Saturday | September 5, 2026 |

ಲಲಿತಾ ಜ್ಯುವೆಲ್ಲರಿ ಮಾರ್ಟ್‌ಗೆ ಬಡ್ಡಿ ವಿಧಿಸದ ಇಲಾಖೆ; ವ್ಯಾಪಾರಿಗಳ ಬಂಡವಾಳ ತೆರೆದಿಟ್ಟ ಸಿಎಜಿ

ಬೆಂಗಳೂರು; ಪ್ರತಿಷ್ಠಿತ ಚಿನ್ನ, ಬೆಳ್ಳಿ, ವಜ್ರ ವ್ಯಾಪಾರಿ ಸಂಸ್ಥೆ ಲಲಿತಾ ಜ್ಯುವೆಲ್ಲರಿ ಮಾರ್ಟ್‌ ಪ್ರೈವೈಟ್‌ ಲಿಮಿಟೆಡ್‌ ತೆರಿಗೆ ಪಾವತಿ ಮಾಡುವವರೆಗೂ ಬಡ್ಡಿ ವಿಧಿಸದ ವಾಣಿಜ್ಯ ತೆರಿಗೆ ಅಧಿಕಾರಿಗಳು ಕರ್ತವ್ಯಲೋಪ ಎಸಗಿರುವುದನ್ನು ಸಿಎಜಿ ವರದಿ ಬಹಿರಂಗಗೊಳಿಸಿದೆ.

ಆರ್ಥಿಕ ಮತ್ತು ರಾಜಸ್ವ ವಲಯಗಳಿಗೆ ಸಂಬಂಧಿಸಿದಂತೆ ಮಾರ್ಚ್‌ 2019 ಅಂತ್ಯಕ್ಕೆ ಸಿಎಜಿ ನೀಡಿರುವ ವರದಿಯಲ್ಲಿ ಲಲಿತಾ ಜ್ಯುವೆಲ್ಲರಿ ಮಾರ್ಟ್‌ ಸೇರಿದಂತೆ ನೋಂದಾಯಿತ ಮತ್ತು ನೋಂದಾಯಿತವಲ್ಲದ ವರ್ತಕರಿಂದ ಖರೀದಿಸಲಾದಂತಹ ಚಿನ್ನ, ಬೆಳ್ಳಿ, ವಜ್ರಗಳ ಖರೀದಿಗಳ ಮೇಲಿನ ತೆರಿಗೆ ಜಮೆಯಲ್ಲಿ ಆಗಿರುವ ಬಡ್ಡಿ ನಷ್ಟದ ಕುರಿತು ವಿವರಿಸಿದೆ.

ಲಲಿತಾ ಜ್ಯುವೆಲ್ಲರಿ ಮಾರ್ಟ್‌ ಪ್ರೈ ಲಿ.,ಗೆ ಸಂಬಂಧಿಸಿದಂತೆ 2014-15 ಸಾಲಿಗೆ 20164 ಜೂನ್‌ 27ರಂದು ಜಾರಿಗೊಳಿಸಿದ್ದ ಪುನರ್‌ ಕರ ನಿರ್ಧಾರಣ ಆದೇಶದಂತೆ ನೋಂದಾಯಿತ ವರ್ತಕರು ಮತ್ತು ನೋಂದಾಯಿತರಲ್ಲದ ವರ್ತಕರಿಂದ ಖರೀದಿಸಿದ್ದ ಚಿನ್ನ, ಬೆಳ್ಳಿ, ವಜ್ರಗಳ ಮೇಲೆ ಒಟ್ಟು 8.37 ಕೋಟಿ ಮೊತ್ತದಷ್ಟು ಖರೀದಿಗಳ ಮೇಲಿನ ತೆರಿಗೆ ಜಮೆ ಅನುಮತಿ ನೀಡಲಾಗಿತ್ತು.

ಕರದಾತರು ಸಲ್ಲಿಸಿದ್ದಂತಹ ಖರೀದಿಗಳನ್ನು ಪರಿಶೀಲಿಸಿದ್ದ ಸಿಎಜಿ ಅಧಿಕಾರಿಗಳು ಖರೀದಿಗಳ ಮೇಲಿನ ಒಟ್ಟಾರೆ ಖರೀದಿಗಳ ಮೇಲಿನ ತೆರಿಗೆ ಜಮೆಯು ಕೇವಲ 6.27 ಕೋಟಿ ಆಗಿತ್ತು ಎಂದು ಪರೀಕ್ಷಾ-ತನಿಖೆಯಿಂದ ಪತ್ತೆ ಹಚ್ಚಿದ್ದರು. ಇದರಲ್ಲಿ ನೋಂದಾಯಿತರಿಂದ 4.40 ಕೋಟಿ, ನೋಂದಾಯಿತರಲ್ಲದವರಿಂದ 1.87 ಕೋಟಿಯೂ ಸೇರಿತ್ತು.

ಅದೇ ರೀತಿ ವರ್ತಕರ ಲೆಕ್ಕಪತ್ರಗಳ ಲೆಕ್ಕಪರಿಶೋಧನೆಯ ಆಧಾರದ ಮೇಲೆ ನಮೂನೆ ಮೌವತೆ 240ರಲ್ಲಿಯೂ ಕೂಡ ಖರೀದಿಗಳ ಮೇಲಿನ ಜಮೆಯು 6.27 ಕೋಟಿ ಎಂದು ಘೋಷಿಸಲಾಗಿತ್ತು. ಈ ರೀತಿಯಾಗಿ ಅಧಿಕ ಪ್ರಮಾಣದಲ್ಲಿ ಅನುಮತಿ ನೀಡಿದ್ದಂತಹ ಖರೀದಿಗಳ ಮೇಲಿನ ತೆರಿಗೆ ಜಮೆಯು 2.10 ಕೋಟಿ ಆಗಿತ್ತು. ಅಲ್ಲದೆಯೇ 021 ಕೋಟಿ ಮೊತ್ತದಷ್ಟು ದಂಡ ಮತ್ತು ಹಾಗೂ 0.44 ಕೋಟಿ ಮೊತ್ತದಷ್ಟು ಬಡ್ಡಿಯನ್ನು ಸಹ ವಿಧಿಸಬೇಕಿತ್ತು. ಒಟ್ಟಾರೆ ತೆರಿಗೆ ಜವಾಬ್ದಾರಿಯು 2.75 ಕೋಟಿ ಆಗಿತ್ತು ಎಂದು ಸಿಎಜಿ ವರದಿಯಲ್ಲಿ ವಿವರಿಸಲಾಗಿದೆ.

2015ರ ಮೇನಿಂದ ಜೂನ್‌ 2016ರವರೆಗೆ ಅಂದರೆ ಕರ ನಿರ್ಧಾರಣ ಆದೇಶದ ದಿನಾಂಕದವರೆಗೆ 14 ತಿಂಗಳಗಳಿಗೆ ಬಡ್ಡಿ ಲೆಕ್ಕ ಹಾಕಲಾಗಿದೆ. ಆದರೂ ಬಡ್ಡಿಯನ್ನು ವರ್ತಕರು ತೆರಿಗೆ ಪಾವತಿ ಮಾಡುವ ದಿನಾಂಕದವರೆಗೂ ವಿಧಿಸಬೇಕಿದ್ದ ಅಧಿಕಾರಿಗಳು ಕರ್ತವ್ಯ ಲೋಪ ಎಸಗಿದ್ದಾರೆ ಎಂಬುದು ಸಿಎಜಿ ವರದಿಯಿಂದ ಮೇಲ್ನೋಟಕ್ಕೆ ಕಂಡು ಬಂದಿದೆ.

Hot this week

2,500 ಕೋಟಿ ರು ಮೂಲ ಬೆಲೆಯ ಮೇಲೆ 350 ಕೋಟಿ ಪ್ರೀಮಿಯಂ; ನಾಗರೀಕರ ಮೇಲೆ ಹೊರೆ ಸೃಷ್ಟಿಸಿತೇ ಬಿಎಸ್‌ಡಬ್ಲ್ಯೂಎಂಎಲ್?

ಬೆಂಗಳೂರು;  ಪ್ರಾಥಮಿಕ ಹಂತದ ಕಸ ಸಂಗ್ರಹಣೆ ಮತ್ತು ಸಾಗಾಣಿಕೆಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯುಎಂಎಲ್‌...

ಬುಕ್ ಬ್ರಹ್ಮ ಸಾಹಿತ್ಯ ಉತ್ಸವಕ್ಕೆ 5 ಲಕ್ಷ ರು ಅನುದಾನ; ನೋಂದಣಿಯಾಗಿ 3 ವ‍ರ್ಷ ಪೂರೈಸದ ಬುಕ್‌ ಬ್ರಹ್ಮ ಫೌಂಡೇಷನ್‌ಗೆ ಒಂದು ಬಾರಿ ವಿನಾಯಿತಿ

ಬೆಂಗಳೂರು;  ಅನುದಾನ ಪಡೆಯುವ ಸಂಘ, ಸಂಸ್ಥೆಗಳು ನೋಂದಣಿಯಾಗಿ  3 ವರ್ಷಗಳನ್ನು ಪೂರೈಸಿರಬೇಕು...

ಘನತ್ಯಾಜ್ಯ ಸಂಗ್ರಹಣೆ, ಸಾಗಾಣಿಕೆಗೆ ವಾಹನಗಳ ಬಾಡಿಗೆ ವೆಚ್ಚ; ದರಗಳ ಪರಿಷ್ಕರಣೆಗೆ ಅನುಸರಿಸಿರುವ ಮಾನದಂಡದಲ್ಲಿ ಲೋಪವಿದೆಯೇ?

ಬೆಂಗಳೂರು; ಘನತ್ಯಾಜ್ಯ ಸಂಗ್ರಹಣೆ ಮತ್ತು ಸಾಗಾಣಿಕೆಗೆ ವಾಹನಗಳ ಬಾಡಿಗೆ ವೆಚ್ಚ ದರಗಳ...

ಭ್ರಷ್ಟಾಚಾರ, ಅಧಿಕ ಆಸ್ತಿ ಗಳಿಕೆ ಆರೋಪ; 4 ವರ್ಷಗಳಲ್ಲಿ 1,248 ಪ್ರಕರಣ ದಾಖಲು, ಸಿ ಗುಂಪಿನ ನೌಕರರೇ ಹೆಚ್ಚು

ಬೆಂಗಳೂರು; ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ, ಲಂಚಕ್ಕಾಗಿ ಬೇಡಿಕೆಯಿಟ್ಟ  ಆರೋಪಗಳಿಗೆ ಸಂಬಂಧಿಸಿದಂತೆ ...

ಕನ್ಸೋರ್ಟಿಯಂ ಷರತ್ತು, ಸದಸ್ಯರ ಷೇರು; ಅಂಜುಂ ಪರ್ವೇಜ್ ಸಮಿತಿಯ ಆಕ್ಷೇಪಣೆ ತಳ್ಳಿ ಹಾಕಿದ ಘನತ್ಯಾಜ್ಯ ನಿರ್ವಹಣೆ ಮಂಡಳಿ

ಬೆಂಗಳೂರು; ಕಸ ಸಂಗ್ರಹಣೆ ಮತ್ತು ಸಾಗಾಣಿಕೆಗೆ 21 ಪ್ಯಾಕೇಜ್‌ಗಳಲ್ಲಿ ರೂಪಿಸಿರುವ  ಕನ್ಸೋರ್ಟಿಯಂನಲ್ಲಿ...
Please Scan to make Your Contribution

Topics

2,500 ಕೋಟಿ ರು ಮೂಲ ಬೆಲೆಯ ಮೇಲೆ 350 ಕೋಟಿ ಪ್ರೀಮಿಯಂ; ನಾಗರೀಕರ ಮೇಲೆ ಹೊರೆ ಸೃಷ್ಟಿಸಿತೇ ಬಿಎಸ್‌ಡಬ್ಲ್ಯೂಎಂಎಲ್?

ಬೆಂಗಳೂರು;  ಪ್ರಾಥಮಿಕ ಹಂತದ ಕಸ ಸಂಗ್ರಹಣೆ ಮತ್ತು ಸಾಗಾಣಿಕೆಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯುಎಂಎಲ್‌...

ಘನತ್ಯಾಜ್ಯ ಸಂಗ್ರಹಣೆ, ಸಾಗಾಣಿಕೆಗೆ ವಾಹನಗಳ ಬಾಡಿಗೆ ವೆಚ್ಚ; ದರಗಳ ಪರಿಷ್ಕರಣೆಗೆ ಅನುಸರಿಸಿರುವ ಮಾನದಂಡದಲ್ಲಿ ಲೋಪವಿದೆಯೇ?

ಬೆಂಗಳೂರು; ಘನತ್ಯಾಜ್ಯ ಸಂಗ್ರಹಣೆ ಮತ್ತು ಸಾಗಾಣಿಕೆಗೆ ವಾಹನಗಳ ಬಾಡಿಗೆ ವೆಚ್ಚ ದರಗಳ...

ಭ್ರಷ್ಟಾಚಾರ, ಅಧಿಕ ಆಸ್ತಿ ಗಳಿಕೆ ಆರೋಪ; 4 ವರ್ಷಗಳಲ್ಲಿ 1,248 ಪ್ರಕರಣ ದಾಖಲು, ಸಿ ಗುಂಪಿನ ನೌಕರರೇ ಹೆಚ್ಚು

ಬೆಂಗಳೂರು; ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ, ಲಂಚಕ್ಕಾಗಿ ಬೇಡಿಕೆಯಿಟ್ಟ  ಆರೋಪಗಳಿಗೆ ಸಂಬಂಧಿಸಿದಂತೆ ...

ಕನ್ಸೋರ್ಟಿಯಂ ಷರತ್ತು, ಸದಸ್ಯರ ಷೇರು; ಅಂಜುಂ ಪರ್ವೇಜ್ ಸಮಿತಿಯ ಆಕ್ಷೇಪಣೆ ತಳ್ಳಿ ಹಾಕಿದ ಘನತ್ಯಾಜ್ಯ ನಿರ್ವಹಣೆ ಮಂಡಳಿ

ಬೆಂಗಳೂರು; ಕಸ ಸಂಗ್ರಹಣೆ ಮತ್ತು ಸಾಗಾಣಿಕೆಗೆ 21 ಪ್ಯಾಕೇಜ್‌ಗಳಲ್ಲಿ ರೂಪಿಸಿರುವ  ಕನ್ಸೋರ್ಟಿಯಂನಲ್ಲಿ...

Related Articles

Popular Categories

error: Content is protected !!