Wednesday | August 26, 2026 |

ಬೌರಿಂಗ್‌ ವೈದ್ಯಕೀಯ ಕಾಲೇಜಿಗೆ ಅಟಲ್‌ ಹೆಸರು; ಉತ್ತರದ ಚಾಳಿ ಮುಂದುವರಿಕೆ

ಬೆಂಗಳೂರು; ಐತಿಹಾಸಿಕ ನಗರ, ಸ್ಮಾರಕ ಹಾಗೂ ಸಾರ್ವಜನಿಕ ಸಂಸ್ಥೆಗಳ ಹೆಸರು ಬದಲಾಯಿಸುವ ಉತ್ತರ ಪ್ರದೇಶ ಸರ್ಕಾರದ ಚಾಳಿ ಇದೀಗ ರಾಜ್ಯ ಬಿಜೆಪಿ ಸರ್ಕಾರಕ್ಕೂ ಅಂಟಿದೆ.

ಸ್ವಾತಂತ್ರ್ಯ ಪೂರ್ವದ ದಿನಗಳಲ್ಲಿ ಬೆಂಗಳೂರು ನಗರದಲ್ಲಿದ್ದ ಏಕಮಾತ್ರ ನಾಗರಿಕ ವೈದ್ಯಕೀಯ ಸಂಸ್ಥೆ ಎಂಬ ಹೆಗ್ಗಳಿಕೆ ಹೊಂದಿರುವ ಬೌರಿಂಗ್‌ ಲೇಡಿ ಕರ್ಜನ್‌ ಆಸ್ಪತ್ರೆಯ ಆವರಣದಲ್ಲಿ ಉದ್ಧೇಶಿತ ವೈದ್ಯಕೀಯ ಕಾಲೇಜಿನ ಹೆಸರನ್ನು ಬದಲಿಸಿ ಅಟಲ್‌ ಬಿಹಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಎಂದು ಮರು ನಾಮಕರಣ ಮಾಡಿ ಆದೇಶ ಹೊರಡಿಸಿದೆ. ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್‌ ಅವರು ಆದೇಶದ ಪ್ರತಿಯನ್ನು ಟ್ವೀಟ್‌ ಮಾಡಿದ್ದಾರೆ.

ಮೂಲತಃ ಮೈಸೂರು ರಾಜ್ಯಕ್ಕೆ ಸೇರಿದ ವೈದ್ಯಕೀಯ ಸಂಸ್ಥೆಯಾಗಿದ್ದ ಬೌರಿಂಗ್‌ ಲೇಡಿ ಕರ್ಜನ್‌ ಆಸ್ಪತ್ರೆಯನ್ನು 1884 ರಲ್ಲಿ ಇದು ಸಿವಿಲ್ ಮತ್ತು ಮಿಲಿಟರಿ ಆಡಳಿತಕ್ಕೆ ವಹಿಸಲಾಗಿತ್ತು. ಈ ಆಸ್ಪತ್ರೆ 1890 ತನಕ ಬೆಂಗಳೂರಿನಲ್ಲಿದ್ದ ಏಕ ಮಾತ್ರ ನಾಗರಿಕ ವೈದ್ಯಕೀಯ ಸಂಸ್ಥೆ ಆಗಿತ್ತು. ಬ್ರಿಟಿಷ್ ಆಳ್ವಿಕೆಯ ಕಾಲದಲ್ಲಿ ಈ ಪ್ರದೇಶವು ಅವರ ದಂಡುಪ್ರದೇಶವಾಗಿತ್ತಲ್ಲದೆ ಈ ಬೌರಿಂಗ್ ಆಸ್ಪತ್ರೆಯನ್ನು ಐರೋಪ್ಯರ ಬಳಕೆಗಾಗಿ 1916ರಲ್ಲಿ ಸ್ಥಾಪನೆಯಾಗಿತ್ತು.

ಐತಿಹಾಸಿಕ ಪ್ರಾಮುಖ್ಯತೆ ಹೊಂದಿದ್ದ ಈ ಬೌರಿಂಗ್ ಆಸ್ಪತ್ರೆಯ ಆವರಣದಲ್ಲಿ ಹೊಸದಾಗಿ ಪ್ರಾರಂಭಿಸಲಾಗಿರುವ ‘ಬೌರಿಂಗ್ ಮತ್ತು ಲೇಡಿ ಕರ್ಜನ್ ವೈದಕೀಯ ಮಹಾ ವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ’ಯ ಹೆಸರನ್ನು ಬದಲಿಸಿ ಅದಕ್ಕೆ ಅಟಲ್ ಬಿಹಾರಿ ವಾಜಪೇಯಿ ಸಂಸ್ಥೆ ಎಂದು ಮರು ನಾಮಕರಣ ಮಾಡಿರುವುದಕ್ಕೆ ಆಕ್ಷೇಪಗಳು ಕೇಳಿ ಬಂದಿವೆ. ಹೆಸರು ಬದಲಿಸುವ ಮೂಲಕ ಇತಿಹಾಸಕ್ಕೆ ಅಪಚಾರ ಎಸಗಲಾಗಿದೆ ಎಂಬ ಆರೋಪಕ್ಕೆ ಬಿಜೆಪಿ ಸರ್ಕಾರ ಗುರಿಯಾಗಿದೆ.

ಈ ಹಿಂದೆಯೂ ಯಡಿಯೂರಪ್ಪ ಅವರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಒದಗಿಸುತ್ತಿದ್ದ ಸಾರಿಗೆ ಸೇವೆಗೂ ಅಟಲ್‌ ಸಾರಿಗೆ ಎಂದು ನಾಮಕರಣ ಮಾಡಿದ್ದನ್ನು ಸ್ಮರಿಸಬಹುದು.
ಪ್ರಸಕ್ತ ಸಾಲಿನಿಂದ ಬೌರಿಂಗ್ ಮತ್ತು ಲೇಡಿ ಕರ್ಜನ್ ವೈದ್ಯಕೀಯ ಕಾಲೇಜು ಆರಂಭಿಸಲು ಭಾರತೀಯ ವೈದ್ಯಕೀಯ ಪರಿಷತ್(ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾ) ಅನುಮತಿ ನೀಡಿದೆ. 2019-20ನೇ ಸಾಲಿನಿಂದ ಕಾಲೇಜಿಗೆ ಪ್ರವೇಶ ಆರಂಭವಾಗಲಿದ್ದು 150 ಮೆರಿಟ್ ವಿದ್ಯಾರ್ಥಿಗಳಿಗೆ ನೀಟ್ ಪರೀಕ್ಷೆಯ ಫಲಿತಾಂಶದ ಆಧಾರದ ಮೇಲೆ ಆಗಸ್ಟ್ ತಿಂಗಳಿಂದ ಪ್ರವೇಶ ಕಲ್ಪಿಸಲು ಸಕಲ ಸಿದ್ಧತೆ ನಡೆಯುತ್ತಿದೆ.

Hot this week

ಟೆಂಡರ್ ಇಲ್ಲದೆಯೇ 3.11 ಕೋಟಿ ನೇರ ಹೂಡಿಕೆ, ಮುಂಗಡ ಹಣ ಹೊಂದಾಣಿಕೆಯಲ್ಲೂ ವಿಳಂಬ, ಲಕ್ಷಾಂತರ ರು ನಷ್ಟ; ಮಹರ್ಷಿ ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಅಕ್ರಮ!

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಯಾವುದೇ ಟೆಂಡರ್‍‌ ಕರೆಯದೇ ನೇರವಾಗಿ...

ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಲೋಪ; ಹಣ ಪಾವತಿಯಲ್ಲಿ ಸರ್ಕಾರದ ಆದೇಶಗಳ ಉಲ್ಲಂಘನೆ, 51.21 ಕೋಟಿ ಮೊತ್ತದ ವಹಿವಾಟು ಪಾರದರ್ಶಕವಾಗಿವೆಯೇ?

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು ಹಣ ಪಾವತಿ ಸಂದರ್ಭಗಳಲ್ಲಿ ಸರ್ಕಾರದ...

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...
Please Scan to make Your Contribution

Topics

ಟೆಂಡರ್ ಇಲ್ಲದೆಯೇ 3.11 ಕೋಟಿ ನೇರ ಹೂಡಿಕೆ, ಮುಂಗಡ ಹಣ ಹೊಂದಾಣಿಕೆಯಲ್ಲೂ ವಿಳಂಬ, ಲಕ್ಷಾಂತರ ರು ನಷ್ಟ; ಮಹರ್ಷಿ ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಅಕ್ರಮ!

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಯಾವುದೇ ಟೆಂಡರ್‍‌ ಕರೆಯದೇ ನೇರವಾಗಿ...

ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಲೋಪ; ಹಣ ಪಾವತಿಯಲ್ಲಿ ಸರ್ಕಾರದ ಆದೇಶಗಳ ಉಲ್ಲಂಘನೆ, 51.21 ಕೋಟಿ ಮೊತ್ತದ ವಹಿವಾಟು ಪಾರದರ್ಶಕವಾಗಿವೆಯೇ?

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು ಹಣ ಪಾವತಿ ಸಂದರ್ಭಗಳಲ್ಲಿ ಸರ್ಕಾರದ...

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...

ನೀಟ್‌ ಪರೀಕ್ಷೆಯಿಂದ ವಿನಾಯಿತಿ; ತಮಿಳುನಾಡು ಮಾದರಿಯಲ್ಲಿ ನಿರ್ಣಯ ಮಂಡಿಸಲು ರಾಜ್ಯ ಸಜ್ಜು, ಕಾನೂನುಬದ್ಧ ವಿನಾಯಿತಿಗೆ ಪ್ರಸ್ತಾವ

ಬೆಂಗಳೂರು; ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶ ವ್ಯವಸ್ಥೆಯು ರಾಜ್ಯದ ಶೈಕ್ಷಣಿಕ...

Related Articles

Popular Categories

error: Content is protected !!