Monday | March 30, 2026 |

ಅನಾರೋಗ್ಯ, ಭ್ರಷ್ಟಾಚಾರ, ಆಡಳಿತ ಕುಸಿತ; ಸಿಎಂ ವಿಚಾರಣೆಗೆ ಅನುಮತಿ ಕೋರಿ ಮನವಿ

Support THE-FILE

spot_img

ಬೆಂಗಳೂರು; ಮಿತಿ ಮೀರಿರುವ ಭ್ರಷ್ಟಾಚಾರ, ಆಡಳಿತ ಯಂತ್ರ ಕುಸಿತ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆರೋಗ್ಯ ಕ್ಷೀಣಿಸುತ್ತಿರುವುದನ್ನು ಕುಟುಂಬ ಸದಸ್ಯರು ಲಾಭ ಮಾಡಿಕೊಳ್ಳುತ್ತಿದ್ದಾರೆ ಎಂಬ ಕಾರಣಗಳನ್ನು ಮುಂದಿಟ್ಟಿರುವ ಸಾಮಾಜಿಕ ಕಾರ್ಯಕರ್ತ ರವಿಕುಮಾರ್‌ ಕಂಚನಹಳ್ಳಿ ಅವರು ಯಡಿಯೂರಪ್ಪ ಅವರನ್ನು ವಿಚಾರಣೆಗೆ ಒಳಪಡಿಸಲು ಅನುಮತಿ ಮತ್ತು ಸಂವಿಧಾನದ ವಿಧಿ 356ರಡಿ ಲಭ್ಯವಿರುವ ಅಧಿಕಾರವನ್ನು ಬಳಸಿ ರಾಜ್ಯ ಬಿಜೆಪಿ ಸರ್ಕಾರವನ್ನು ವಜಾಗೊಳಿಸಬೇಕು ರಾಜಭವನ ಮೆಟ್ಟಿಲೇರಿದ್ದಾರೆ.

ಯಡಿಯೂರಪ್ಪ ಅವರ ಅನಾರೋಗ್ಯವನ್ನು ಅವರ ಪುತ್ರ ಬಿ ವೈ ವಿಜಯೇಂದ್ರ ಅವರು ಲಾಭ ಮಾಡಿಕೊಳ್ಳುತ್ತಿದ್ದಾರೆ ಎಂದು ರವಿಕುಮಾರ್‌ ಅವರು ರಾಜ್ಯಪಾಲರಿಗೆ ಸಲ್ಲಿಸಿರುವ ಲಿಖಿತ ಮನವಿಯಲ್ಲಿ ವಿವರಿಸಿದ್ದಾರೆ. ಇದರ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರದಲ್ಲಿ ಬಿಜೆಪಿ ಗಳಿಸಿರುವ ಜಯಭೇರಿಯನ್ನು ಮುಂದಿಟ್ಟುಕೊಂಡು ಸಚಿವ ಸಂಪುಟ ವಿಸ್ತರಣೆ ಕಸರತ್ತಿನಲ್ಲಿ ಯಡಿಯೂರಪ್ಪ ಅವರು ತೊಡಗಿರುವ ಬೆನ್ನಲ್ಲೇ ರವಿಕುಮಾರ್‌ ಸಲ್ಲಿಸಿರುವ ಮನವಿ ಮಹತ್ವ ಪಡೆದುಕೊಂಡಿದೆ.

ಆರೋಗ್ಯ ಕ್ಷೀಣಿಸುತ್ತಿದೆಯೇ?

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಆರೋಗ್ಯ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ. ಇತ್ತೀಚೆಗೆ ಅವರಿಗೆ ಹೆಚ್ಚು ಹೊತ್ತು ನಿಲ್ಲಲು, ಮಾತನಾಡಲು ಸಾಧ್ಯವಾಗುತ್ತಿಲ್ಲ. ಅನಾರೋಗ್ಯಕ್ಕೀಡಾಗಿರುವ ಯಡಿಯೂರಪ್ಪ ಅವರಿಗೆ ಆಡಳಿತ ಯಂತ್ರ ಮುನ್ನಡೆಸಲು ಕಷ್ಟವಾಗುತ್ತಿದೆ. ಈ ಪರಿಸ್ಥಿತಿಯನ್ನು ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರು ಆಡಳಿತ ಯಂತ್ರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಮನವಿಯಲ್ಲಿ ಆರೋಪಿಸಿದ್ದಾರೆ.

ವಿಜಯೇಂದ್ರರಿಂದಲೇ ಕಡತ ನಿರ್ವಹಣೆ?

ರಾಜ್ಯದಲ್ಲೀಗ ಇಬ್ಬರು ವ್ಯಕ್ತಿಗಳು ಮುಖ್ಯಮಂತ್ರಿಗಳಂತೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ದೂರಿರುವ ರವಿಕುಮಾರ್‌ ಅವರು ಮುಖ್ಯಮಂತ್ರಿ ಕಚೇರಿ ನಿರ್ವಹಿಸುವ ಕಡತಗಳನ್ನು ಅವರ ಪುತ್ರ ವಿಜಯೇಂದ್ರ ಅವರೇ ನಿರ್ವಹಿಸುತ್ತಿದ್ದಾರೆ ಎಂದು ಬಲವಾಗಿ ಆರೋಪಿಸಿದ್ದಾರೆ. ಅಲ್ಲದೆ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದ ಟೆಂಡರ್ ಕಡತಗಳಿಗೂ ಅವರೇ ಸಹಿ ಮಾಡುತ್ತಿದ್ದಾರೆ. ಹಾಗೆಯೇ ಯಡಿಯೂರಪ್ಪ ಅವರ ಮಕ್ಕಳು, ಮೊಮ್ಮಕ್ಕಳು ಕೂಡ ಆಡಳಿತ ಕಾರ್ಯಕಲಾಪಗಳಲ್ಲಿ ನೇರವಾಗಿ ಪ್ರಭಾವ ಬೀರುತ್ತಿದ್ದಾರೆ. ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ ಎನ್ನುವುದಕ್ಕೆ ಈ ಬೆಳವಣಿಗೆಗಳೇ ಸಾಕ್ಷಿ ಎಂದು ವಿವರಿಸಿರುವುದು ಮನವಿಯಿಂದ ತಿಳಿದು ಬಂದಿದೆ.

ಅಪಾರ್ಟ್‌ಮೆಂಟ್‌ನಲ್ಲಿ ವಿಧಾನಸೌಧದ ಕಚೇರಿ

ಶಿವಾನಂದ ವೃತ್ತ ಸಮೀಪದ ಆದರ್ಶ ವಸತಿ ಸಮುಚ್ಛಯದಲ್ಲಿ ಫ್ಲಾಟ್‌ ಹೊಂದಿರುವ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರು ಅಲ್ಲಿಂದಲೇ ವಿಧಾನಸೌಧದ ಕಾರ್ಯಗಳನ್ನು ಅನಧಿಕೃತವಾಗಿ ನಡೆಸುತ್ತಿದ್ದಾರೆ. ಈ ವಿಚಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಗೊತ್ತಿದ್ದರೂ ಮೌನ ವಹಿಸಿದ್ದಾರೆ ಎಂದು ಮನವಿಯಲ್ಲಿ ಪ್ರಸ್ತಾಪಿಸಿರುವ ರವಿಕುಮಾರ್‌, ಆಡಳಿತ ಯಂತ್ರ ದುರುಪಯೋಗಪಡಿಸಿಕೊಂಡಿರುವ ವಿಜಯೇಂದ್ರ ಅವರು 15 ಸಾವಿರ ಕೋಟಿಗೂ ಅಧಿಕ ಹಣ ಮಾಡಿರುವ ಮಾಹಿತಿ ಸಾರ್ವಜನಿಕವಾಗಿ ಹರಿದಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಆಡಳಿತ ಯಂತ್ರ ಕುಸಿತ

ಸರ್ಕಾರದಲ್ಲಿರುವ ಇತರೆ ಸಚಿವರು ಮತ್ತು ಅವರ ಕುಟುಂಬ ಸದಸ್ಯರು ಹಾಗೂ ಪಕ್ಷದ ಇತರೆ ಮುಖಂಡರು ಕೂಡ ಇದೇ ಹಾದಿಯಲ್ಲಿ ಅಕ್ರಮವಾಗಿ ಹಣ ಮಾಡುವುದರಲ್ಲಿ ತೊಡಗಿಸಿಕೊಂಂಡಿದ್ದಾರೆ. ಬೆಂಗಳೂರು ಗಲಭೆ ಪ್ರಕರಣದಲ್ಲಿ ಶಾಸಕರೊಬ್ಬರ ಮನೆಗೆ ಬೆಂಕಿ ಹಚ್ಚಿದ್ದನ್ನು ಗಮನಿಸಿದರೆ ರಾಜ್ಯದಲ್ಲಿ ಆಡಳಿತಯಂತ್ರ ಕುಸಿದಿರುವುದು ಸ್ಪಷ್ಟವಾಗಿ ಗೋಚರಿಸುತ್ತದೆ. ಆದ್ದರಿಂದ ತಾವು ರಾಜ್ಯದಲ್ಲಿ ಆಡಳಿತ ಕುಸಿದಿರುವುದನ್ನು ಪರಿಗಣಿಸಿ, ಸಂವಿಧಾನದ ವಿಧಿ 356ರಡಿ ಲಭ್ಯವಿರುವ ಅಧಿಕಾರವನ್ನು ಬಳಸಿ ರಾಜ್ಯ ಸರ್ಕಾರವನ್ನು ವಜಾಗೊಳಿಸಲು ಕ್ರಮ ಜರುಗಿಸಬೇಕು ಎಂದು ರಾಜ್ಯಪಾಲರಿಗೆ ರವಿಕುಮಾರ್‌ ಮನವಿ ಮಾಡಿದ್ದಾರೆ.

Hot this week

1,094.81 ಕೋಟಿಯಷ್ಟು ಭೂ ಕಂದಾಯ ಬಾಕಿ; ವಸೂಲಾತಿಗೆ ರೇರಾ ಮೀನಮೇಷ

ಬೆಂಗಳೂರು; ರೇರಾ ಕಾಯ್ದೆ ಮತ್ತು ನಿಯಮಗಳನ್ನು ಉಲ್ಲಂಘಿಸುವ ಪ್ರಕರಣಗಳು ವರ್ಷದಿಂದ ವರ್ಷಕ್ಕೆ...

ಮನೆಗಳ ಹಂಚಿಕೆಯಲ್ಲಿ ಭ್ರಷ್ಟಾಚಾರ, ಹಣಕ್ಕೆ ಬೇಡಿಕೆ; ಪಾಟೀಲರ ಆರೋಪ, ಲೋಕಾ ತನಿಖೆಯಿಂದ ಸಾಬೀತು

ಬೆಂಗಳೂರು; ರಾಜೀವ್‌ ಗಾಂಧಿ ವಸತಿ ನಿಗಮದ ವ್ಯಾಪ್ತಿಯಲ್ಲಿ ಹಣ ಕೊಟ್ಟರಷ್ಟೇ ಮನೆಗಳನ್ನು ...

ಕದಂಬೋತ್ಸವ ಸೇರಿ ಸಾಂಸ್ಕೃತಿಕ ಉತ್ಸವಗಳಿಗೆ ಅನುದಾನ; 12.50 ಕೋಟಿ ರು ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಮೈಸೂರು ದಸರಾ ಸೇರಿದಂತೆ ಇನ್ನಿತರೆ ಜಿಲ್ಲಾಮಟ್ಟದ ವಿವಿಧ ಉತ್ಸವಗಳಿಗೆ 2024-25ಮತ್ತು...

ಪ್ರಚೋದನಕಾರಿ ಭಾಷಣ, ಕೋಮು ಗಲಭೆ; 3 ವರ್ಷದಲ್ಲಿ 50 ಪ್ರಕರಣಗಳು ದಾಖಲು, ಪಟ್ಟಿ ಬಹಿರಂಗ

ಬೆಂಗಳೂರು; ರಾಜ್ಯದ  ಕರಾವಳಿ ಭಾಗ ಸೇರಿದಂತೆ ವಿವಿಧೆಡೆ ಪ್ರಚೋದನಾಕಾರಿ ಭಾಷಣ ಮಾಡಿದವರು...

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

Topics

1,094.81 ಕೋಟಿಯಷ್ಟು ಭೂ ಕಂದಾಯ ಬಾಕಿ; ವಸೂಲಾತಿಗೆ ರೇರಾ ಮೀನಮೇಷ

ಬೆಂಗಳೂರು; ರೇರಾ ಕಾಯ್ದೆ ಮತ್ತು ನಿಯಮಗಳನ್ನು ಉಲ್ಲಂಘಿಸುವ ಪ್ರಕರಣಗಳು ವರ್ಷದಿಂದ ವರ್ಷಕ್ಕೆ...

ಮನೆಗಳ ಹಂಚಿಕೆಯಲ್ಲಿ ಭ್ರಷ್ಟಾಚಾರ, ಹಣಕ್ಕೆ ಬೇಡಿಕೆ; ಪಾಟೀಲರ ಆರೋಪ, ಲೋಕಾ ತನಿಖೆಯಿಂದ ಸಾಬೀತು

ಬೆಂಗಳೂರು; ರಾಜೀವ್‌ ಗಾಂಧಿ ವಸತಿ ನಿಗಮದ ವ್ಯಾಪ್ತಿಯಲ್ಲಿ ಹಣ ಕೊಟ್ಟರಷ್ಟೇ ಮನೆಗಳನ್ನು ...

ಕದಂಬೋತ್ಸವ ಸೇರಿ ಸಾಂಸ್ಕೃತಿಕ ಉತ್ಸವಗಳಿಗೆ ಅನುದಾನ; 12.50 ಕೋಟಿ ರು ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಮೈಸೂರು ದಸರಾ ಸೇರಿದಂತೆ ಇನ್ನಿತರೆ ಜಿಲ್ಲಾಮಟ್ಟದ ವಿವಿಧ ಉತ್ಸವಗಳಿಗೆ 2024-25ಮತ್ತು...

ಪ್ರಚೋದನಕಾರಿ ಭಾಷಣ, ಕೋಮು ಗಲಭೆ; 3 ವರ್ಷದಲ್ಲಿ 50 ಪ್ರಕರಣಗಳು ದಾಖಲು, ಪಟ್ಟಿ ಬಹಿರಂಗ

ಬೆಂಗಳೂರು; ರಾಜ್ಯದ  ಕರಾವಳಿ ಭಾಗ ಸೇರಿದಂತೆ ವಿವಿಧೆಡೆ ಪ್ರಚೋದನಾಕಾರಿ ಭಾಷಣ ಮಾಡಿದವರು...

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

Related Articles

Popular Categories

error: Content is protected !!