Wednesday | April 15, 2026 |

ಕಮಿಷನ್‌ರಾಜ್‌ಗಳದ್ದೇ ಪಾರುಪತ್ಯ; ವ್ಯವಹಾರಕ್ಕಿಳಿದ ಈಶ್ವರಪ್ಪರ ಆಪ್ತಕೂಟ!

ಬೆಂಗಳೂರು; ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ವ್ಯಾಪ್ತಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸಿರುವ ಗುತ್ತಿಗೆದಾರರಿಗೆ ಬಾಕಿ ಹಣ ನೀಡಲು ಕಮಿಷನ್‌ ವ್ಯವಹಾರ ಭರ್ಜರಿಯಾಗಿ ನಡೆದಿದೆ ಎಂಬ ಬಲವಾದ ಆರೋಪಗಳು ಕೇಳಿ ಬಂದಿವೆ.

ಗುತ್ತಿಗೆದಾರರೊಂದಿಗೆ ಹಣ ವಸೂಲಿಗಿಳಿದಿರುವ ಹಲವು ಪ್ರಕರಣಗಳಲ್ಲಿ ನೇರವಾಗಿ ಭಾಗಿಯಾಗಿದ್ದಾರೆ ಎಂಬ ಆರೋಪಕ್ಕೆ ಸಚಿವ ಈಶ್ವರಪ್ಪ ಅವರ ಪುತ್ರ ಮತ್ತು ವಿಶೇಷ ಕರ್ತವ್ಯಾಧಿಕಾರಿ ಗುರಿಯಾಗಿದ್ದಾರೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯ ಲೆಕ್ಕ ಶೀರ್ಷಿಕೆ 3054 (ಲಮ್‌ಸಮ್‌) ಮತ್ತು 3054(ನಿರ್ವಹಣೆ)ಯಡಿಯಲ್ಲಿ 79 ಕೋಟಿ ರು. ಮಂಜೂರಾಗಿದೆ. ಕಾಮಗಾರಿಗಳನ್ನು ಪೂರ್ಣಗೊಳಿಸಿರುವ ಗುತ್ತಿಗೆದಾರರಿಗೆ ಇದೇ ಲೆಕ್ಕಶೀರ್ಷಿಕೆಯಡಿಯಲ್ಲಿ ಬಾಕಿ ಹಣ ಪಾವತಿಸಬೇಕು. ಇದಕ್ಕೆ ಸಂಬಂಧಿಸಿದ ಕಡತಗಳನ್ನು ಸಚಿವರ ಆಪ್ತಕೂಟ ಪರಿಶೀಲಿಸುತ್ತಿದೆ ಎಂದು ಹೇಳಲಾಗುತ್ತಿದೆ. ಕಮಿಷನ್‌ ವ್ಯವಹಾರ ಕುದುರಿದ ನಂತರವಷ್ಟೇ ನೇರವಾಗಿ ಆರ್ಥಿಕ ಇಲಾಖೆಗೆ ಕಡತಗಳು ತಲುಪುತ್ತವೆ ಎಂಬ ಆರೋಪಗಳು ಗುತ್ತಿಗೆದಾರರ ವಲಯದಿಂದಲೇ ಕೇಳಿ ಬಂದಿವೆ.

‘ಗುತ್ತಿಗೆದಾರರಿಗೆ ಬಾಕಿ ಹಣ ಪಾವತಿಸಲು ಖುದ್ದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಂಜೂರಾತಿ ನೀಡಿದರೂ ಹಣ ಬಿಡುಗಡೆಗೆ ಸಚಿವರ ಪುತ್ರ ಮತ್ತು ಅವರ ಆಪ್ತಕೂಟ ಹಸಿರು ನಿಶಾನೆ ತೋರಬೇಕು. ಇಲ್ಲದಿದ್ದರೆ ನಯಾ ಪೈಸೆಯೂ ಬಿಡುಗಡೆಯಾಗುವುದಿಲ್ಲ,’ ಎನ್ನುತ್ತಾರೆ ಹೆಸರು ಹೇಳಲಿಚ್ಛಿಸದ ಗುತ್ತಿಗೆದಾರರೊಬ್ಬರು.

2018-19 ಮತ್ತು 2019-20ನೇ ಸಾಲಿನಲ್ಲಿ ಕೈಗೆತ್ತಿಕೊಂಡಿದ್ದ ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸಿರುವ ಗುತ್ತಿಗೆದಾರರೀಗ ಸಚಿವ ಈಶ್ವರಪ್ಪ ಅವರ ಆಪ್ತಕೂಟ ಒಂದೊಂದು ಕಾಮಗಾರಿ ಬಿಲ್‌ಗೆ ಶೇ.5ರಿಂದ 10ರಷ್ಟು ಕಮಿಷನ್‌ಗಾಗಿ ಬೇಡಿಕೆ ಇರಿಸುತ್ತಿದ್ದಾರೆ ಎಂಬ ಆರೋಪಗಳಿವೆ.
ಇನ್ನು, ಲೆಕ್ಕ ಶೀರ್ಷಿಕೆ 3054ರಲ್ಲಿ ಇನ್ನೂ 265 ಕೋಟಿ ರು. ಬಾಕಿ ಇದೆ. ಈ ಹಣದ ಮೇಲೂ ಸಚಿವರ ಆಪ್ತಕೂಟದ ಕಣ್ಣು ಬಿದ್ದಿದೆ ಎಂದು ಹೇಳಲಾಗಿದೆಯಲ್ಲದೆ ಕಮಿಷನ್‌ ವ್ಯವಹಾರ ಕುದುರಿದ ನಂತರವಷ್ಟೇ ಬಾಕಿ ಇರುವ 265 ಕೋಟಿ ರು. ಬಿಡುಗಡೆ ಆಗಲಿದೆ. ಅಲ್ಲಿಯವರೆಗೂ ಆರ್ಥಿಕ ಇಲಾಖೆಗೆ ಕಡತ ರವಾನೆಯಾಗುವುದಿಲ್ಲ ಎಂದು ಕೆಲ ಮೂಲಗಳು ತಿಳಿಸಿವೆ.

Hot this week

11,721 ಟ್ರಾನ್ಸ್‌ಫಾರ್ಮ್‌ರ್ ಖರೀದಿ; ಕೇರಳ ವಿದ್ಯುತ್ ಕಂಪನಿಗೆ 4 ಜಿ ವಿನಾಯಿತಿ ಅಧಿಸೂಚನೆ, ಕವಿಕಾಕ್ಕೆ 174.73 ಕೋಟಿ ಆದಾಯ ತಪ್ಪಿಸಿತೇ ಕಾಂಗ್ರೆಸ್ ಸರ್ಕಾರ?

ಬೆಂಗಳೂರು;  ರಾಜ್ಯದ ಬೆಂಗಳೂರು, ಹುಬ್ಬಳ್ಳಿ, ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗಳಿಗೆ ಅವಶ್ಯಕವಿರುವ 11,721...

ಗಾಲ್ಫ್‌ ಅಸೋಸಿಯೇಷನ್‌ನ ಜಮೀನಿನ ಸರ್ವೇ, ಆದಾಯ ಪರಿಶೀಲನೆ; ಜಿಬಿಎ ಮುಖ್ಯ ಆಯುಕ್ತ, ಜಿಲ್ಲಾಧಿಕಾರಿಗೆ ಪತ್ರ ಬರೆದ ಸರ್ಕಾರ

ಬೆಂಗಳೂರು;  ಕರ್ನಾಟಕ ಗಾಲ್ಫ್‌ ಅಸೋಸಿಯೇಷನ್ ಸಂಸ್ಥೆಗೆ ನೀಡಲಾಗಿರುವ ಜಮೀನಿನ ಸರ್ವೇ ನಡೆಸಲು...

866.59 ಕೋಟಿ ರು ಮೊತ್ತದ 399 ಬಳಕೆ ಪ್ರಮಾಣ ಪತ್ರಗಳ ಸಲ್ಲಿಕೆಗೆ ಬಾಕಿ ಉಳಿಸಿಕೊಂಡ ಇಲಾಖೆಗಳು; ಅನುದಾನ ದುರುಪಯೋಗ ಸಾಧ್ಯತೆ?

ಬೆಂಗಳೂರು; ರಾಜ್ಯದ ಹಲವು ಇಲಾಖೆಗಳು ಬಳಕೆ ಪ್ರಮಾಣ ಪತ್ರಗಳನ್ನು ಸಲ್ಲಿಕೆಯಲ್ಲಿ ತೀವ್ರ...

ಸರ್ಕಾರಿ ಸೇವೆ; ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪ್ರಾತಿನಿಧ್ಯ ಎರಡು ವರ್ಷದಲ್ಲಿ ಇಳಿಕೆಯಾಗಿದೆಯೇ?

ಬೆಂಗಳೂರು; ರಾಜ್ಯ ಸರ್ಕಾರದ ಶಿಕ್ಷಣ, ಒಳಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

Topics

11,721 ಟ್ರಾನ್ಸ್‌ಫಾರ್ಮ್‌ರ್ ಖರೀದಿ; ಕೇರಳ ವಿದ್ಯುತ್ ಕಂಪನಿಗೆ 4 ಜಿ ವಿನಾಯಿತಿ ಅಧಿಸೂಚನೆ, ಕವಿಕಾಕ್ಕೆ 174.73 ಕೋಟಿ ಆದಾಯ ತಪ್ಪಿಸಿತೇ ಕಾಂಗ್ರೆಸ್ ಸರ್ಕಾರ?

ಬೆಂಗಳೂರು;  ರಾಜ್ಯದ ಬೆಂಗಳೂರು, ಹುಬ್ಬಳ್ಳಿ, ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗಳಿಗೆ ಅವಶ್ಯಕವಿರುವ 11,721...

ಗಾಲ್ಫ್‌ ಅಸೋಸಿಯೇಷನ್‌ನ ಜಮೀನಿನ ಸರ್ವೇ, ಆದಾಯ ಪರಿಶೀಲನೆ; ಜಿಬಿಎ ಮುಖ್ಯ ಆಯುಕ್ತ, ಜಿಲ್ಲಾಧಿಕಾರಿಗೆ ಪತ್ರ ಬರೆದ ಸರ್ಕಾರ

ಬೆಂಗಳೂರು;  ಕರ್ನಾಟಕ ಗಾಲ್ಫ್‌ ಅಸೋಸಿಯೇಷನ್ ಸಂಸ್ಥೆಗೆ ನೀಡಲಾಗಿರುವ ಜಮೀನಿನ ಸರ್ವೇ ನಡೆಸಲು...

866.59 ಕೋಟಿ ರು ಮೊತ್ತದ 399 ಬಳಕೆ ಪ್ರಮಾಣ ಪತ್ರಗಳ ಸಲ್ಲಿಕೆಗೆ ಬಾಕಿ ಉಳಿಸಿಕೊಂಡ ಇಲಾಖೆಗಳು; ಅನುದಾನ ದುರುಪಯೋಗ ಸಾಧ್ಯತೆ?

ಬೆಂಗಳೂರು; ರಾಜ್ಯದ ಹಲವು ಇಲಾಖೆಗಳು ಬಳಕೆ ಪ್ರಮಾಣ ಪತ್ರಗಳನ್ನು ಸಲ್ಲಿಕೆಯಲ್ಲಿ ತೀವ್ರ...

ಸರ್ಕಾರಿ ಸೇವೆ; ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪ್ರಾತಿನಿಧ್ಯ ಎರಡು ವರ್ಷದಲ್ಲಿ ಇಳಿಕೆಯಾಗಿದೆಯೇ?

ಬೆಂಗಳೂರು; ರಾಜ್ಯ ಸರ್ಕಾರದ ಶಿಕ್ಷಣ, ಒಳಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

Related Articles

Popular Categories

error: Content is protected !!