Friday | May 1, 2026 |

ಬಯೋ ಮೆಡಿಕಲ್‌; ಮುಂಗಡ ನೀಡಿಕೆಯಲ್ಲೂ ಅವ್ಯವಹಾರ, ಜಿಎಸ್‌ಟಿಯಲ್ಲೂ ವಂಚನೆ

ಬೆಂಗಳೂರು; ಬಯೋ ಮೆಡಿಕಲ್‌ ಉಪಕರಣಗಳ ನಿರ್ವಹಣೆ ಸಂಬಂಧ ಕೆಡಿಎಲ್‌ಡಬ್ಲ್ಯೂಎಸ್‌ನ ಅಧಿಕಾರಿಗಳು ಹೆಜ್ಜೆ ಹೆಜ್ಜೆಯಲ್ಲೂ ಅಕ್ರಮ ನಡೆಸಿದ್ದಾರೆ ಎಂಬ ಬಲವಾದ ಆರೋಪಕ್ಕೆ ಗುರಿಯಾಗಿದ್ದಾರೆ. ಟಿವಿಎಸ್‌ ಲಾಜಿಸ್ಟಿಕ್ಸ್‌ ಸರ್ವಿಸ್‌ ಸಲ್ಲಿಸಿದ್ದ ಪ್ರೊಫ್ರಾಮಾ ಇನ್‌ವಾಯ್ಸ್‌ನಲ್ಲಿ ಒದಗಿಸಿದ್ದ ಜಿಎಸ್‌ಟಿ ನಂಬರ್‌ ನಕಲಿಯಾಗಿದ್ದರೂ ಪರಿಶೀಲಿಸದ ಅಧಿಕಾರಿಗಳಿಂದ ಸರ್ಕಾರಕ್ಕೆ ನಷ್ಟ ಉಂಟಾಗಿದೆ.

ಉಪಕರಣಗಳ ನಿರ್ವಹಣೆ ಗುತ್ತಿಗೆ ಪಡೆದಿರುವ ಟಿವಿಎಸ್‌ ಲಾಜಿಸ್ಟಿಕ್ಸ್‌ ಸರ್ವಿಸ್‌ಗೆ ನೀಡಿರುವ ಮುಂಗಡದಲ್ಲೂ ಅವ್ಯವಹಾರದ ವಾಸನೆ ಹಬ್ಬಿದೆ. ನೋಟಿಫಿಕೇಷನ್‌ ಅವಾರ್ಡ್‌ನ ಆಧಾರದ ಮೇಲೆ 5.41 ಕೋಟಿ ರು. ಮುಂಗಡ ನೀಡಿರುವ ಇಲಾಖೆ, ಕಂಪನಿ ನೀಡಿದ್ದ ಜಿಎಸ್‌ಟಿ ನಂಬರ್‌ನ್ನು ಪರಿಶೀಲಿಸದೆಯೇ ವಂಚನೆಗೊಳಗಾಗಿರುವುದು ಗೊತ್ತಾಗಿದೆ. ಇದರಿಂದ ಸರ್ಕಾರಕ್ಕೆ ಜಿಎಸ್‌ಟಿಯೂ ವಂಚನೆಯಾಗಿದೆ ಎಂದು ತಿಳಿದು ಬಂದಿದೆ.

ಆದರೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಉನ್ನತ ಅಧಿಕಾರಿಗಳು ಕಾರ್ಯಕ್ರಮಾಧಿಕಾರಿ ಬಣಕರ್‌ ಸೇರಿದಂತೆ ಇನ್ನಿತರೆ ಅಧಿಕಾರಿಗಳ ವಿರುದ್ಧ ಯಾವುದೆ ಕ್ರಮ ಜರುಗಿಸಿರಲಿಲ್ಲ. ಇಲಾಖೆಯ ಉನ್ನತ ಅಧಿಕಾರಿಗಳು ಕರ್ತವ್ಯ ಲೋಪ ಎಸಗಿದ್ದಾರೆ ಎನ್ನುವುದಕ್ಕೆ ಈ ಪ್ರಕರಣ ಇನ್ನಷ್ಟು ಪುಷ್ಠೀಕರಿಸಿದೆ.

ಟಿವಿಎಸ್‌ ಲಾಜಿಸ್ಟಿಕ್ಸ್‌ ಸರ್ವಿಸ್‌ ಕಂಪನಿಯು ನೀಡಿದ್ದ ಜಿಎಸ್‌ಟಿ ನಂಬರ್‌ ಬಗ್ಗೆಯೂ ಹಲವು ಅನುಮಾನಗಳಿವೆ. ಕಂಪನಿಯು GSTIN;29AACCT1412E2ZQ, PAN NO;AACCT1412E ನಂಬರ್‌ನ್ನು ನೀಡಿದೆ. ಆದರೆ ಜಿಎಸ್‌ಟಿಯ ಅಧಿಕೃತ ಜಾಲತಾಣದಲ್ಲಿ ಈ ನಂಬರ್‌ನ್ನು ಪರಿಶೀಲಿಸಿದರೆ ಇದು ಬೆಂಗಳೂರು ಮತ್ತು ಮೈಸೂರಿನ ವಿಳಾಸ ಇರುವುದು ಗೊತ್ತಾಗಿದೆ.

(ನಂ 201, ರೇಣುಕಾ ನಿಲಯ, ಕಿತ್ತಗಾನೂರು, ಕೆ ಆರ್‌ ಪುರಂ ಪೋಸ್ಟ್‌ ಬೆಂಗಳೂರು- ಪ್ಲಾಟ್‌ ನಂ 100-ಎ, ಬೆಳಗೊಳ ಕೈಗಾರಿಕೆ ಪ್ರದೇಶ, ಮೈಸೂರು) ಹಾಗೆಯೇ ಟಿವಿಎಸ್‌ ಲಾಜಿಸ್ಟಿಕ್ಸ್‌ ಸರ್ವಿಸ್‌ ಪ್ರೈ ಲಿಮಿಟೆಡ್‌ ಪ್ರೊಪ್ರಾಮಾ ಇನ್‌ವಾಯ್ಸ್‌ನಲ್ಲಿ ಮತ್ತೊಂದು ವಿಳಾಸವಿದೆ. (ನಂ 1132, 2ನೇ ಮಹಡಿ, ಆನಂದ್‌ ಎಂಬೆಸ್ಸಿ, 100 ಅಡಿ ರಸ್ತೆ, ಎಚ್‌ಎಎಲ್‌ 2ನೇ ಹಂತ, ಇಂದಿರಾ ನಗರ, ಬೆಂಗಳೂರು)

ಪ್ರೊಫ್ರಾಮಾ ಇನ್‌ವಾಯ್ಸ್‌ನ ಆಧಾರದ ಮೇಲೆ ಕೆಡಿಎಲ್‌ಡಬ್ಲ್ಯೂಎಸ್‌ ಅಧಿಕಾರಿಗಳು 5,41,81,181 ರು.ಗಳನ್ನು ಪಾವತಿಸಿದ್ದಾರೆ. (ಜಿಎಸ್‌ಟಿ, ಟಿಡಿಎಸ್‌ (ಶೇ.2) ಮತ್ತು ಆರ್‌ಟಿಜಿಎಸ್‌, ಎನ್‌ಇಎಫ್‌ಟಿ ಶುಲ್ಕ 9,34,249 ಕಳೆದು) ಪ್ರೊಫ್ರಾಮಾ ಇನ್‌ವಾಯ್ಸ್‌ನಲ್ಲಿ ಟಿವಿಎಸ್‌ ಲಾಜಿಸ್ಟಿಕ್ಸ್‌ ಸರ್ವಿಸ್‌ ಸೂಚಿಸಿದ್ದ ನಕಲಿ ಜಿಎಸ್‌ಟಿ ಹೆಸರಿನಲ್ಲಿ ಸಿಜಿಎಸ್‌ಟಿ ಲೆಕ್ಕದಲ್ಲಿ 42.03 ಲಕ್ಷ ರು ಮತ್ತು ಎಸ್‌ಜಿಎಸ್‌ಟಿ/ಯುಜಿಎಸ್‌ಟಿ ಲೆಕ್ಕದಲ್ಲಿ 42.03 ಲಕ್ಷ ಸೇರಿ ಒಟ್ಟು 84.06 ಲಕ್ಷ ರು.ಗಳನ್ನು ಕೆಡಿಎಲ್‌ಡಬ್ಲ್ಯೂಎಸ್‌ನಿಂದಲೇ ಪಡೆದಿರುವುದು ಗೊತ್ತಾಗಿದೆ.

84.06 ಲಕ್ಷ ಜಿಎಸ್‌ಟಿಗೆ ಜಮಾ ಆಗಿದೆಯೇ, ಆಗಿದ್ದರೆ ಯಾರ ಹೆಸರಿನಲ್ಲಿ ಜಮಾ ಆಗಿದೆ ಎಂಬ ಬಗ್ಗೆ ಅಧಿಕಾರಿಗಳ ಬಳಿಯೇ ವಿವರಗಳಿಲ್ಲ. ಬಯೋ ಮೆಡಿಕಲ್‌ ಉಪಕರಣ ನಿರ್ವಹಣೆ ಕಾರ್ಯಾಕ್ರಮಾಧಿಕಾರಿ ಟಿವಿಎಸ್‌ ಲಾಜಿಸ್ಟಿಕ್ಸ್‌ ಸರ್ವಿಸ್‌ ಕಂಪನಿಗೆ ಪ್ರತಿ ತಿಂಗಳು ಹಣ ಪಾವತಿ ಮಾಡುತ್ತಿದ್ದಾರಾದರೂ ಪಾವತಿಗೆ ಮುನ್ನ ಕಂಪನಿಯಿಂದ ಪಡೆದುಕೊಂಡಿರುವ ಜಿಎಸ್‌ಟಿ ಹಣವನ್ನು ಜಿಎಸ್‌ಟಿ ಮಂಡಳಿಗೆ ಪಾವತಿಸುತ್ತಿದ್ದಾರೆಯೇ, ಪಾವತಿಸಿದ್ದರೆ ಯಾರ ಹೆಸರಿನಲ್ಲಿ ಪಾವತಿಸಲಾಗುತ್ತಿದೆ ಎಂದು ಖಾತರಿಪಡಿಸಿಕೊಂಡಿಲ್ಲ ಎಂದು ತಿಳಿದು ಬಂದಿದೆ.

Hot this week

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

ಆಧಾರ್ ಕಾರ್ಡ್‌ಗಿಂತಲೂ ಶಕ್ತಿ ಸ್ಮಾರ್ಟ್‌ ದುಬಾರಿ, ಎಸ್‌ಪಿವಿ ರಚನೆಯಾದರೂ ಸಿಗದ ಕಾರ್ಡ್‌; 185 ಕೋಟಿ ವೆಚ್ಚ ಭರಿಸುವವರಾರು?

ಬೆಂಗಳೂರು; ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ  ಸೌಲಭ್ಯ ಕಲ್ಪಿಸುವ 'ಶಕ್ತಿ'...

Topics

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

ಆಧಾರ್ ಕಾರ್ಡ್‌ಗಿಂತಲೂ ಶಕ್ತಿ ಸ್ಮಾರ್ಟ್‌ ದುಬಾರಿ, ಎಸ್‌ಪಿವಿ ರಚನೆಯಾದರೂ ಸಿಗದ ಕಾರ್ಡ್‌; 185 ಕೋಟಿ ವೆಚ್ಚ ಭರಿಸುವವರಾರು?

ಬೆಂಗಳೂರು; ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ  ಸೌಲಭ್ಯ ಕಲ್ಪಿಸುವ 'ಶಕ್ತಿ'...

ಟೆಲಿಕಾಂ ಕಂಪನಿಯಿಂದ ವಿಧಾನಸೌಧ ಟರೇಸ್‌ ಅನಧಿಕೃತ ಬಳಕೆ; ವಸೂಲಾಗದ ನೆಲಬಾಡಿಗೆ, ನಿಯಮ ಉಲ್ಲಂಘಿಸಿದ್ದರೂ ಕ್ರಮವಿಲ್ಲ

ಬೆಂಗಳೂರು; ಟೆಲಿಕಾಂ ಮೂಲಸೌಕರ್ಯ ಕಂಪನಿಗಳಲ್ಲಿ ಖ್ಯಾತಿ ಹೊಂದಿರುವ ಆಂಧ್ರ ಪ್ರದೇಶ ಮೂಲದ...

ನೀಟ್‌, ಕೆ-ಸಿಇಟಿ ತರಬೇತಿ; ಅಲ್ಪಸಂಖ್ಯಾತರ ಇಲಾಖೆಯಲ್ಲಿ ಟೆಂಡರ್ ನಿಯಮ ಉಲ್ಲಂಘನೆ, ನಿಯಮಬಾಹಿರ ಚಟುವಟಿಕೆ, ಸರ್ಕಾರಕ್ಕೆ ಲೀಗಲ್ ನೋಟೀಸ್‌

ಬೆಂಗಳೂರು; ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ವಸತಿ ಕಾಲೇಜು ವಿದ್ಯಾರ್ಥಿಗಳಿಗೆ ಆಫ್‌ಲೈನ್ ಮಾದರಿಯಲ್ಲಿ...

ವರ್ಗಾವಣೆ ರದ್ದುಗೊಳಿಸಲು ತಲಾ 20 ಲಕ್ಷಕ್ಕೆ ಬೇಡಿಕೆ ಆರೋಪ; ಟೆಂಡರ್ ಕಮಿಷನ್ ಆಪಾದನೆ ಬೆನ್ನಲ್ಲೇ ಕರೀಗೌಡರ ವಿರುದ್ಧ ದೂರು

ಬೆಂಗಳೂರು; ಒಂದೆಡೆ ಮಂಜೂರಾಗಿರುವ ಹುದ್ದೆಗಳನ್ನು  ಭರ್ತಿ ಮಾಡುತ್ತಿಲ್ಲ, ಶೇ. 40ರಷ್ಟು ಹುದ್ದೆಗಳು...

Related Articles

Popular Categories

error: Content is protected !!