Tuesday | June 23, 2026 |

ಕಮಿಷನ್‌ರಾಜ್‌ಗಳದ್ದೇ ಪಾರುಪತ್ಯ; ವ್ಯವಹಾರಕ್ಕಿಳಿದ ಈಶ್ವರಪ್ಪರ ಆಪ್ತಕೂಟ!

ಬೆಂಗಳೂರು; ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ವ್ಯಾಪ್ತಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸಿರುವ ಗುತ್ತಿಗೆದಾರರಿಗೆ ಬಾಕಿ ಹಣ ನೀಡಲು ಕಮಿಷನ್‌ ವ್ಯವಹಾರ ಭರ್ಜರಿಯಾಗಿ ನಡೆದಿದೆ ಎಂಬ ಬಲವಾದ ಆರೋಪಗಳು ಕೇಳಿ ಬಂದಿವೆ.

ಗುತ್ತಿಗೆದಾರರೊಂದಿಗೆ ಹಣ ವಸೂಲಿಗಿಳಿದಿರುವ ಹಲವು ಪ್ರಕರಣಗಳಲ್ಲಿ ನೇರವಾಗಿ ಭಾಗಿಯಾಗಿದ್ದಾರೆ ಎಂಬ ಆರೋಪಕ್ಕೆ ಸಚಿವ ಈಶ್ವರಪ್ಪ ಅವರ ಪುತ್ರ ಮತ್ತು ವಿಶೇಷ ಕರ್ತವ್ಯಾಧಿಕಾರಿ ಗುರಿಯಾಗಿದ್ದಾರೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯ ಲೆಕ್ಕ ಶೀರ್ಷಿಕೆ 3054 (ಲಮ್‌ಸಮ್‌) ಮತ್ತು 3054(ನಿರ್ವಹಣೆ)ಯಡಿಯಲ್ಲಿ 79 ಕೋಟಿ ರು. ಮಂಜೂರಾಗಿದೆ. ಕಾಮಗಾರಿಗಳನ್ನು ಪೂರ್ಣಗೊಳಿಸಿರುವ ಗುತ್ತಿಗೆದಾರರಿಗೆ ಇದೇ ಲೆಕ್ಕಶೀರ್ಷಿಕೆಯಡಿಯಲ್ಲಿ ಬಾಕಿ ಹಣ ಪಾವತಿಸಬೇಕು. ಇದಕ್ಕೆ ಸಂಬಂಧಿಸಿದ ಕಡತಗಳನ್ನು ಸಚಿವರ ಆಪ್ತಕೂಟ ಪರಿಶೀಲಿಸುತ್ತಿದೆ ಎಂದು ಹೇಳಲಾಗುತ್ತಿದೆ. ಕಮಿಷನ್‌ ವ್ಯವಹಾರ ಕುದುರಿದ ನಂತರವಷ್ಟೇ ನೇರವಾಗಿ ಆರ್ಥಿಕ ಇಲಾಖೆಗೆ ಕಡತಗಳು ತಲುಪುತ್ತವೆ ಎಂಬ ಆರೋಪಗಳು ಗುತ್ತಿಗೆದಾರರ ವಲಯದಿಂದಲೇ ಕೇಳಿ ಬಂದಿವೆ.

‘ಗುತ್ತಿಗೆದಾರರಿಗೆ ಬಾಕಿ ಹಣ ಪಾವತಿಸಲು ಖುದ್ದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಂಜೂರಾತಿ ನೀಡಿದರೂ ಹಣ ಬಿಡುಗಡೆಗೆ ಸಚಿವರ ಪುತ್ರ ಮತ್ತು ಅವರ ಆಪ್ತಕೂಟ ಹಸಿರು ನಿಶಾನೆ ತೋರಬೇಕು. ಇಲ್ಲದಿದ್ದರೆ ನಯಾ ಪೈಸೆಯೂ ಬಿಡುಗಡೆಯಾಗುವುದಿಲ್ಲ,’ ಎನ್ನುತ್ತಾರೆ ಹೆಸರು ಹೇಳಲಿಚ್ಛಿಸದ ಗುತ್ತಿಗೆದಾರರೊಬ್ಬರು.

2018-19 ಮತ್ತು 2019-20ನೇ ಸಾಲಿನಲ್ಲಿ ಕೈಗೆತ್ತಿಕೊಂಡಿದ್ದ ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸಿರುವ ಗುತ್ತಿಗೆದಾರರೀಗ ಸಚಿವ ಈಶ್ವರಪ್ಪ ಅವರ ಆಪ್ತಕೂಟ ಒಂದೊಂದು ಕಾಮಗಾರಿ ಬಿಲ್‌ಗೆ ಶೇ.5ರಿಂದ 10ರಷ್ಟು ಕಮಿಷನ್‌ಗಾಗಿ ಬೇಡಿಕೆ ಇರಿಸುತ್ತಿದ್ದಾರೆ ಎಂಬ ಆರೋಪಗಳಿವೆ.
ಇನ್ನು, ಲೆಕ್ಕ ಶೀರ್ಷಿಕೆ 3054ರಲ್ಲಿ ಇನ್ನೂ 265 ಕೋಟಿ ರು. ಬಾಕಿ ಇದೆ. ಈ ಹಣದ ಮೇಲೂ ಸಚಿವರ ಆಪ್ತಕೂಟದ ಕಣ್ಣು ಬಿದ್ದಿದೆ ಎಂದು ಹೇಳಲಾಗಿದೆಯಲ್ಲದೆ ಕಮಿಷನ್‌ ವ್ಯವಹಾರ ಕುದುರಿದ ನಂತರವಷ್ಟೇ ಬಾಕಿ ಇರುವ 265 ಕೋಟಿ ರು. ಬಿಡುಗಡೆ ಆಗಲಿದೆ. ಅಲ್ಲಿಯವರೆಗೂ ಆರ್ಥಿಕ ಇಲಾಖೆಗೆ ಕಡತ ರವಾನೆಯಾಗುವುದಿಲ್ಲ ಎಂದು ಕೆಲ ಮೂಲಗಳು ತಿಳಿಸಿವೆ.

Hot this week

ಜಿಬಿಎ 5 ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ನಿರ್ಮಾಣ; 992.00 ಕೋಟಿ ರು ವೆಚ್ಚ , 749 ಕಿಮೀ ಉದ್ದದಲ್ಲಿ 88 ಕಿ ಮೀ ಮಾತ್ರ ಪೂರ್ಣ

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ 5 ನಗರಪಾಲಿಕೆಗಳು ಮುಖ್ಯಮಂತ್ರಿಗಳ ಮೂಲ...

ರಸ್ತೆ ಕಾಮಗಾರಿಯಲ್ಲಿ ಲೋಪ, ಗುತ್ತಿಗೆದಾರನಿಗೆ ಅಕ್ರಮ ಲಾಭ, ಪಾಲಿಕೆಗೆ ನಷ್ಟ; ತಪಾಸಣೆ ನಡೆದ ದಿನದಂದೇ ಎಇ ಅಮಾನತು

ಬೆಂಗಳೂರು; ಆರ್ಟಿಲಿಯಲ್ ಮತ್ತು ಸಬ್‌ ಆರ್ಟೀಲಿಯಲ್ ರಸ್ತೆಗಳಲ್ಲಿ   ಕೈಗೊಂಡಿರುವ ಆಸ್ಪಾಲ್ಟಿಂಗ್‌ನಲ್ಲಿ ಕಳಪೆ...
Please Scan to make Your Contribution

Topics

ಜಿಬಿಎ 5 ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ನಿರ್ಮಾಣ; 992.00 ಕೋಟಿ ರು ವೆಚ್ಚ , 749 ಕಿಮೀ ಉದ್ದದಲ್ಲಿ 88 ಕಿ ಮೀ ಮಾತ್ರ ಪೂರ್ಣ

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ 5 ನಗರಪಾಲಿಕೆಗಳು ಮುಖ್ಯಮಂತ್ರಿಗಳ ಮೂಲ...

ರಸ್ತೆ ಕಾಮಗಾರಿಯಲ್ಲಿ ಲೋಪ, ಗುತ್ತಿಗೆದಾರನಿಗೆ ಅಕ್ರಮ ಲಾಭ, ಪಾಲಿಕೆಗೆ ನಷ್ಟ; ತಪಾಸಣೆ ನಡೆದ ದಿನದಂದೇ ಎಇ ಅಮಾನತು

ಬೆಂಗಳೂರು; ಆರ್ಟಿಲಿಯಲ್ ಮತ್ತು ಸಬ್‌ ಆರ್ಟೀಲಿಯಲ್ ರಸ್ತೆಗಳಲ್ಲಿ   ಕೈಗೊಂಡಿರುವ ಆಸ್ಪಾಲ್ಟಿಂಗ್‌ನಲ್ಲಿ ಕಳಪೆ...

ಕೆಎಸ್‌ಒಯು ಬ್ಯಾಂಕ್‌ ಖಾತೆ ಸ್ಥಗಿತ; ಬ್ಯಾಂಕ್‌ ಕಾರ್ಯಾಚರಣೆ ನಿರ್ಬಂಧಿಸಲು ರಾಜ್ಯ ಸರ್ಕಾರಕ್ಕೆ ಯಾವ ಕಾನೂನುಬದ್ಧ ಅಧಿಕಾರವಿದೆ?

ಬೆಂಗಳೂರು; ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಬ್ಯಾಂಕ್‌ ಖಾತೆಗಳ ಸ್ಥಗಿತಗೊಳಿಸಿರುವುದಕ್ಕೆ ಸಂಬಂಧಿಸಿದಂತೆ...

Related Articles

Popular Categories

error: Content is protected !!