Wednesday | August 12, 2026 |

ಉಲ್ಲಂಘನೆ; ವನ್ಯಜೀವಿ ಮಂಡಳಿಯಲ್ಲಿ ಪರಿಶಿಷ್ಟ ವರ್ಗಕ್ಕೆ ಸಿಗದ ಪ್ರಾತಿನಿಧ್ಯ

ಬೆಂಗಳೂರು; ರಾಜ್ಯ ವನ್ಯಜೀವಿ ಮಂಡಳಿಗೆ ಅಧಿಕಾರೇತರ ಸದಸ್ಯರನ್ನು ಪ್ರಸಕ್ತ ಅವಧಿಗೆ ನಾಮನಿರ್ದೇಶನ ಮಾಡಿರುವ ಬಿಜೆಪಿ ಸರ್ಕಾರ, ಪರಿಶಿಷ್ಟ ಬುಡಕಟ್ಟು ವರ್ಗಕ್ಕೆ ಪ್ರಾತಿನಿಧ್ಯವನ್ನೇ ನೀಡದೇ ವನ್ಯಜೀವಿ ಸಂರಕ್ಷಣಾ ಕಾಯ್ದೆಯನ್ನು ಉಲ್ಲಂಘಿಸಿರುವ ಆರೋಪಕ್ಕೆ ಗುರಿಯಾಗಿದೆ.

ಬಿಜೆಪಿಯೊಂದಿಗೆ ನೇರವಾಗಿ ಗುರುತಿಸಿಕೊಂಡರವರಿಗೆ ಮತ್ತು ಸಚಿವರ ಶಿಫಾರಸ್ಸಿಗೆ ಮನ್ನಣೆ ನೀಡಿರುವ ಬೆನ್ನಲ್ಲೇ ಪರಿಶಿಷ್ಟ ಬುಡಕಟ್ಟು ವರ್ಗಕ್ಕೆ ಪ್ರಾತಿನಿಧ್ಯವನ್ನೇ ನೀಡದಿರುವ ವಿಚಾರ ಇದೀಗ ಮುನ್ನೆಲೆಗೆ ಬಂದಿದೆ. ಹಾಗೆಯೇ ನಿರ್ದಿಷ್ಟ ಸಮುದಾಯಕ್ಕೆ ಸೇರಿದವರಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.

ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಸೆಕ್ಷನ್‌ 6(1)ರ ಪ್ರಕಾರ ವನ್ಯಜೀವಿ ಮಂಡಳಿಯಲ್ಲಿ ಪರಿಶಿಷ್ಟ ಬುಡಕಟ್ಟು ವರ್ಗಕ್ಕೆ ಸೇರಿದವರಿರಬೇಕು. ಅದರಂತೆ ಈ ಹಿಂದಿನ ಕಾಂಗ್ರೆಸ್‌ ಸರ್ಕಾರವು ಅವಧಿಯಲ್ಲಿ 10 ಮಂದಿಯಲ್ಲಿ ಪರಿಶಿಷ್ಟ ಬುಡಕಟ್ಟು ವರ್ಗಕ್ಕೆ ಸೇರಿದ್ದ ವಿರಾಜಪೇಟೆ ತಾಲೂಕಿನ ಜಂಗಲ್‌ ಹಾಡಿಯ ಪಿ ಎಂ ಸುಬ್ರು ಎಂಬುವರನ್ನು ಮಂಡಳಿಗೆ ನಾಮನಿರ್ದೇಶನ ಮಾಡಿ ಪ್ರಾತಿನಿಧ್ಯ ನೀಡಲಾಗಿತ್ತು. ಆದರೆ ಬಿಜೆಪಿ ಸರ್ಕಾರವು ಬುಡಕಟ್ಟು ವರ್ಗಕ್ಕೆ ಪ್ರಾತಿನಿಧ್ಯ ನೀಡದೇ ವಂಚಿಸಿದೆ ಎಂಬ ಬಲವಾದ ಆರೋಪವೂ ಕೇಳಿ ಬಂದಿದೆ.

ಮಂಡಳಿಗೆ ವಿಧಾನಸಭೆ ಸದಸ್ಯರಾದ ರವಿಸುಬ್ರಹ್ಮಣ್ಯ ಮತ್ತು ಪೂರ್ಣಿಮಾ ಶ್ರೀನಿವಾಸ್‌ ಅವರನ್ನು ಹಾಗೂ ವಿಧಾನಪರಿಷತ್‌ ಸದಸ್ಯ ಶಾಂತರಾಮ ಸಿದ್ದಿ ಅವರನ್ನು ನಾಮನಿರ್ದೆಶನ ಮಾಡಲಾಗಿದೆ. ಈ ಪೈಕಿ ಶಾಂತರಾಮ ಸಿದ್ದಿ ಅವರನ್ನು ವಿಧಾನಮಂಡಲದ ಕೋಟಾದಡಿಯಲ್ಲಿ ನಾಮನಿರ್ದೇಶನ ಮಾಡಲಾಗಿದೆಯೇ ಹೊರತು ಪರಿಶಿಷ್ಟ ಬುಡಕಟ್ಟು ವರ್ಗದಡಿಯಲ್ಲಿ ನಾಮನಿರ್ದೇಶನ ಮಾಡಿಲ್ಲ ಎಂದು ಅಧಿಕಾರಿಯೊಬ್ಬರು ‘ದಿ ಫೈಲ್‌’ಗೆ ತಿಳಿಸಿದ್ದಾರೆ.

ಅಧ್ಯಕ್ಷರು ಮತ್ತು ಉಪಾಧ್ಯಕ್ಷರನ್ನು ಹೊರತುಪಡಿಸಿದಂತೆ ಮಂಡಳಿಗೆ ನಾಮನಿರ್ದೇಶನಗೊಂಡಿರುವವರ ಪೈಕಿ ಚೇತನ್‌ ಬಿ ದೊಡ್ಡಬಳ್ಳಾಪುರ, ಅಲೋಕ್‌ ವಿಶ್ವನಾಥ್‌, ದಿನೇಶ್‌ ಸಿಂಗಿ ಅವರನ್ನು ಬಿಜೆಪಿ ಸಚಿವರು ಶಿಫಾರಸ್ಸು ಮಾಡಿದ್ದಾರೆ. ಉಳಿದಂತೆ ರವಿಸುಬ್ರಹ್ಮಣ್ಯ, ಪೂರ್ಣಿಮಾ ಶ್ರೀನಿವಾಸ್‌ ಬಿಜೆಪಿ ಶಾಸಕರು.

ಬೇಲೇಕೇರಿ ಅದಿರು ರಫ್ತು ಪ್ರಕರಣದಲ್ಲಿ ಆರೋಪಕ್ಕೆ ಗುರಿಯಾಗಿರುವ ಭಾರತ್‌ ಮೈನ್ಸ್‌ ಅಂಡ್‌ ಮಿನರಲ್ಸ್‌ ಮತ್ತು ಬಿಎಂಎಂ ಇಸ್ಪಾತ್‌ ಲಿಮಿಟೆಡ್‌ನ ಸಿಇಒ ಮತ್ತು ವ್ಯವಸ್ಥಾಪಕ ನಿರ್ದೇಶಕ ದಿನೇಶ್‌ ಸಿಂಗಿ ಅವರನ್ನು ವನ್ಯಜೀವಿ ಮಂಡಳಿಗೆ ನಾಮನಿರ್ದೇಶನ ಮಾಡಲು ಉಪ ಮುಖ್ಯಮಂತ್ರಿ ಡಾ ಸಿ ಎನ್‌ ಅಶ್ವಥ್‌ನಾರಾಯಣ್‌ ಅವರು ಮಾಡಿದ್ದ ಶಿಫಾರಸ್ಸು ವಿವಾದಕ್ಕೆ ದಾರಿಮಾಡಿಕೊಟ್ಟಿತ್ತು.

Hot this week

ಚಿಲುಮೆ ಪ್ರಕರಣ; ನಿರ್ದಿಷ್ಟ, ಖಚಿತ, ಸ್ಪಷ್ಟವಾಗಿ ಕೋರಿದ್ದ ಮಾಹಿತಿಯೇ ‘ಮಾಹಿತಿ ವ್ಯಾಖ್ಯಾನದಡಿಯಲ್ಲಿಲ್ಲವೆಂದ’ ಇಲಾಖೆ, ಮತದಾರರ ದತ್ತಾಂಶ ಕಳ್ಳತನ ಮುಚ್ಚಿ ಹಾಕಿತೇ ಕಾಂಗ್ರೆಸ್?

ಬೆಂಗಳೂರು;  ಮತದಾರರ ಪಟ್ಟಿ ಅಂತಿಮಗೊಳಿಸುವ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳಲು ಹಿಂದಿನ ಬಿಜೆಪಿ ಸರ್ಕಾರವು...

ಗಣಿ ಗುತ್ತಿಗೆಯ 14 ಬ್ಲಾಕ್‌ಗಳ ಹರಾಜಿಗೆ ತರಾತುರಿ; ಗಣಿ ಅಧಿಕಾರಿಗಳ ಕುತ್ತಿಗೆ ಮೇಲೆ ಕುಳಿತ ಮುಖ್ಯಮಂತ್ರಿ?

ಬೆಂಗಳೂರು; ರಾಮಗಢ್, ದೋಣಿಮಲೈ, ಡೆಕ್ಕನ್ ಮೈನಿಂಗ್, ಕುಮಾರಸ್ವಾಮಿ ಬ್ಲಾಕ್, ಹನುಮಾನ್ ಮೈನ್ಸ್‌...

ಶೇ.60ರಷ್ಟು ವಸೂಲಾಗದ ತೆರಿಗೆಯೇತರ ಆದಾಯ, ತೆರಿಗೆ ಪಾವತಿಯಲ್ಲಿ ದುರ್ಬಳಕೆ; ಜಮೆಯಾಗದ 13.07 ಕೋಟಿ ತೆರಿಗೆ ಹಣ, 1,478 ಪಂಚಾಯ್ತಿಗಳಲ್ಲಿ ಅಕ್ರಮ?

ಬೆಂಗಳೂರು;  ರಾಜ್ಯದ ಗ್ರಾಮ ಪಂಚಾಯ್ತಿಗಳು  ಶೇಕಡ 60ರಷ್ಟು  ತೆರಿಗೆಯೇತರ ಆದಾಯವನ್ನು ವಸೂಲಿ...
Please Scan to make Your Contribution

Topics

ಗಣಿ ಗುತ್ತಿಗೆಯ 14 ಬ್ಲಾಕ್‌ಗಳ ಹರಾಜಿಗೆ ತರಾತುರಿ; ಗಣಿ ಅಧಿಕಾರಿಗಳ ಕುತ್ತಿಗೆ ಮೇಲೆ ಕುಳಿತ ಮುಖ್ಯಮಂತ್ರಿ?

ಬೆಂಗಳೂರು; ರಾಮಗಢ್, ದೋಣಿಮಲೈ, ಡೆಕ್ಕನ್ ಮೈನಿಂಗ್, ಕುಮಾರಸ್ವಾಮಿ ಬ್ಲಾಕ್, ಹನುಮಾನ್ ಮೈನ್ಸ್‌...

ಶೇ.60ರಷ್ಟು ವಸೂಲಾಗದ ತೆರಿಗೆಯೇತರ ಆದಾಯ, ತೆರಿಗೆ ಪಾವತಿಯಲ್ಲಿ ದುರ್ಬಳಕೆ; ಜಮೆಯಾಗದ 13.07 ಕೋಟಿ ತೆರಿಗೆ ಹಣ, 1,478 ಪಂಚಾಯ್ತಿಗಳಲ್ಲಿ ಅಕ್ರಮ?

ಬೆಂಗಳೂರು;  ರಾಜ್ಯದ ಗ್ರಾಮ ಪಂಚಾಯ್ತಿಗಳು  ಶೇಕಡ 60ರಷ್ಟು  ತೆರಿಗೆಯೇತರ ಆದಾಯವನ್ನು ವಸೂಲಿ...

80,950 ಸ್ವ ಸಹಾಯ ಗುಂಪುಗಳಿಂದ 1,758.53 ಕೋಟಿ ರುಪಾಯಿ ಸಾಲದ ಹೊರ ಬಾಕಿ; ವಸೂಲಾತಿಯಲ್ಲಿ ವಿಫಲ

ಬೆಂಗಳೂರು; ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಮೂಲಕ ಸಾಲ...

Related Articles

Popular Categories

error: Content is protected !!