Friday | March 6, 2026 |

ಕಾರಜೋಳರ ನಂಟು!; ಗೃಹೋಪಯೋಗಿ ಉಪಕರಣ ಕಂಪನಿಯಿಂದ ಯುವರಾಜ್‌ ಮುಂಗಡ?

Support THE-FILE

spot_img

ಬೆಂಗಳೂರು; ಅಮಿತ್‌ ಶಾ, ಜೆ ಪಿ ನಡ್ಡಾ ಸಂಪರ್ಕ ತಮಗಿದೆ ಎಂದು ನಂಬಿಸಿ ನಿವೃತ್ತ ನ್ಯಾಯಮೂರ್ತಿ ಸೇರಿದಂತೆ ಹಲವರಿಂದ ಕೋಟ್ಯಂತರ ಹಣ ಪಡೆದು ವಂಚಿಸಿರುವ ಆರೋಪದಡಿಯಲ್ಲಿ ಬಂಧಿತನಾಗಿರುವ ಯುವರಾಜ್‌ ಅಲಿಯಾಸ್‌ ಸೇವಾಲಾಲ್‌ ಸ್ವಾಮಿ ಜತೆ ಲೋಕೋಪಯೋಗಿ ಇಲಾಖೆ ಸಚಿವ ಗೋವಿಂದ ಕಾರಜೋಳ ಅವರ ಹೆಸರೂ ಥಳಕು ಹಾಕಿಕೊಂಡಿದೆ.

ಕಾರಜೋಳ ಅವರು ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿದ್ದ ಅವಧಿಯಲ್ಲಿ ಇಲಾಖೆ ವ್ಯಾಪ್ತಿಯಲ್ಲಿರುವ ವಿದ್ಯಾರ್ಥಿ ನಿಲಯಗಳಿಗೆ ಮಿಕ್ಸರ್‌, ಗ್ರೈಂಡರ್‌, ಪಾತ್ರೆಗಳು ಸೇರಿದಂತೆ ಇನ್ನಿತರ ಗೃಹಪಯೋಗಿ ಉಪಕರಣಗಳ ಖರೀದಿ ಮಾಡಿಸುವುದಾಗಿ ಪ್ರತಿಷ್ಠಿತ ಕಂಪನಿಯ ಮಾಲೀಕರೊಬ್ಬರಿಂದ ಮುಂಗಡ ರೂಪದಲ್ಲಿ ಲಕ್ಷಾಂತರ ರು. ಬೆಲೆ ಬಾಳುವ ಉಪಕರಣಗಳನ್ನು ಯುವರಾಜ್‌ ಅಲಿಯಾಸ್‌ ಸೇವಾಲಾಲ್‌ ಮುಂಗಡವಾಗಿ ಪಡೆದಿದ್ದ ಎಂಬುದು ತಿಳಿದು ಬಂದಿದೆ.

ಕರ್ನಾಟಕ ಸೇರಿದಂತೆ ನೆರೆಯ ರಾಜ್ಯಗಳ ವಿವಿಧ ಯೋಜನೆಗಳಡಿಯಲ್ಲಿ ಗೃಹಪಯೋಗಿ ಉಪಕರಣಗಳನ್ನು ಸರಬರಾಜು ಮಾಡುವ ಪ್ರತಿಷ್ಠಿತ ಕಂಪನಿಯ ಮಾಲೀಕರನ್ನು ಆರೋಪಿ ಯುವರಾಜ್‌ ವಿಧಾನಸೌಧದಲ್ಲಿ ಗೋವಿಂದ ಕಾರಜೋಳ ಅವರನ್ನು ಭೇಟಿ ಮಾಡಿಸಿದ್ದ ಎಂದು ವಿಶ್ವಸನೀಯ ಮೂಲಗಳು ‘ದಿ ಫೈಲ್‌’ಗೆ ತಿಳಿಸಿವೆ.

ಈ ಕುರಿತು ‘ದಿ ಫೈಲ್‌’ ನೇರವಾಗಿ ಕಂಪನಿಯ ಮಾಲೀಕರನ್ನು ಸಂಪರ್ಕಿಸಿದಾಗ ಗೋವಿಂದ ಕಾರಜೋಳ ಅವರನ್ನು ವಿಧಾನಸೌಧದ ಕಚೇರಿಯಲ್ಲಿ ಯುವರಾಜ್‌ ಭೇಟಿ ಮಾಡಿಸಿದ್ದನ್ನು ಖಚಿತಪಡಿಸಿದರು. ವಿದ್ಯಾರ್ಥಿ ನಿಲಯಗಳಿಗೆ ಉಪಕರಣಗಳನ್ನು ಸರಬರಾಜು ಮಾಡುವ ಆದೇಶ ಪಡೆಯುವ ಭಾಗವಾಗಿ ಲಕ್ಷಾಂತರ ರು. ಬೆಲೆಬಾಳುವ ಎಲೆಕ್ಟ್ರಾನಿಕ್‌ ಸಾಧನಗಳನ್ನು ಮುಂಗಡ ರೂಪದಲ್ಲಿ ಆರೋಪಿ ಯುವರಾಜ್‌ಗೆ ನೀಡಲಾಗಿತ್ತು. ಆದರೆ ವಿದ್ಯಾರ್ಥಿ ನಿಲಯಗಳಿಗೆ ತಮ್ಮ ಕಂಪನಿ ಉತ್ಪಾದನೆಯ ಗೃಹಪಯೋಗಿ ಉಪಕರಣಗಳನ್ನು ಸರಬರಾಜು ಮಾಡಲು ಆದೇಶ ದೊರಕಿಸಿಕೊಡಲಿಲ್ಲ ಎಂದು ಮಾಹಿತಿ ಹಂಚಿಕೊಂಡರು. ಈ ಸಂಬಂಧ ದೂರು ನೀಡುವ ಬಗ್ಗೆ ಏನನ್ನೂ ಹೇಳಲಿಲ್ಲ. ಗೌಪ್ಯತೆ ಕಾರಣಕ್ಕಾಗಿ ಕಂಪನಿಯ ಮಾಲೀಕರ ಹೆಸರನ್ನು ಇಲ್ಲಿ ಬಹಿರಂಗಪಡಿಸುತ್ತಿಲ್ಲ.

ರಾಜ್ಯಸಭೆ ಸದಸ್ಯ, ಸರ್ಕಾರಿ ನೌಕರಿ ಕೊಡಿಸುವುದು, ಕೇಂದ್ರದಲ್ಲಿ ಪ್ರಭಾವಿ ಹುದ್ದೆ ನೀಡುವುದಾಗಿ ನಂಬಿಸಿ ವಂಚನೆ ಎಸಗಿದ್ದ ಆರೋಪದ ಮೇರೆಗೆ ಈಗಾಗಲೇ ಬಂಧಿತನಾಗಿರುವ ಯುವರಾಜ್‌ ಅಲಿಯಾಸ್‌ ಸೇವಾಲಾಲ್‌ ಹಲವರಿಗೆ ವಂಚನೆ ಎಸಗಿರುವ ತರಹೇವಾರಿ ಪ್ರಕರಣಗಳು ಒಂದೊಂದಾಗಿ ಹೊರಬೀಳುತ್ತಿವೆ.

ಪ್ರಭಾವಿ ಹುದ್ದೆ ಕೊಡಿಸುತ್ತೇನೆಂದು ನಂಬಿಸಿ ತನ್ನಿಂದ 8.27 ಕೋಟಿ ರೂ. ಪಡೆದು ವಂಚಿಸಿದ್ದಾನೆ ಎಂದು ಕೆಲ ದಿನಗಳ ಹಿಂದೆ ರಾಜ್ಯ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಇಂದ್ರಕಲಾ ಎಂಬುವರು ಬೆಂಗಳೂರು ವಿಲ್ಸನ್‌ ಗಾರ್ಡನ್‌ ಪೊಲೀಸ್‌ ಠಾಣೆಗೆ ದೂರು ನೀಡಿರುವುದನ್ನು ಸ್ಮರಿಸಬಹುದು.

ನಟಿ ರಾಧಿಕಾ ಕುಮಾರಸ್ವಾಮಿ ಕೂಡ ಯುವರಾಜ್‌ ಸ್ವಾಮಿಗೆ ರಾಜಕೀಯ ವಲಯದಲ್ಲಿ ದೊಡ್ಡ ಸಂಪರ್ಕ ಇದೆ ಎನ್ನುವುದು ಅವರ ಬಳಿ ಇರುವ ಫೋಟೋಗಳಿಂದ ಗೊತ್ತಾಗಿತ್ತು ಎಂದು ಸಿಸಿಬಿ ವಿಚಾರಣೆ ವೇಳೆ ಹೇಳಿದ್ದರು. ಅಲ್ಲದೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್‌, ಸಚಿವ ವಿ ಸೋಮಣ್ಣ, ಸಿ ಪಿ ಯೋಗೇಶ್ವರ್‌, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಸೇರಿದಂತೆ ಹಲವರೊಂದಿಗಿನ ಫೋಟೋಗಳು ಬಹಿರಂಗಗೊಂಡಿದ್ದವು.

ರಾಜಕೀಯ ಹುದ್ದೆ ಮತ್ತು ಸರಕಾರಿ ಕೆಲಸ ಕೊಡಿಸುವುದಾಗಿ ನಿವೃತ್ತ ನ್ಯಾಯಮೂರ್ತಿಗಳಿಂದ ಹಿಡಿದು ಹಲವರ ಬಳಿ ಹಣ ಪಡೆಯುತ್ತಿದ್ದ ಆರೋಪಿ, ಅದನ್ನು ಬೇನಾಮಿಯಾಗಿ ಇಟ್ಟುಕೊಳ್ಳಲು ನಟಿಯರು ಸೇರಿದಂತೆ ಹಲವರ ಖಾತೆಗಳಿಗೆ ವರ್ಗಾಯಿಸುತ್ತಿದ್ದ ಎಂಬ ಅನುಮಾನವನ್ನು ಸಿಸಿಬಿ ಅಧಿಕಾರಿಗಳು ವ್ಯಕ್ತಪಡಿಸಿದ್ದನ್ನು ಸ್ಮರಿಸಬಹುದು.

ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಹೆಸರಲ್ಲಿ ವಂಚನೆ ಮಾಡಿದ ಆರೋಪ ಮೇರೆಗೆ ಬಿಲ್ಡರ್ ಇನಿತ್ ಕುಮಾರ್ ಎಂಬವರು ಈಗಾಗಲೇ ದೂರು ದಾಖಲಿಸಿದ್ದಾರೆ. ತಾನು ಸಂತೋಷ್ ಜೀಯವರ ಅಣ್ಣನ ಮಗ ಎಂದು ಪರಿಚಯಿಸಿಕೊಂಡಿದ್ದ ಯುವರಾಜ್, ಇನಿತ್ ಕುಮಾರ್ ಅವರನ್ನು ರಾಷ್ಟ್ರಮಟ್ಟದಲ್ಲಿ ಯೂತ್ ಐಕಾನ್ ಮಾಡುತ್ತೇನೆ ಎಂದು ನಂಬಿಸಿ ವಂಚಿಸಿರುವ ಆರೋಪವೂ ಇದೆ.

ಅಲ್ಲದೇ ಸೆಂಟ್ರಲ್ ಸಿಲ್ಕ್ ಬೋರ್ಡ್ ಅಧ್ಯಕ್ಷ ಮಾಡುವುದಾಗಿಯೂ ಹೇಳಿ ಸುಮಾರು 30 ಲಕ್ಷ ರೂಪಾಯಿ ಹಣ ಪಡೆದು ವಂಚಿಸಿದ್ದ. ಇನ್ನು ಸಿಲ್ಕ್ ಬೋರ್ಡ್ ಅಧ್ಯಕ್ಷ ಗಾದಿಗೆ ಮೂರು ಕೋಟಿ ರೂಪಾಯಿ ಬೇಡಿಕೆಯಿರಿಸಿ ಕೊನೆಗೆ 30 ಲಕ್ಷ ರೂಪಾಯಿ ಪಡೆದಿದ್ದ ಎಂಬ ಗುರುತರ ಆರೋಪವೂ ಯುವರಾಜ್‌ ಮೇಲಿದೆ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img
error: Content is protected !!