Thursday | July 23, 2026 |

ಉಲ್ಲಂಘನೆ; ವನ್ಯಜೀವಿ ಮಂಡಳಿಯಲ್ಲಿ ಪರಿಶಿಷ್ಟ ವರ್ಗಕ್ಕೆ ಸಿಗದ ಪ್ರಾತಿನಿಧ್ಯ

ಬೆಂಗಳೂರು; ರಾಜ್ಯ ವನ್ಯಜೀವಿ ಮಂಡಳಿಗೆ ಅಧಿಕಾರೇತರ ಸದಸ್ಯರನ್ನು ಪ್ರಸಕ್ತ ಅವಧಿಗೆ ನಾಮನಿರ್ದೇಶನ ಮಾಡಿರುವ ಬಿಜೆಪಿ ಸರ್ಕಾರ, ಪರಿಶಿಷ್ಟ ಬುಡಕಟ್ಟು ವರ್ಗಕ್ಕೆ ಪ್ರಾತಿನಿಧ್ಯವನ್ನೇ ನೀಡದೇ ವನ್ಯಜೀವಿ ಸಂರಕ್ಷಣಾ ಕಾಯ್ದೆಯನ್ನು ಉಲ್ಲಂಘಿಸಿರುವ ಆರೋಪಕ್ಕೆ ಗುರಿಯಾಗಿದೆ.

ಬಿಜೆಪಿಯೊಂದಿಗೆ ನೇರವಾಗಿ ಗುರುತಿಸಿಕೊಂಡರವರಿಗೆ ಮತ್ತು ಸಚಿವರ ಶಿಫಾರಸ್ಸಿಗೆ ಮನ್ನಣೆ ನೀಡಿರುವ ಬೆನ್ನಲ್ಲೇ ಪರಿಶಿಷ್ಟ ಬುಡಕಟ್ಟು ವರ್ಗಕ್ಕೆ ಪ್ರಾತಿನಿಧ್ಯವನ್ನೇ ನೀಡದಿರುವ ವಿಚಾರ ಇದೀಗ ಮುನ್ನೆಲೆಗೆ ಬಂದಿದೆ. ಹಾಗೆಯೇ ನಿರ್ದಿಷ್ಟ ಸಮುದಾಯಕ್ಕೆ ಸೇರಿದವರಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.

ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಸೆಕ್ಷನ್‌ 6(1)ರ ಪ್ರಕಾರ ವನ್ಯಜೀವಿ ಮಂಡಳಿಯಲ್ಲಿ ಪರಿಶಿಷ್ಟ ಬುಡಕಟ್ಟು ವರ್ಗಕ್ಕೆ ಸೇರಿದವರಿರಬೇಕು. ಅದರಂತೆ ಈ ಹಿಂದಿನ ಕಾಂಗ್ರೆಸ್‌ ಸರ್ಕಾರವು ಅವಧಿಯಲ್ಲಿ 10 ಮಂದಿಯಲ್ಲಿ ಪರಿಶಿಷ್ಟ ಬುಡಕಟ್ಟು ವರ್ಗಕ್ಕೆ ಸೇರಿದ್ದ ವಿರಾಜಪೇಟೆ ತಾಲೂಕಿನ ಜಂಗಲ್‌ ಹಾಡಿಯ ಪಿ ಎಂ ಸುಬ್ರು ಎಂಬುವರನ್ನು ಮಂಡಳಿಗೆ ನಾಮನಿರ್ದೇಶನ ಮಾಡಿ ಪ್ರಾತಿನಿಧ್ಯ ನೀಡಲಾಗಿತ್ತು. ಆದರೆ ಬಿಜೆಪಿ ಸರ್ಕಾರವು ಬುಡಕಟ್ಟು ವರ್ಗಕ್ಕೆ ಪ್ರಾತಿನಿಧ್ಯ ನೀಡದೇ ವಂಚಿಸಿದೆ ಎಂಬ ಬಲವಾದ ಆರೋಪವೂ ಕೇಳಿ ಬಂದಿದೆ.

ಮಂಡಳಿಗೆ ವಿಧಾನಸಭೆ ಸದಸ್ಯರಾದ ರವಿಸುಬ್ರಹ್ಮಣ್ಯ ಮತ್ತು ಪೂರ್ಣಿಮಾ ಶ್ರೀನಿವಾಸ್‌ ಅವರನ್ನು ಹಾಗೂ ವಿಧಾನಪರಿಷತ್‌ ಸದಸ್ಯ ಶಾಂತರಾಮ ಸಿದ್ದಿ ಅವರನ್ನು ನಾಮನಿರ್ದೆಶನ ಮಾಡಲಾಗಿದೆ. ಈ ಪೈಕಿ ಶಾಂತರಾಮ ಸಿದ್ದಿ ಅವರನ್ನು ವಿಧಾನಮಂಡಲದ ಕೋಟಾದಡಿಯಲ್ಲಿ ನಾಮನಿರ್ದೇಶನ ಮಾಡಲಾಗಿದೆಯೇ ಹೊರತು ಪರಿಶಿಷ್ಟ ಬುಡಕಟ್ಟು ವರ್ಗದಡಿಯಲ್ಲಿ ನಾಮನಿರ್ದೇಶನ ಮಾಡಿಲ್ಲ ಎಂದು ಅಧಿಕಾರಿಯೊಬ್ಬರು ‘ದಿ ಫೈಲ್‌’ಗೆ ತಿಳಿಸಿದ್ದಾರೆ.

ಅಧ್ಯಕ್ಷರು ಮತ್ತು ಉಪಾಧ್ಯಕ್ಷರನ್ನು ಹೊರತುಪಡಿಸಿದಂತೆ ಮಂಡಳಿಗೆ ನಾಮನಿರ್ದೇಶನಗೊಂಡಿರುವವರ ಪೈಕಿ ಚೇತನ್‌ ಬಿ ದೊಡ್ಡಬಳ್ಳಾಪುರ, ಅಲೋಕ್‌ ವಿಶ್ವನಾಥ್‌, ದಿನೇಶ್‌ ಸಿಂಗಿ ಅವರನ್ನು ಬಿಜೆಪಿ ಸಚಿವರು ಶಿಫಾರಸ್ಸು ಮಾಡಿದ್ದಾರೆ. ಉಳಿದಂತೆ ರವಿಸುಬ್ರಹ್ಮಣ್ಯ, ಪೂರ್ಣಿಮಾ ಶ್ರೀನಿವಾಸ್‌ ಬಿಜೆಪಿ ಶಾಸಕರು.

ಬೇಲೇಕೇರಿ ಅದಿರು ರಫ್ತು ಪ್ರಕರಣದಲ್ಲಿ ಆರೋಪಕ್ಕೆ ಗುರಿಯಾಗಿರುವ ಭಾರತ್‌ ಮೈನ್ಸ್‌ ಅಂಡ್‌ ಮಿನರಲ್ಸ್‌ ಮತ್ತು ಬಿಎಂಎಂ ಇಸ್ಪಾತ್‌ ಲಿಮಿಟೆಡ್‌ನ ಸಿಇಒ ಮತ್ತು ವ್ಯವಸ್ಥಾಪಕ ನಿರ್ದೇಶಕ ದಿನೇಶ್‌ ಸಿಂಗಿ ಅವರನ್ನು ವನ್ಯಜೀವಿ ಮಂಡಳಿಗೆ ನಾಮನಿರ್ದೇಶನ ಮಾಡಲು ಉಪ ಮುಖ್ಯಮಂತ್ರಿ ಡಾ ಸಿ ಎನ್‌ ಅಶ್ವಥ್‌ನಾರಾಯಣ್‌ ಅವರು ಮಾಡಿದ್ದ ಶಿಫಾರಸ್ಸು ವಿವಾದಕ್ಕೆ ದಾರಿಮಾಡಿಕೊಟ್ಟಿತ್ತು.

Hot this week

ಮುದ್ರಾ ಯೋಜನೆ ಸಾಲದ ಖಾತೆ ತೆರೆಯುವಲ್ಲಿ ಹಿಂದುಳಿದ 8 ಜಿಲ್ಲೆ; ಸಾಲ ನೀಡುವಲ್ಲಿ ಖಾಸಗಿ ಬ್ಯಾಂಕ್‌ಗಳದ್ದೇ ಮೇಲುಗೈ

ಬೆಂಗಳೂರು; ಮುದ್ರಾ ಸಾಲ ಸಹಿತ ವಿವಿಧ ಸ್ವಯಂ ಉದ್ಯಮ ಯೋಜನೆಗಳಡಿ ಕರ್ನಾಟಕ...

ಕರ್ನಾಟಕ ವೈದ್ಯಕೀಯ ಸರಬರಾಜು ನಿಗಮ ವ್ಯವಸ್ಥಾಪಕ ನಿರ್ದೇಶಕರ ಬದಲಾವಣೆಗೆ ಸಚಿವರ ಪಟ್ಟು; ಐಎಎಸ್‌, ಕೆಎಎಸ್‌ಯೇತರ ಅಧಿಕಾರಿ ನೇಮಕಕ್ಕೆ ಮುಂದಾಗಿರುವುದೇಕೆ?

ಬೆಂಗಳೂರು; ತಮಿಳುನಾಡು ಮಾದರಿಯಲ್ಲಿ ಕರ್ನಾಟಕದ ವೈದ್ಯಕೀಯ ಸರಬರಾಜು ನಿಗಮವನ್ನು ಸ್ಥಾಪಿಸಿರುವ ರಾಜ್ಯ...

ರೈಲ್ವೇ ಯೋಜನೆಗಳಿಗೆ ಗ್ರಹಣ; 7,748 ಕೋಟಿ ರು ಅನುದಾನವಿದ್ದರೂ ಬಿರುಸುಗೊಳ್ಳದ ಭೂಸ್ವಾಧೀನ ಪ್ರಕ್ರಿಯೆ, ರಾಜ್ಯದತ್ತಲೇ ಬೊಟ್ಟು ಮಾಡಿದ ಕೇಂದ್ರ ಸರ್ಕಾರ

ಬೆಂಗಳೂರು; ಕರ್ನಾಟಕದಲ್ಲಿ  ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಗೆ ಕೇಂದ್ರ ಸರ್ಕಾರವು  2026-27ನೇ ಸಾಲಿನಲ್ಲಿ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸೇರದ ಭದ್ರಾ ಮೇಲ್ದಂಡೆ ಯೋಜನೆ; ಸಹಾಯಧನ ಬಿಡುಗಡೆ ವಿಳಂಬಕ್ಕೆ ನೆಪವೊಡ್ಡಿದ ಕೇಂದ್ರ

ಬೆಂಗಳೂರು; ರಾಜ್ಯದ ಮಹತ್ವಾಕಾಂಕ್ಷೆ ನೀರಾವರಿ ಯೋಜನೆ ಭದ್ರಾ ಮೇಲ್ದಂಡೆ ಯೋಜನೆಯ ಅಂದಾಜು...
Please Scan to make Your Contribution

Topics

ಕರ್ನಾಟಕ ವೈದ್ಯಕೀಯ ಸರಬರಾಜು ನಿಗಮ ವ್ಯವಸ್ಥಾಪಕ ನಿರ್ದೇಶಕರ ಬದಲಾವಣೆಗೆ ಸಚಿವರ ಪಟ್ಟು; ಐಎಎಸ್‌, ಕೆಎಎಸ್‌ಯೇತರ ಅಧಿಕಾರಿ ನೇಮಕಕ್ಕೆ ಮುಂದಾಗಿರುವುದೇಕೆ?

ಬೆಂಗಳೂರು; ತಮಿಳುನಾಡು ಮಾದರಿಯಲ್ಲಿ ಕರ್ನಾಟಕದ ವೈದ್ಯಕೀಯ ಸರಬರಾಜು ನಿಗಮವನ್ನು ಸ್ಥಾಪಿಸಿರುವ ರಾಜ್ಯ...

ರೈಲ್ವೇ ಯೋಜನೆಗಳಿಗೆ ಗ್ರಹಣ; 7,748 ಕೋಟಿ ರು ಅನುದಾನವಿದ್ದರೂ ಬಿರುಸುಗೊಳ್ಳದ ಭೂಸ್ವಾಧೀನ ಪ್ರಕ್ರಿಯೆ, ರಾಜ್ಯದತ್ತಲೇ ಬೊಟ್ಟು ಮಾಡಿದ ಕೇಂದ್ರ ಸರ್ಕಾರ

ಬೆಂಗಳೂರು; ಕರ್ನಾಟಕದಲ್ಲಿ  ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಗೆ ಕೇಂದ್ರ ಸರ್ಕಾರವು  2026-27ನೇ ಸಾಲಿನಲ್ಲಿ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸೇರದ ಭದ್ರಾ ಮೇಲ್ದಂಡೆ ಯೋಜನೆ; ಸಹಾಯಧನ ಬಿಡುಗಡೆ ವಿಳಂಬಕ್ಕೆ ನೆಪವೊಡ್ಡಿದ ಕೇಂದ್ರ

ಬೆಂಗಳೂರು; ರಾಜ್ಯದ ಮಹತ್ವಾಕಾಂಕ್ಷೆ ನೀರಾವರಿ ಯೋಜನೆ ಭದ್ರಾ ಮೇಲ್ದಂಡೆ ಯೋಜನೆಯ ಅಂದಾಜು...

ಶೌಚಗುಂಡಿಗಳಲ್ಲಿ ಸ್ವಚ್ಛತೆ; 5 ವರ್ಷದಲ್ಲಿ ದೇಶದಾದ್ಯಂತ 332 ಮಂದಿ ಸಾವು, ಕರ್ನಾಟಕದೊಂದಿಗೆ ತಾಳೆಯಾಗದ ಮರಣದ ಅಂಕಿಅಂಶ

ಬೆಂಗಳೂರು; ರಾಜ್ಯದಲ್ಲಿ ಶೌಚ ಗುಂಡಿಗಳು ಮತ್ತು ಒಳಚರಂಡಿಗಳಲ್ಲಿ  ಅಪಾಯಕಾರಿ ಪರಿಸ್ಥಿತಿಯಲ್ಲಿ 2024ನೇ...

Related Articles

Popular Categories

error: Content is protected !!