Thursday | July 2, 2026 |

ಮರಾಠ ಅಭಿವೃದ್ಧಿ ಪ್ರಾಧಿಕಾರ ಆದೇಶಕ್ಕೆ ತಿದ್ದುಪಡಿ; ಪ್ರಾಧಿಕಾರದ ಬದಲಿಗೆ ನಿಗಮ ಎಂದ ಸರ್ಕಾರ

ಬೆಂಗಳೂರು; ಚಳಿಗಾಲದ ಅಧಿವೇಶನ ಹತ್ತಿರವಾದಂತೆ ಮತ್ತು ಕರ್ನಾಟಕ ಬಂದ್‌ಗೆ ಕನ್ನಡಪರ ಸಂಘಟನೆಗಳು ಸಜ್ಜುಗೊಳ್ಳುತ್ತಿರುವ ಹೊತ್ತಿನಲ್ಲೇ ರಾಜ್ಯ ಬಿಜೆಪಿ ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ನಿಗಮ ಎಂದು ಇದೀಗ ತಿದ್ದುಪಡಿ ಮಾಡಿದೆ.

ಮರಾಠ ಅಭಿವೃದ್ಧಿ ಪ್ರಾಧಿಕಾರ ರಚಿಸಿ ಸರ್ಕಾರ 2020ರ ನವೆಂಬರ್‌ 27ರಂದು ಹೊರಡಿಸಿದ್ದ ಆದೇಶಕ್ಕೆ ಡಿಸೆಂಬರ್‌ 1ರಂದು ತಿದ್ದುಪಡಿ ಆದೇಶ ಹೊರಡಿಸಿದೆ. ಇದರ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

ಬೆಳಗಾವಿ, ಬಸವಕಲ್ಯಾಣ ಮತ್ತು ಮಸ್ಕಿ ವಿಧಾಸಭೆ ಕ್ಷೇತ್ರ ಉಪ ಚುನಾವಣೆ ಹೊಸ್ತಿಲಲ್ಲಿರುವಾಗಲೇ ತರಾತುರಿಯಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿದ್ದ ಬಿಜೆಪಿ ಸರ್ಕಾರ 50 ಕೋಟಿ ಘೋಷಣೆ ಮಾಡಿತ್ತು. ಇದು ಕನ್ನಡ ಸಂಘಟನೆಗಳನ್ನು ಕೆರಳಿಸಿತ್ತಲ್ಲದೆ ಲಿಂಗಾಯತ ಸಮುದಾಯದ ಆಕ್ರೋಶಕ್ಕೂ ಕಾರಣವಾಗಿತ್ತು.

ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಯನ್ನು ಸಮರ್ಥಿಸಿಕೊಂಡಿದ್ದ ಬಿಜೆಪಿ ಸರ್ಕಾರ, ಪ್ರತಿರೋಧ ಹೆಚ್ಚುತ್ತಿದ್ದಂತೆ ಪ್ರಾಧಿಕಾರದ ಬದಲಿಗೆ ನಿಗಮ ಎಂದು ಬದಲಾಯಿಸಿ ಆಕ್ರೋಶವನ್ನು ತಣ್ಣಗಾಗಿಸಲು ಯತ್ನಿಸಿದೆ. ಕರ್ನಾಟಕ ಆರ್ಯವೈಶ್ಯ, ಅಲೆಮಾರಿ/ಅರೆ ಅಲೆಮಾರಿ, ಉಪ್ಪಾರ, ನಿಜಶರಣರ ಅಂಬಿಗರ ಚೌಡಯ್ಯ, ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿಗೆ ನಿಗಮ ಸ್ಥಾಪಿಸಿರುವುದನ್ನು ಸ್ಮರಿಸಬಹುದು.

ಬೆಳಗಾವಿಯಲ್ಲಿ ಕನ್ನಡಿಗರು ಮತ್ತು ಮರಾಠಿಗರ ನಡುವೆ ಲಾಗಾಯ್ತಿನಿಂದಲೂ ಸಂಘರ್ಷಗಳು ನಡೆಯುತ್ತಿವೆ. ಹೀಗಾಗಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಸಲ್ಲದು ಎಂಬುದು ಕನ್ನಡ ಸಂಘಟನೆಗಳು ಮುಂದೊಡ್ಡಿದ್ದ ವಾದವನ್ನು ಆಲಿಸಿದ್ದ ಬಿಜೆಪಿ ಸರ್ಕಾರ, ಇದು ಮರಾಠ ಭಾಷೆಯ ಪ್ರಾಧಿಕಾರವಲ್ಲ, ಬದಲಿಗೆ ಕರ್ನಾಟಕದಲ್ಲಿ ಮರಾಠಿಗರು ಹಿಂದುಳಿದಿದ್ದಾರೆ. ಅವರ ಅಭಿವೃದ್ಧಿಗಾಗಿ ಪ್ರಾಧಿಕಾರ ರಚನೆ ಮಾಡಲಾಗಿದೆ ಎಂದು ಸಮರ್ಥಿಸಿಕೊಂಡಿತ್ತು. ಸರ್ಕಾರದ ಈ ಸಮರ್ಥನೆಯನ್ನು ಒಪ್ಪದ ಕನ್ನಡ ಪರ ಸಂಘಟನೆಗಳು ಇದೇ 5ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿವೆ.

Hot this week

ರಾಷ್ಟ್ರೀಯ ಪರೀಕ್ಷೆಗಳಿಂದಾಗಿ ಎಸ್‌ ಸಿ, ಎಸ್‌ ಟಿ ವಿದ್ಯಾರ್ಥಿಗಳ ದಾಖಲಾತಿಯಲ್ಲಿ ಕುಸಿತ, ನಗರ ವಿಶ್ವವಿದ್ಯಾಲಯಗಳೊಂದಿಗೆ ಗ್ರಾಮೀಣ ಕಾಲೇಜುಗಳ ವಿಲೀನಕ್ಕೆ ಆಯೋಗ ಅಸಮ್ಮತಿ

ಬೆಂಗಳೂರು;  ಸಾಮಾನ್ಯ ಶಿಕ್ಷಣ ಕೋರ್ಸ್‌ಗಳಲ್ಲಿ ರಾಷ್ಟ್ರೀಯ ಪ್ರವೇಶಗಳ ಪರೀಕ್ಷೆಗಳನ್ನು ಪರಿಚಯಿಸಿದ್ದರಿಂದಾಗಿ ಪರಿಶಿಷ್ಟ...

ವಿಟಿಯು ಕುಲಪತಿ ವಿರುದ್ಧದ ಎರಡು ರಿಟ್ ಅರ್ಜಿ; ವಿಚಾರಣೆಯಿಂದಲೇ ಹಿಂದೆ ಸರಿದ ನ್ಯಾಯಮೂರ್ತಿ, ಚರ್ಚೆಗೆ ಗ್ರಾಸವಾದ ನಡೆ

ಬೆಂಗಳೂರು;   ವಿಟಿಯು ಹಾಲಿ ಕುಲಪತಿ ಡಾ ಎಸ್‌ ವಿದ್ಯಾಶಂಕರ್ ಅವರ ನೇಮಕಾತಿಯನ್ನು...
Please Scan to make Your Contribution

Topics

ರಾಷ್ಟ್ರೀಯ ಪರೀಕ್ಷೆಗಳಿಂದಾಗಿ ಎಸ್‌ ಸಿ, ಎಸ್‌ ಟಿ ವಿದ್ಯಾರ್ಥಿಗಳ ದಾಖಲಾತಿಯಲ್ಲಿ ಕುಸಿತ, ನಗರ ವಿಶ್ವವಿದ್ಯಾಲಯಗಳೊಂದಿಗೆ ಗ್ರಾಮೀಣ ಕಾಲೇಜುಗಳ ವಿಲೀನಕ್ಕೆ ಆಯೋಗ ಅಸಮ್ಮತಿ

ಬೆಂಗಳೂರು;  ಸಾಮಾನ್ಯ ಶಿಕ್ಷಣ ಕೋರ್ಸ್‌ಗಳಲ್ಲಿ ರಾಷ್ಟ್ರೀಯ ಪ್ರವೇಶಗಳ ಪರೀಕ್ಷೆಗಳನ್ನು ಪರಿಚಯಿಸಿದ್ದರಿಂದಾಗಿ ಪರಿಶಿಷ್ಟ...

ವಿಟಿಯು ಕುಲಪತಿ ವಿರುದ್ಧದ ಎರಡು ರಿಟ್ ಅರ್ಜಿ; ವಿಚಾರಣೆಯಿಂದಲೇ ಹಿಂದೆ ಸರಿದ ನ್ಯಾಯಮೂರ್ತಿ, ಚರ್ಚೆಗೆ ಗ್ರಾಸವಾದ ನಡೆ

ಬೆಂಗಳೂರು;   ವಿಟಿಯು ಹಾಲಿ ಕುಲಪತಿ ಡಾ ಎಸ್‌ ವಿದ್ಯಾಶಂಕರ್ ಅವರ ನೇಮಕಾತಿಯನ್ನು...

ಕೆಟಿಪಿಪಿ ಉಲ್ಲಂಘನೆ, ಅಧಿಕಾರ ದುರ್ಬಳಕೆ, 60 ಲಕ್ಷ ರು ದುರುಪಯೋಗ ಆರೋಪ; ಚೀಫ್‌ ಇಂಜಿನಿಯರ್ ವಿರುದ್ಧ ಚಾರ್ಜ್‌ಶೀಟ್‌

ಬೆಂಗಳೂರು; ಕೆಟಿಪಿಪಿ ಕಾಯ್ದೆ ಉಲ್ಲಂಘನೆ ಮತ್ತು ಅಧಿಕಾರ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ...

Related Articles

Popular Categories

error: Content is protected !!