Friday | June 12, 2026 |

ಕೋಟ್ಯಂತರ ಮೊತ್ತದ ವರಮಾನ ಸೋರಿಕೆ; ವರ್ತಕರ ದಂಡ ಮನ್ನಾಕ್ಕೆ ಸಿಎಜಿ ಆಕ್ಷೇಪ

ಬೆಂಗಳೂರು; ತೆರಿಗೆ ಪಾವತಿದಾರರು ಮಾಸಿಕ ಸಲ್ಲಿಕೆಗಳನ್ನು ಖಚಿತಪಡಿಸಿಕೊಳ್ಳದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ಕರ್ತವ್ಯಲೋಪದಿಂದಾಗಿ ನಿರಂತರವಾಗಿ ಕೋಟ್ಯಂತರ ಮೊತ್ತದ ವರಮಾನ ಸೋರಿಕೆಯಾಗುತ್ತಿದೆ.

ಆರ್ಥಿಕ ಮತ್ತು ರಾಜಸ್ವ ವಲಯಗಳಿಗೆ ಸಂಬಂಧಿಸಿದಂತೆ ಮಾರ್ಚ್‌ 2019 ಅಂತ್ಯಕ್ಕೆ ಸಿಎಜಿ ನೀಡಿರುವ ವರದಿಯು ಕರ್ನಾಟಕ ಮೌವತೆ ಅಧಿನಿಯಮ ಪರಿಚ್ಛೇದ 74(4) ರ ಅಡಿಯಲ್ಲಿ ದಂಡ ವಸೂಲು ಮಾಡದೇ ವರಮಾನ ಸೋರಿಕೆಯಾಗುತ್ತಿರುವುದನ್ನು ಮುನ್ನೆಲೆಗೆ ತಂದಿದೆ.

ಬಳ್ಳಾರಿ, ಬೆಂಗಳೂರು, ಬಿದರೆ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹೊಸಪೇಟೆ, ಕಲಬುರಗಿ ಹಾಗೂ ರಾಯೂಚೂರು ಜಿಲ್ಲೆಗಳ 22 ಕಚೇರಿ ವ್ಯಾಪ್ತಿಯಲ್ಲಿ ಕರ್ನಾಟಕ ಮೌವತೆ ಅಧಿನಿಯಮ ಪರಿಚ್ಛೇದ 74(4) ರ ಅಡಿಯಲ್ಲಿ17.62 ಕೋಟಿ ದಂಡ ವಿಧಿಸಿರಲಿಲ್ಲ ಎಂಬುದು ಸಿಎಜಿ ವರದಿಯಿಂದ ತಿಳಿದು ಬಂದಿದೆ.

ಕಾಂಗ್ರೆಸ್‌ ಸರ್ಕಾರದಲ್ಲಿ ಪೂರ್ಣಾವಧಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ, ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಎಚ್‌ ಡಿ ಕುಮಾರಸ್ವಾಮಿ ಅವರ ಅವಧಿಯಲ್ಲಿ ಈ ನಷ್ಟ ಸಂಭವಿಸಿದೆ. ಈಗಿನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು 1 ವರ್ಷ ಕಳೆದಿದ್ದರೂ ಅಧಿಕಾರಿಗಳಿಗೆ ನೋಟೀಸ್‌ ನೀಡಿದೆಯೇ ವಿನಃ ಇನ್ನೂ ಪೂರ್ಣ ಪ್ರಮಾಣದಲ್ಲಿ ದಂಡ ವಸೂಲು ಮಾಡಿಲ್ಲ ಎಂದು ತಿಳಿದು ಬಂದಿದೆ.

ಕರದಾತರು ಸ್ಥಳೀಯ ಸನ್ನದು ಲೆಕ್ಕಪರಿಶೋಧಕರಿಂದ ಲೆಕ್ಕ ತಪಾಸಣೆ ನಡೆಸಿರುವುದಿಲ್ಲ. ಕರ ನಿರ್ಧರಣಾ ಅಧಿಕಾರಿಗಳು ಅಧಿನಿಯಮದ ಪ್ರಕಾರ ನೋಟೀಸ್‌ ನೀಡುವ ಮೂಲಕ ಅಥವಾ ಕಡ್ಡಾಯವಾಗಿ ವಿಧಿಸಬಹುದಾಗಿದ್ದ ದಂಡವನ್ನು ವಿಧಿಸುವ ಮೂಲಕ ಅನುಸರಣಾ ಕ್ರಮಗಳನ್ನು ಅಧಿಕಾರಿಗಳು ಕೈಗೊಂಡಿರಲಿಲ್ಲ.

‘ವ್ಯವಸ್ಥೆಯಲ್ಲಿ ಅಂತರ್ಗತವಾಗಿರುವ ನಿಯಂತ್ರಣಗಳನ್ನು ಜಾರಿಗೊಳಿಸುವಲ್ಲಿನ ವಿಫಲತೆಯು ವರಮಾನದ ಸೋರಿಕೆಯಲ್ಲಿ ಪರಿಣಿಮಿಸುತ್ತದೆ, ‘ ಎಂದು ಸಿಎಜಿ ವರದಿ ಅಭಿಪ್ರಾಯಪಟ್ಟಿದೆ.
ಇಂತಹ ಪ್ರಕರಣಗಳನ್ನು 2019ರ ಅಗಸ್ಟ್‌ ಡಿಸೆಂಬರ್‌ 2019ರ ನಡುವೆ ಸರ್ಕಾರ ಹಾಗೂ ಇಲಾಖೆ ಗಮನಕ್ಕೆ ತಂದ ನಂತರ 3 ಪ್ರಕರಣಗಳಲ್ಲಿ 0.84 ಲಕ್ಷ ಮೊತ್ತವನ್ನಷ್ಟೇ ವಸೂಲು ಮಾಡಲಾಗಿದೆ. 1,081 ಪ್ರಕರಣಗಳಲ್ಲಿ 4.20 ಕೋಟಿ ಮೊತ್ತದಷ್ಟು ದಂಡದ ಪಾವತಿಸಲು ಆದೇಶ ಹೊರಡಿಸಿದೆ. 10.02 ಲಕ್ಷ ಮೊತ್ತವು ಒಳಗೊಂಡಂತೆ 67 ಪ್ರಕರಣಗಳಲ್ಲಿ ತಗಾದೆ ನೋಟೀಸ್‌ಗಳನ್ನು ನೀಡಿದೆ ಎಂದು ಇಲಾಖೆ ಸಿಎಜಿಗೆ ಉತ್ತರಿಸಿರುವುದು ತಿಳಿದು ಬಂದಿದೆ.

4 ವರ್ತಕರು ನಮೂನೆ ಮೌವತೆ 240ರಲ್ಲಿ 15.15 ಲಕ್ಷ ಮೊತ್ತದಷ್ಟು ಹೆಚ್ಚುವರಿ ತೆರಿಗೆ ಬಾಧ್ಯತೆಯನ್ನು ಘೋಷಿಸಿಕೊಂಡಿದ್ದರು. ಈ ಪೈಕಿ ಕೇವಲ ಇಬ್ಬರು ವರ್ತಕರು ಮಾತ್ರ 3.63 ಲಕ್ಷ ಮೊತ್ತವನ್ನು ಪಾವತಿಸಿದ್ದರು. ಇಬ್ಬರು ವರ್ತಕರುಗಳಿಂದ ಪಾವತಿ ಆಗಬೇಕಿದ್ದ ತೆರಿಗೆ ಬಾಧ್ಯತೆ 11.52 ಲಕ್ಷ ಮೊತ್ತವು ವಾಣಿಜ್ಯ ತೆರಿಗೆಗಳ ಇಲಾಖೆಯ ವಿದ್ಯುನ್ಮಾನ ಸಲ್ಲಿಕೆ ವ್ಯವಸ್ಥೆಯಲ್ಲಿ ಪಾವತಿಯಾಗದೇ ಬಾಕಿ ಉಳಿದಿತ್ತು. ಅಲ್ಲದೆ ಈ ರೀತಿಯಾಗಿ ಹೆಚ್ಚುವರಿ ತೆರಿಗೆ ಬಾಧ್ಯತೆಯ ಪಾವತಿಯನ್ನು ಖಚಿತಪಡಿಸಿಕೊಳ್ಳದೆಯೂ ಕೂಡ ದಂಡಗಳನ್ನು ಮನ್ನಾ ಮಾಡಲಾಗಿತ್ತು ಎಂದು ಸಿಎಜಿ ವರದಿ ಗಮನಿಸಿದೆ.

Hot this week

ಆರ್ಥಿಕ ಬಿಕ್ಕಟ್ಟು; ಶಿಕ್ಷಕರ ನೇಮಕಾತಿ, ವೃತ್ತಿಪರತೆ ಅಭಿವೃದ್ಧಿ ವೆಚ್ಚಕ್ಕೆ ತಡೆಹಿಡಿದಿತ್ತೇ ಸರ್ಕಾರ?

ಬೆಂಗಳೂರು; ರಾಜ್ಯದ ಹೆಚ್ಚಿನ ಸರ್ಕಾರಿ ಶಾಲೆಗಳು ಆರ್‍‌ಟಿಇ ಕಾಯ್ದೆಯು ಭೌತಿಕ ಮೂಲಸೌಕರ್ಯಗಳು...

ತ್ಯಾಜ್ಯ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಅಕ್ರಮ ಆರೋಪ; ಮಧ್ಯಪ್ರವೇಶಕ್ಕೆ ಲೋಕಭವನ ಕದ ತಟ್ಟಿದ ಬಿಜೆಪಿ, ಸ್ವತಂತ್ರ ತನಿಖೆಗೆ ಮುಂದಾಗುವರೇ?

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸಮಗ್ರ ಘನ ತ್ಯಾಜ್ಯ ನಿರ್ವಹಣಾ...
Please Scan to make Your Contribution

Topics

ಆರ್ಥಿಕ ಬಿಕ್ಕಟ್ಟು; ಶಿಕ್ಷಕರ ನೇಮಕಾತಿ, ವೃತ್ತಿಪರತೆ ಅಭಿವೃದ್ಧಿ ವೆಚ್ಚಕ್ಕೆ ತಡೆಹಿಡಿದಿತ್ತೇ ಸರ್ಕಾರ?

ಬೆಂಗಳೂರು; ರಾಜ್ಯದ ಹೆಚ್ಚಿನ ಸರ್ಕಾರಿ ಶಾಲೆಗಳು ಆರ್‍‌ಟಿಇ ಕಾಯ್ದೆಯು ಭೌತಿಕ ಮೂಲಸೌಕರ್ಯಗಳು...

ಕಸ ವಿಲೇವಾರಿ ಟೆಂಡರ್‍‌ನಲ್ಲಿ ಅಕ್ರಮ; 10,000 ಕೋಟಿ ಕಿಕ್‌ ಬ್ಯಾಕ್‌ ಆರೋಪ, ಹೈಕಮಾಂಡ್ ಕಪ್ಪದ ಟೆಂಡರ್, ರಾಜ್ಯಪಾಲರಿಗೆ ದೂರು, ದಿ ಫೈಲ್ ವರದಿ ಬೆನ್ನಲ್ಲೇ ತುಟಿ ಬಿಚ್ಚಿದ ಆರ್ ಅಶೋಕ್

ಬೆಂಗಳೂರು; ಸಮಗ್ರ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್‌ ಯೋಜಿಸಿದ್ದ ಟೆಂಡರ್ ಪ್ಯಾಕೇಜ್‌ಗಳಲ್ಲಿ...

ಒಂದು ರಾಷ್ಟ್ರ ಒಂದು ಚುನಾವಣೆ; ಸಂಸತ್‌ ಜಂಟಿ ಸಮಿತಿಗೆ 5 ತಿಂಗಳಾದರೂ ಮಾಹಿತಿ ನೀಡದ ರಾಜ್ಯ

ಬೆಂಗಳೂರು; ಒಂದು ರಾಷ್ಟ್ರ ಒಂದು ಚುನಾವಣೆಗೆ ಸಂಬಂಧಿಸಿದಂತೆ ಸಂವಿಧಾನದ 129ನೇ ತಿದ್ದುಪಡಿ...

ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌, ಸಿಎಂ ಜನಸ್ಪಂದನ, ಸಿ ಎಸ್ ಕಚೇರಿಯಲ್ಲಿ ಇತ್ಯರ್ಥವಾಗದ 37,782 ಅರ್ಜಿಗಳು; ನಿಷ್ಕ್ರೀಯವಾಯಿತೇ ಆಡಳಿತ?

ಬೆಂಗಳೂರು;  ಸಾರ್ವಜನಿಕರು ವಿವಿಧ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌,...

Related Articles

Popular Categories

error: Content is protected !!