Sunday | March 29, 2026 |

ರಾಜಸ್ವ ವರಮಾನಕ್ಕೂ ಕನ್ನ; ಮೈತ್ರಿ ಸರ್ಕಾರದಲ್ಲಿ ಪರಿಶೀಲನೆಯೂ ಇರಲಿಲ್ಲ

Support THE-FILE

spot_img

ಬೆಂಗಳೂರು; ಖರೀದಿಗಳ ಮೇಲಿನ ತೆರಿಗೆ ಜಮೆ ಹೆಸರಿನಲ್ಲಿ ರಾಜ್ಯದ ವರಮಾನವನ್ನೂ ಕೊರೆದು ಹಾಕಲಾಗುತ್ತಿದೆ. ಇದನ್ನು ತಡೆಗಟ್ಟಬೇಕಿದ್ದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಈವರೆವಿಗೂ ಯಾವುದೇ ಮಾರ್ಗವನ್ನು ಕಂಡುಕೊಂಡಿಲ್ಲ.

ಆರ್ಥಿಕ ಮತ್ತು ರಾಜಸ್ವ ವಲಯಗಳಿಗೆ ಸಂಬಂಧಿಸಿದಂತೆ ಮಾರ್ಚ್‌ 2019 ಅಂತ್ಯಕ್ಕೆ ಸಿಎಜಿ ನೀಡಿರುವ ವರದಿಯು ಖರೀದಿಗಳ ಮೇಲಿನ ತೆರಿಗೆ ಜಮೆಯನ್ನು ವಿಶ್ಲೇಷಿಸಿದೆ. ತೆರಿಗೆ ಜಮೆ ಹೆಸರಿನಲ್ಲಿ ರಾಜ್ಯದ ವರಮಾನವನ್ನು ಕೊರೆದು ಹಾಕುವುದನ್ನು ತಡೆಯುವ ಸಲುವಾಗಿ ಮಾರ್ಗಗಳನ್ನು ಕಂಡುಕೊಳ್ಳಬೇಕು ಎಂದು ಶಿಫಾರಸ್ಸು ಮಾಡಿದೆ.

ಅಲ್ಲದೆ ಖರೀದಿಗಳ ಮೇಲಿನ ತೆರಿಗೆ ಜಮೆ ಕೋರಿಕೆಗಳನ್ನು ಪರಿಶೀಲಿಸುವ, ಖಚಿತಪಡಿಸಿಕೊಳ್ಳುವ ಸಲುವಾಗಿ ಸ್ಥಳೀಯ ಕಚೇರಿಗಳಲ್ಲಿ ಪರಿಶೀಲನಾ ಪ್ರಕ್ರಿಯೆ ಕೈಗೊಳ್ಳುವ ವ್ಯವಸ್ಥೆಯನ್ನು ಸ್ಥಾಪಿಸಬೇಕು ಎಂದೂ ಶಿಫಾರಸ್ಸು ಮಾಡಿದೆ.

2018 ಮೇ ಮತ್ತು ಜನವರಿ 2019ರ ನಡುವೆ ಬೆಂಗಳೂರು, ಹಾಸನ, ಬಳ್ಳಾರಿ, ದಾವಣಗೆರೆ ಜಿಲ್ಲಾ ಕಚೇರಿ ವ್ಯಾಪ್ತಿಯಲ್ಲಿನ ವರ್ತಕರು ಖರೀದಿಗಳ ಮೇಲೆ ಕೋರಿದ್ದ ಖರೀದಿ ಮೇಲಿನ ತೆರಿಗೆ ಜಮೆ ಮೊತ್ತಕ್ಕಿಂತ ಕಡಿಮೆ ಪ್ರಮಾಣದಲ್ಲಿ ಮಾರಾಟಗಳ ಮೇಲಿನ ತೆರಿಗೆ ಪಾವತಿಸಿದ್ದರು ಎಂದು ಸಿಎಜಿ ವರದಿ ವಿವರಿಸಿದೆ.

ಖರೀದಿಗಳ ಮೇಲಿನ ತೆರಿಗೆ ಜಮೆಗೆ ಅನುಗುಣವಾಗಿ 32 ಮಾರಾಟಗಳನ್ನು ಮಾಡಿದ ವರ್ತಕರಿದ್ದರು. ಇ-ಎಫ್‌ಎಸ್‌ನಲ್ಲಿನ ಮಾರಾಟಗಳನ್ನು ಮಾಡುವ ವರ್ತಕರು ವಿವರಗಳನ್ನು ಪರಿಶೀಲಿಸಿದ್ದ ಸಿಎಜಿ, ಖರೀದಿಗಳ ಮೇಲಿನ ತೆರಿಗೆ ಜಮೆಗೆ ಅನುಮತಿಸಿದ್ದಂತಹ ಅವಧಿಯಲ್ಲಿ 14 ವರ್ತಕರು ನೋಂದಣಿಯನ್ನು ರದ್ದುಗೊಳಿಸಿದ್ದರು ಅಥವಾ ನೋಂದಣಿಯನ್ನೇ ಮಾಡಿಸಿರಲಿಲ್ಲ ಎಂದೂ ಪತ್ತೆ ಹಚ್ಚಿದ್ದಾರೆ.

ಖರೀದಿಗಳನ್ನು ಮಾಡಿದ ವರ್ತಕರು ಕೋರಿದ್ದಂತಹ ಖರೀದಿಗಳ ಮೇಲಿನ ತೆರಿಗೆ ಜಮೆ ಮೊತ್ತಕ್ಕಿಂತ ಕಡಿಮೆ ಪ್ರಮಾಣದಲ್ಲಿ ಮಾರಾಟಗಳ ಮೇಲಿನ ತೆರಿಗೆ ಪಾವತಿಸಿದ್ದರು. ಇದರಿಂದಾಗಿ ಇಲಾಖೆಯು ಅನುಮತಿ ನೀಡಿದ್ದ 0.59 ಕೋಟಿ ಮೊತ್ತದಷ್ಟು ಖರೀದಿಗಳ ಮೇಲಿನ ತೆರಿಗೆ ಜಮೆಗೆ ಪ್ರಮಾಣಕ್ಕನುಗುಣವಾಗಿ ಘೋಷಿಸಿದ್ದ ಮಾರಾಟಗಳ ಮೇಲಿಕನ ತೆರಿಗೆ ಕೇವಲ 0.03 ಕೋಟಿ ಆಗಿತ್ತು ಎಂಬುದು ಸಿಎಜಿ ವರದಿಯಿಂದ ತಿಳಿದು ಬಂದಿದೆ.

ಪ್ರಮಾಣಕ್ಕಗುನುಗುಣವಾಗಿ ಮಾರಾಟಗಳ ಮೇಲಿನ ತೆರಿಗೆಯನ್ನು ವಸೂಲು ಮಾಡದೆಯೇ ಖರೀದಿಗಳ ಮೇಲಿನ ತೆರಿಗೆ ಜಮೆಯನ್ನು ಅನುಮತಿಸಿದ್ದು 0.56 ಕೋಟಿ ಮೊತ್ತದಷ್ಟು ವರಮಾನ ನಷ್ಟಕ್ಕೆ ಕಾರಣವಾಗಿದೆ. ಅಲ್ಲದೆಯೇ 0.06 ಕೋಟಿ ಮೊತ್ತದಷ್ಟು ದಂಡ ಹಾಗೂ 0.53 ಕೋಟಿ ಮೊತ್ತದಷ್ಟು ಬಡ್ಡಿಯನ್ನು ವಿಧಿಸಬೇಕಿತ್ತು. ಇದೆಲ್ಲರ ಒಟ್ಟಾರೆ ಬಾಕಿ 1.15 ಕೋಟಿ ಆಗುತ್ತದೆ ಎಂದು ಸಿಎಜಿ ವರದಿ ವಿವರಿಸಿದೆ.

ಮಾರಾಟ ಮಾಡಿದ ವರ್ತಕರು ತಾವು ಖರೀದಿಯನ್ನು ಮಾಡಿದ ವರ್ತಕರಿಂದ ತೆರಿಗೆ ಸಂಗ್ರಹಿಸಿದ ಸಮಯದಲ್ಲಿ ನೋಂದಾಯಿತ ವರ್ತಕರಾಗಿರಲಿಲ್ಲ ಎಂದು ಪತ್ತೆ ಹಚ್ಚಿದ ಸಿಎಜಿ, ಈ ರೀತಿ ಸಂಗ್ರಹಿಸಲಾದ ಮೊತ್ತವು ಇ-ಎಫ್‌ಎಸ್‌ನಲ್ಲಿ ಪಾವತಿಸಿರಲಿಲ್ಲ ಎಂದೂ ಹೇಳಿದೆ.

‘ಯಾರಿಂದ ತೆರಿಗೆ ವರಮಾನವನ್ನು ವಸೂಲಾತಿ ಮಾಡಬೇಕು ಎಂಬುದನ್ನು ಹೊರತುಪಡಿಸಿದಂತೆ ಮಾರಾಟಗಳನ್ನು ಮಾಡಿದ ವರ್ತಕರು ಮಾರಾಟಗಳ ಮೇಲಿನ ತೆರಿಗೆಯನ್ನು ಪಾವತಿಸದಿದ್ದಲ್ಲಿ ಹಾಗೂ ಖರೀದಿಗಳನ್ನು ಮಾಡಿದ ವರ್ತಕರು ಖರೀದಿಗಳ ಮೇಲಿನ ತೆರಿಗೆ ಜಮೆ ಕೋರಿದಲ್ಲಿ ರಾಜ್ಯದ ರಾಜಸ್ವ ವರಮಾನವು ಕಳೆದುಹೋಗುತ್ತದೆ,’ ಎಂದು ಸಿಎಜಿ ವರದಿ ಅಭಿಪ್ರಾಯಪಟ್ಟಿದೆ.

ಮೈತ್ರಿ ಸರ್ಕಾರದ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಅವರು ತೆರಿಗೆದಾರರ ಹಣವನ್ನು ಅಪವ್ಯಯ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದ ಬಿಜೆಪಿಯೇ ಈಗ ಅಧಿಕಾರದಲ್ಲಿದ್ದರೂ ರಾಜಸ್ವ ವರಮಾನವನ್ನು ಕೊರೆದು ಹಾಕುವುದನ್ನು ತಡೆಯಲು ಈವರೆವಿಗೂ ಯಾವುದೇ ಕ್ರಮ ಕೈಗೊಳ್ಳದಿರುವುದು ಪ್ರಸಕ್ತ ಸಾಲಿನಲ್ಲಿಯೂ ರಾಜಸ್ವ ವರಮಾನ ಮತ್ತಷ್ಟು ಖೋತಾ ಆಗುವ ಸಾಧ್ಯತೆಗಳು ಹೆಚ್ಚಿವೆ.

Hot this week

ಮನೆಗಳ ಹಂಚಿಕೆಯಲ್ಲಿ ಭ್ರಷ್ಟಾಚಾರ, ಹಣಕ್ಕೆ ಬೇಡಿಕೆ; ಪಾಟೀಲರ ಆರೋಪ, ಲೋಕಾ ತನಿಖೆಯಿಂದ ಸಾಬೀತು

ಬೆಂಗಳೂರು; ರಾಜೀವ್‌ ಗಾಂಧಿ ವಸತಿ ನಿಗಮದ ವ್ಯಾಪ್ತಿಯಲ್ಲಿ ಹಣ ಕೊಟ್ಟರಷ್ಟೇ ಮನೆಗಳನ್ನು ...

ಕದಂಬೋತ್ಸವ ಸೇರಿ ಸಾಂಸ್ಕೃತಿಕ ಉತ್ಸವಗಳಿಗೆ ಅನುದಾನ; 12.50 ಕೋಟಿ ರು ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಮೈಸೂರು ದಸರಾ ಸೇರಿದಂತೆ ಇನ್ನಿತರೆ ಜಿಲ್ಲಾಮಟ್ಟದ ವಿವಿಧ ಉತ್ಸವಗಳಿಗೆ 2024-25ಮತ್ತು...

ಪ್ರಚೋದನಕಾರಿ ಭಾಷಣ, ಕೋಮು ಗಲಭೆ; 3 ವರ್ಷದಲ್ಲಿ 50 ಪ್ರಕರಣಗಳು ದಾಖಲು, ಪಟ್ಟಿ ಬಹಿರಂಗ

ಬೆಂಗಳೂರು; ರಾಜ್ಯದ  ಕರಾವಳಿ ಭಾಗ ಸೇರಿದಂತೆ ವಿವಿಧೆಡೆ ಪ್ರಚೋದನಾಕಾರಿ ಭಾಷಣ ಮಾಡಿದವರು...

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

Topics

ಮನೆಗಳ ಹಂಚಿಕೆಯಲ್ಲಿ ಭ್ರಷ್ಟಾಚಾರ, ಹಣಕ್ಕೆ ಬೇಡಿಕೆ; ಪಾಟೀಲರ ಆರೋಪ, ಲೋಕಾ ತನಿಖೆಯಿಂದ ಸಾಬೀತು

ಬೆಂಗಳೂರು; ರಾಜೀವ್‌ ಗಾಂಧಿ ವಸತಿ ನಿಗಮದ ವ್ಯಾಪ್ತಿಯಲ್ಲಿ ಹಣ ಕೊಟ್ಟರಷ್ಟೇ ಮನೆಗಳನ್ನು ...

ಕದಂಬೋತ್ಸವ ಸೇರಿ ಸಾಂಸ್ಕೃತಿಕ ಉತ್ಸವಗಳಿಗೆ ಅನುದಾನ; 12.50 ಕೋಟಿ ರು ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಮೈಸೂರು ದಸರಾ ಸೇರಿದಂತೆ ಇನ್ನಿತರೆ ಜಿಲ್ಲಾಮಟ್ಟದ ವಿವಿಧ ಉತ್ಸವಗಳಿಗೆ 2024-25ಮತ್ತು...

ಪ್ರಚೋದನಕಾರಿ ಭಾಷಣ, ಕೋಮು ಗಲಭೆ; 3 ವರ್ಷದಲ್ಲಿ 50 ಪ್ರಕರಣಗಳು ದಾಖಲು, ಪಟ್ಟಿ ಬಹಿರಂಗ

ಬೆಂಗಳೂರು; ರಾಜ್ಯದ  ಕರಾವಳಿ ಭಾಗ ಸೇರಿದಂತೆ ವಿವಿಧೆಡೆ ಪ್ರಚೋದನಾಕಾರಿ ಭಾಷಣ ಮಾಡಿದವರು...

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

Related Articles

Popular Categories

error: Content is protected !!