Thursday | July 16, 2026 |

ಕೇಂದ್ರದ ಒಬಿಸಿ ಮೀಸಲಾತಿ ಪಟ್ಟಿಗೆ ವೀರಶೈವ ಲಿಂಗಾಯತ ಸಮುದಾಯ; ತರಾತುರಿಯ ಶಿಫಾರಸ್ಸು

ಬೆಂಗಳೂರು; ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸಿ ಲಿಂಗಾಯತ ಮತ ಬ್ಯಾಂಕ್‌ನ್ನು ಬಲಪಡಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇದೀಗ ಇನ್ನೂ ಒಂದು ಹೆಜ್ಜೆ ಮುಂದಡಿ ಇಟ್ಟಿದ್ದಾರೆ. ವೀರಶೈವ ಲಿಂಗಾಯತ ಸಮುದಾಯವನ್ನು ಕೇಂದ್ರ ಸರ್ಕಾರದ ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಗೆ ಸೇರ್ಪಡೆ ಮಾಡುವ ಕುರಿತು ಕೇಂದ್ರ ಸರ್ಕಾರಕ್ಕೆ ತರಾತುರಿಯಲ್ಲಿ ಶಿಫಾರಸ್ಸು ಮಾಡಲು ಮುಂದಾಗಿದ್ದಾರೆ.

ಯಡಿಯೂರಪ್ಪ ಅವರು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ. ರಾಜಕೀಯ ಚಟುವಟಿಕೆಗಳು  ಬಿರುಸುಪಡೆದುಕೊಂಡಿವೆ. ಈ ನಡುವೆಯೇ ಕೇಂದ್ರ ಸರ್ಕಾರದ ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಗೆ ವೀರಶೈವ ಲಿಂಗಾಯತ ಸಮುದಾಯವನ್ನು ಸೇರ್ಪಡೆಗೊಳಿಸಲು ಮಾಡಲಿರುವ ಶಿಫಾರಸ್ಸು, ರಾಜಕೀಯವಾಗಿಯೂ ಮಹತ್ವ ಪಡೆದುಕೊಂಡಿದೆ.

ಒಂದು ವೇಳೆ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಸಲು ಹೈಕಮಾಂಡ್‌ ನಿರ್ಧರಿಸಿದ್ದರೇ ವೀರಶೈವ ಲಿಂಗಾಯತ ಸಮುದಾಯವನ್ನು ಕೇಂದ್ರ ನಾಯಕರ ವಿರುದ್ಧ ಎತ್ತಿಕಟ್ಟುವ ಹುನ್ನಾರವೂ ಅಡಗಿದೆ ಎಂದು ಹೇಳಲಾಗಿದೆ.

ಕೇಂದ್ರ ಸರ್ಕಾರದ ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಗೆ ಸೇರ್ಪಡೆ ಮಾಡಲು ಶಿಫಾರಸ್ಸು ಮಾಡುವ ಸಂಬಂಧ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಸಂಪುಟದ ಅನುಮೋದನೆಗೆ ತರಾತುರಿಯಲ್ಲಿ (ಹಿಂವಿ ಸಿ 609/2020) ಪ್ರಸ್ತಾವನೆ ಸಲ್ಲಿಸಿದೆ. ನಾಳೆ ನಡೆಯಲಿರುವ ಸಚಿವ ಸಂಪುಟದ ಅನುಮೋದನೆಯೂ ದೊರೆಯುವ ಸಾಧ್ಯತೆಗಳಿವೆ ಎನ್ನಲಾಗಿದೆ. ಸಚಿವ ಸಂಪುಟದ ಕಾರ್ಯಸೂಚಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

ವೀರಶೈವ ಲಿಂಗಾಯತ ಸಮುದಾಯವನ್ನು ಒಬಿಸಿ ಪಟ್ಟಿಗೆ ಸೇರ್ಪಡೆಗೊಳಿಸಬೇಕು ಎಂದು ಜಾಗತಿಕ ಲಿಂಗಾಯತ ಮಹಾಸಭಾ ಕೂಡ ಹಿಂದಿನ ಕಾಂಗ್ರೆಸ್‌ ಸರ್ಕಾರದ ಮಮುಂದೆ ಪ್ರತಿಪಾದಿಸಿತ್ತು. ಲಿಂಗಾಯತ ಸಮುದಾಯದಲ್ಲಿ ಒಟ್ಟು 102 ಜಾತಿಗಳನ್ನು ಗುರುತಿಸಲಾಗಿದೆ. ಅದರಲ್ಲಿ ಈಗಾಗಲೇ 30 ಜಾತಿಗಳು ಒಬಿಸಿ ಪಟ್ಟಿಯಲ್ಲಿವೆ. ಒಬಿಸಿ ಪಟ್ಟಿಗೆ ಸೇರಿಸುವುದಾದರೆ ಉಳಿದ 72 ಜಾತಿಗಳನ್ನು ಸೇರಿಸಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸುವುದಾದರೆ ಲಿಂಗಾಯತ ಶಿರೋನಾಮೆಯಲ್ಲೇ ಕೊಡಬೇಕು ಎಂದು ಮಹಾಸಭಾ ಹಕ್ಕೊತ್ತಾಯ ಮಂಡಿಸಿತ್ತು.

ಆದರೀಗ ಬಿಜೆಪಿ ಸರ್ಕಾರವು ಲಿಂಗಾಯತ ಶಿರೋನಾಮೆಯಡಿಯಲ್ಲಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡದೆಯೇ ವೀರಶೈವ ಹೆಸರನ್ನೂ ಸೇರ್ಪಡೆಗೊಳಿಸಿರುವುದು ಜಾಗತಿಕ ಲಿಂಗಾಯತ ಮಹಾಸಭಾದ ಕೆಂಗಣ್ಣಿಗೂ ಗುರಿಯಾಗುವ ಸಾಧ್ಯತೆಗಳಿವೆ.

ಮಹಾರಾಷ್ಟ್ರದಲ್ಲಿ ಮರಾಠ ಸಮುದಾಯಕ್ಕೆ ನೀಡಿರುವ ಮೀಸಲಾತಿ ಮಾದರಿಯಲ್ಲೇ ಕರ್ನಾಟಕದಲ್ಲಿ ವೀರಶೈವ ಲಿಂಗಾಯತರಿಗೆ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ವೀರಶೈವ ಲಿಂಗಾಯತ ಸಮುದಾಯ ಪ್ರತಿನಿಧಿಗಳು ಪ್ರತಿಭಟನೆ ನಡೆಸಿದ್ದನ್ನು ಸ್ಮರಿಸಬಹುದು.
ಲಿಂಗಾಯತ ಸಮುದಾಯದಲ್ಲಿ ನಮಗೆ ಅಲ್ಪಸಂಖ್ಯಾತ ಸ್ಥಾನಮಾನ ಬೇಡ ಆದರೆ ಮೀಸಲಾತಿ ಬೇಕಾಗಿದೆ. ಸರ್ಕಾರವು ಆರ್ಥಿಕವಾಗಿ ಹಿಂದುಳಿದ ಸಮುದಾಯದವರನ್ನು ಗುರುತಿಸಿ ಮೀಸಲಾತಿ ನೀಡಬೇಕು, ಇತ್ತೀಚೆಗೆ ಮಹಾರಾಷ್ಟ್ರ ಸರ್ಕಾರ ಮರಾಠಿಗರಿಗೆ ನೀಡಿರುವ ರೀತಿಯಲ್ಲಿ ಕರ್ನಾಟಕದಲ್ಲಿ ವೀರಶೈವ ಲಿಂಗಾಯತರಿಗೂ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿದ್ದರು.

Hot this week

35,280 ಚಾಲ್ತಿಯಲ್ಲಿಲ್ಲದ ಬ್ಯಾಂಕ್‌ ಖಾತೆಗಳಲ್ಲಿ 239.66 ಕೋಟಿ; ಅಭಿವೃದ್ಧಿ ಯೋಜನೆಗಳಿಗೆ ಬಳಸದೇ ನಿರ್ಲಕ್ಷ್ಯ, 14.37 ಕೋಟಿ ಬಡ್ಡಿ ನಷ್ಟ

ಬೆಂಗಳೂರು; ರಾಜ್ಯದ ಗ್ರಾಮ ಪಂಚಾಯ್ತಿಗಳು  ಚಾಲ್ತಿಯಲ್ಲೇ ಇಲ್ಲದ 35,280  ಬ್ಯಾಂಕ್‌ ಖಾತೆಗಳಲ್ಲಿ ...

ಸರ್ಕಾರಿ ಲೆಕ್ಕಪತ್ರಗಳ ಮರು ಹೊಂದಾಣಿಕೆಯಲ್ಲಿ ಲೋಪ; ಆದಾಯ, ಸ್ವೀಕೃತಿ, ಬಂಡವಾಳ ವೆಚ್ಚದಲ್ಲಿ ವ್ಯತ್ಯಾಸ, ಕಳವಳ ವ್ಯಕ್ತಪಡಿಸಿದ ಲೆಕ್ಕಪರಿಶೋಧನಾ ಮಹಾನಿರ್ದೇಶಕ

ಬೆಂಗಳೂರು; ಸರ್ಕಾರಿ ಲೆಕ್ಕಪತ್ರಗಳಲ್ಲಿ ಸಂಪೂರ್ಣ ನಿಖರತೆ, ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಖಚಿತಪಡಿಸಬೇಕಿದ್ದ...

ಕಲ್ಲು ಸಕ್ಕರೆ, ಖರ್ಜೂರ ಪ್ರಸಾದ; ದುಪ್ಪಟ್ಟು ದರದಲ್ಲಿ ಮಾರಾಟ, ಭಕ್ತರಿಗೆ ಅನಗತ್ಯ ಆರ್ಥಿಕ ಹೊರೆ, ನ್ಯಾಯಾಲಯ ಆದೇಶವೂ ಉಲ್ಲಂಘನೆ

ಬೆಂಗಳೂರು; ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಪ್ರಾಧಿಕಾರವು ನಿಗದಿತ ದರಕ್ಕಿಂತಲೂ ಹೆಚ್ಚುವರಿ ಅಂದರೇ...

ನ್ಯಾಕ್‌, ಎನ್‌ಐಆರ್‍‌ಎಫ್‌ ಮಾನದಂಡ; ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟ ಆತಂಕದ ಪ್ರವೃತ್ತಿ, ಆಯೋಗ ಕಳವಳ

ಬೆಂಗಳೂರು; ನ್ಯಾಕ್‌ ಮತ್ತು ಎನ್‌ಐಆರ್‍‌ಎಫ್‌ ಪ್ರಕಾರ ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟವು...

ಎಬಿ-ಎಆರ್‍‌ಕೆ ಯೋಜನೆಯಲ್ಲಿ ಅಕ್ರಮ; ಜಿಮ್ಸ್‌ ಸಿಬ್ಬಂದಿ, ಖಾಸಗಿ ಆಸ್ಪತ್ರೆ ಶಾಮೀಲು, ರಾಜೀನಾಮೆ ನೀಡಿದ್ದ ವೈದ್ಯರ ಹೆಸರಿನಲ್ಲೂ ನಕಲಿ ಓಆರ್‍‌ಎಸ್‌ ಸೃಜನೆ; ತನಿಖಾ ವರದಿ

ಬೆಂಗಳೂರು; ಆಯುಷ್ಮಾನ್‌ ಭಾರತ್ ಮತ್ತು  ಎಆರ್‍‌ಕೆ ಯೋಜನೆಯಡಿಯಲ್ಲಿ  ಕಲ್ಬುರ್ಗಿ ಜಿಲ್ಲಾ  ಆಸ್ಪತ್ರೆಯಿಂದ...
Please Scan to make Your Contribution

Topics

35,280 ಚಾಲ್ತಿಯಲ್ಲಿಲ್ಲದ ಬ್ಯಾಂಕ್‌ ಖಾತೆಗಳಲ್ಲಿ 239.66 ಕೋಟಿ; ಅಭಿವೃದ್ಧಿ ಯೋಜನೆಗಳಿಗೆ ಬಳಸದೇ ನಿರ್ಲಕ್ಷ್ಯ, 14.37 ಕೋಟಿ ಬಡ್ಡಿ ನಷ್ಟ

ಬೆಂಗಳೂರು; ರಾಜ್ಯದ ಗ್ರಾಮ ಪಂಚಾಯ್ತಿಗಳು  ಚಾಲ್ತಿಯಲ್ಲೇ ಇಲ್ಲದ 35,280  ಬ್ಯಾಂಕ್‌ ಖಾತೆಗಳಲ್ಲಿ ...

ಸರ್ಕಾರಿ ಲೆಕ್ಕಪತ್ರಗಳ ಮರು ಹೊಂದಾಣಿಕೆಯಲ್ಲಿ ಲೋಪ; ಆದಾಯ, ಸ್ವೀಕೃತಿ, ಬಂಡವಾಳ ವೆಚ್ಚದಲ್ಲಿ ವ್ಯತ್ಯಾಸ, ಕಳವಳ ವ್ಯಕ್ತಪಡಿಸಿದ ಲೆಕ್ಕಪರಿಶೋಧನಾ ಮಹಾನಿರ್ದೇಶಕ

ಬೆಂಗಳೂರು; ಸರ್ಕಾರಿ ಲೆಕ್ಕಪತ್ರಗಳಲ್ಲಿ ಸಂಪೂರ್ಣ ನಿಖರತೆ, ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಖಚಿತಪಡಿಸಬೇಕಿದ್ದ...

ಕಲ್ಲು ಸಕ್ಕರೆ, ಖರ್ಜೂರ ಪ್ರಸಾದ; ದುಪ್ಪಟ್ಟು ದರದಲ್ಲಿ ಮಾರಾಟ, ಭಕ್ತರಿಗೆ ಅನಗತ್ಯ ಆರ್ಥಿಕ ಹೊರೆ, ನ್ಯಾಯಾಲಯ ಆದೇಶವೂ ಉಲ್ಲಂಘನೆ

ಬೆಂಗಳೂರು; ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಪ್ರಾಧಿಕಾರವು ನಿಗದಿತ ದರಕ್ಕಿಂತಲೂ ಹೆಚ್ಚುವರಿ ಅಂದರೇ...

ನ್ಯಾಕ್‌, ಎನ್‌ಐಆರ್‍‌ಎಫ್‌ ಮಾನದಂಡ; ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟ ಆತಂಕದ ಪ್ರವೃತ್ತಿ, ಆಯೋಗ ಕಳವಳ

ಬೆಂಗಳೂರು; ನ್ಯಾಕ್‌ ಮತ್ತು ಎನ್‌ಐಆರ್‍‌ಎಫ್‌ ಪ್ರಕಾರ ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟವು...

ಜಿಎಸ್‌ಡಿಪಿ 23,34,000 ಕೋಟಿ, ಉನ್ನತ ಶಿಕ್ಷಣಕ್ಕಾಗಿ ಕೇವಲ 5,646 ಕೋಟಿ ರು ಖರ್ಚು; ಇತರೆ ರಾಜ್ಯಗಳಿಗಿಂತ ಕೆಳಗಿಳಿದ ಕರ್ನಾಟಕ

ಬೆಂಗಳೂರು; ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿ ಆಗಿದ್ದ ಮೊದಲನೇ ಆರ್ಥಿಕ...

Related Articles

Popular Categories

error: Content is protected !!