Tuesday | April 21, 2026 |

ಬೌರಿಂಗ್‌ ವೈದ್ಯಕೀಯ ಕಾಲೇಜಿಗೆ ಅಟಲ್‌ ಹೆಸರು; ಉತ್ತರದ ಚಾಳಿ ಮುಂದುವರಿಕೆ

ಬೆಂಗಳೂರು; ಐತಿಹಾಸಿಕ ನಗರ, ಸ್ಮಾರಕ ಹಾಗೂ ಸಾರ್ವಜನಿಕ ಸಂಸ್ಥೆಗಳ ಹೆಸರು ಬದಲಾಯಿಸುವ ಉತ್ತರ ಪ್ರದೇಶ ಸರ್ಕಾರದ ಚಾಳಿ ಇದೀಗ ರಾಜ್ಯ ಬಿಜೆಪಿ ಸರ್ಕಾರಕ್ಕೂ ಅಂಟಿದೆ.

ಸ್ವಾತಂತ್ರ್ಯ ಪೂರ್ವದ ದಿನಗಳಲ್ಲಿ ಬೆಂಗಳೂರು ನಗರದಲ್ಲಿದ್ದ ಏಕಮಾತ್ರ ನಾಗರಿಕ ವೈದ್ಯಕೀಯ ಸಂಸ್ಥೆ ಎಂಬ ಹೆಗ್ಗಳಿಕೆ ಹೊಂದಿರುವ ಬೌರಿಂಗ್‌ ಲೇಡಿ ಕರ್ಜನ್‌ ಆಸ್ಪತ್ರೆಯ ಆವರಣದಲ್ಲಿ ಉದ್ಧೇಶಿತ ವೈದ್ಯಕೀಯ ಕಾಲೇಜಿನ ಹೆಸರನ್ನು ಬದಲಿಸಿ ಅಟಲ್‌ ಬಿಹಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಎಂದು ಮರು ನಾಮಕರಣ ಮಾಡಿ ಆದೇಶ ಹೊರಡಿಸಿದೆ. ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್‌ ಅವರು ಆದೇಶದ ಪ್ರತಿಯನ್ನು ಟ್ವೀಟ್‌ ಮಾಡಿದ್ದಾರೆ.

ಮೂಲತಃ ಮೈಸೂರು ರಾಜ್ಯಕ್ಕೆ ಸೇರಿದ ವೈದ್ಯಕೀಯ ಸಂಸ್ಥೆಯಾಗಿದ್ದ ಬೌರಿಂಗ್‌ ಲೇಡಿ ಕರ್ಜನ್‌ ಆಸ್ಪತ್ರೆಯನ್ನು 1884 ರಲ್ಲಿ ಇದು ಸಿವಿಲ್ ಮತ್ತು ಮಿಲಿಟರಿ ಆಡಳಿತಕ್ಕೆ ವಹಿಸಲಾಗಿತ್ತು. ಈ ಆಸ್ಪತ್ರೆ 1890 ತನಕ ಬೆಂಗಳೂರಿನಲ್ಲಿದ್ದ ಏಕ ಮಾತ್ರ ನಾಗರಿಕ ವೈದ್ಯಕೀಯ ಸಂಸ್ಥೆ ಆಗಿತ್ತು. ಬ್ರಿಟಿಷ್ ಆಳ್ವಿಕೆಯ ಕಾಲದಲ್ಲಿ ಈ ಪ್ರದೇಶವು ಅವರ ದಂಡುಪ್ರದೇಶವಾಗಿತ್ತಲ್ಲದೆ ಈ ಬೌರಿಂಗ್ ಆಸ್ಪತ್ರೆಯನ್ನು ಐರೋಪ್ಯರ ಬಳಕೆಗಾಗಿ 1916ರಲ್ಲಿ ಸ್ಥಾಪನೆಯಾಗಿತ್ತು.

ಐತಿಹಾಸಿಕ ಪ್ರಾಮುಖ್ಯತೆ ಹೊಂದಿದ್ದ ಈ ಬೌರಿಂಗ್ ಆಸ್ಪತ್ರೆಯ ಆವರಣದಲ್ಲಿ ಹೊಸದಾಗಿ ಪ್ರಾರಂಭಿಸಲಾಗಿರುವ ‘ಬೌರಿಂಗ್ ಮತ್ತು ಲೇಡಿ ಕರ್ಜನ್ ವೈದಕೀಯ ಮಹಾ ವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ’ಯ ಹೆಸರನ್ನು ಬದಲಿಸಿ ಅದಕ್ಕೆ ಅಟಲ್ ಬಿಹಾರಿ ವಾಜಪೇಯಿ ಸಂಸ್ಥೆ ಎಂದು ಮರು ನಾಮಕರಣ ಮಾಡಿರುವುದಕ್ಕೆ ಆಕ್ಷೇಪಗಳು ಕೇಳಿ ಬಂದಿವೆ. ಹೆಸರು ಬದಲಿಸುವ ಮೂಲಕ ಇತಿಹಾಸಕ್ಕೆ ಅಪಚಾರ ಎಸಗಲಾಗಿದೆ ಎಂಬ ಆರೋಪಕ್ಕೆ ಬಿಜೆಪಿ ಸರ್ಕಾರ ಗುರಿಯಾಗಿದೆ.

ಈ ಹಿಂದೆಯೂ ಯಡಿಯೂರಪ್ಪ ಅವರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಒದಗಿಸುತ್ತಿದ್ದ ಸಾರಿಗೆ ಸೇವೆಗೂ ಅಟಲ್‌ ಸಾರಿಗೆ ಎಂದು ನಾಮಕರಣ ಮಾಡಿದ್ದನ್ನು ಸ್ಮರಿಸಬಹುದು.
ಪ್ರಸಕ್ತ ಸಾಲಿನಿಂದ ಬೌರಿಂಗ್ ಮತ್ತು ಲೇಡಿ ಕರ್ಜನ್ ವೈದ್ಯಕೀಯ ಕಾಲೇಜು ಆರಂಭಿಸಲು ಭಾರತೀಯ ವೈದ್ಯಕೀಯ ಪರಿಷತ್(ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾ) ಅನುಮತಿ ನೀಡಿದೆ. 2019-20ನೇ ಸಾಲಿನಿಂದ ಕಾಲೇಜಿಗೆ ಪ್ರವೇಶ ಆರಂಭವಾಗಲಿದ್ದು 150 ಮೆರಿಟ್ ವಿದ್ಯಾರ್ಥಿಗಳಿಗೆ ನೀಟ್ ಪರೀಕ್ಷೆಯ ಫಲಿತಾಂಶದ ಆಧಾರದ ಮೇಲೆ ಆಗಸ್ಟ್ ತಿಂಗಳಿಂದ ಪ್ರವೇಶ ಕಲ್ಪಿಸಲು ಸಕಲ ಸಿದ್ಧತೆ ನಡೆಯುತ್ತಿದೆ.

Hot this week

4,102.27 ಕೋಟಿ ರು ಮೊತ್ತಕ್ಕೆ ಬಳಕೆ ಪ್ರಮಾಣ ಪತ್ರ ವಿವರಗಳಿಲ್ಲ, ಕ್ರೆಡಿಟ್‌ ರೇಟಿಂಗ್‌ ಕುಸಿತವಾದರೂ ಎಚ್ಚರವಿಲ್ಲ, ಅಡವಿರಿಸಿದ್ದ ಸ್ವತ್ತುಗಳನ್ನೂ ಹಿಂಪಡೆದಿಲ್ಲ

ಬೆಂಗಳೂರು;  ರಾಜ್ಯ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ  ಬೃಹತ್ ಬೆಂಗಳೂರು ಮಹಾನಗರಪಾಲಿಕೆಗೆ ವಿವಿಧ...

ಮುಕ್ತ ವಿವಿ ಕುಲಪತಿಗೆ ವಿಶೇಷ ವಿನಾಯಿತಿಯ ನಿರಂಕುಶ ಅಧಿಕಾರ?; ಸರ್ಕಾರದ ಕೆಂಗಣ್ಣಿಗೆ ಮತ್ತೆ ಗುರಿಯಾದ ರಾಜ್ಯಪಾಲ!

ಬೆಂಗಳೂರು; ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಡಾ ಶರಣಪ್ಪ ವಿ...

300ಕ್ಕೂ ಹೆಚ್ಚು ಖಾತೆಗಳಲ್ಲಿ 3,171.95 ಕೋಟಿ ರು ಬ್ಯಾಂಕ್‌ ಬ್ಯಾಲೆನ್ಸ್‌; ಲೆಕ್ಕ ಪರಿಶೋಧಕರಿಗೇ ದಾಖಲೆ ನೀಡದ ಜಿಬಿಎ, ಇಷ್ಟೊಂದು ಅಶಿಸ್ತೇ?

ಬೆಂಗಳೂರು; ವಿವಿಧ ಬ್ಯಾಂಕ್‌ಗಳಲ್ಲಿ  300ಕ್ಕೂ ಹೆಚ್ಚು ಖಾತೆಗಳಲ್ಲಿ 3,171.95 ಕೋಟಿ ರು ಬ್ಯಾಂಕ್‌...

ಹಾರೋಹಳ್ಳಿ ಭೂ ಹಗರಣ; ದಿ ಫೈಲ್ ವರದಿ ಬೆನ್ನಲ್ಲೇ 108 ಕೋಟಿ ಮೌಲ್ಯದ ಜಮೀನು ಸರ್ಕಾರದ ಹೆಸರಿಗೆ ದಾಖಲು

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತವರು ಕ್ಷೇತ್ರದಲ್ಲಿಯೇ  ನಕಲಿ...

Topics

ಮುಕ್ತ ವಿವಿ ಕುಲಪತಿಗೆ ವಿಶೇಷ ವಿನಾಯಿತಿಯ ನಿರಂಕುಶ ಅಧಿಕಾರ?; ಸರ್ಕಾರದ ಕೆಂಗಣ್ಣಿಗೆ ಮತ್ತೆ ಗುರಿಯಾದ ರಾಜ್ಯಪಾಲ!

ಬೆಂಗಳೂರು; ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಡಾ ಶರಣಪ್ಪ ವಿ...

300ಕ್ಕೂ ಹೆಚ್ಚು ಖಾತೆಗಳಲ್ಲಿ 3,171.95 ಕೋಟಿ ರು ಬ್ಯಾಂಕ್‌ ಬ್ಯಾಲೆನ್ಸ್‌; ಲೆಕ್ಕ ಪರಿಶೋಧಕರಿಗೇ ದಾಖಲೆ ನೀಡದ ಜಿಬಿಎ, ಇಷ್ಟೊಂದು ಅಶಿಸ್ತೇ?

ಬೆಂಗಳೂರು; ವಿವಿಧ ಬ್ಯಾಂಕ್‌ಗಳಲ್ಲಿ  300ಕ್ಕೂ ಹೆಚ್ಚು ಖಾತೆಗಳಲ್ಲಿ 3,171.95 ಕೋಟಿ ರು ಬ್ಯಾಂಕ್‌...

ಹಾರೋಹಳ್ಳಿ ಭೂ ಹಗರಣ; ದಿ ಫೈಲ್ ವರದಿ ಬೆನ್ನಲ್ಲೇ 108 ಕೋಟಿ ಮೌಲ್ಯದ ಜಮೀನು ಸರ್ಕಾರದ ಹೆಸರಿಗೆ ದಾಖಲು

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತವರು ಕ್ಷೇತ್ರದಲ್ಲಿಯೇ  ನಕಲಿ...

ಸರ್ಕಾರದ ಪೂರ್ವಾನುಮೋದನೆ ಇಲ್ಲದಿದ್ದರೂ ದಲಿತರ ಜಮೀನು ಭೂಪರಿವರ್ತನೆಗೆ ಶಿಫಾರಸ್ಸು; ತಹಶೀಲ್ದಾರ್ ಭಾಗಿ!

ಬೆಂಗಳೂರು; ಪಿಟಿಸಿಎಲ್ ಕಾಯ್ದೆ,  ಸರ್ಕಾರಿ ಗೋಮಾಳ ಮತ್ತು ಅರಣ್ಯ ಪ್ರದೇಶದ ಜಮೀನುಗಳ...

ಕೋಲಾರ ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್‌ನಲ್ಲಿ ಬಹುಕೋಟಿ ಹಗರಣ; ಲೋಕಾಯುಕ್ತದಿಂದ ತನಿಖೆ, ಹೊರಬಿದ್ದ ಆದೇಶ

ಬೆಂಗಳೂರು; ಕೋಲಾರ ಮತ್ತು ಚಿಕ್ಕಬಳ್ಳಾಪುರ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ಹಿಂದಿನ ಕಾಂಗ್ರೆಸ್‌...

ಪುರಾತತ್ವ ಇಲಾಖೆಯಲ್ಲಿಯೂ ಶೇ.60ರಷ್ಟು ಕಮಿಷನ್‌ಗೆ ಬೇಡಿಕೆ; ಲಂಚದ ಪ್ರಮಾಣ ಕಡಿಮೆ ಮಾಡಿಸಲು ಅಲವತ್ತುಕೊಂಡ ಗುತ್ತಿಗೆದಾರರು

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲಿ ಕಚೇರಿ ಹೊಂದಿರುವ  ಪುರಾತತ್ವ...

Related Articles

Popular Categories

error: Content is protected !!