Wednesday | May 6, 2026 |

ಶ್ರೀರಾಮ ಸಕ್ಕರೆ ಕಾರ್ಖಾನೆ ಗುತ್ತಿಗೆ; ನಿರಾಣಿ ಸಿಂಗಲ್‌ ಬಿಡ್‌ಗೆ ಆರ್ಥಿಕ ಇಲಾಖೆಯ ಕೊಕ್ಕೆ

ಬೆಂಗಳೂರು; ಕಳೆದ ಹಲವು ವರ್ಷಗಳಿಂದ ಸ್ಥಗಿತಗೊಂಡಿರುವ ಕೆ ಆರ್ ನಗರದ ಶ್ರೀರಾಮ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ಖಾಸಗಿಯವರಿಗೆ ಗುತ್ತಿಗೆ ನೀಡುವ ಸಂಬಂಧ ಸರ್ಕಾರ ಕರೆದಿದ್ದ ಬಿಡ್‌ನಲ್ಲಿ ಸಿಂಗಲ್‌ ಬಿಡ್ಡರ್‌ ಆಗಿರುವ ಸಚಿವ ಮುರುಗೇಶ್‌ ನಿರಾಣಿ ಉದ್ಯಮದ ಸಮೂಹಕ್ಕೆ ಆರ್ಥಿಕ ಇಲಾಖೆ ಕೊಕ್ಕೆ ಹಾಕಿದೆ. ಸಿಂಗಲ್‌ ಬಿಡ್‌ನ್ನು ಅನುಮೋದಿಸಲು ನಿರಾಕರಿಸಿರುವ ಇಲಾಖೆ, ಮರು ಟೆಂಡರ್‌ ಏಕೆ ಕರೆಯಬಾರದು ಎಂದು ಪ್ರಶ್ನಿಸಿದೆ.

ಪಾಂಡವಪುರ ಸಕ್ಕರೆ ಕಾರ್ಖಾನೆಯ ನೋಂದಣಿ ಶುಲ್ಕ ಮನ್ನಾ ಸೇರಿದಂತೆ ಇನ್ನಿತರೆ ಹೊಸ ಷರತ್ತುಗಳನ್ನು ಒಪ್ಪದಿದ್ದ ಸರ್ಕಾರ, ಶ್ರೀರಾಮ ಸಕ್ಕರೆ ಕಾರ್ಖಾನೆ ಗುತ್ತಿಗೆ ಸಂಬಂಧ ಸಿಂಗಲ್‌ ಬಿಡ್‌ನ್ನೂ ಒಪ್ಪಿಕೊಳ್ಳದಿರುವುದು ಮುರುಗೇಶ್‌ ನಿರಾಣಿಗೆ ಮತ್ತೊಂದು ಹಿನ್ನಡೆಯಾದಂತಾಗಿದೆ.

ಶ್ರೀರಾಮ ಸಹಕಾರ ಸಕ್ಕರೆ ಕಾರ್ಖಾನೆ ಗುತ್ತಿಗೆ ನೀಡಲು ಕರೆದಿದ್ದ ಟೆಂಡರ್‌ನಲ್ಲಿ 125 ಕೋಟಿಗೆ ಸಿಂಗಲ್‌ ಬಿಡ್‌ ಮಾಡಲಾಗಿತ್ತು. ಸಂಪುಟದ ಅನುಮತಿ ಸಿಕ್ಕರೆ ಆ ಕಾರ್ಖಾನೆಯನ್ನೂ ಗುತ್ತಿಗೆ ಪಡೆದು ಮುನ್ನಡೆಸಲಾಗುವುದು ಎಂದು ಹೇಳಿಕೆ ನೀಡಿದ್ದ ಶಾಸಕ ಮುರುಗೇಶ್ ಆರ್ ನಿರಾಣಿ ಅವರಿಗೀಗ ಆರ್ಥಿಕ ಇಲಾಖೆ ಎತ್ತಿರುವ ತಕರಾರು ತಲೆಬಿಸಿ ಮಾಡಿದೆ. ಈ ಸಂಬಂಧ ಆರ್ಥಿಕ ಇಲಾಖೆಯ ಉನ್ನತ ಮೂಲಗಳು ‘ದಿ ಫೈಲ್‌’ಗೆ ಖಚಿತಪಡಿಸಿವೆ.

ಸಿಂಗಲ್‌ ಬಿಡ್‌ನ್ನು ಒಪ್ಪಿಕೊಂಡಲ್ಲಿ ಕಾನೂನು ಮತ್ತು ಆರ್ಥಿಕ ಪರಿಣಾಮಗಳು ಎದುರಾಗಲಿವೆ ಎಂದು ಆರ್ಥಿಕ ಇಲಾಖೆ ಅಭಿಪ್ರಾಯ ನೀಡಿದೆ ಎಂದು ಗೊತ್ತಾಗಿದೆ. ಆರ್‌ಎಸ್‌ಎಸ್‌ಕೆ ಕಾರ್ಖಾನೆಯು ಗುತ್ತಿಗೆ ಮೊತ್ತ 480 ಕೋಟಿಗೆ ಬೇಡಿಕೆ ಇಟ್ಟಿತ್ತು. ಕಾರ್ಖಾನೆ ಈಗಾಗಲೇ ಹೊಂದಿರುವ ಹಣಕಾಸಿನ ಹೊಣೆಗಾರಿಕೆಗೂ (250 ಕೋಟಿ ಸಾಲ) ಮತ್ತು ಬಿಡ್‌ನಲ್ಲಿ ನಮೂದಿಸಿದ್ದ ಮೊತ್ತದ ಮಧ್ಯೆ ಅಜಗಜಾಂತರ ವ್ಯತ್ಯಾಸವಿತ್ತು. ಸಿಂಗಲ್‌ ಬಿಡ್‌ನ್ನು ಒಪ್ಪಿಕೊಂಡಿರುವ ಅಧಿಕಾರಿಗಳು ಇದಕ್ಕೆ ಸಮರ್ಥನೆಯನ್ನೂ ನೀಡಿರಲಿಲ್ಲ ಎಂದು ಗೊತ್ತಾಗಿದೆ.

ದಿವಂಗತ ಡಿ. ದೇವರಾಜು ಅರಸು ಸರಕಾರದಲ್ಲಿ ಶಾಸಕರಾಗಿದ್ದ ದಿ. ಎಚ್‌. ಬಿ. ಕೆಂಚೇಗೌಡ ಸಚಿವ ಸ್ಥಾನದ ಆಕಾಂಕ್ಷೆ ತೊರೆದು ಜಿಲ್ಲೆಯ ರೈತರ ಹಿತಕ್ಕಾಗಿ ಈ ಕಾರ್ಖಾನೆ ನಿರ್ಮಿಸಲು ಮುನ್ನುಡಿ ಬರೆದಿದ್ದರು. ಷೇರು ಹಣ ಸಂಗ್ರಹಿಸಲು ಜಿಲ್ಲೆಯ ಐದು ತಾಲೂಕಿನಾದ್ಯಂತ ಹಗಲಿರುಳು ಶ್ರಮಿಸಿ, ನೂರಾರು ಪ್ರಮುಖ ರೈತ ಮುಖಂಡರ ಸಹಕಾರದೊಂದಿಗೆ 1979ರಲ್ಲಿ ಈ ಕಾರ್ಖಾನೆ ಆರಂಭವಾಗಿತ್ತು. ಈ ಕಾರ್ಖಾನೆಗೀಗ 40 ವರ್ಷದ ಇತಿಹಾಸವಿದೆ. ಆದರೆ ಕಳೆದ 8 ವರ್ಷಗಳಿಂದ ಕಾರ್ಖಾನೆ ಸ್ಥಗಿತಗೊಂಡಿದೆ.

ಮಂಡ್ಯ ಜಿಲ್ಲೆಯ ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆಯನ್ನು 40 ವರ್ಷಗಳ ಕಾಲ ಗುತ್ತಿಗೆಗೆ ಪಡೆದ ನಂತರ ನಿರಾಣಿ ಒಡೆತನದ ಉದ್ಯಮ ಸಮೂಹ ವರಾತ ತೆಗೆದಿತ್ತು. ಬಿಜೆಪಿ ಶಾಸಕ ಮುರುಗೇಶ್‌ ನಿರಾಣಿ ಒಡೆತನಕ್ಕೆ ಸೇರಿರುವ ನಿರಾಣಿ ಉದ್ಯಮ ಸಮೂಹ ಮುಂದಿಟ್ಟಿದ್ದ ಹೊಸ ಬೇಡಿಕೆಯನ್ನು ತಿರಸ್ಕರಿಸಿತ್ತು.

ನಿರಾಣಿ ಉದ್ಯಮ ಸಮೂಹವು ಗುತ್ತಿಗೆ ಅವಧಿ ಪೂರ್ಣಗೊಂಡ ನಂತರವೂ ಕಂಪನಿಯಲ್ಲಿನ ಎಲ್ಲಾ ಬಗೆಯ ಯಂತ್ರೋಪಕರಣಗಳು ಸರ್ಕಾರದ ವಶಕ್ಕೆ ಬದಲಿಗೆ ಕಂಪನಿ ವಶಕ್ಕೆ ನೀಡಬೇಕು ಒತ್ತಡ ಹೇರಿತ್ತಲ್ಲದೆ ಮುದ್ರಾಂಕ ಮತ್ತು ನೋಂದಣಿ ಶುಲ್ಕ ಮನ್ನಾ ಮಾಡಬೇಕು ಎಂದು ಸರ್ಕಾರದ ಮೆಟ್ಟಿಲೇರಿತ್ತು. ಕರಾರು ಒಪ್ಪಂದಕ್ಕೆ ಸಹಿ ಮಾಡಿದ ನಂತರ ಕಂಪನಿಗೆ ಗುತ್ತಿಗೆ ನೀಡಲು ಸಚಿವ ಸಂಪುಟ ಅನುಮೋದನೆ ನೀಡಿದ ನಂತರ ನಿರಾಣಿ ಉದ್ಯಮ ಸಮೂಹ ತೆಗೆದಿದ್ದ ವರಾತಕ್ಕೆ ಸರ್ಕಾರ ಸೊಪ್ಪು ಹಾಕಿಲ್ಲ. ಬದಲಿಗೆ ನೋಂದಣಿ ಶುಲ್ಕವನ್ನು ಮನ್ನಾ ಮಾಡಬೇಕು ಎಂಬ ಮನವಿಯನ್ನೇ ತಿರಸ್ಕರಿಸಿತ್ತು.

‘ಬಾಗಲಕೋಟೆ ಮುಧೋಳದ ನಿರಾಣಿ ಶುಗರ್ಸ್‌ ಲಿಮಿಟೆಡ್‌ಗೆ 40 ವರ್ಷಗಳ ಅವಧಿಗೆ ಗುತ್ತಿಗೆ ನೀಡಲು ಆದೇಶ ಹೊರಡಿಸಲಾಗಿದೆ. ಗುತ್ತಿಗೆ ಕರಾರಿನ ನೋಂದಣಿ ಸಂದರ್ಭದಲ್ಲಿ ವಿಧಿಸಲಾಗುವ ಮುದ್ರಾಂಕ ಮತ್ತು ನೋಂದಣಿ ಶುಲ್ಕವನ್ನು ಮನ್ನಾ ಮಾಡುವಂತೆ ಕೋರಿದ್ದ ಮನವಿಯನ್ನು ತಿರಸ್ಕರಿಸಲಾಗಿದೆ,’ಎಂದು ವಾಣಿಜ್ಯ ಕೈಗಾರಿಕೆ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಕಬ್ಬು ಅಭಿವೃದ್ಧಿ, ಸಕ್ಕರೆ ನಿರ್ದೇಶನಾಲಯದ ಆಯುಕ್ತರಿಗೆ 2020ರ ಅಕ್ಟೋಬರ್‌ 12ರಂದು ಪತ್ರ ಮುಖೇನ ತಿಳಿಸಿದ್ದನ್ನು ಸ್ಮರಿಸಬಹುದು.

Hot this week

ಬಿಜೆಪಿ ಅವಧಿಯಲ್ಲಿದ್ದ 120 ಎಕರೆ ಗೋಮಾಳ, ಕಾಂಗ್ರೆಸ್‌ ಅವಧಿಯಲ್ಲಿ ಕಣ್ಮರೆ!; 24 ಕೋಟಿ ಮೌಲ್ಯದ ಜಮೀನು, ಖಾಸಗಿ ವ್ಯಕ್ತಿಗಳ ಪಾಲು?

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ...

ಒಂದೇ ಜಾಗದಲ್ಲಿ ಎರಡು ಫ್ಲೈ ಓವರ್, ಶೇ.50ರಷ್ಟು ಕಾಮಗಾರಿಯಾಗಿದ್ದರೂ ಪೂರ್ಣ ಪಾವತಿ; ಬ್ಯಾಂಕ್‌ ಗ್ಯಾರಂಟಿ ಮುಟ್ಟುಗೋಲಿಲ್ಲ, ಗುತ್ತಿಗೆದಾರರಿಗೆ ಲಾಭ, ಬಿಬಿಎಂಪಿ ನಿಧಿಗೆ ನಷ್ಟ

ಬೆಂಗಳೂರು;  ಈಜಿಪುರ ಮೇಲ್ಸೇತುವೆ ಎಲಿವೇಟೆಡ್‌ ಕಾರಿಡಾರ್  ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ  ಪೂರ್ಣಗೊಳಿಸದ...

ಅನುದಾನ ಬಿಡುಗಡೆಯಾಗಿದ್ದರೂ ಪೂರ್ಣಗೊಳ್ಳದ ಕಾಮಗಾರಿ; ತನಿಖಾ ವರದಿಗೆ ಮೆತ್ತಿಕೊಂಡ ಧೂಳು, ಕ್ರಮಕೈಗೊಳ್ಳದ ಸಚಿವ

ಬೆಂಗಳೂರು; ತುಮಕೂರು ಜಿಲ್ಲೆಯ ಶಿರಾ ಪಟ್ಟಣದಲ್ಲಿರುವ ಕಸ್ತೂರಿ ರಂಗಪ್ಪ ನಾಯಕ ಕೋಟೆಯ...
Please Scan to make Your Contribution

Topics

ಬಿಜೆಪಿ ಅವಧಿಯಲ್ಲಿದ್ದ 120 ಎಕರೆ ಗೋಮಾಳ, ಕಾಂಗ್ರೆಸ್‌ ಅವಧಿಯಲ್ಲಿ ಕಣ್ಮರೆ!; 24 ಕೋಟಿ ಮೌಲ್ಯದ ಜಮೀನು, ಖಾಸಗಿ ವ್ಯಕ್ತಿಗಳ ಪಾಲು?

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ...

ಅನುದಾನ ಬಿಡುಗಡೆಯಾಗಿದ್ದರೂ ಪೂರ್ಣಗೊಳ್ಳದ ಕಾಮಗಾರಿ; ತನಿಖಾ ವರದಿಗೆ ಮೆತ್ತಿಕೊಂಡ ಧೂಳು, ಕ್ರಮಕೈಗೊಳ್ಳದ ಸಚಿವ

ಬೆಂಗಳೂರು; ತುಮಕೂರು ಜಿಲ್ಲೆಯ ಶಿರಾ ಪಟ್ಟಣದಲ್ಲಿರುವ ಕಸ್ತೂರಿ ರಂಗಪ್ಪ ನಾಯಕ ಕೋಟೆಯ...

ಧರ್ಮಸ್ಥಳ ಪ್ರಕರಣಗಳ ತನಿಖೆ; ಎಸ್‌ಐಟಿ ವರದಿ ಪ್ರತಿ ಒದಗಿಸದ ಸರ್ಕಾರ, ಗೃಹ ಇಲಾಖೆ ಶಾಖೆಯಲ್ಲಿ ಸಭೆ ನಡವಳಿಯೂ ಲಭ್ಯವಿಲ್ಲ

ಬೆಂಗಳೂರು: ಧರ್ಮಸ್ಥಳದ ಸುತ್ತಮುತ್ತ ನಡೆದಿರುವ ಮಹಿಳೆಯರು ಮತ್ತು ಯುವತಿಯರ ಮೇಲಿನ ದೌರ್ಜನ್ಯ/ಕೊಲೆ,...

ವೈಟ್‌ ಟ್ಯಾಪಿಂಗ್‌ ಗೋಲ್ಮಾಲ್‌; ಅಗತ್ಯವಿರದಿದ್ದರೂ ಕಾಮಗಾರಿ, ತಾಂತ್ರಿಕ ಪರಿಶೀಲನೆಯಿಲ್ಲದಿದ್ದರೂ ಹೆಚ್ಚುವರಿ ವೆಚ್ಚ, ಗುತ್ತಿಗೆದಾರರಿಗೆ ಲಾಭ

ಬೆಂಗಳೂರು;  ವೈಟ್‌ ಟ್ಯಾಪಿಂಗ್ ಅಗತ್ಯವಿಲ್ಲದಿದ್ದರೂ  ಕಾಮಗಾರಿ ಆರಂಭಿಸಿದ ನಂತರ ತಾಂತ್ರಿಕ ಮಂಜೂರಾತಿ...

Related Articles

Popular Categories

error: Content is protected !!