Tuesday | June 2, 2026 |

ಬೌರಿಂಗ್‌ ವೈದ್ಯಕೀಯ ಕಾಲೇಜಿಗೆ ಅಟಲ್‌ ಹೆಸರು; ಉತ್ತರದ ಚಾಳಿ ಮುಂದುವರಿಕೆ

ಬೆಂಗಳೂರು; ಐತಿಹಾಸಿಕ ನಗರ, ಸ್ಮಾರಕ ಹಾಗೂ ಸಾರ್ವಜನಿಕ ಸಂಸ್ಥೆಗಳ ಹೆಸರು ಬದಲಾಯಿಸುವ ಉತ್ತರ ಪ್ರದೇಶ ಸರ್ಕಾರದ ಚಾಳಿ ಇದೀಗ ರಾಜ್ಯ ಬಿಜೆಪಿ ಸರ್ಕಾರಕ್ಕೂ ಅಂಟಿದೆ.

ಸ್ವಾತಂತ್ರ್ಯ ಪೂರ್ವದ ದಿನಗಳಲ್ಲಿ ಬೆಂಗಳೂರು ನಗರದಲ್ಲಿದ್ದ ಏಕಮಾತ್ರ ನಾಗರಿಕ ವೈದ್ಯಕೀಯ ಸಂಸ್ಥೆ ಎಂಬ ಹೆಗ್ಗಳಿಕೆ ಹೊಂದಿರುವ ಬೌರಿಂಗ್‌ ಲೇಡಿ ಕರ್ಜನ್‌ ಆಸ್ಪತ್ರೆಯ ಆವರಣದಲ್ಲಿ ಉದ್ಧೇಶಿತ ವೈದ್ಯಕೀಯ ಕಾಲೇಜಿನ ಹೆಸರನ್ನು ಬದಲಿಸಿ ಅಟಲ್‌ ಬಿಹಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಎಂದು ಮರು ನಾಮಕರಣ ಮಾಡಿ ಆದೇಶ ಹೊರಡಿಸಿದೆ. ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್‌ ಅವರು ಆದೇಶದ ಪ್ರತಿಯನ್ನು ಟ್ವೀಟ್‌ ಮಾಡಿದ್ದಾರೆ.

ಮೂಲತಃ ಮೈಸೂರು ರಾಜ್ಯಕ್ಕೆ ಸೇರಿದ ವೈದ್ಯಕೀಯ ಸಂಸ್ಥೆಯಾಗಿದ್ದ ಬೌರಿಂಗ್‌ ಲೇಡಿ ಕರ್ಜನ್‌ ಆಸ್ಪತ್ರೆಯನ್ನು 1884 ರಲ್ಲಿ ಇದು ಸಿವಿಲ್ ಮತ್ತು ಮಿಲಿಟರಿ ಆಡಳಿತಕ್ಕೆ ವಹಿಸಲಾಗಿತ್ತು. ಈ ಆಸ್ಪತ್ರೆ 1890 ತನಕ ಬೆಂಗಳೂರಿನಲ್ಲಿದ್ದ ಏಕ ಮಾತ್ರ ನಾಗರಿಕ ವೈದ್ಯಕೀಯ ಸಂಸ್ಥೆ ಆಗಿತ್ತು. ಬ್ರಿಟಿಷ್ ಆಳ್ವಿಕೆಯ ಕಾಲದಲ್ಲಿ ಈ ಪ್ರದೇಶವು ಅವರ ದಂಡುಪ್ರದೇಶವಾಗಿತ್ತಲ್ಲದೆ ಈ ಬೌರಿಂಗ್ ಆಸ್ಪತ್ರೆಯನ್ನು ಐರೋಪ್ಯರ ಬಳಕೆಗಾಗಿ 1916ರಲ್ಲಿ ಸ್ಥಾಪನೆಯಾಗಿತ್ತು.

ಐತಿಹಾಸಿಕ ಪ್ರಾಮುಖ್ಯತೆ ಹೊಂದಿದ್ದ ಈ ಬೌರಿಂಗ್ ಆಸ್ಪತ್ರೆಯ ಆವರಣದಲ್ಲಿ ಹೊಸದಾಗಿ ಪ್ರಾರಂಭಿಸಲಾಗಿರುವ ‘ಬೌರಿಂಗ್ ಮತ್ತು ಲೇಡಿ ಕರ್ಜನ್ ವೈದಕೀಯ ಮಹಾ ವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ’ಯ ಹೆಸರನ್ನು ಬದಲಿಸಿ ಅದಕ್ಕೆ ಅಟಲ್ ಬಿಹಾರಿ ವಾಜಪೇಯಿ ಸಂಸ್ಥೆ ಎಂದು ಮರು ನಾಮಕರಣ ಮಾಡಿರುವುದಕ್ಕೆ ಆಕ್ಷೇಪಗಳು ಕೇಳಿ ಬಂದಿವೆ. ಹೆಸರು ಬದಲಿಸುವ ಮೂಲಕ ಇತಿಹಾಸಕ್ಕೆ ಅಪಚಾರ ಎಸಗಲಾಗಿದೆ ಎಂಬ ಆರೋಪಕ್ಕೆ ಬಿಜೆಪಿ ಸರ್ಕಾರ ಗುರಿಯಾಗಿದೆ.

ಈ ಹಿಂದೆಯೂ ಯಡಿಯೂರಪ್ಪ ಅವರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಒದಗಿಸುತ್ತಿದ್ದ ಸಾರಿಗೆ ಸೇವೆಗೂ ಅಟಲ್‌ ಸಾರಿಗೆ ಎಂದು ನಾಮಕರಣ ಮಾಡಿದ್ದನ್ನು ಸ್ಮರಿಸಬಹುದು.
ಪ್ರಸಕ್ತ ಸಾಲಿನಿಂದ ಬೌರಿಂಗ್ ಮತ್ತು ಲೇಡಿ ಕರ್ಜನ್ ವೈದ್ಯಕೀಯ ಕಾಲೇಜು ಆರಂಭಿಸಲು ಭಾರತೀಯ ವೈದ್ಯಕೀಯ ಪರಿಷತ್(ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾ) ಅನುಮತಿ ನೀಡಿದೆ. 2019-20ನೇ ಸಾಲಿನಿಂದ ಕಾಲೇಜಿಗೆ ಪ್ರವೇಶ ಆರಂಭವಾಗಲಿದ್ದು 150 ಮೆರಿಟ್ ವಿದ್ಯಾರ್ಥಿಗಳಿಗೆ ನೀಟ್ ಪರೀಕ್ಷೆಯ ಫಲಿತಾಂಶದ ಆಧಾರದ ಮೇಲೆ ಆಗಸ್ಟ್ ತಿಂಗಳಿಂದ ಪ್ರವೇಶ ಕಲ್ಪಿಸಲು ಸಕಲ ಸಿದ್ಧತೆ ನಡೆಯುತ್ತಿದೆ.

Hot this week

5 ವರ್ಷಕ್ಕಿಂತ ಹೆಚ್ಚಿನ ಅವಧಿಗೂ ಮೇಲ್ಪಟ್ಟು ಒಂದೇ ಸ್ಥಳದಲ್ಲಿ 17,842 ಅಧಿಕಾರಿ, ನೌಕರರು ಠಿಕಾಣಿ; ವರ್ಗಾವಣೆ ಮಾಡಿಲ್ಲವೇಕೆ?

ಬೆಂಗಳೂರು; ವಿಧಾನಸೌಧ, ವಿಕಾಸ ಸೌಧ ಮತ್ತು ಬಹುಮಹಡಿ ಕಟ್ಟಡಗಳಲ್ಲಿರುವ ಕರ್ನಾಟಕ ಸರ್ಕಾರದ...

39,437 ಕೋಟಿ ರು ಸಾರ್ವಜನಿಕ ವೆಚ್ಚ; ಸಮಗ್ರ ಘನ ತ್ಯಾಜ್ಯ ನಿರ್ವಹಣೆ ಯೋಜನೆಯಲ್ಲಿ ಅಕ್ರಮ ಆರೋಪ, ಸಿಬಿಐ ತನಿಖೆಗೆ ಕೇಂದ್ರ ಸಚಿವೆ ಪತ್ರ

ಬೆಂಗಳೂರು; 39,437 ಕೋಟಿ ಸಾರ್ವಜನಿಕ ವೆಚ್ಚವನ್ನು ಒಳಗೊಂಡಿರುವ ಸಮಗ್ರ ಘನ ತ್ಯಾಜ್ಯ...

ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪ; ಆರೋಪಿತರಿಗೆ ಮುಖ್ಯ ಇಂಜಿನಿಯರ್ ಹುದ್ದೆಗೆ ನೇಮಕ, ಲೋಕಾ ದಾಳಿಯನ್ನೇ ಅಣಕಿಸಿದ ಸರ್ಕಾರ

ಬೆಂಗಳೂರು;  ಆದಾಯಕ್ಕೂ  ಮೀರಿದ ಆಸ್ತಿ ಗಳಿಕೆ ಆರೋಪದಡಿಯಲ್ಲಿ ಲೋಕಾಯುಕ್ತ ದಾಳಿಗೆ ಒಳಗಾಗಿದ್ದ ...
Please Scan to make Your Contribution

Topics

5 ವರ್ಷಕ್ಕಿಂತ ಹೆಚ್ಚಿನ ಅವಧಿಗೂ ಮೇಲ್ಪಟ್ಟು ಒಂದೇ ಸ್ಥಳದಲ್ಲಿ 17,842 ಅಧಿಕಾರಿ, ನೌಕರರು ಠಿಕಾಣಿ; ವರ್ಗಾವಣೆ ಮಾಡಿಲ್ಲವೇಕೆ?

ಬೆಂಗಳೂರು; ವಿಧಾನಸೌಧ, ವಿಕಾಸ ಸೌಧ ಮತ್ತು ಬಹುಮಹಡಿ ಕಟ್ಟಡಗಳಲ್ಲಿರುವ ಕರ್ನಾಟಕ ಸರ್ಕಾರದ...

ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪ; ಆರೋಪಿತರಿಗೆ ಮುಖ್ಯ ಇಂಜಿನಿಯರ್ ಹುದ್ದೆಗೆ ನೇಮಕ, ಲೋಕಾ ದಾಳಿಯನ್ನೇ ಅಣಕಿಸಿದ ಸರ್ಕಾರ

ಬೆಂಗಳೂರು;  ಆದಾಯಕ್ಕೂ  ಮೀರಿದ ಆಸ್ತಿ ಗಳಿಕೆ ಆರೋಪದಡಿಯಲ್ಲಿ ಲೋಕಾಯುಕ್ತ ದಾಳಿಗೆ ಒಳಗಾಗಿದ್ದ ...

ಸಾರ್ವತ್ರಿಕ ರಜಾ ದಿನದ ವೇತನಕ್ಕೂ ಕತ್ತರಿ!; ಶಕ್ತಿ ಸೌಧದಲ್ಲೇ ಡೇಟಾ ಎಂಟ್ರಿ ಆಪರೇಟರ್‍‌ಗಳಿಗೆ ಶೋಷಣೆ, ದೌರ್ಜನ್ಯ ಆರೋಪ

ಬೆಂಗಳೂರು;  ಮುಖ್ಯಮಂತ್ರಿ ಸಚಿವಾಲಯವೂ ಸೇರಿದಂತೆ ಸಚಿವಾಲಯದ ಇತರೆ  ಕಚೇರಿಗಳಲ್ಲಿ ಹೊರಗುತ್ತಿಗೆಯಡಿಯಲ್ಲಿ  ಕಾರ್ಯನಿರ್ವಹಿಸುತ್ತಿರುವ...

Related Articles

Popular Categories

error: Content is protected !!