Monday | March 9, 2026 |

ಬಿಹಾರಕ್ಕೆ ಬಂಡವಾಳ; ಹೂಡಿಕೆದಾರರ ಆಕರ್ಷಣೆಗಿಳಿದ ಕರ್ನಾಟಕ ಐಪಿಎಸ್‌ ಅಧಿಕಾರಿ

Support THE-FILE

spot_img

ಬೆಂಗಳೂರು; ರಾಜ್ಯದಲ್ಲಿ ಉದ್ಯಮಿಗಳಿಂದ ಬಂಡವಾಳ ಹೂಡಿಕೆ ಮಾಡಿಸಲು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ್‌ ಶೆಟ್ಟರ್‌ ಅವರು ದೇಶ, ವಿದೇಶಗಳನ್ನು ಸುತ್ತಿ ಹೂಡಿಕೆದಾರರನ್ನು ಆಕರ್ಷಿಸುತ್ತಿದ್ದರೆ ಇತ್ತ ಕರ್ನಾಟಕ ಆಗ್ನಿಶಾಮಕ ಸೇವೆಗಳ ಡಿಜಿಪಿಯೂ ಆಗಿರುವ ಬಿಹಾರ ಮೂಲದ ಐಪಿಎಸ್‌ ಅಧಿಕಾರಿ ಅಮರ್‌ಕುಮಾರ್‌ ಪಾಂಡೆ ಅವರು ಬಿಹಾರ ರಾಜ್ಯದಲ್ಲಿ ಹೂಡಿಕೆ ಮಾಡಿಸಲು ಕರ್ನಾಟಕದ ಹೂಡಿಕೆದಾರರ ಆಕರ್ಷಣೆಗಿಳಿದಿದ್ಧಾರೆ.

ರಾಜ್ಯದಲ್ಲಿ ಹಲವು ವರ್ಷಗಳಿಂದಲೂ ಸೇವೆ ಸಲ್ಲಿಸುತ್ತಿರುವ ಅಮರ್‌ ಕುಮಾರ್‌ ಪಾಂಡೆ ಅವರು ಬಿಹಾರದಲ್ಲಿ ಹೂಡಿಕೆ ಮಾಡಿಸಲು ಬಿಹಾರ ಫೌಂಡೇಷನ್‌ ಮೂಲಕ ಇದೇ ಜನವರಿ 17ರಂದು ಕಾರ್ಯಕ್ರಮವನ್ನು ಸಂಘಟಿಸಿರುವುದು ಇದೀಗ ವಿವಾದಕ್ಕೆ ದಾರಿಮಾಡಿಕೊಟ್ಟಿದೆ.

ವಿಶೇಷವೆಂದರೆ ಅಮರ್‌ಕುಮಾರ್‌ ಪಾಂಡೆ ಬಿಹಾರ ಫೌಂಡೇಷನ್‌ನ ಅಧ್ಯಕ್ಷರೂ ಹೌದು. ಕಳೆದ ಹಲವು ವರ್ಷಗಳಿಂದಲೂ ಫೌಂಡೇಷನ್‌ನ ಅಧ್ಯಕ್ಷರಾಗಿರುವ ಪಾಂಡೆ ಅವರು ಕರ್ನಾಟಕದ ಹೂಡಿಕೆದಾರರನ್ನು ಬಿಹಾರದಲ್ಲಿ ಹೂಡಿಕೆ ಮಾಡಿಸಲು ಈ ಫೌಂಡೇಷನ್‌ ಸೇತುವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಅಮರ್ ಕುಮಾರ್ ಪಾಂಡೆಯವರಿಗೆ ಬಿಹಾರದ ಅಭಿವೃದ್ಧಿಯೇ ಮುಖ್ಯವಾಗಿದ್ದರೆ ಆ ರಾಜ್ಯಕ್ಕೆ ವರ್ಗಾವಣೆ ಮಾಡಿಸಿಕೊಂಡು, ಇಂಥ ಕೆಲಸಗಳನ್ನು ಮಾಡಲಿ. ಕನ್ನಡಿಗರ ಹಣ, ಶ್ರಮ, ಬಂಡವಾಳವನ್ನು ಬಿಹಾರಕ್ಕೆ ವರ್ಗಾಯಿಸುವ ಚಟುವಟಿಕೆಗಳನ್ನು ಮಾಡುವುದು ಕನ್ನಡ ದ್ರೋಹದ ಕೆಲಸ.

ದಿನೇಶ್ ಕುಮಾರ್ ಎಸ್.ಸಿ, ಕರವೇ ಸಾಮಾಜಿಕ‌ ಜಾಲತಾಣ ಪ್ರಧಾನ ಸಂಚಾಲಕ

ಹೂಡಿಕೆದಾರರನ್ನು ಆಕರ್ಷಿಸುವ ಭಾಗವಾಗಿಯೇ ಬೆಂಗಳೂರಿನ ರೆಸಿಡೆನ್ಸಿ ರಸ್ತೆಯಲ್ಲಿರುವ ದಿ ರಿಟ್ಜ್‌ ಕಾರ್ಲಟನ್‌ನಲ್ಲಿ ಕಾರ್ಯಕ್ರಮವನ್ನೂ ಆಯೋಜಿಸಿದ್ದಾರೆ. ಅಮರ್‌ಕುಮಾರ್‌ ಪಾಂಡೆ ಅವರ ಹೆಸರಿನಲ್ಲಿಯೇ ಹೂಡಿಕೆದಾರನ್ನು ಆಹ್ವಾನಿಸಲಾಗಿದೆ. ಆಹ್ವಾನ ಪತ್ರಿಕೆ ‘ದಿ ಫೈಲ್‌’ಗೆ ಲಭ್ಯವಾಗಿದೆ.

ಬೆಂಗಳೂರಿನಲ್ಲಿ ನಡೆಯಲಿರುವ ಹೂಡಿಕೆದಾರರ ಆಕರ್ಷಿಸುವ ಕಾರ್ಯಕ್ರಮಕ್ಕೆ ಬಿಹಾರದ ಉಪ ಮುಖ್ಯಮಂತ್ರಿ ರೇಣುದೇವಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಕರ್ನಾಟಕ ಶ್ರೇಣಿಯ ಐಎಎಸ್‌, ಐಎಫ್‌ಎಸ್‌, ಐಪಿಎಸ್‌, ಐಆರ್‌ಎಸ್‌ನಲ್ಲಿ 20ಕ್ಕೂ ಹೆಚ್ಚು ಅಧಿಕಾರಿಗಳು ಬಿಹಾರ ಮೂಲದವರಾಗಿದ್ದಾರೆ. ಅಮರ್‌ಕುಮಾರ್‌ ಪಾಂಡೆ ಅವರೊಬ್ಬರನ್ನು ಹೊರತುಪಡಿಸಿದರೆ ಬಿಹಾರ ಮೂಲದ ಐಎಎಸ್‌, ಐಪಿಎಸ್‌, ಐಎಫ್‌ಎಸ್‌, ಐಆರ್‌ಎಸ್‌ ಸೇರಿದಂತೆ ಬೇರಾವ ಅಧಿಕಾರಿಗಳೂ ಹೂಡಿಕೆದಾರರ ಆಕರ್ಷಣೆಗಿಳಿದಿಲ್ಲ ಎಂದು ಗೊತ್ತಾಗಿದೆ.

ಕರ್ನಾಟಕ ಶ್ರೇಣಿಯಲ್ಲಿದ್ದು ಇಲ್ಲಿ ವೇತನ ಪಡೆಯುತ್ತಿರುವ ಬಿಹಾರ ಮೂಲದ ಹಿರಿಯ ಐಪಿಎಸ್‌ ಅಧಿಕಾರಿ ಅಮರ್‌ಕುಮಾರ್‌ ಪಾಂಡೆ ಅವರು ಬಿಹಾರದಲ್ಲಿ ಹೂಡಿಕೆ ಮಾಡಿಸಲು ಆಕರ್ಷಣೆಗಿಳಿದಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಆಕ್ಷೇಪಗಳು ಕೇಳಿ ಬಂದಿವೆ. ರಾಜ್ಯದ ಹಿತಾಸಕ್ತಿ ಕಾಪಾಡಬೇಕಿದ್ದ ಈ ಅಧಿಕಾರಿ, ಬಿಹಾರ ರಾಜ್ಯದ ಹಿತಾಸಕ್ತಿ ಕಾಯಲು ಹೊರಟಿರುವುದು ಸರಿಯಲ್ಲ ಎಂಬ ಮಾತುಗಳು ಕೇಳಿ ಬಂದಿವೆ.

‘ಕರ್ನಾಟಕದ ಐಎಎಸ್ ಅಧಿಕಾರಿಗಳು ಕರ್ನಾಟಕದ ಹಿತ ಕಾಯುವ ಕೆಲಸ ಮಾಡಬೇಕು. ಅದನ್ನು ಬಿಟ್ಟು ತಮ್ಮ ರಾಜ್ಯಗಳಿಗಾಗಿ ಕೆಲಸ ಮಾಡುವುದು ಸಂವಿಧಾನಬಾಹಿರ. ಇದನ್ನು ಕರ್ನಾಟಕದ ಜನತೆ ಸಹಿಸಿಕೊಳ್ಳಲು ಸಾಧ್ಯವಿಲ್ಲ. ಅಮರ್ ಕುಮಾರ್ ಪಾಂಡೆಯವರಿಗೆ ಬಿಹಾರದ ಅಭಿವೃದ್ಧಿಯೇ ಮುಖ್ಯವಾಗಿದ್ದರೆ ಆ ರಾಜ್ಯಕ್ಕೆ ವರ್ಗಾವಣೆ ಮಾಡಿಸಿಕೊಂಡು, ಇಂಥ ಕೆಲಸಗಳನ್ನು ಮಾಡಲಿ. ಕನ್ನಡಿಗರ ಹಣ, ಶ್ರಮ, ಬಂಡವಾಳವನ್ನು ಬಿಹಾರಕ್ಕೆ ವರ್ಗಾಯಿಸುವ ಚಟುವಟಿಕೆಗಳನ್ನು ಮಾಡುವುದು ಕನ್ನಡದ್ರೋಹದ ಕೆಲಸ. ಸರ್ಕಾರ ಕೂಡಲೇ ಇದನ್ನು ನಿಲ್ಲಿಸಬೇಕು. ಇಲ್ಲವಾದಲ್ಲಿ ಕನ್ನಡಿಗರೇ ನಿಲ್ಲಿಸುವ ಕೆಲಸ ಮಾಡಬೇಕಾಗುತ್ತದೆ. ಬಿಹಾರಿ ಮಾಫಿಯಾ, ಯುಪಿ ಮಾಫಿಯಾ, ಗುಜರಾತಿ ಮಾಫಿಯಾಗಳಿಗೆ ಕರ್ನಾಟಕದಲ್ಲಿ ಜಾಗವಿಲ್ಲ.’ ಎನ್ನುತ್ತಾರೆ ಕರ್ನಾಟಕ ರಕ್ಷಣಾ ವೇದಿಕೆಯ ಸಾಮಾಜಿಕ ಜಾಲ ತಾಣದ ಪ್ರಧಾನ ಸಂಚಾಲಕ ದಿನೇಶ್‌ಕುಮಾರ್‌ ಎಸ್‌ ಸಿ.

Hot this week

ಬಾಗಮನೆ ಡೆವಲಪರ್ಸ್‌ ಪ್ರಸ್ತಾವ ತಿರಸ್ಕೃತ; ಒತ್ತುವರಿ ಜಾಗ ವಶಕ್ಕೆ ಪಡೆಯಲು ಮೀನಮೇಷ

ಬೆಂಗಳೂರು; ಒತ್ತುವರಿ ಮಾಡಿಕೊಂಡಿರುವ ಜಮೀನಿಗೆ ಪ್ರತಿಯಾಗಿ ತಮ್ಮ ಸ್ವಂತ ಭೂಮಿಯನ್ನು ಸರ್ಕಾರಕ್ಕೆ...

ವಿವಿಗಳ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಚಟುವಟಿಕೆ, ಯುಜಿಸಿ ನಿಯಮ ಉಲ್ಲಂಘನೆ; ಒಪ್ಪಿಕೊಂಡ ಸರ್ಕಾರ

ಬೆಂಗಳೂರು;  ರಾಜ್ಯದ ಬಹುತೇಕ ವಿಶ್ವವಿದ್ಯಾಲಯಗಳು ಬೋಧಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಯುಜಿಸಿ...

ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ರಾಜ್ಯದ ಪಾಲು ಕುಸಿತ; ಕರ್ನಾಟಕಕ್ಕೆ ತೀವ್ರ ಸವಾಲು ಒಡ್ಡಲಿದೆಯೇ?

ಬೆಂಗಳೂರು;  ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ವರ್ಷದಿಂದ ವರ್ಷಕ್ಕೆ  ರಾಜ್ಯ ಪಾಲು ಕುಸಿತವಾಗುತ್ತಿರುವ...

ಕೃಷಿ, ಕೈಗಾರಿಕೆ ವಲಯದ ಪಾಲು ಇಳಿಕೆ; ಒಟ್ಟಾರೆ ಆಂತರಿಕ ಉತ್ಪನ್ನದಲ್ಲಿ ಹಿನ್ನಡೆ

ಬೆಂಗಳೂರು;  ರಾಜ್ಯದ ಒಟ್ಟು ಆಂತರಿಕ ಉತ್ಪನ್ನದಲ್ಲಿ 2024-25ರಲ್ಲಿ ಕೃಷಿ ವಲಯದ ಪಾಲು...

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

Topics

ಬಾಗಮನೆ ಡೆವಲಪರ್ಸ್‌ ಪ್ರಸ್ತಾವ ತಿರಸ್ಕೃತ; ಒತ್ತುವರಿ ಜಾಗ ವಶಕ್ಕೆ ಪಡೆಯಲು ಮೀನಮೇಷ

ಬೆಂಗಳೂರು; ಒತ್ತುವರಿ ಮಾಡಿಕೊಂಡಿರುವ ಜಮೀನಿಗೆ ಪ್ರತಿಯಾಗಿ ತಮ್ಮ ಸ್ವಂತ ಭೂಮಿಯನ್ನು ಸರ್ಕಾರಕ್ಕೆ...

ವಿವಿಗಳ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಚಟುವಟಿಕೆ, ಯುಜಿಸಿ ನಿಯಮ ಉಲ್ಲಂಘನೆ; ಒಪ್ಪಿಕೊಂಡ ಸರ್ಕಾರ

ಬೆಂಗಳೂರು;  ರಾಜ್ಯದ ಬಹುತೇಕ ವಿಶ್ವವಿದ್ಯಾಲಯಗಳು ಬೋಧಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಯುಜಿಸಿ...

ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ರಾಜ್ಯದ ಪಾಲು ಕುಸಿತ; ಕರ್ನಾಟಕಕ್ಕೆ ತೀವ್ರ ಸವಾಲು ಒಡ್ಡಲಿದೆಯೇ?

ಬೆಂಗಳೂರು;  ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ವರ್ಷದಿಂದ ವರ್ಷಕ್ಕೆ  ರಾಜ್ಯ ಪಾಲು ಕುಸಿತವಾಗುತ್ತಿರುವ...

ಕೃಷಿ, ಕೈಗಾರಿಕೆ ವಲಯದ ಪಾಲು ಇಳಿಕೆ; ಒಟ್ಟಾರೆ ಆಂತರಿಕ ಉತ್ಪನ್ನದಲ್ಲಿ ಹಿನ್ನಡೆ

ಬೆಂಗಳೂರು;  ರಾಜ್ಯದ ಒಟ್ಟು ಆಂತರಿಕ ಉತ್ಪನ್ನದಲ್ಲಿ 2024-25ರಲ್ಲಿ ಕೃಷಿ ವಲಯದ ಪಾಲು...

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

Related Articles

Popular Categories

spot_imgspot_img
error: Content is protected !!