Friday | March 27, 2026 |

ವಿಜಯೇಂದ್ರ ಪ್ರಕರಣ; ಸಿಬಿಐ ತನಿಖೆ ಕೋರಿ ಪಿಐಎಲ್‌ ದಾಖಲಿಸಿದ ಜನಾಧಿಕಾರ ಸಂಘರ್ಷ ಪರಿಷತ್‌

Support THE-FILE

spot_img

ಬೆಂಗಳೂರು; ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರು ಹಣ ಸುಲಿಗೆ ಮಾಡಿದ್ದಾರೆ ಎಂಬ ಆರೋಪ ಪ್ರಕರಣ ಹಾಗೂ ಕೋಲ್ಕತ್ತಾ ಮೂಲದ 7 ಶೆಲ್‌ ಕಂಪನಿಗಳು ವಿಜಯೇಂದ್ರ ಮತ್ತು ಮೊಮ್ಮಗ ಶಶಿಧರ್‌ ಮರಡಿ ಎಂಬುವರ ಕಂಪನಿಯ ಖಾತೆಗಳಿಗೆ ಹಣ ವರ್ಗಾವಣೆ ಆಗಿರುವ ಪ್ರಕರಣ ಇದೀಗ ಹೈಕೋರ್ಟ್‌ ಮೆಟ್ಟಿಲೇರಿದೆ.

ಹಣ ಸುಲಿಗೆ ಪ್ರಕರಣ ಸಂಬಂಧ ಆರಂಭದಿಂದಲೂ ಕಾನೂನು ಹೋರಾಟ ನಡೆಸುತ್ತಿರುವ ಜನಾಧಿಕಾರ ಸಂಘರ್ಷ ಪರಿಷತ್‌ ಈ ಕುರಿತು ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ( FR NO. 869/2021) ದಾಖಲಿಸಿದೆ. ಪ್ರಕರಣದಲ್ಲಿ ರಾಜ್ಯ ಸರ್ಕಾರ, ಸಿಬಿಐ ಮತ್ತು ಭ್ರಷ್ಟಾಚಾರ ನಿಗ್ರಹ ದಳವನ್ನು ಪ್ರತಿವಾದಿಯನ್ನಾಗಿಸಿದೆ.

ರಾಜ್ಯದ ಉನ್ನತ ಸ್ಥಾನದಲ್ಲಿರುವ ಮುಖ್ಯಮಂತ್ರಿಗಳ ಕುಟುಂಬವು ಅಕ್ರಮವಾಗಿ ನಡೆದಿರುವ ಹಣದ ವಹಿವಾಟಿನಲ್ಲಿ ಭಾಗಿಯಾಗಿದೆ. ಹೀಗಾಗಿ ಈ ಪ್ರಕರಣವನ್ನು ಸಿಬಿಐ ತನಿಖೆಗೊಳಪಡಿಸಬೇಕು ಎಂದು ಅರ್ಜಿಯಲ್ಲಿ ಜನಾಧಿಕಾರ ಸಂಘರ್ಷ ಪರಿಷತ್‌ ಕೋರಿದೆ. ಈ ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.

ಎಫ್‌ಐಆರ್‌ ದಾಖಲಿಸದೆ ಕುಂಟು ನೆಪವೊಡ್ಡಿ ನ್ಯಾಯಾಲಯದ ದಿಕ್ಕುತಪ್ಪಿಸಲು ಶೇಷಾದ್ರಿಪುರಂನ ಇನ್ಸ್‌ಪೆಕ್ಟರ್‌ ಕೃಷ್ಣಮೂರ್ತಿ ಅವರು ನ್ಯಾಯಾಲಯಕ್ಕೆ ಸುಳ್ಳು ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದ್ದ ಜನಾಧಿಕಾರ ಸಂಘರ್ಷ ಪರಿಷತ್‌ ನ್ಯಾಯಾಲಯದ ಮೆಟ್ಟಿಲೇರಿತ್ತು. ಇದರ ಬೆನ್ನಲ್ಲೇ ಇಡೀ ಪ್ರಕರಣವನ್ನು ತನಿಖೆಗೊಳಪಡಿಸಲು ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸುವ ಮೂಲಕ ಪ್ರಕರಣವನ್ನು ಇನ್ನಷ್ಟು ವಿಸ್ತರಿಸಿದೆ.

ಬಹುಮಹಡಿ ವಸತಿ ಸಮುಚ್ಛಯ ಕಂಪನಿ ನಿರ್ದೇಶಕ ಚಂದ್ರಕಾಂತ್‌ ರಾಮಲಿಂಗಂ ಎಂಬುವರಿಂದ 7.40 ಕೋಟಿಯನ್ನು ಸುಲಿಗೆ ಮಾಡಿದ್ದಾರೆ ಎಂದು ಐಪಿಸಿ ಸೆಕ್ಷನ್‌ 384, 120(ಬಿ) ಮತ್ತು 34ನ್ನು ಉಲ್ಲೇಖಿಸಿ ಜನಾಧಿಕಾರ ಸಂಘರ್ಷ ಪರಿಷತ್‌ ಈ ಹಿಂದೆಯೂ ದೂರು ದಾಖಲಿಸಿತ್ತು.

ಶಶಿಧರ್‌ ಮರಡಿ ಅವರು ಹೊಂದಿರುವ ಬ್ಯಾಂಕ್‌ ಖಾತೆಗೆ 7.4 ಕೋಟಿ ರು.ಗಳನ್ನು ನಿರ್ಮಾಣ ಕಂಪನಿ ಆರ್‌ಟಿಜಿಎಸ್‌ ಮೂಲಕ ಸಂದಾಯ ಮಾಡಿದೆ ಎಂದು ದೂರಿನಲ್ಲಿ ಉಲ್ಲೇಖಿಸಿತ್ತು. ಅದೇ ರೀತಿ ವಾಟ್ಸಾಪ್‌ ಸಂಭಾಷಣೆಯಲ್ಲಿ ನಮೂದಿಸಿದ್ದ ಎಚ್‌ಡಿಎಫ್‌ಸಿ ಬ್ಯಾಂಕ್‌ನ ಶೇಷಾದ್ರಿಪುರಂ ಶಾಖೆಯಲ್ಲಿ ಶಶಿಧರ್‌ ಮರಡಿ ಹೊಂದಿರುವ ಉಳಿತಾಯ ಖಾತೆಗೆ ಜನಾಧಿಕಾರ ಸಂಘರ್ಷ ಪರಿಷತ್‌ 100 ರು. ನಗದನ್ನು ಪಾವತಿಸಿ ಖಾತೆಯನ್ನು ಖಚಿತಪಡಿಸಿಕೊಂಡಿರುವುದನ್ನೂ ದೂರಿನಲ್ಲಿ ಉಲ್ಲೇಖಿಸಿತ್ತು.

ಅಧಿಕಾರಿಯೊಬ್ಬರು ಮುಖ್ಯಮಂತ್ರಿ ಹೆಸರು ಬಳಸಿಕೊಂಡು ನಿರ್ಮಾಣ ಕಂಪನಿಯಿಂದ ಲಂಚ ಪಡೆದಿರುವುದು ತಿಳಿದಿದ್ದರೂ ಸಹ ಆ ಅಧಿಕಾರಿ ಮೇಲೆ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ ಅಡಿಯಲ್ಲಿ ದೂರು ದಾಖಲಿಸದಿರುವುದು ಬಿ ವೈ ವಿಜಯೇಂದ್ರ ಅವರ ಮೇಲೆ ಅನುಮಾನಕ್ಕೆ ಕಾರಣವಾಗಿದೆ. ಈ ಅನುಮಾನದ ಹಿನ್ನೆಲೆಯಲ್ಲಿ ನಿರ್ಮಾಣ ಕಂಪನಿಗೆ ಬೆದರಿಕೆ ಹಾಕಿ ಹಣ ನೀಡಲು ಒತ್ತಡ ಹೇರಿ ನಿರ್ಮಾಣ ಕಾರ್ಯಕ್ಕೆ ತಡೆ ಹಾಕಿರುವುದು ಸುಲಿಗೆ ಪ್ರಕರಣಕ್ಕೆ ಬಲವಾದ ಸಾಕ್ಷಿಯಾಗಿತ್ತು.

ವಾಟ್ಸಾಪ್‌ ಚಾಟ್‌ಗಳಲ್ಲಿ ಶಶಿಧರ್‌ ಮರಡಿ ಎಂಬುವರು ಹಣಕ್ಕಾಗಿ ಬೇಡಿಕೆ ಇಟ್ಟಿರುವುದು ನಂತರ ಹಣ ಪಡೆದಿರುವುದು, ನಗದು ಹಾಗೂ ಆರ್‌ಟಿಜಿಎಸ್‌ ಮೂಲಕ ತಮ್ಮ ಖಾತೆಗೆ ಹಣ ವರ್ಗಾವಣೆ ಆಗಿರುವುದು ಮತ್ತು ತಮ್ಮ ಸಹಚರರ ಮೂಲಕ ಸಮನ್ವಯ ಮಾಡಲು ತಿಳಿಸಿರುವುದು ಹಾಗೂ ಹಣ ಪಡೆದಿರುವ ಬಗ್ಗೆಯೂ ಖಚಿತಪಡಿಸಿರುವುದು ಈ ಪ್ರಕರಣಕ್ಕೆ ಹೆಚ್ಚಿನ ಪುಷ್ಠಿ ನೀಡಿತ್ತು.

Hot this week

ಕದಂಬೋತ್ಸವ ಸೇರಿ ಸಾಂಸ್ಕೃತಿಕ ಉತ್ಸವಗಳಿಗೆ ಅನುದಾನ; 12.50 ಕೋಟಿ ರು ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಮೈಸೂರು ದಸರಾ ಸೇರಿದಂತೆ ಇನ್ನಿತರೆ ಜಿಲ್ಲಾಮಟ್ಟದ ವಿವಿಧ ಉತ್ಸವಗಳಿಗೆ 2024-25ಮತ್ತು...

ಪ್ರಚೋದನಕಾರಿ ಭಾಷಣ, ಕೋಮು ಗಲಭೆ; 3 ವರ್ಷದಲ್ಲಿ 50 ಪ್ರಕರಣಗಳು ದಾಖಲು, ಪಟ್ಟಿ ಬಹಿರಂಗ

ಬೆಂಗಳೂರು; ರಾಜ್ಯದ  ಕರಾವಳಿ ಭಾಗ ಸೇರಿದಂತೆ ವಿವಿಧೆಡೆ ಪ್ರಚೋದನಾಕಾರಿ ಭಾಷಣ ಮಾಡಿದವರು...

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

Topics

ಕದಂಬೋತ್ಸವ ಸೇರಿ ಸಾಂಸ್ಕೃತಿಕ ಉತ್ಸವಗಳಿಗೆ ಅನುದಾನ; 12.50 ಕೋಟಿ ರು ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಮೈಸೂರು ದಸರಾ ಸೇರಿದಂತೆ ಇನ್ನಿತರೆ ಜಿಲ್ಲಾಮಟ್ಟದ ವಿವಿಧ ಉತ್ಸವಗಳಿಗೆ 2024-25ಮತ್ತು...

ಪ್ರಚೋದನಕಾರಿ ಭಾಷಣ, ಕೋಮು ಗಲಭೆ; 3 ವರ್ಷದಲ್ಲಿ 50 ಪ್ರಕರಣಗಳು ದಾಖಲು, ಪಟ್ಟಿ ಬಹಿರಂಗ

ಬೆಂಗಳೂರು; ರಾಜ್ಯದ  ಕರಾವಳಿ ಭಾಗ ಸೇರಿದಂತೆ ವಿವಿಧೆಡೆ ಪ್ರಚೋದನಾಕಾರಿ ಭಾಷಣ ಮಾಡಿದವರು...

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

Related Articles

Popular Categories

error: Content is protected !!