Friday | May 1, 2026 |

ಲಲಿತಾ ಜ್ಯುವೆಲ್ಲರಿ ಮಾರ್ಟ್‌ಗೆ ಬಡ್ಡಿ ವಿಧಿಸದ ಇಲಾಖೆ; ವ್ಯಾಪಾರಿಗಳ ಬಂಡವಾಳ ತೆರೆದಿಟ್ಟ ಸಿಎಜಿ

ಬೆಂಗಳೂರು; ಪ್ರತಿಷ್ಠಿತ ಚಿನ್ನ, ಬೆಳ್ಳಿ, ವಜ್ರ ವ್ಯಾಪಾರಿ ಸಂಸ್ಥೆ ಲಲಿತಾ ಜ್ಯುವೆಲ್ಲರಿ ಮಾರ್ಟ್‌ ಪ್ರೈವೈಟ್‌ ಲಿಮಿಟೆಡ್‌ ತೆರಿಗೆ ಪಾವತಿ ಮಾಡುವವರೆಗೂ ಬಡ್ಡಿ ವಿಧಿಸದ ವಾಣಿಜ್ಯ ತೆರಿಗೆ ಅಧಿಕಾರಿಗಳು ಕರ್ತವ್ಯಲೋಪ ಎಸಗಿರುವುದನ್ನು ಸಿಎಜಿ ವರದಿ ಬಹಿರಂಗಗೊಳಿಸಿದೆ.

ಆರ್ಥಿಕ ಮತ್ತು ರಾಜಸ್ವ ವಲಯಗಳಿಗೆ ಸಂಬಂಧಿಸಿದಂತೆ ಮಾರ್ಚ್‌ 2019 ಅಂತ್ಯಕ್ಕೆ ಸಿಎಜಿ ನೀಡಿರುವ ವರದಿಯಲ್ಲಿ ಲಲಿತಾ ಜ್ಯುವೆಲ್ಲರಿ ಮಾರ್ಟ್‌ ಸೇರಿದಂತೆ ನೋಂದಾಯಿತ ಮತ್ತು ನೋಂದಾಯಿತವಲ್ಲದ ವರ್ತಕರಿಂದ ಖರೀದಿಸಲಾದಂತಹ ಚಿನ್ನ, ಬೆಳ್ಳಿ, ವಜ್ರಗಳ ಖರೀದಿಗಳ ಮೇಲಿನ ತೆರಿಗೆ ಜಮೆಯಲ್ಲಿ ಆಗಿರುವ ಬಡ್ಡಿ ನಷ್ಟದ ಕುರಿತು ವಿವರಿಸಿದೆ.

ಲಲಿತಾ ಜ್ಯುವೆಲ್ಲರಿ ಮಾರ್ಟ್‌ ಪ್ರೈ ಲಿ.,ಗೆ ಸಂಬಂಧಿಸಿದಂತೆ 2014-15 ಸಾಲಿಗೆ 20164 ಜೂನ್‌ 27ರಂದು ಜಾರಿಗೊಳಿಸಿದ್ದ ಪುನರ್‌ ಕರ ನಿರ್ಧಾರಣ ಆದೇಶದಂತೆ ನೋಂದಾಯಿತ ವರ್ತಕರು ಮತ್ತು ನೋಂದಾಯಿತರಲ್ಲದ ವರ್ತಕರಿಂದ ಖರೀದಿಸಿದ್ದ ಚಿನ್ನ, ಬೆಳ್ಳಿ, ವಜ್ರಗಳ ಮೇಲೆ ಒಟ್ಟು 8.37 ಕೋಟಿ ಮೊತ್ತದಷ್ಟು ಖರೀದಿಗಳ ಮೇಲಿನ ತೆರಿಗೆ ಜಮೆ ಅನುಮತಿ ನೀಡಲಾಗಿತ್ತು.

ಕರದಾತರು ಸಲ್ಲಿಸಿದ್ದಂತಹ ಖರೀದಿಗಳನ್ನು ಪರಿಶೀಲಿಸಿದ್ದ ಸಿಎಜಿ ಅಧಿಕಾರಿಗಳು ಖರೀದಿಗಳ ಮೇಲಿನ ಒಟ್ಟಾರೆ ಖರೀದಿಗಳ ಮೇಲಿನ ತೆರಿಗೆ ಜಮೆಯು ಕೇವಲ 6.27 ಕೋಟಿ ಆಗಿತ್ತು ಎಂದು ಪರೀಕ್ಷಾ-ತನಿಖೆಯಿಂದ ಪತ್ತೆ ಹಚ್ಚಿದ್ದರು. ಇದರಲ್ಲಿ ನೋಂದಾಯಿತರಿಂದ 4.40 ಕೋಟಿ, ನೋಂದಾಯಿತರಲ್ಲದವರಿಂದ 1.87 ಕೋಟಿಯೂ ಸೇರಿತ್ತು.

ಅದೇ ರೀತಿ ವರ್ತಕರ ಲೆಕ್ಕಪತ್ರಗಳ ಲೆಕ್ಕಪರಿಶೋಧನೆಯ ಆಧಾರದ ಮೇಲೆ ನಮೂನೆ ಮೌವತೆ 240ರಲ್ಲಿಯೂ ಕೂಡ ಖರೀದಿಗಳ ಮೇಲಿನ ಜಮೆಯು 6.27 ಕೋಟಿ ಎಂದು ಘೋಷಿಸಲಾಗಿತ್ತು. ಈ ರೀತಿಯಾಗಿ ಅಧಿಕ ಪ್ರಮಾಣದಲ್ಲಿ ಅನುಮತಿ ನೀಡಿದ್ದಂತಹ ಖರೀದಿಗಳ ಮೇಲಿನ ತೆರಿಗೆ ಜಮೆಯು 2.10 ಕೋಟಿ ಆಗಿತ್ತು. ಅಲ್ಲದೆಯೇ 021 ಕೋಟಿ ಮೊತ್ತದಷ್ಟು ದಂಡ ಮತ್ತು ಹಾಗೂ 0.44 ಕೋಟಿ ಮೊತ್ತದಷ್ಟು ಬಡ್ಡಿಯನ್ನು ಸಹ ವಿಧಿಸಬೇಕಿತ್ತು. ಒಟ್ಟಾರೆ ತೆರಿಗೆ ಜವಾಬ್ದಾರಿಯು 2.75 ಕೋಟಿ ಆಗಿತ್ತು ಎಂದು ಸಿಎಜಿ ವರದಿಯಲ್ಲಿ ವಿವರಿಸಲಾಗಿದೆ.

2015ರ ಮೇನಿಂದ ಜೂನ್‌ 2016ರವರೆಗೆ ಅಂದರೆ ಕರ ನಿರ್ಧಾರಣ ಆದೇಶದ ದಿನಾಂಕದವರೆಗೆ 14 ತಿಂಗಳಗಳಿಗೆ ಬಡ್ಡಿ ಲೆಕ್ಕ ಹಾಕಲಾಗಿದೆ. ಆದರೂ ಬಡ್ಡಿಯನ್ನು ವರ್ತಕರು ತೆರಿಗೆ ಪಾವತಿ ಮಾಡುವ ದಿನಾಂಕದವರೆಗೂ ವಿಧಿಸಬೇಕಿದ್ದ ಅಧಿಕಾರಿಗಳು ಕರ್ತವ್ಯ ಲೋಪ ಎಸಗಿದ್ದಾರೆ ಎಂಬುದು ಸಿಎಜಿ ವರದಿಯಿಂದ ಮೇಲ್ನೋಟಕ್ಕೆ ಕಂಡು ಬಂದಿದೆ.

Hot this week

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

ಆಧಾರ್ ಕಾರ್ಡ್‌ಗಿಂತಲೂ ಶಕ್ತಿ ಸ್ಮಾರ್ಟ್‌ ದುಬಾರಿ, ಎಸ್‌ಪಿವಿ ರಚನೆಯಾದರೂ ಸಿಗದ ಕಾರ್ಡ್‌; 185 ಕೋಟಿ ವೆಚ್ಚ ಭರಿಸುವವರಾರು?

ಬೆಂಗಳೂರು; ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ  ಸೌಲಭ್ಯ ಕಲ್ಪಿಸುವ 'ಶಕ್ತಿ'...

Topics

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

ಆಧಾರ್ ಕಾರ್ಡ್‌ಗಿಂತಲೂ ಶಕ್ತಿ ಸ್ಮಾರ್ಟ್‌ ದುಬಾರಿ, ಎಸ್‌ಪಿವಿ ರಚನೆಯಾದರೂ ಸಿಗದ ಕಾರ್ಡ್‌; 185 ಕೋಟಿ ವೆಚ್ಚ ಭರಿಸುವವರಾರು?

ಬೆಂಗಳೂರು; ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ  ಸೌಲಭ್ಯ ಕಲ್ಪಿಸುವ 'ಶಕ್ತಿ'...

ಟೆಲಿಕಾಂ ಕಂಪನಿಯಿಂದ ವಿಧಾನಸೌಧ ಟರೇಸ್‌ ಅನಧಿಕೃತ ಬಳಕೆ; ವಸೂಲಾಗದ ನೆಲಬಾಡಿಗೆ, ನಿಯಮ ಉಲ್ಲಂಘಿಸಿದ್ದರೂ ಕ್ರಮವಿಲ್ಲ

ಬೆಂಗಳೂರು; ಟೆಲಿಕಾಂ ಮೂಲಸೌಕರ್ಯ ಕಂಪನಿಗಳಲ್ಲಿ ಖ್ಯಾತಿ ಹೊಂದಿರುವ ಆಂಧ್ರ ಪ್ರದೇಶ ಮೂಲದ...

ನೀಟ್‌, ಕೆ-ಸಿಇಟಿ ತರಬೇತಿ; ಅಲ್ಪಸಂಖ್ಯಾತರ ಇಲಾಖೆಯಲ್ಲಿ ಟೆಂಡರ್ ನಿಯಮ ಉಲ್ಲಂಘನೆ, ನಿಯಮಬಾಹಿರ ಚಟುವಟಿಕೆ, ಸರ್ಕಾರಕ್ಕೆ ಲೀಗಲ್ ನೋಟೀಸ್‌

ಬೆಂಗಳೂರು; ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ವಸತಿ ಕಾಲೇಜು ವಿದ್ಯಾರ್ಥಿಗಳಿಗೆ ಆಫ್‌ಲೈನ್ ಮಾದರಿಯಲ್ಲಿ...

ವರ್ಗಾವಣೆ ರದ್ದುಗೊಳಿಸಲು ತಲಾ 20 ಲಕ್ಷಕ್ಕೆ ಬೇಡಿಕೆ ಆರೋಪ; ಟೆಂಡರ್ ಕಮಿಷನ್ ಆಪಾದನೆ ಬೆನ್ನಲ್ಲೇ ಕರೀಗೌಡರ ವಿರುದ್ಧ ದೂರು

ಬೆಂಗಳೂರು; ಒಂದೆಡೆ ಮಂಜೂರಾಗಿರುವ ಹುದ್ದೆಗಳನ್ನು  ಭರ್ತಿ ಮಾಡುತ್ತಿಲ್ಲ, ಶೇ. 40ರಷ್ಟು ಹುದ್ದೆಗಳು...

Related Articles

Popular Categories

error: Content is protected !!