌ ಅಸೋಸಿಯೇಷನ್‌ನ ಜಮೀನಿನ ಸರ್ವೇ, ಆದಾಯ ಪರಿಶೀಲನೆ; ಜಿಬಿಎ ಮುಖ್ಯ ಆಯುಕ್ತ, ಜಿಲ್ಲಾಧಿಕಾರಿಗೆ ಪತ್ರ ಬರೆದ ಸರ್ಕಾರ

ಬೆಂಗಳೂರು;  ಕರ್ನಾಟಕ ಗಾಲ್ಫ್‌ ಅಸೋಸಿಯೇಷನ್ ಸಂಸ್ಥೆಗೆ ನೀಡಲಾಗಿರುವ ಜಮೀನಿನ ಸರ್ವೇ ನಡೆಸಲು...

866.59 ಕೋಟಿ ರು ಮೊತ್ತದ 399 ಬಳಕೆ ಪ್ರಮಾಣ ಪತ್ರಗಳ ಸಲ್ಲಿಕೆಗೆ ಬಾಕಿ ಉಳಿಸಿಕೊಂಡ ಇಲಾಖೆಗಳು; ಅನುದಾನ ದುರುಪಯೋಗ ಸಾಧ್ಯತೆ?

ಬೆಂಗಳೂರು; ರಾಜ್ಯದ ಹಲವು ಇಲಾಖೆಗಳು ಬಳಕೆ ಪ್ರಮಾಣ ಪತ್ರಗಳನ್ನು ಸಲ್ಲಿಕೆಯಲ್ಲಿ ತೀವ್ರ...

ಸರ್ಕಾರಿ ಸೇವೆ; ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪ್ರಾತಿನಿಧ್ಯ ಎರಡು ವರ್ಷದಲ್ಲಿ ಇಳಿಕೆಯಾಗಿದೆಯೇ?

ಬೆಂಗಳೂರು; ರಾಜ್ಯ ಸರ್ಕಾರದ ಶಿಕ್ಷಣ, ಒಳಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

Related Articles

Popular Categories

error: Content is protected !!