Thursday | May 14, 2026 |

ಅತಿಥಿ ಉಪನ್ಯಾಸಕರ ಸಂಭಾವನೆಯಲ್ಲಿ ಗೋಲ್ಮಾಲ್‌; ಪ್ರಾಂಶುಪಾಲರಿಂದಲೇ ಅನರ್ಹರಿಗೆ ಪಾವತಿ

ಬೆಂಗಳೂರು; ಅತಿಥಿ ಉಪನ್ಯಾಸಕರ ಸಂಭಾವನೆಗೆ ಸರ್ಕಾರ ಬಿಡುಗಡೆ ಮಾಡಿದ್ದ ಒಟ್ಟು 5,85,000 ರು.ಗಳನ್ನು ಅನರ್ಹ ವ್ಯಕ್ತಿಗಳಿಗೆ ಪಾವತಿಸಿ ದುರುಪಯೋಗಪಡಿಸಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಪಟೂರು ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಅಲ್ಲಮಪ್ರಭು ಸೇರಿದಂತೆ ಇನ್ನಿತರರ ವಿರುದ್ಧ ವಿಚಾರಣೆಗೆ ಶಿಕ್ಷಣ ಇಲಾಖೆ ಪೂರ್ವಾನುಮತಿ ನೀಡಿದೆ.

2018-19 ಮತ್ತು 2019-20ನೇ ಸಾಲಿನಲ್ಲಿ ಪದವಿಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕರಿಗೆ ಮಂಜೂರು ಮಾಡಿರುವ ಅನುದಾನವನ್ನು ಅತಿಥಿ ಉಪನ್ಯಾಸಕರಲ್ಲದ ಅನರ್ಹ ವ್ಯಕ್ತಿಗಳಿಗೆ ಅತಿಥಿ ಉಪನ್ಯಾಸಕರ ಸಂಭಾವನೆಯನ್ನು ಬಿಲ್‌ ಮಾಡಿ ಡ್ರಾ ಮಾಡಿರುವ ಆರೋಪಕ್ಕೆ ಪ್ರಾಂಶುಪಾಲ ಅಲ್ಲಮಪ್ರಭು, ಕಾಲೇಜಿನ ಪ್ರಥಮದರ್ಜೆ ಸಹಾಯಕ ಸುನೀಲ್‌ ಕೂರ್ಗಿ ಅವರ ವಿರುದ್ಧ ಎಸಿಬಿ ವಿಚಾರಣೆಗೆ ಅನುಮತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ.

ಆರೋಪಿತ ಪ್ರಾಂಶುಪಾಲ ಮತ್ತು ಪ್ರಥಮದರ್ಜೆ ಸಹಾಯಕರ ವಿರುದ್ಧ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ 1988ರ ಮತ್ತು 2016ರ ಮಾರ್ಚ್ 14ರ ಸರ್ಕಾರದ ಆದೇಶದಂತೆ ಎಸಿಬಿ ವಿಚಾರಣೆಗೆ ಅನುಮತಿ ನೀಡಲಾಗಿದೆ. ಆದೇಶದ ಪ್ರತಿ ಮತ್ತು ಹಣ ಪಾವತಿ ಮಾಡಿರುವ ದಾಖಲೆಗಳು ‘ದಿ ಫೈಲ್‌’ಗೆ ಲಭ್ಯವಾಗಿದೆ.

ಅರ್ಹರಿಗಿಲ್ಲ ಸಂಭಾವನೆ

2018-19 ಮತ್ತು 2019-20 ನೇ ಸಾಲಿನಲ್ಲಿ ತಿಪಟೂರು ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜಿನಲ್ಲಿ ಒಟ್ಟು 27 ಉಪನ್ಯಾಸಕರು ನೇಮಕಗೊಂಡಿದ್ದರು. ಅತಿಥಿ ಉಪನ್ಯಾಸಕರ ಗೌರವ ಸಂಭಾವನೆಗೆಂದು ಸರ್ಕಾರ ಒಟ್ಟು 5,85,000 ರು.ಗಳನ್ನು ಬಿಡುಗಡೆ ಮಾಡಿತ್ತು. ಇವರಲ್ಲಿ ಕಾವ್ಯ(ವ್ಯವಹಾರ ಅಧ್ಯಯನ), ತೇಜಸ್ವಿನಿ (ಲೆಕ್ಕಶಾಸ್ತ್ರ) ಸಂತೋಷ್‌ (ಗಣಕ ವಿಜ್ಞಾನ) ನೇಮಕವಾಗಿದ್ದರು. ಖಾಲಿ ಇದ್ದ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಇವರನ್ನು ನೇಮಕಮಾಡಿಕೊಳ್ಳಲಾಗಿತ್ತು.

ಕಾಲೇಜಿನ ಪ್ರಾಂಶುಪಾಲ ಅಲ್ಲಮಪ್ರಭು ಮತ್ತು ಪ್ರಥಮದರ್ಜೆ ಸಹಾಯಕ ಸುನೀಲ್‌ ಕೂರ್ಗಿ ಅವರು ಅರ್ಹ ಅತಿಥಿ ಉಪನ್ಯಾಸಕರಿಗೆ ಗೌರವ ಸಂಭಾವನೆ ನೀಡಿರಲಿಲ್ಲ. ಅತಿಥಿ ಉಪನ್ಯಾಸಕರಲ್ಲದ ಪ್ರಿಯಾಂಕ ಜಿ ಎಸ್‌, ಶರತ್‌, ರಶ್ಮಿ ಹಾಗೂ ಇಲಾಖೆಯಿಂದ ನೇಮಕವಾಗದ ಭಾರತಿ, ಭೈರೇಶ ಇವರಿಗೆ ಸಂಭಾವನೆಯನ್ನು ಪಾವತಿಸಿದ್ದರು ಎಂಬುದು ಪರಿಶೀಲನಾ ವರದಿಯಿಂದ ತಿಳಿದು ಬಂದಿದೆ.

ಭೈರೇಶ್‌ ಮತ್ತು ಭಾರತಿ ಎಂಬುವರು ಇಲಾಖೆ ವತಿಯಿಂದ ಮಂಜೂರು ಮಾಡಿರುವ ಅನುದಾನವನ್ನು ಪಡೆಯಲು ಅರ್ಹರೇ ಮತ್ತು ಇಲಾಖೆ ನಿಯಮಗಳಲ್ಲಿ ಅವಕಾಶವಿದೆಯೇ ಎಂಬ ಬಗ್ಗೆ ವಿಚಾರಣೆ ನಡೆಸಲು ಮುಂದಾಗಿರುವ ಎಸಿಬಿ, ಕಾಲೇಜಿನ ನಗದು ವಹಿ ರಿಜಿಸ್ಟರ್‌ ಮತ್ತು ಡಿ ಸಿ ಬಿಲ್‌ಗಳ ರಿಜಿಸ್ಟರ್‌ಗಳನ್ನು ಪರಿಶೀಲನೆ ನಡೆಸಲು ಸಿದ್ಧತೆ ನಡೆಸಿರುವುದು ಗೊತ್ತಾಗಿದೆ.

2018 ಮತ್ತು 2019ನೇ ಸಾಲಿನಲ್ಲಿ ಪ್ರಿಯಾಂಕ ಜಿ ಎಸ್‌ ಮತ್ತು ಚೇತನ್‌ ಬಿ ಎನ್‌ ಅವರಿಗೆ ತಲಾ 54,000 ರು.,ಗಳು ಪಾವತಿಯಾಗಿದೆ. ಹಾಗೆಯೇ ಶರತ್‌ ಪಿ ಇ ಅವರಿಗೆ 27,000 ರು. , ಪ್ರಿಯಾಂಕ ಜಿ ಎಸ್‌ ಅವರಿಗೆ 27,000 ರು., ಭೈರೇಶ್‌ ಅವರಿಗೆ 27,000 ರು., ಭಾರತಿ ಸಿ ಸಿ ಅವರಿಗೆ 18,000 ರು. ಪಾವತಿಯಾಗಿದೆ. ಹಾಗೆಯೇ 2019ರ ಮಾರ್ಚ್‌ 28ರಂದು ಬಿಡುಗಡೆಯಾಗಿದ್ದ 3,01,500 ರು. ಪೈಕಿ ಭೈರೇಶ್‌ ಎಂಬುವರಿಗೆ 60,000 ರು., ಶರತ್‌ ಪಿ ಇ ಅವರಿಗೆ 60,000 ರು., ಭಾರತಿ ಎಂಬುವರಿಗೆ 21,500 ರು., ಚೇತನ್‌ ಅವರಿಗೆ 40,000 ರು., ಪ್ರಿಯಾಂಕ ಅವರಿಗೆ 60,000 ರು., ರಶ್ಮಿ ಟಿ ಎಂ ಎಂಬುವರಿಗೆ 60,000 ರು., 2019ರ ಡಿಸೆಂಬರ್ 7ರಂದು ಬಿಡುಗಡೆಯಾಗಿದ್ದ 40,500 ರು.ಗಳನ್ನು ಚೇತನ್‌ ಎಂಬುವರಿಗೆ ಪಾವತಿಸಿರುವುದು ಪ್ರಾರಂಭಿಕ ಪರಿಶೀಲನೆಯಿಂದ ಗೊತ್ತಾಗಿದೆ ಎಂದು ಎಸಿಬಿ ಪತ್ರದಲ್ಲಿ ವಿವರಿಸಿದೆ.

Hot this week

ಕೋಟ್ಯಂತರ ರು ಮೌಲ್ಯದ ನಿವೇಶನ ನಿಯಮಬಾಹಿರ ಮಂಜೂರು, ಅಕ್ರಮ ಲಾಭ; ಕೆಎಎಸ್ ಅಧಿಕಾರಿ ವಿರುದ್ಧ ಲೋಕಾಯುಕ್ತ ವಿಚಾರಣೆಗೆ ಅನುಮತಿ

ಬೆಂಗಳೂರು; ಕೋಟ್ಯಂತರ ರುಪಾಯಿ ಮೌಲ್ಯದ ನಿವೇಶನಗಳನ್ನು ನಿಯಮಬಾಹಿರವಾಗಿ ಮಂಜೂರು ಮಾಡಿ ಖಾಸಗಿಯವರಿಗೆ...

ರಾಮಕೃಷ್ಣ ಹೆಗಡೆ ಕುಟುಂಬಕ್ಕೆ ಖರಾಬು ಗುಂಡು ತೋಪು ಜಮೀನು ಮಂಜೂರಿಗೆ ಕೋರಿಕೆ; ಸಿದ್ದು ಭೇಟಿ ಬೆನ್ನಲ್ಲೇ ಬಹಿರಂಗವಾದ ಪತ್ರ

ಬೆಂಗಳೂರು; ಬೆಂಗಳೂರು ಉತ್ತರ ತಾಲೂಕಿನಲ್ಲಿ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು...

ಘನತ್ಯಾಜ್ಯ ವಿಲೇವಾರಿ ಟಿಪ್ಪಿಂಗ್ ಶುಲ್ಕ; ರಾಮ್ಕಿ ಗ್ರೂಪ್‌ಗೆ ಅನುಕೂಲಕರ, ರಾಜ್ಯ ಸರ್ಕಾರವನ್ನು ಆರ್ಥಿಕ ದಿವಾಳಿತನದತ್ತ ತಳ್ಳಲಾಗಿದೆಯೇ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಟಿಪ್ಪಿಂಗ್ ಶುಲ್ಕದ ಆಧಾರದ ಮೇಲೆ...

ಶಾಂತಿನಗರ ಹೌಸಿಂಗ್‌ ಸೊಸೈಟಿ ಅಕ್ರಮ; 2,900 ಕೋಟಿ ಅಧಿಕ ಮೊತ್ತದ ಹಗರಣ ಕೆದಕಿದರೇ ಸತೀಶ್ ಜಾರಕಿಹೊಳಿ?

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರೊಂದಿಗೆ ತಳಕು ಹಾಕಿಕೊಂಡಿದ್ದ...

ಎಲ್‌ 1 ತಿರಸ್ಕೃತವಾದರೂ ನಡೆಯದ ಮರು ಟೆಂಡರ್, ಎಲ್ 2 ಗೆ ನೇರವಾಗಿ ಗುತ್ತಿಗೆಗೆ ಪರಿಗಣನೆ; 2,477.90 ಕೋಟಿ ರು ಹಗರಣ!

ಬೆಂಗಳೂರು; ಮಾಲೂರು-ಹೊಸಕೋಟೆ ವ್ಯಾಪ್ತಿಯನ್ನೂ ಸೇರಿದಂತೆ ಒಟ್ಟಾರೆ 123 ಕಿ ಮೀ ರಸ್ತೆಯನ್ನು ...
Please Scan to make Your Contribution

Topics

ಕೋಟ್ಯಂತರ ರು ಮೌಲ್ಯದ ನಿವೇಶನ ನಿಯಮಬಾಹಿರ ಮಂಜೂರು, ಅಕ್ರಮ ಲಾಭ; ಕೆಎಎಸ್ ಅಧಿಕಾರಿ ವಿರುದ್ಧ ಲೋಕಾಯುಕ್ತ ವಿಚಾರಣೆಗೆ ಅನುಮತಿ

ಬೆಂಗಳೂರು; ಕೋಟ್ಯಂತರ ರುಪಾಯಿ ಮೌಲ್ಯದ ನಿವೇಶನಗಳನ್ನು ನಿಯಮಬಾಹಿರವಾಗಿ ಮಂಜೂರು ಮಾಡಿ ಖಾಸಗಿಯವರಿಗೆ...

ರಾಮಕೃಷ್ಣ ಹೆಗಡೆ ಕುಟುಂಬಕ್ಕೆ ಖರಾಬು ಗುಂಡು ತೋಪು ಜಮೀನು ಮಂಜೂರಿಗೆ ಕೋರಿಕೆ; ಸಿದ್ದು ಭೇಟಿ ಬೆನ್ನಲ್ಲೇ ಬಹಿರಂಗವಾದ ಪತ್ರ

ಬೆಂಗಳೂರು; ಬೆಂಗಳೂರು ಉತ್ತರ ತಾಲೂಕಿನಲ್ಲಿ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು...

ಘನತ್ಯಾಜ್ಯ ವಿಲೇವಾರಿ ಟಿಪ್ಪಿಂಗ್ ಶುಲ್ಕ; ರಾಮ್ಕಿ ಗ್ರೂಪ್‌ಗೆ ಅನುಕೂಲಕರ, ರಾಜ್ಯ ಸರ್ಕಾರವನ್ನು ಆರ್ಥಿಕ ದಿವಾಳಿತನದತ್ತ ತಳ್ಳಲಾಗಿದೆಯೇ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಟಿಪ್ಪಿಂಗ್ ಶುಲ್ಕದ ಆಧಾರದ ಮೇಲೆ...

ಶಾಂತಿನಗರ ಹೌಸಿಂಗ್‌ ಸೊಸೈಟಿ ಅಕ್ರಮ; 2,900 ಕೋಟಿ ಅಧಿಕ ಮೊತ್ತದ ಹಗರಣ ಕೆದಕಿದರೇ ಸತೀಶ್ ಜಾರಕಿಹೊಳಿ?

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರೊಂದಿಗೆ ತಳಕು ಹಾಕಿಕೊಂಡಿದ್ದ...

ಎಲ್‌ 1 ತಿರಸ್ಕೃತವಾದರೂ ನಡೆಯದ ಮರು ಟೆಂಡರ್, ಎಲ್ 2 ಗೆ ನೇರವಾಗಿ ಗುತ್ತಿಗೆಗೆ ಪರಿಗಣನೆ; 2,477.90 ಕೋಟಿ ರು ಹಗರಣ!

ಬೆಂಗಳೂರು; ಮಾಲೂರು-ಹೊಸಕೋಟೆ ವ್ಯಾಪ್ತಿಯನ್ನೂ ಸೇರಿದಂತೆ ಒಟ್ಟಾರೆ 123 ಕಿ ಮೀ ರಸ್ತೆಯನ್ನು ...

ನಕಲಿ ಶಿಕ್ಷಕರಿಗೆ ವೇತನ ಪಾವತಿ; ಆರೋಪಿತ ಅಧಿಕಾರಿಗಳ ವಿರುದ್ಧ ಇಲಾಖೆ ವಿಚಾರಣೆ ಕೈಬಿಟ್ಟ ಸರ್ಕಾರ!

ಬೆಂಗಳೂರು; ರಾಮನಗರ ಜಿಲ್ಲೆಯಲ್ಲಿ  2011ರಿಂದ 2014ರವರೆಗೆ ಹೆಚ್‌ಆರ್‍ಎಂಎಸ್‌ ಮೂಲಕ ನಕಲಿ ಶಿಕ್ಷಕರ...

120 ಎಕರೆ ಗೋಮಾಳ ಕಬಳಿಕೆ ಪ್ರಕರಣ; ಕಂದಾಯ ನಿರೀಕ್ಷಕರ ವರದಿಯನ್ನೇ ಮುಚ್ಚಿಟ್ಟ ತಹಶೀಲ್ದಾರ್, ಸಚಿವರ ಒತ್ತಡ?

ಬೆಂಗಳೂರು; ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ ಗ್ರಾಮದ ವಿವಿಧ ಸರ್ವೆ ನಂಬರ್‍‌ಗಳಲ್ಲಿರುವ...

ಕೌನ್ಸಲಿಂಗ್‌ಗೂ ಮುನ್ನವೇ ಪಿಡಿಒಗಳ ವರ್ಗಾವಣೆ; ಹಣ ಕೊಟ್ಟವರಿಗೆ ಆದೇಶ, ಕೊಡದವರಿಗೆ ಕೌನ್ಸಲಿಂಗ್, ಆರೋಪ

ಬೆಂಗಳೂರು; ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗಳ ವರ್ಗಾವಣೆಯನ್ನು ಕೌನ್ಸಲಿಂಗ್‌ ಮೂಲಕವೇ ನಡೆಸಲಾಗುವುದು ಎಂದು...

Related Articles

Popular Categories

error: Content is protected !!