Saturday | May 2, 2026 |

ನೇಮಕಾತಿ ಅಕ್ರಮ; ನಿವೃತ್ತ ನ್ಯಾಯಮೂರ್ತಿ ಸಮಿತಿಗೆ ಅಪೆಕ್ಸ್‌ ಬ್ಯಾಂಕ್‌ ಅಸಹಕಾರ

ಬೆಂಗಳೂರು; ಗುಮಾಸ್ತರು ಹಾಗೂ ನಗದು ಗುಮಾಸ್ತರು ದರ್ಜೆಯ ಹುದ್ದೆಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾಗಿರುವ ಅವ್ಯವಹಾರ ಕುರಿತು ತನಿಖೆ ನಡೆಸಲು ನೇಮಕವಾಗಿರುವ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಸಮಿತಿಗೆ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್‌ ಬ್ಯಾಂಕ್‌ ಕಳೆದ ಒಂದು ವರ್ಷದಿಂದಲೂ ಅಸಹಕಾರ ತೋರುತ್ತಿದೆ.

ನೇಮಕಾತಿಗೆ ಸಂಬಂಧಿಸಿದಂತೆ ಬ್ಯಾಂಕ್‌ನ ಅಧಿಕಾರಿಗಳು ಕಡತ ಮತ್ತು ದಾಖಲೆಗಳನ್ನು ಸಮಿತಿಗೆ ಒದಗಿಸುತ್ತಿಲ್ಲ. ನೇಮಕಾತಿಯಲ್ಲಿ ನಡೆದಿದೆ ಎನ್ನಲಾಗಿರುವ ಅವ್ಯವಹಾರವನ್ನು ಮುಚ್ಚಿ ಹಾಕಲು ಹುನ್ನಾರದ ಭಾಗವಾಗಿಯೇ ಅಧಿಕಾರಿಗಳು ಅಸಹಕಾರ ತೋರುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಸಹಕಾರ ಸಚಿವ ಎಸ್‌ ಟಿ ಸೋಮಶೇಖರ್‌ ಅವರು ಈ ಬಗ್ಗೆ ಹೆಚ್ಚಿನ ಗಮನಹರಿಸಿಲ್ಲ ಎಂದು ತಿಳಿದು ಬಂದಿದೆ.

ಸಿಬ್ಬಂದಿ ನೇಮಕಾತಿಯಲ್ಲಿ ನಡೆದಿರುವ ಅವ್ಯವಹಾರವನ್ನು ತನಿಖೆ ನಡೆಸಲು ನೇಮಕವಾಗಿರುವ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎ ವಿ ಶ್ರೀನಿವಾಸ ರೆಡ್ಡಿ ಅವರು ಅಧಿಕಾರಿಗಳು ತೋರುತ್ತಿರುವ ಅಸಹಕಾರದ ಕುರಿತು 2020ರ ನವೆಂಬರ್‌ 14ರಂದು ಪತ್ರ ಬರೆದಿದ್ದಾರೆ. ‘ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖೆ/ವರದಿಯನ್ನು ಸಲ್ಲಿಸಲು ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ರೀತಿಯ ದಾಖಲೆ/ಕಡತಗಳನ್ನು ಒದಗಿಸಿರುವುದಿಲ್ಲ,’ ಎಂದು ಪತ್ರದಲ್ಲಿ ಶ್ರೀನಿವಾಸ ರೆಡ್ಡಿ ಅವರು ಪತ್ರ ಬರೆದಿದ್ದರು.

ಈ ಪತ್ರವನ್ನಾಧರಿಸಿ ಸಹಕಾರ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ತುಷಾರ್‌ ಗಿರಿನಾಥ್‌ ಅವರು 2020ರ ನವೆಂಬರ್‌ 27ರಂದು ಬ್ಯಾಂಕ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಪತ್ರ ಬರೆದಿದ್ದಾರೆ. ‘ ಅಪೆಕ್ಸ್‌ ಬ್ಯಾಂಕ್‌ನಿಂದ ತನಿಖೆಗೆ ಅಗತ್ಯವಿರುವ ಕಡತ/ದಾಖಲೆಗಳನ್ನು ಒದಗಿಸಬೇಕು ಮತ್ತು ಮೂಲಭೂತ ಸೌಕರ್ಯಗಳೊಂದಿಗೆ ಅಗತ್ಯವಾದ ವೆಚ್ಚವನ್ನು ಭರಿಸಬೇಕು,’ ಬ್ಯಾಂಕ್‌ನ ಸಿಇಒಗೆ ನಿರ್ದೇಶಿಸಿರುವುದು ಪತ್ರದಿಂದ ಗೊತ್ತಾಗಿದೆ.

ಗುಮಾಸ್ತರು ಹಾಗೂ ನಗದು ಗುಮಾಸ್ತರು ದರ್ಜೆಯ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿತ್ತು. ಹುದ್ದೆಗಳ ನೇಮಕಾತಿ ಸಂದರ್ಭದಲ್ಲಿ ಅರ್ಹತಾ ಪರೀಕ್ಷೆಯಲ್ಲಿ ಅತಿ ಹೆಚ್ಚಿನ ಅಂಕ ಗಳಿಸಿ ಪ್ರಥಮ ಸ್ಥಾನದಲ್ಲಿದ್ದ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳದೆ ಕಡಿಮೆ ಅಂಕಗಳಿಸಿದವರನ್ನು ನೇಮಕ ಮಾಡಿಕೊಂಡು ಅರ್ಹ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ ಎಂಬ ದೂರಿನ ಕುರಿತು ಪ್ರಾಥಮಿಕ ತನಿಖೆ ನಡೆಸಲು ಸರ್ಕಾರ ಮುಂದಾಗಿತ್ತು.

ಈ ಸಂಬಂಧ ತನಿಖೆ ನಡೆಸಲು ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎ ವಿ ಶ್ರೀನಿವಾಸರೆಡ್ಡಿ ಅವರನ್ನು 2019ರ ಜುಲೈ 20ರಂದು ಸರ್ಕಾರ ನೇಮಿಸಿತ್ತು. ಪ್ರಾಥಮಿಕ ತನಿಖೆ ನಡೆಸಿ ಸರ್ಕಾರಕ್ಕೆ 3 ತಿಂಗಳ ಒಳಗೆ ವರದಿ ಸಲ್ಲಿಸಲು ಸೂಚಿಸಲಾಗಿತ್ತು. ಈ ಮಧ್ಯೆ ಈ ನೇಮಕ ಪ್ರಕ್ರಿಯೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಬ್ಯಾಂಕ್‌ನ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಅಶ್ವತ್ಥ ಗೌಡ ಮತ್ತು ಅವರ ಸಹಾಯಕ ಮಂಜುನಾಥ್ ಎಂಬುವವರ ವಿರುದ್ಧ ಲೋಕಾಯುಕ್ತಕ್ಕೆ ಖಾಸಗಿ ದೂರು ದಾಖಲಾಗಿತ್ತು.

ಒಟ್ಟು 77 ಹುದ್ದೆಗಳು ಖಾಲಿ ಇದ್ದವು. ಇದರಲ್ಲಿ ಲಿಖಿತ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದವರಿಗೆ, ಸಂದರ್ಶನದಲ್ಲಿ ಕಡಿಮೆ ಅಂಕ ನೀಡಲಾಗಿದೆ. ಲಿಖಿತ ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿದವರಿಗೆ, ಸಂದರ್ಶನದಲ್ಲಿ ಹೆಚ್ಚು ಅಂಕ ನೀಡಲಾಗಿದೆ’ ಎಂದು ಎಂ.ಟಿ. ಗಿರೀಶ್ ಎಂಬುವರು ದೂರಿನಲ್ಲಿ ಆರೋಪಿಸಿದ್ದರು.

ಆದರೆ ಸಿಬ್ಬಂದಿ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳ ಕುರಿತು ತನಿಖೆ ನಡೆಸುವ ಅಧಿಕಾರ ತಮಗೆ ಇಲ್ಲ ಎಂದು ಲೋಕಾಯುಕ್ತರು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದರು. ಪ್ರಕರಣದ ಕುರಿತು ತನಿಖೆ ನಡೆಸುವಂತೆ ಕೋರಿ ಲೋಕಾಯುಕ್ತರಿಗೆ ಪ್ರಸ್ತಾವ ಸಲ್ಲಿಸಲಾಗಿತ್ತು. ಆದರೆ, ಲೋಕಾಯುಕ್ತ ಕಾಯ್ದೆಯ ಕಲಂ 8(1)(ಎ) ಹಾಗೂ ಸಹ ಕಲಂ ಶೆಡ್ಯೂಲ್ 2 (ಡಿ) ಪ್ರಕಾರ ಈ ಪ್ರಕರಣದ ತನಿಖೆ ನಡೆಸುವ ಅಧಿಕಾರ ತಮಗೆ ಇಲ್ಲ ಎಂದು ಲೋಕಾಯುಕ್ತರು ತಿಳಿಸಿದ್ದರು.

Hot this week

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

Topics

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

ಆಧಾರ್ ಕಾರ್ಡ್‌ಗಿಂತಲೂ ಶಕ್ತಿ ಸ್ಮಾರ್ಟ್‌ ದುಬಾರಿ, ಎಸ್‌ಪಿವಿ ರಚನೆಯಾದರೂ ಸಿಗದ ಕಾರ್ಡ್‌; 185 ಕೋಟಿ ವೆಚ್ಚ ಭರಿಸುವವರಾರು?

ಬೆಂಗಳೂರು; ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ  ಸೌಲಭ್ಯ ಕಲ್ಪಿಸುವ 'ಶಕ್ತಿ'...

ಟೆಲಿಕಾಂ ಕಂಪನಿಯಿಂದ ವಿಧಾನಸೌಧ ಟರೇಸ್‌ ಅನಧಿಕೃತ ಬಳಕೆ; ವಸೂಲಾಗದ ನೆಲಬಾಡಿಗೆ, ನಿಯಮ ಉಲ್ಲಂಘಿಸಿದ್ದರೂ ಕ್ರಮವಿಲ್ಲ

ಬೆಂಗಳೂರು; ಟೆಲಿಕಾಂ ಮೂಲಸೌಕರ್ಯ ಕಂಪನಿಗಳಲ್ಲಿ ಖ್ಯಾತಿ ಹೊಂದಿರುವ ಆಂಧ್ರ ಪ್ರದೇಶ ಮೂಲದ...

ನೀಟ್‌, ಕೆ-ಸಿಇಟಿ ತರಬೇತಿ; ಅಲ್ಪಸಂಖ್ಯಾತರ ಇಲಾಖೆಯಲ್ಲಿ ಟೆಂಡರ್ ನಿಯಮ ಉಲ್ಲಂಘನೆ, ನಿಯಮಬಾಹಿರ ಚಟುವಟಿಕೆ, ಸರ್ಕಾರಕ್ಕೆ ಲೀಗಲ್ ನೋಟೀಸ್‌

ಬೆಂಗಳೂರು; ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ವಸತಿ ಕಾಲೇಜು ವಿದ್ಯಾರ್ಥಿಗಳಿಗೆ ಆಫ್‌ಲೈನ್ ಮಾದರಿಯಲ್ಲಿ...

Related Articles

Popular Categories

error: Content is protected !!