Wednesday | July 22, 2026 |

ಪ್ರೆಸ್ಟೀಜ್‌ ಅಪಾರ್ಟ್‌ಮೆಂಟ್‌ಗಳಿಗಿಲ್ಲ ನಿರ್ದಿಷ್ಟ ಶುಲ್ಕ; ಬೊಕ್ಕಸಕ್ಕೆ 70.69 ಲಕ್ಷ ನಷ್ಟ

ಬೆಂಗಳೂರು; ಪ್ರತಿಷ್ಠಿತ ಪ್ರೆಸ್ಟೀಜ್‌ ಕಟ್ಟಡ ನಿರ್ಮಾಣ ಕಂಪನಿಯು ತನ್ನ ನಿರ್ಮಾಣದ ಟೆಕ್ ಪಾರ್ಕ್‌-3ರಲ್ಲಿನ ವಾಣಿಜ್ಯ ಅಪಾರ್ಟ್‌ಮೆಂಟ್‌ಗಳನ್ನು ವರ್ಗಾಯಿಸುವಾಗ/ಮಾರಾಟದ ಸಂದರ್ಭದಲ್ಲಿ ಶಿವಾಜಿನಗರ ಉಪ ನೋಂದಣಾಧಿಕಾರಿಗಳು ಸಾಮಾನ್ಯ ದರವನ್ನೇ ಅನ್ವಯಿಸಿದ್ದರು. ಇದರಿಂದ 70.69 ಲಕ್ಷ ಮೊತ್ತದಷ್ಟು ಮುದ್ರಾಂಕ ಸುಂಕ ಮತ್ತು ನೋಂದಣಿ ಶುಲ್ಕವನ್ನು ಕಡಿಮೆ ಪ್ರಮಾಣದಲ್ಲಿ ವಿಧಿಸಲು ಕಾರಣರಾಗಿದ್ದರು.

ಆರ್ಥಿಕ ಮತ್ತು ರಾಜಸ್ವ ವಲಯಗಳಿಗೆ ಸಂಬಂಧಿಸಿದಂತೆ ಮಾರ್ಚ್‌ 2019 ಅಂತ್ಯಕ್ಕೆ ಸಿಎಜಿ ಮುದ್ರಾಂಕ ಸುಂಕ ಮತ್ತು ನೋಂದಣಿ ಶುಲ್ಕಕ್ಕೆ ಸಂಬಂಧಿಸಿದಂತೆ ನೀಡಿರುವ ವರದಿಯು, ನಿರ್ದಿಷ್ಟ ಯೋಜನೆಗಳಿಗೂ ಸಾಮಾನ್ಯ ದರವನ್ನು ಅನ್ವಯಿಸಿದ್ದರಿಂದಾಗಿ ಬೊಕ್ಕಸಕ್ಕೆ ಜಮೆಯಾಗಬೇಕಿದ್ದ ಕೋಟ್ಯಂತರ ರುಪಾಯಿ ಹೇಗೆ ಸೋರಿಕೆಯಾಗಿದೆ ಎಂಬುದನ್ನು ವಿವರಿಸಿದೆ.

ಮಾರುಕಟ್ಟೆ ಮೌಲ್ಯ ಮಾರ್ಗಸೂಚಿಗಳು ಅದರ ಆಡಳಿತ ವ್ಯಾಪ್ತಿಯೊಳಗಿನ ಪ್ರದೇಶಗಳಿಗೆ ಸಾಮಾನ್ಯ ದರಗಳನ್ನು ಹಾಗೂ ಎಲ್ಲೆಲ್ಲಿ ಸಾಧ್ಯವೋ ಅಂತಹ ಕಡೆಗಳಲ್ಲಿ ವೈಯಕ್ತಿಕ ಆಸ್ತಿಗಳಿಗೆ ನಿರ್ದಿಷ್ಟ ದರಗಳನ್ನು ನಿರ್ದಿಷ್ಟಪಡಿಸಿದೆ. ಅಲ್ಲದೆ ವಿಶೇಷ ನಿರ್ದೇಶನಗಳ ಪ್ರಕಾರ ಯಾವುದೇ ಹೊಸ ಅಪಾರ್ಟ್‌ಮೆಂಟ್‌ಗಳು, ವಿಲ್ಲಾಗಳು, ಬಡಾವಣೆಗಳ ನೋಂದಣಿಗೆ ಮುಂಚಿತವಾಗಿ ದರ ನಿಗದಿಗಾಗಿ ಕೇಂದ್ರ ಮೌಲ್ಯಮಾಪನ ಸಮಿತಿಗೆ(ಸಿವಿಸಿ)ಗೆ ಕಳಿಸಿಕೊಡಬೇಕು. ಆದರೆ ಪ್ರೆಸ್ಟೀಜ್‌ ಕಟ್ಟಡ ನಿರ್ಮಾಣ ಕಂಪನಿ ಪ್ರಕರಣದಲ್ಲಿ ಈ ಯಾವ ಪ್ರಕ್ರಿಯೆಗಳನ್ನು ನಡೆಸಿಲ್ಲ ಎಂದು ಸಿಎಜಿ ವರದಿಯಿಂದ ಗೊತ್ತಾಗಿದೆ.

ಪ್ರೆಸ್ಟೀಜ್‌ ಕಟ್ಟಡ ನಿರ್ಮಾಣ ಕಂಪನಿಯು ವಾಣಿಜ್ಯ ಅಪಾರ್ಟ್‌ಮೆಂಟ್‌ಗಳಿಗೆ ಸಂಬಂಧಿಸಿದ ದಸ್ತಾವೇಜುಗಳನ್ನು ನೋಂದಣಿ ಮಾಡುವ ಸಂದರ್ಭದಲ್ಲಿ ಶಿವಾಜಿನಗರ ಉಪ ನೋಂದಣಾಧಿಕಾರಿಗಳು ಮಾರುಕಟ್ಟೆ ಮೌಲ್ಯ ಮಾರ್ಗಸೂಚಿಗಳಲ್ಲಿ ಯಾವುದೇ ನಿರ್ದಿಷ್ಟ ದರಗಳನ್ನು ನಿರ್ದಿಷ್ಟಪಡಿಸಿರಲಿಲ್ಲ. ಚದರ ಅಡಿ ಒಂದಕ್ಕೆ 3,000 ರು. ಇದ್ದಂತಹ ಸಾಮಾನ್ಯ ದರವನ್ನೇ ನಿಗದಿಪಡಿಸಿದ್ದರು ಎಂಬುದನ್ನು ಸಿಎಜಿ ವರದಿ ಹೊರಗೆಡವಿದೆ.

ದಸ್ತಾವೇಜಿನಲ್ಲಿನ ನಿರೂಪಣೆ ಪ್ರಕಾರ ಅದೇ ಕ್ಯಾಂಪಸ್‌/ಪ್ರಾಂಗಣದಲ್ಲಿ ಚದರ ಅಡಿ ಒಂದಕ್ಕೆ 6,200 ಹಾಗೂ ಚದರ ಅಡಿ ಒಂದಕ್ಕೆ 6,000 ರು.ದರದಂತೆ ನಿರ್ದಿಷ್ಟ ಮಾರ್ಗಸೂಚಿ ಮೌಲ್ಯದೊಂದಿಗೆ ಎರಡು (ಪ್ರೆಸ್ಟೀಜ್‌ ಟೆಕ್‌ ಪಾರ್ಕ್‌ 1 ಮತ್ತು 2) ಯೋಜನೆಗಳಿದ್ದವು. ಅಲ್ಲದೆ ವರ್ತೂರು ಹೋಬಳಿಯಲ್ಲಿದ್ದ 14 ಟೆಕ್‌ ಪಾರ್ಕ್‌ಗಳ ಪೈಕಿ ಚದರ ಅಡಿ ಕನಿಷ್ಠ 5,900 ರು. ಗಳಿತ್ತು.

ಆದರೆ ‘ ಶಿವಾಜಿನಗರ ಉಪ ನೋಂದಣಾಧಿಕಾರಿಗಳು ಆ ಪ್ರದೇಶದಲ್ಲಿ ಇತರೆ ಎಲ್ಲಾ ಟೆಕ್‌ ಪಾರ್ಕ್‌ಗಳಿಗೆ ಹೋಲಿಸಿದಲ್ಲಿ ಕಡಿಮೆ ಪ್ರಮಾಣದ ದರವನ್ನು ಅಳವಡಿಸಿಕೊಂಡಿದ್ದರು ಎಂಬುದು ಸ್ಪಷ್ಟವಾಗುತ್ತದೆ, ‘ ಎಂದು ಸಿಎಜಿ ವರದಿ ಅಭಿಪ್ರಾಯಪಟ್ಟಿದೆ.

ಹಾಗೆಯೇ ಈ ಉಪನೋಂದಣಾಧಿಕಾರಿಗಳು ದರಗಳನ್ನು ನಿರ್ದಿಷ್ಟಪಡಿಸಿಕೊಳ್ಳುವ ಸಲುವಾಗಿ ಇದನ್ನು ಕೇಂದ್ರ ಮೌಲ್ಯಮಾಪನ ಸಮಿತಿಗೆ ಕಳಿಸುವ ಬದಲಿಗೆ ಸಾಮಾನ್ಯ ದರಗಳನ್ನು ಅಳವಡಿಸಿದ್ದರು. ಇದು ಆ ಪ್ರದೇಶದಲ್ಲಿ ನಿರ್ದಿಷ್ಟಪಡಿಸಲಾಗಿದ್ದಂತಹ ಮೌಲ್ಯಕ್ಕೆ (ಚದರ ಅಡಿ ಒಂದಕ್ಕೆ 5,900) ಹೋಲಿಸಿದರೆ 70.69 ಲಕ್ಷ ಮೊತ್ತದಷ್ಟು ಮುದ್ರಾಂಕ ಸುಂಕ ಮತ್ತು ನೋಂದಣಿ ಶುಲ್ಕವನ್ನು ಕಡಿಮೆ ಪ್ರಮಾಣದಲ್ಲಿ ವಿಧಿಸಲಾಗಿತ್ತು ಎಂದು ಸಿಎಜಿ ವರದಿ ಹೇಳಿದೆ.

Hot this week

ಶೌಚಗುಂಡಿಗಳಲ್ಲಿ ಸ್ವಚ್ಛತೆ; 5 ವರ್ಷದಲ್ಲಿ ದೇಶದಾದ್ಯಂತ 332 ಮಂದಿ ಸಾವು, ಕರ್ನಾಟಕದೊಂದಿಗೆ ತಾಳೆಯಾಗದ ಮರಣದ ಅಂಕಿಅಂಶ

ಬೆಂಗಳೂರು; ರಾಜ್ಯದಲ್ಲಿ ಶೌಚ ಗುಂಡಿಗಳು ಮತ್ತು ಒಳಚರಂಡಿಗಳಲ್ಲಿ  ಅಪಾಯಕಾರಿ ಪರಿಸ್ಥಿತಿಯಲ್ಲಿ 2024ನೇ...

ವಸತಿ ಬಡಾವಣೆ ನಿರ್ಮಾಣ, ಅಭಿವೃದ್ಧಿ ಕಾಮಗಾರಿ, ಬಡ್ಡಿ ಪಾವತಿ; ಲೆಕ್ಕಪತ್ರವನ್ನೇ ನಿರ್ವಹಿಸಿಲ್ಲ, ದಾಖಲೆಗಳನ್ನೂ ಒದಗಿಸಿಲ್ಲ, ಮುಡಾ ದುರಾಡಳಿತ

ಮಂಗಳೂರು: ಕುಂಜತ್‌ ಬೈಲ್ ಸೇರಿದಂತೆ ಹಲವೆಡೆ ವಸತಿ ಬಡಾವಣೆಗಳನ್ನು ರಚಿಸುವ ಉದ್ದೇಶದಿಂದ...

ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿ; ಡಿಪಿಆರ್, ಟೆಂಡರ್ ಪ್ರಕ್ರಿಯೆಯಲ್ಲಿ ಲೋಪ ದೋಷ, 130 ಕೋಟಿ ರು ಹೆಚ್ಚುವರಿ

ಬೆಂಗಳೂರು; ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿಗೆ ನಡೆಸಲು ಕರೆದಿದ್ದ...

ಆದಾಯಕ್ಕಿಂತ ಹೆಚ್ಚಿನ ಅಕ್ರಮ ಸಂಪತ್ತು ಗಳಿಕೆ ; ಡಾ ಬೂವನಹಳ್ಳಿ ನಾಗರಾಜ್ ವಿರುದ್ಧದ ಪ್ರಕರಣದಲ್ಲಿ ಬಿ ರಿಪೋರ್ಟ್‌ ಅಂಗೀಕರಿಸಿದ ನ್ಯಾಯಾಲಯ

ಬೆಂಗಳೂರು; ತುಮಕೂರು ಜಿಲ್ಲಾ ಪಂಚಾಯ್ತಿಯಲ್ಲಿ ಕುಂದುಕೊರತೆ ನಿವಾರಣೆ ಪ್ರಾಧಿಕಾರಿಯಾಗಿದ್ದ ಡಾ ಬೂವನಹಳ್ಳಿ...
Please Scan to make Your Contribution

Topics

ಶೌಚಗುಂಡಿಗಳಲ್ಲಿ ಸ್ವಚ್ಛತೆ; 5 ವರ್ಷದಲ್ಲಿ ದೇಶದಾದ್ಯಂತ 332 ಮಂದಿ ಸಾವು, ಕರ್ನಾಟಕದೊಂದಿಗೆ ತಾಳೆಯಾಗದ ಮರಣದ ಅಂಕಿಅಂಶ

ಬೆಂಗಳೂರು; ರಾಜ್ಯದಲ್ಲಿ ಶೌಚ ಗುಂಡಿಗಳು ಮತ್ತು ಒಳಚರಂಡಿಗಳಲ್ಲಿ  ಅಪಾಯಕಾರಿ ಪರಿಸ್ಥಿತಿಯಲ್ಲಿ 2024ನೇ...

ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿ; ಡಿಪಿಆರ್, ಟೆಂಡರ್ ಪ್ರಕ್ರಿಯೆಯಲ್ಲಿ ಲೋಪ ದೋಷ, 130 ಕೋಟಿ ರು ಹೆಚ್ಚುವರಿ

ಬೆಂಗಳೂರು; ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿಗೆ ನಡೆಸಲು ಕರೆದಿದ್ದ...

ಆದಾಯಕ್ಕಿಂತ ಹೆಚ್ಚಿನ ಅಕ್ರಮ ಸಂಪತ್ತು ಗಳಿಕೆ ; ಡಾ ಬೂವನಹಳ್ಳಿ ನಾಗರಾಜ್ ವಿರುದ್ಧದ ಪ್ರಕರಣದಲ್ಲಿ ಬಿ ರಿಪೋರ್ಟ್‌ ಅಂಗೀಕರಿಸಿದ ನ್ಯಾಯಾಲಯ

ಬೆಂಗಳೂರು; ತುಮಕೂರು ಜಿಲ್ಲಾ ಪಂಚಾಯ್ತಿಯಲ್ಲಿ ಕುಂದುಕೊರತೆ ನಿವಾರಣೆ ಪ್ರಾಧಿಕಾರಿಯಾಗಿದ್ದ ಡಾ ಬೂವನಹಳ್ಳಿ...

ಏಕಬಳಕೆ ಪ್ಲಾಸ್ಟಿಕ್‌ ಬಳಕೆಗಿಲ್ಲ ಕಡಿವಾಣ, ನಿಷೇಧದ ಕಾನೂನು ಕಾಗದದ ಮೇಲಷ್ಟೇ ಜಾರಿ; ಪಾಲಿಕೆ ಬಳಿ ಮಾಹಿತಿಯೇ ಇಲ್ಲ

ಮೈಸೂರು: ಏಕಬಳಕೆ ಪ್ಲಾಸ್ಟಿಕ್‌ನ ಉತ್ಪಾದನೆ, ಸಂಗ್ರಹಣೆ, ವಿತರಣೆ ಮತ್ತು ಬಳಕೆಯನ್ನು ಸಂಪೂರ್ಣವಾಗಿ...

Related Articles

Popular Categories

error: Content is protected !!