Saturday | March 28, 2026 |

ಅಶೋಕ್‌ಕುಮಾರ್‌ ಆತ್ಮಹತ್ಯೆ ; ಗುಲ್ಬರ್ಗಾ ವಿ.ವಿ.ಗೆ ಶಿಫಾರಸ್ಸಾಗಿರುವ ಪ್ರಾಧ್ಯಾಪಕರ ಬೆದರಿಕೆಗೆ ಅಂಜಿದ್ದರೇ?

Support THE-FILE

spot_img

ಬೆಂಗಳೂರು; ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಹುದ್ದೆಗೆ ಶಿಫಾರಸ್ಸಾಗಿರುವ ಸಂಘ ಪರಿವಾರದ ನಂಟು ಹೊಂದಿರುವ ಪ್ರಾಧ್ಯಾಪಕರೊಬ್ಬರು ಪ್ರೊ. ಅಶೋಕ್‌ಕುಮಾರ್‌ ಅವರಿಗೆ ಕುಲಪತಿ ಹುದ್ದೆ ದೊರಕಿಸಿಕೊಡುವುದಾಗಿ ನಂಬಿಸಿ ಹಣ ಪಡೆದು ಆ ನಂತರ ಹಣ ನೀಡದೇ ಬೆದರಿಸಿದ್ದರು ಎಂಬ ಮಾತುಗಳು ಕೇಳಿ ಬರುತ್ತಿವೆ.

ಅಶೋಕ್‌ಕುಮಾರ್‌ ಅವರ ಆತ್ಮಹತ್ಯೆ ಪ್ರಕರಣ ವಿಶ್ವವಿದ್ಯಾಲಯದ ಅಂಗಳದಲ್ಲಿ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ ಪ್ರಭಾವಿ ಪ್ರಾಧ್ಯಾಪಕರೊಬ್ಬರು ಮಾಡಿದ್ದಾರೆ ಎನ್ನಲಾಗಿರುವ ವಂಚನೆಯೂ ಮುನ್ನೆಲೆಗೆ ಬಂದಿದೆ. ಪ್ರಕರಣ ನಡೆದ 2 ದಿನಗಳ ನಂತರ ಹೊರಬಿದ್ದಿರುವ ಮಾಹಿತಿ, ಆತ್ಮಹತ್ಯೆ ಪ್ರಕರಣಕ್ಕೆ ಮತ್ತೊಂದು ತಿರುವು ನೀಡಿದಂತಾಗಿದೆ.

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅವಧಿಯಲ್ಲಿ ಪ್ರಭಾವಿ ಪ್ರಾಧ್ಯಾಪಕ ಅಶೋಕ್‌ಕುಮಾರ್‌ ಅವರ ಸಹದ್ಯೋಗಿ ಮಾತ್ರವಲ್ಲದೆ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌ ಆಗಿಯೂ ಕಾರ್ಯನಿರ್ವಹಿಸಿದ್ದರು ಎನ್ನಲಾಗಿದೆ.

ಸಂಘ ಪರಿವಾರದದೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದ ಆ ಪ್ರಾಧ್ಯಾಪಕರೇ 4 ವಿಶ್ವವಿದ್ಯಾಲಯಗಳ ಪೈಕಿ ಯಾವುದಾದಾರೂ ಒಂದು ವಿಶ್ವವಿದ್ಯಾಲಯದಲ್ಲಿ ಕುಲಪತಿ ಹುದ್ದೆ ಕೊಡಿಸುವುದಾಗಿ ಹೇಳಿ ಅಶೋಕ್‌ಕುಮಾರ್‌ ಅವರನ್ನು ನಂಬಿಸಿ ಹಣವನ್ನು ಪಡೆದಿದ್ದರು ಎಂಬ ಮಾತುಗಳು ವಿಶ್ವವಿದ್ಯಾಲಯದ ಅಂಗಳದಲ್ಲಿ ಹರಿದಾಡುತ್ತಿವೆ.

4 ವಿಶ್ವವಿದ್ಯಾಲಯಗಳ ಕುಲಪತಿ ಹುದ್ದೆ ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲ ಎಂದು ಖಚಿತಪಡಿಸಿಕೊಂಡಿದ್ದರು. ಆ ನಂತರ ಅಶೋಕ್‌ಕುಮಾರ್‌ ಅವರು ಹಣವನ್ನು ವಾಪಸ್‌ ಕೇಳಿದ್ದರು. ಆದರೆ ಹಣ ವಾಪಸ್‌ ಕೊಡಲು ನಿರಾಕರಿಸಿದ್ದರು ಎನ್ನಲಾಗಿರುವ ಆ ಪ್ರಾಧ್ಯಾಪಕ, ಅಶೋಕ್‌ಕುಮಾರ್‌ ಅವರನ್ನೇ ಬೆದರಿಸಿದ್ದರು. ಪ್ರಕರಣವೊಂದರಲ್ಲಿ ಹಾಕಲಾಗಿದ್ದ ಬಿ ರಿಪೋರ್ಟ್‌ ವರದಿಗೆ ಮರು ಜೀವ ಕೊಡಲಾಗುವುದು ಎಂದು ಬೆದರಿಸಿದ್ದರು ಎಂದು ಅವರ ಆಪ್ತರೊಬ್ಬರು ‘ದಿ ಫೈಲ್‌’ಗೆ ಮಾಹಿತಿ ನೀಡಿದ್ದಾರೆ.

ಅತ್ತ ಹಣವೂ ಇಲ್ಲ, ಇತ್ತ ಕುಲಪತಿ ಹುದ್ದೆಯೂ ಇಲ್ಲ ಎಂಬಂತಾಗಿದ್ದ ಸಂದರ್ಭದಲ್ಲೇ ಆ ಪ್ರಾಧ್ಯಾಪಕ ಒಡ್ಡಿದ್ದ ಬೆದರಿಕೆಯಿಂದ ಮರ್ಯಾದೆಗೆ ಅಂಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆಪ್ತರೊಬ್ಬರು ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಇದೆಲ್ಲದರ ಮಧ್ಯೆಯೇ ಪೆನುಗೊಂಡ ಜಮೀನು ಪ್ರಕರಣವೂ ಅಶೋಕ್‌ಕುಮಾರ್‌ ಆವರ ಆತ್ಮಹತ್ಯೆ ಪ್ರಕರಣದ ಜತೆಗೆ ಥಳಕು ಹಾಕಿಕೊಂಡಿದೆ. ಅಶೋಕ್‌ಕುಮಾರ್‌ ಅವರು ಹೂಡಿಕೆ ಮಾಡಿದ್ದರು ಎನ್ನಲಾಗಿರುವ ಆಂಧ್ರದ ಪೆನುಗೊಂಡ ಬಳಿ 160 ಎಕರೆ ಜಮೀನಿನ ಪ್ರಕರಣದಲ್ಲಿ ವಂಚನೆಗೊಳಗಾಗಿ ಕಂಗೆಟ್ಟಿದ್ದರು ಎಂಬ ಮಾತುಗಳು ಕೇಳಿ ಬರುತ್ತಿವೆ.

ಹಣ ಕೊಟ್ಟರೂ ಕುಲಪತಿ ಹುದ್ದೆ ಲಭಿಸಲಿಲ್ಲ ಎಂಬುದು ಆತ್ಮಹತ್ಯೆಗೆ ತಕ್ಷಣದ ಕಾರಣವಾಗಿರಬಹುದಾದರೂ ಹಿಂದಿನ ರಾಜ್ಯಪಾಲರಿಗೆ ನಿಕಟವರ್ತಿ ಎಂದು ಹೇಳಲಾಗಿರುವ ಆಂಧ್ರ ಮೂಲದ ವ್ಯಕ್ತಿಯೊಬ್ಬರು ಪೆನುಗೊಂಡ ಬಳಿ 160 ಎಕರೆ ಜಮೀನಿನ ಮೇಲೆ ಅಶೋಕ್‌ಕುಮಾರ್‌ ಅವರಿಂದ ಹೂಡಿಕೆ ಮಾಡಿಸಿ, ಆ ನಂತರ ವಂಚನೆಗೈದಿದ್ದು ಕೂಡ ಆತ್ಮಹತ್ಯೆಗೆ ಕಾರಣವಾಗಿರಬಹುದು ಎನ್ನಲಾಗಿದೆ. ಆದರೆ ಈ ಯಾವ ಮಾಹಿತಿಗಳನ್ನು ಕುಟುಂಬ ಸದಸ್ಯರ ಬಳಿ ಹಂಚಿಕೊಳ್ಳದೇ ಗೌಪ್ಯವಾಗಿರಿಸಿದ್ದರು ಎಂದು ತಿಳಿದು ಬಂದಿದೆ.

ಜಮೀನು ಮಾರಾಟ ಮಾಡಿಸಲು ನಿಕಟವರ್ತಿಗಳ ಬಳಿ ಅಶೋಕ್‌ಕುಮಾರ್‌ ಮಾತುಕತೆ ನಡೆಸಿದ್ದರು. ಜಮೀನು ಮಾರಾಟ ವಿಳಂಬವಾಗಿದ್ದರಿಂದಾಗಿ ಅವರು ಕಂಗೆಟ್ಟಿದ್ದರು ಎಂದು ಹೇಳಲಾಗುತ್ತಿದೆ.

Hot this week

ಮನೆಗಳ ಹಂಚಿಕೆಯಲ್ಲಿ ಭ್ರಷ್ಟಾಚಾರ, ಹಣಕ್ಕೆ ಬೇಡಿಕೆ; ಪಾಟೀಲರ ಆರೋಪ, ಲೋಕಾ ತನಿಖೆಯಿಂದ ಸಾಬೀತು

ಬೆಂಗಳೂರು; ರಾಜೀವ್‌ ಗಾಂಧಿ ವಸತಿ ನಿಗಮದ ವ್ಯಾಪ್ತಿಯಲ್ಲಿ ಹಣ ಕೊಟ್ಟರಷ್ಟೇ ಮನೆಗಳನ್ನು ...

ಕದಂಬೋತ್ಸವ ಸೇರಿ ಸಾಂಸ್ಕೃತಿಕ ಉತ್ಸವಗಳಿಗೆ ಅನುದಾನ; 12.50 ಕೋಟಿ ರು ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಮೈಸೂರು ದಸರಾ ಸೇರಿದಂತೆ ಇನ್ನಿತರೆ ಜಿಲ್ಲಾಮಟ್ಟದ ವಿವಿಧ ಉತ್ಸವಗಳಿಗೆ 2024-25ಮತ್ತು...

ಪ್ರಚೋದನಕಾರಿ ಭಾಷಣ, ಕೋಮು ಗಲಭೆ; 3 ವರ್ಷದಲ್ಲಿ 50 ಪ್ರಕರಣಗಳು ದಾಖಲು, ಪಟ್ಟಿ ಬಹಿರಂಗ

ಬೆಂಗಳೂರು; ರಾಜ್ಯದ  ಕರಾವಳಿ ಭಾಗ ಸೇರಿದಂತೆ ವಿವಿಧೆಡೆ ಪ್ರಚೋದನಾಕಾರಿ ಭಾಷಣ ಮಾಡಿದವರು...

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

Topics

ಮನೆಗಳ ಹಂಚಿಕೆಯಲ್ಲಿ ಭ್ರಷ್ಟಾಚಾರ, ಹಣಕ್ಕೆ ಬೇಡಿಕೆ; ಪಾಟೀಲರ ಆರೋಪ, ಲೋಕಾ ತನಿಖೆಯಿಂದ ಸಾಬೀತು

ಬೆಂಗಳೂರು; ರಾಜೀವ್‌ ಗಾಂಧಿ ವಸತಿ ನಿಗಮದ ವ್ಯಾಪ್ತಿಯಲ್ಲಿ ಹಣ ಕೊಟ್ಟರಷ್ಟೇ ಮನೆಗಳನ್ನು ...

ಕದಂಬೋತ್ಸವ ಸೇರಿ ಸಾಂಸ್ಕೃತಿಕ ಉತ್ಸವಗಳಿಗೆ ಅನುದಾನ; 12.50 ಕೋಟಿ ರು ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಮೈಸೂರು ದಸರಾ ಸೇರಿದಂತೆ ಇನ್ನಿತರೆ ಜಿಲ್ಲಾಮಟ್ಟದ ವಿವಿಧ ಉತ್ಸವಗಳಿಗೆ 2024-25ಮತ್ತು...

ಪ್ರಚೋದನಕಾರಿ ಭಾಷಣ, ಕೋಮು ಗಲಭೆ; 3 ವರ್ಷದಲ್ಲಿ 50 ಪ್ರಕರಣಗಳು ದಾಖಲು, ಪಟ್ಟಿ ಬಹಿರಂಗ

ಬೆಂಗಳೂರು; ರಾಜ್ಯದ  ಕರಾವಳಿ ಭಾಗ ಸೇರಿದಂತೆ ವಿವಿಧೆಡೆ ಪ್ರಚೋದನಾಕಾರಿ ಭಾಷಣ ಮಾಡಿದವರು...

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

Related Articles

Popular Categories

error: Content is protected !!