Friday | March 6, 2026 |

ಅಪೆಕ್ಸ್‌ ಬ್ಯಾಂಕ್‌ ಅಕ್ರಮ; ಸಿಬಿಐ ತನಿಖೆಯಿಂದ ತಪ್ಪಿಸಿದ್ದರೇ ಎಚ್‌ ಡಿ ಕುಮಾರಸ್ವಾಮಿ?

Support THE-FILE

spot_img

ಬೆಂಗಳೂರು; ಸಿಬಿಐ ತನಿಖೆಗೊಳಪಡಬೇಕಿದ್ದ ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್‌ ಬ್ಯಾಂಕ್‌ನ ಸಿಬ್ಬಂದಿ ನೇಮಕಾತಿ ಅಕ್ರಮವನ್ನು ಮುಚ್ಚಿ ಹಾಕುವ ಹುನ್ನಾರ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಾಲುದಾರಿಕೆಯ ಮೈತ್ರಿ ಸರ್ಕಾರದಲ್ಲೇ ನಡೆದಿತ್ತು.

2012-13ನೇ ಸಾಲಿನಲ್ಲಿ ನಡೆದಿದ್ದ 102 ಸಿಬ್ಬಂದಿಗಳ ನೇರ ನೇಮಕಾತಿಯಲ್ಲಿ ನಡೆದಿದ್ದ ಅಕ್ರಮಗಳನ್ನು ಸಿಬಿಐನಿಂದ ತನಿಖೆ ನಡೆಸಬೇಕು ಎಂದು ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಡಿದ್ದ ಆದೇಶಕ್ಕೆ ತದ್ವಿರುದ್ಧವಾಗಿ ನಿಲುವು ತಳೆದಿದ್ದ ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಎಚ್‌ ಡಿ ಕುಮಾರಸ್ವಾಮಿ ಅವರು ಆರ್‌ ಎಂ ಮಂಜುನಾಥಗೌಡರ ರಕ್ಷಣೆಗೆ ನಿಂತಿದ್ದರು. ಈ ಸಂಬಂಧ ಮಹತ್ವದ ಟಿಪ್ಪಣಿ ಹಾಳೆಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

ಗುಮಾಸ್ತರು ಮತ್ತು ನಗದು ಗುಮಾಸ್ತರ ನೇಮಕ ಅವ್ಯವಹಾರದ ಬಗ್ಗೆ ತನಿಖೆಗೆ ನೇಮಕವಾಗಿರುವ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿಗೆ ಅಪೆಕ್ಸ್‌ ಬ್ಯಾಂಕ್‌ ಆಡಳಿತ ಮಂಡಳಿ ಅಸಹಕಾರ ತೋರುತ್ತಿರುವ ಬೆನ್ನಲ್ಲೇ ಎಚ್‌ ಡಿ ಕುಮಾರಸ್ವಾಮಿ ಅವರು ಬರೆದಿದ್ದ ಟಿಪ್ಪಣಿ ಹಾಳೆಯು ಮಹತ್ವ ಪಡೆದುಕೊಂಡಿದೆ.

ಬ್ಯಾಂಕ್‌ನಲ್ಲಿ ಖಾಲಿ ಇದ್ದ ಒಂದೊಂದು ಹುದ್ದೆಯೂ ಲಕ್ಷಾಂತರ ರು.ಗಳಿಗೆ ಬಿಕರಿಯಾಗಿದ್ದವು ಎಂಬ ಆರೋಪಗಳು ಕೇಳಿ ಬಂದಿತ್ತು. ಇಂತಹ ಪ್ರಕರಣವನ್ನು ಸಿಬಿಐ ತನಿಖೆಗೊಳಪಡಿಸದೇ ನಿವೃತ್ತ ನ್ಯಾಯಾಧೀಶರಿಂದ ತನಿಖೆ ನಡೆಸಲು ಮೈತ್ರಿ ಸರ್ಕಾರ ಮುಂದಾಗಿತ್ತು. ಇದು ಹಲವು ಸಂಶಯಗಳಿಗೆ ಕಾರಣವಾಗಿತ್ತು. ಆರ್‌ ಎಂ ಮಂಜುನಾಥಗೌಡ ಅವರು ಜಾತ್ಯತೀತ ಜನತಾದಳದ ಶಿವಮೊಗ್ಗ ಜಿಲ್ಲಾ ಘಟಕಕ್ಕೆ ಅಧ್ಯಕ್ಷರಾದ ನಂತರ ಈ ಬೆಳವಣಿಗೆ ನಡೆದಿದ್ದು ಸಂಶಯಗಳನ್ನು ಬಲಪಡಿಸಿತ್ತು.

ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್‌ ಬ್ಯಾಂಕ್‌ನಲ್ಲಿ ಸಿಬ್ಬಂದಿ ನೇರ ನೇಮಕಾತಿ ಪ್ರಕ್ರಿಯೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ತನಿಖೆ ನಡೆಸಲು ಹಿಂದಿನ ಸರ್ಕಾರ ಮುಂದಾಗಿತ್ತು. ಈ ಪ್ರಕರಣದ ತನಿಖೆಯನ್ನು ಲೋಕಾಯುಕ್ತ ಸಂಸ್ಥೆಗೆ ಸರ್ಕಾರವೇ ವಹಿಸಿತ್ತು. ಆದರೆ  ಲೋಕಾಯುಕ್ತ ಕಾಯ್ದೆ ಕಲಂ 8(1)(ಎ) ಹಾಗೂ ಸಹ ಕಲಂ ಶೆಡ್ಯೂಲ್‌ 2(ಡಿ) ಪ್ರಕಾರ ಈ ಪ್ರಕರಣವನ್ನು ತನಿಖೆ ನಡೆಸುವ ಅಧಿಕಾರ ತಮಗಿಲ್ಲ ಎಂದು 2013ರ ಅಕ್ಟೋಬರ್‌ 3ರಂದು ಸರ್ಕಾರಕ್ಕೆ ತಿಳಿಸಿತ್ತು.

ಆ ನಂತರ ಇದೇ ಪ್ರಕರಣವನ್ನು ಸಿಐಡಿಗೆ ವಹಿಸಬಹುದು ಎಂದು ಕಾನೂನು ಇಲಾಖೆಯೇ ಅಭಿಪ್ರಾಯ ನೀಡಿತ್ತು. ಆದರೆ ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ್ದ ಹಿಂದಿನ ಮುಖ್ಯಮಂತ್ರಿ ಸಿಬಿಐನಿಂದ ತನಿಖೆ ನಡೆಸಬೇಕು ಎಂದು ಆದೇಶಿಸಿದ್ದರು ಎಂದು ದಾಖಲೆಯಿಂದ ತಿಳಿದು ಬಂದಿದೆ.
ವಿಪರ್ಯಾಸವೆಂದರೆ ಪ್ರಕರಣ ನಡೆದು 7 ವರ್ಷಗಳಾದರೂ ಯಾವುದೇ ಸಂಸ್ಥೆ ಅಥವಾ ಅಧಿಕಾರಿಯಿಂದ ಪ್ರಾಥಮಿಕ ತನಿಖೆಯೂ ನಡೆದಿರಲಿಲ್ಲ. ಇದನ್ನೇ ಆಧಾರವಾಗಿಟ್ಟುಕೊಂಡು ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿ ಆಗಿದ್ದ ಎಚ್‌ ಡಿ ಕುಮಾರಸ್ವಾಮಿ ಅವರು ಪ್ರಕರಣವನ್ನು ಸಿಬಿಐನಿಂದ ತನಿಖೆಗೊಳಪಡಿಸದಿರಲು ನಿರ್ಧರಿಸಿದ್ದರು ಎಂಬುದು ಅವರ ಪತ್ರದಿಂದ ತಿಳಿದು ಬಂದಿದೆ.

“ಪ್ರಕರಣವನ್ನು ಸಿಬಿಐನಿಂದ ತನಿಖೆಗೆ ಒಳಪಡಿಸಲು ಮೇಲ್ನೋಟಕ್ಕೆ ಸಾಕಷ್ಟು ಕಾರಣಗಳಿವೆಯೇ ಎಂಬುದನ್ನು ಪರಿಶೀಲಿಸುವುದು ಸೂಕ್ತವಾಗಿದೆ.ಆದ್ದರಿಂದ ಉಲ್ಲೇಖಿತ ಭ್ರಷ್ಟಾಚಾರ ಪ್ರಕರಣದ ಸತ್ಯಾಸತ್ಯತೆಯನ್ನು ತಿಳಿಯುವ ಸಲುವಾಗಿ ಮೊದಲ ಹಂತದಲ್ಲಿ ಕರ್ನಾಟಕ ರಾಜ್ಯ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಅಥವಾ ಜಿಲ್ಲಾ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಿಂದ ಪ್ರಾಥಮಿಕ ತನಿಖೆ ನಡೆಸಿ, ಅವರು ನೀಡಬಹುದಾದ ವರದಿ ಆಧರಿಸಿ ಆ ನಂತರ ಅವಶ್ಯವೆನಿಸಿದಲ್ಲಿ ಸೂಕ್ತ ತನಿಖಾ ಸಂಸ್ಥೆಯಿಂದ ಸಮಗ್ರ ತನಿಖೆ ನಡೆಸುವುದು ಸೂಕ್ತ ,” ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೂಚಿಸಿದ್ದರು ಎಂಬುದು ಟಿಪ್ಪಣಿ ಹಾಳೆಯಿಂದ ಗೊತ್ತಾಗಿದೆ.

ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಡೆದಿರುವ ಭ್ರಷ್ಟಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಿಲ್ಲಾ ನ್ಯಾಯಾಧೀಶರಿಂದ ನಡೆಸಿರುವ ಯಾವ ವಿಚಾರಣೆಗಳಲ್ಲಿಯೂ ಆರೋಪಿತರಿಗೆ ಶಿಕ್ಷೆ ವಿಧಿಸಿಲ್ಲ. ಬದಲಿಗೆ ಸೂಕ್ತ ಸಾಕ್ಷ್ಯಾಧಾರಗಳಿಲ್ಲ ಎಂದು ನೆಪವೊಡ್ಡಿ ಪ್ರಕರಣಗಳನ್ನು ಮುಕ್ತಾಯಗೊಳಿಸುತ್ತಿದೆಯಲ್ಲದೆ ಆರೋಪಿತರನ್ನು ದೋಷಮುಕ್ತಗೊಳಿಸಲಾಗುತ್ತಿದೆ.

ಇಂತಹ ಪ್ರಕರಣಗಳು ಬೆಳಕಿಗೆ ಬರುತ್ತಿದ್ದರೂ ಅಪೆಕ್ಸ್‌ ಬ್ಯಾಂಕ್‌ನಲ್ಲಿ ನಡೆದಿದ್ದ ನೇರ ನೇಮಕಾತಿ ಪ್ರಕರಣಗಳ ತನಿಖೆಯನ್ನು ನಿವೃತ್ತ ನ್ಯಾಯಾಧೀಶರಿಂದ ತನಿಖೆಗೊಳಪಡಿಸಲು ಹಿಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಆದೇಶಿಸಿದ್ದರ ಹಿಂದೆ ಬ್ಯಾಂಕ್‌ನ ಮಾಜಿ ಅಧ್ಯಕ್ಷ ಹಾಗೂ ಶಿವಮೊಗ್ಗ ಜಿಲ್ಲಾ ಜಾತ್ಯತೀತ ಜನತಾದಳದ ಅಧ್ಯಕ್ಷ ಆರ್‌ ಎಂ ಮಂಜುನಾಥಗೌಡರ ರಕ್ಷಣೆ ಉದ್ದೇಶವೇ ಹೊರತು ಬೇರಿನ್ನೇನೂ ಅಲ್ಲ ಎಂಬ ಅಭಿಪ್ರಾಯಗಳು ವ್ಯಕ್ತವಾಗಿದ್ದವು.

Hot this week

ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ರಾಜ್ಯದ ಪಾಲು ಕುಸಿತ; ಕರ್ನಾಟಕಕ್ಕೆ ತೀವ್ರ ಸವಾಲು ಒಡ್ಡಲಿದೆಯೇ?

ಬೆಂಗಳೂರು;  ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ವರ್ಷದಿಂದ ವರ್ಷಕ್ಕೆ  ರಾಜ್ಯ ಪಾಲು ಕುಸಿತವಾಗುತ್ತಿರುವ...

ಕೃಷಿ, ಕೈಗಾರಿಕೆ ವಲಯದ ಪಾಲು ಇಳಿಕೆ; ಒಟ್ಟಾರೆ ಆಂತರಿಕ ಉತ್ಪನ್ನದಲ್ಲಿ ಹಿನ್ನಡೆ

ಬೆಂಗಳೂರು;  ರಾಜ್ಯದ ಒಟ್ಟು ಆಂತರಿಕ ಉತ್ಪನ್ನದಲ್ಲಿ 2024-25ರಲ್ಲಿ ಕೃಷಿ ವಲಯದ ಪಾಲು...

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

Topics

ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ರಾಜ್ಯದ ಪಾಲು ಕುಸಿತ; ಕರ್ನಾಟಕಕ್ಕೆ ತೀವ್ರ ಸವಾಲು ಒಡ್ಡಲಿದೆಯೇ?

ಬೆಂಗಳೂರು;  ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ವರ್ಷದಿಂದ ವರ್ಷಕ್ಕೆ  ರಾಜ್ಯ ಪಾಲು ಕುಸಿತವಾಗುತ್ತಿರುವ...

ಕೃಷಿ, ಕೈಗಾರಿಕೆ ವಲಯದ ಪಾಲು ಇಳಿಕೆ; ಒಟ್ಟಾರೆ ಆಂತರಿಕ ಉತ್ಪನ್ನದಲ್ಲಿ ಹಿನ್ನಡೆ

ಬೆಂಗಳೂರು;  ರಾಜ್ಯದ ಒಟ್ಟು ಆಂತರಿಕ ಉತ್ಪನ್ನದಲ್ಲಿ 2024-25ರಲ್ಲಿ ಕೃಷಿ ವಲಯದ ಪಾಲು...

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

Related Articles

Popular Categories

spot_imgspot_img
error: Content is protected !!