Tuesday | May 5, 2026 |

ಎಸ್‌ ಎಸ್‌ ಮಾಲ್‌ ; ಭಾರೀ ವಿದ್ಯುತ್‌ ವಾಹಕಗಳಿದ್ದರೂ ವಿನ್ಯಾಸದ ಅನುಮೋದನೆಗೆ ಪತ್ರ

ಬೆಂಗಳೂರು; ಶಾಮನೂರು ಶಿವಶಂಕರಪ್ಪ ಪುತ್ರ ಎಸ್‌ ಎಸ್‌ ಗಣೇಶ್‌ ಮಾಲೀಕತ್ವದ ಎಸ್‌ ಎಸ್‌ ಮಾಲ್‌ಗಾಗಿ ಏಕ ನಿವೇಶನ ವಿನ್ಯಾಸ ಮಂಜೂರಾತಿ ವೇಳೆಯಲ್ಲಿ ಬೆಸ್ಕಾಂ ಅಧಿಕಾರಿಗಳು ದಾವಣಗೆರೆ ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರೊಂದಿಗೆ ಶಾಮೀಲಾಗಿದ್ದರು!

ಶಾಬನೂರು ಗ್ರಾಮದ ಸರ್ವೆ ನಂಬರ್‌ 73/1, 74/1, 76/1,2ರ ಪ್ರದೇಶಕ್ಕೆ ಅಂತಿಮ ಕೈಗಾರಿಕೆ ಏಕ ನಿವೇಶನದಲ್ಲಿ ಭಾರೀ ವಿದ್ಯುತ್‌ ವಾಹಕಗಳಿದ್ದರೂ ಅನುಮೋದನೆ ನೀಡಲಾಗಿತ್ತು. ಅಲ್ಲದೆ ಈ ಪ್ರದೇಶಕ್ಕೆ ಏಕ ನಿವೇಶನ ವಿನ್ಯಾಸ ನೀಡುವಾಗ ವಿನ್ಯಾಸದಲ್ಲಿ ವಿನ್ಯಾಸದಲ್ಲಿ ಭಾರೀ ವಿದ್ಯುತ್‌ ವಾಹಕವನ್ನು ಸೂಚಿಸದೇ ವಿನ್ಯಾಸವನ್ನು ಮಂಜೂರು ಮಾಡಬೇಕು ಎಂದು ಖುದ್ದು ಎಸ್‌ ಎಸ್‌ ಗಣೇಶ್‌ ಅವರು ದಾವಣಗೆರೆ ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಯುಕ್ತರ ಮೇಲೆ ಪತ್ರ ಮುಖೇನ ಒತ್ತಡ ಹೇರಿದ್ದರು!

ಗಣೇಶ್‌ ಬರೆದಿದ್ದ ಪತ್ರದಲ್ಲೇನಿತ್ತು?

ಸದರಿ ಜಮೀನಿನಲ್ಲಿ ಉತ್ತರ ಭಾಗದಲ್ಲಿರುವ ಭಾರೀ ವಿದ್ಯುತ್‌ ವಾಹಕವನ್ನು ಸ್ಥಳಾಂತರಿಸುವ ಸಂಬಂಧ ಹರಿಹರ ತಾಲೂಕು ಗುತ್ತೂರ್‌ನಲ್ಲಿರುವ ಬೆಸ್ಕಾಂ ಸಬ್‌ ಸ್ಟೇಷನ್‌ ಅಧಿಕಾರಿಗಳು ಈಗಾಗಲೇ ಸ್ಥಳ ತನಿಖೆ ಮಾಡಿ ಅಳತೆ ಕ್ರಮ ವಹಿಸುತ್ತಿದ್ದಾರೆ. ಆದ್ದರಿಂದ ಸದರಿ ಜಮೀನಿಗೆ ಅಂತಿಮ ಕೈಗಾರಿಕಾ ಏಕ ನಿವೇಶನ ವಿನ್ಯಾಸ ನೀಡುವಾಗ ವಿನ್ಯಾಸದಲ್ಲಿ ಭಾರೀ ವಿದ್ಯುತ್‌ ವಾಹಕವನ್ನು ಸೂಚಿಸದೇ ವಿನ್ಯಾಸವನ್ನು ಮಂಜೂರಾತಿ ನೀಡಬೇಕು,’ ಎಂದು ಎಸ್‌ ಎಸ್‌ ಗಣೇಶ್‌ ಅವರು 2014ರ ಆಗಸ್ಟ್‌ 20ರಂದು ಪ್ರಾಧಿಕಾರದ ಆಯುಕ್ತರಿಗೆ ಪತ್ರ ಬರೆದಿದ್ದರು. ಈ ಪತ್ರದ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

ಅಲ್ಲದೆ ಇದೇ ಜಾಗದಲ್ಲಿದ್ದ ಭಾರೀ ವಿದ್ಯುತ್‌ ವಾಹಕಗಳ ಕಂಬಗಳನ್ನು ಹೊಂದಿದ್ದ ರಸ್ತೆ ಕಬಳಿಸಲು ನೆರವಾದ ಅಧಿಕಾರಿಗಳ ವಿರುದ್ಧ ದೂರು ಸಲ್ಲಿಕೆಯಾಗಿದ್ದರೂ ಆಗಿನ ಜಿಲ್ಲಾಧಿಕಾರಿ ಎಸ್‌ ಟಿ ಅಂಜನ್‌ಕುಮಾರ್‌ ಮತ್ತು ಪಾಲಿಕೆ ಆಯುಕ್ತರು ಒಂದೇ ಕ್ರಮ ಜರುಗಿಸದಿರುವುದು ಹಲವು ಅನುಮಾನಗಳಿಗೆ ದಾರಿಮಾಡಿಕೊಟ್ಟಿದೆ.

ಎಸ್‌ ಎಸ್‌ ಗಣೇಶ್ ಅವರು 9 ನಿವೇಶನಗಳನ್ನು ಖರೀದಿಸಿ ಅವುಗಳನ್ನು ಕಾನೂನು ಪ್ರಕಾರ ಏಕ ನಿವೇಶನ ಮಾಡಿಸಿಕೊಂಡಿದ್ದಾರೆ ಎಂದು ಕಾಂಗ್ರೆಸ್‌ ಮುಖಂಡರು ಹೇಳುತ್ತಿದ್ದಾರಾದರೂ ಹೈಕೋರ್ಟ್ ವಿಚಾರಣೆ ಸಂದರ್ಭದಲ್ಲಿ ಈ ಸಂಬಂಧ ಎಸ್‌ ಎಸ್‌ ಗಣೇಶ್‌ ಅವರೇ ಕಾಲಾವಕಾಶ ಕೇಳಿದ್ದರು. ಒತ್ತುವರಿ ಆಗಿದೆ ಎಂಬುದನ್ನು ಪರೋಕ್ಷವಾಗಿ ಒಪ್ಪಿಕೊಂಡಿದ್ದರು. ಅಲ್ಲದೆ ಕಾಲಾವಕಾಶ ಪೂರ್ಣಗೊಂಡ ನಂತರ ಈವರೆವಿಗೂ ಒತ್ತುವರಿಯನ್ನು ತೆರವುಗೊಂಡಿಲ್ಲ.

ರಸ್ತೆಗಳು ಅನುಪಯುಕ್ತವಾಗಿವೆ ಮತ್ತು ಯಾವುದೇ ಅಭಿವೃದ್ಧಿ ಆಗಿಲ್ಲ ಎಂಬ ಕಾರಣವನ್ನು ಮುಂದೊಡ್ಡಿ ಶಾಮನೂರು ಶಿವಶಂಕರಪ್ಪ ಪುತ್ರ ಎಸ್‌ ಎಸ್‌ ಗಣೇಶ್‌ ಮಾಲೀಕತ್ವದ ಎಸ್‌ ಎಸ್‌ ಮಾಲ್‌ಗಾಗಿ ವಸತಿ ವಿನ್ಯಾಸದಲ್ಲಿನ ನಿವೇಶನಗಳನ್ನು ಒಂದುಗೂಡಿಸಲು ದಾವಣಗೆರೆ ಮಹಾನಗರಪಾಲಿಕೆಯ ಹಿಂದಿನ ಆಯಕ್ತರು ಕೈಗಾರಿಕೆ ಉಪಯೋಗಕ್ಕೆ ಪರಿವರ್ತಿಸಲು ಅನುಮತಿ ನೀಡಿದ್ದನ್ನು ಸ್ಮರಿಸಬಹುದು.

Hot this week

ಧರ್ಮಸ್ಥಳ ಪ್ರಕರಣಗಳ ತನಿಖೆ; ಎಸ್‌ಐಟಿ ವರದಿ ಪ್ರತಿ ಒದಗಿಸದ ಸರ್ಕಾರ, ಗೃಹ ಇಲಾಖೆ ಶಾಖೆಯಲ್ಲಿ ಸಭೆ ನಡವಳಿಯೂ ಲಭ್ಯವಿಲ್ಲ

ಬೆಂಗಳೂರು: ಧರ್ಮಸ್ಥಳದ ಸುತ್ತಮುತ್ತ ನಡೆದಿರುವ ಮಹಿಳೆಯರು ಮತ್ತು ಯುವತಿಯರ ಮೇಲಿನ ದೌರ್ಜನ್ಯ/ಕೊಲೆ,...

ವೈಟ್‌ ಟ್ಯಾಪಿಂಗ್‌ ಗೋಲ್ಮಾಲ್‌; ಅಗತ್ಯವಿರದಿದ್ದರೂ ಕಾಮಗಾರಿ, ತಾಂತ್ರಿಕ ಪರಿಶೀಲನೆಯಿಲ್ಲದಿದ್ದರೂ ಹೆಚ್ಚುವರಿ ವೆಚ್ಚ, ಗುತ್ತಿಗೆದಾರರಿಗೆ ಲಾಭ

ಬೆಂಗಳೂರು;  ವೈಟ್‌ ಟ್ಯಾಪಿಂಗ್ ಅಗತ್ಯವಿಲ್ಲದಿದ್ದರೂ  ಕಾಮಗಾರಿ ಆರಂಭಿಸಿದ ನಂತರ ತಾಂತ್ರಿಕ ಮಂಜೂರಾತಿ...
Please Scan to make Your Contribution

Topics

ಧರ್ಮಸ್ಥಳ ಪ್ರಕರಣಗಳ ತನಿಖೆ; ಎಸ್‌ಐಟಿ ವರದಿ ಪ್ರತಿ ಒದಗಿಸದ ಸರ್ಕಾರ, ಗೃಹ ಇಲಾಖೆ ಶಾಖೆಯಲ್ಲಿ ಸಭೆ ನಡವಳಿಯೂ ಲಭ್ಯವಿಲ್ಲ

ಬೆಂಗಳೂರು: ಧರ್ಮಸ್ಥಳದ ಸುತ್ತಮುತ್ತ ನಡೆದಿರುವ ಮಹಿಳೆಯರು ಮತ್ತು ಯುವತಿಯರ ಮೇಲಿನ ದೌರ್ಜನ್ಯ/ಕೊಲೆ,...

ವೈಟ್‌ ಟ್ಯಾಪಿಂಗ್‌ ಗೋಲ್ಮಾಲ್‌; ಅಗತ್ಯವಿರದಿದ್ದರೂ ಕಾಮಗಾರಿ, ತಾಂತ್ರಿಕ ಪರಿಶೀಲನೆಯಿಲ್ಲದಿದ್ದರೂ ಹೆಚ್ಚುವರಿ ವೆಚ್ಚ, ಗುತ್ತಿಗೆದಾರರಿಗೆ ಲಾಭ

ಬೆಂಗಳೂರು;  ವೈಟ್‌ ಟ್ಯಾಪಿಂಗ್ ಅಗತ್ಯವಿಲ್ಲದಿದ್ದರೂ  ಕಾಮಗಾರಿ ಆರಂಭಿಸಿದ ನಂತರ ತಾಂತ್ರಿಕ ಮಂಜೂರಾತಿ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

Related Articles

Popular Categories

error: Content is protected !!