Saturday | August 8, 2026 |

ಎಂಇಎಸ್‌ ಮುಖಂಡನ ಸೊಸೈಟಿ ಮೇಲೆ ಹಿಡಿತವಿಲ್ಲ; ಸಿಐಡಿ ತನಿಖೆ ಜಾರಿಯಲ್ಲಿದ್ದರೂ ಠೇವಣಿ ಆಕರ್ಷಣೆ

ಬೆಂಗಳೂರು; ಎಂಇಎಸ್‌ ಮುಖಂಡ ಕಿರಣ್‌ ಠಾಕೂರ್‌ ಒಡೆತನದಲ್ಲಿರುವ ಬೆಳಗಾವಿಯ ಲೋಕಮಾನ್ಯ ಮಲ್ಟಿಪರ್ಪಸ್‌ ಕೋ ಆಪರೇಟೀವ್‌ ಸೊಸೈಟಿ ಅಕ್ರಮಗಳ ಕುರಿತು ಸಿಐಡಿ ತನಿಖೆ ನಡೆಸುತ್ತಿರುವ ಹೊತ್ತಿನಲ್ಲೇ ಠೇವಣಿದಾರನ್ನು ಆಕರ್ಷಿಸುವುದನ್ನು ಮುಂದುವರೆಸಿದೆ.

ಅಂದಾಜು 2 ಸಾವಿರ ಕೋಟಿ ರು. ವಂಚನೆ ಮಾಡಿರುವ ಆರೋಪಕ್ಕೆ ಗುರಿಯಾಗಿರುವ ಈ ಸೊಸೈಟಿಯು ಠೇವಣಿದಾರರನ್ನು ಆಕರ್ಷಿಸುವುದನ್ನು ಮುಂದುವರೆಸಿದ್ದರೂ ಸಹಕಾರ ಇಲಾಖೆ ಯಾವುದೇ ಕ್ರಮ ವಹಿಸಿಲ್ಲ. ಈ ಕುರಿತು ಭಾರತೀಯ ರಿಸರ್ವ್‌ ಬ್ಯಾಂಕ್‌ನ ಪ್ರಾಂತೀಯ ನಿರ್ದೇಶಕರು ರಾಜ್ಯ ಸರ್ಕಾರಕ್ಕೆ ಅರೆ ಸರ್ಕಾರಿ ಪತ್ರವನ್ನು (DO.FIDD(BG)NO 112/02.03.051/2020-21 ದಿನಾಂಕ 22.12.2020) ಬರೆದಿದ್ದಾರೆ ಎಂದು ತಿಳಿದು ಬಂದಿದೆ. ಈ ಪತ್ರವನ್ನಾಧರಿಸಿ ಸಹ ಆರ್ಥಿಕ ಇಲಾಖೆಯ (ವಿತ್ತೀಯ ಸುಧಾರಣೆ) ಸರ್ಕಾರದ ಕಾರ್ಯದರ್ಶಿ ಮಂಜು ಪ್ರಸನ್ನನ್‌ ಪಿಳ್ಳೈ ಅವರು ಸಹಕಾರ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ 2021ರ ಜನವರಿ 12ರಂದು ಪತ್ರ ಬರೆದಿದ್ದಾರೆ. ಈ ಪತ್ರದ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

‘ಲೋಕಮಾನ್ಯ ಮಲ್ಟಿ ಪರ್ಪಸ್‌ ಕೋ ಆಪರೇಟೀವ್‌ ಸೊಸೈಟಿಯ ಬಗ್ಗೆ ಸಿಐಡಿಯಲ್ಲಿ ತನಿಖೆ ನಡೆಯುತ್ತಿದ್ದರೂ ಕೋ ಆಪರೇಟೀವ್‌ ಸೊಸೈಟಿಯು ಪತ್ರಿಕೆಗಳಲ್ಲಿ ಜಾಹೀರಾತು ನೀಡಿ ಠೇವಣಿದಾರನ್ನು ಆಕರ್ಷಿಸುತ್ತಿದೆ. ಮಲ್ಟಿ ಕೋ ಆಪರೇಟೀವ್‌ ಸೊಸೈಟಿಗಳ ಮೇಲ್ವಿಚಾರಣೆಯಲ್ಲಿ ಲೋಪದೋಷಗಳನ್ನು ಸರಿಪಡಿಸಲು ಕೇಂದ್ರದ ಸಹಕಾರಿ ಸಂಘಗಳ ರಿಜಿಸ್ಟ್ರಾರ್‌ರೊಂದಿಗೆ ವಿಷಯವನ್ನು ಪ್ರಸ್ತಾಪಿಸಬೇಕು,’ ಎಂದು ಮಂಜು ಪ್ರಸನ್ನನ್‌ ಪಿಳ್ಳೈ ಅವರು ಅನಧಿಕೃತ ಟಿಪ್ಪಣಿಯಲ್ಲಿ ತಿಳಿಸಿದ್ದಾರೆ.

ಬೆಳಗಾವಿಯಲ್ಲಿರುವ ಈ ಸೊಸೈಟಿಯು ಎಂಇಎಸ್ ಮುಖಂಡ ಕಿರಣ್ ಠಾಕೂರ್ ಒಡೆತನಕ್ಕೆ ಸೇರಿದೆ. ಈ ಸೊಸೈಟಿಯಲ್ಲಿ ಠೇವಣಿದಾರರು ಇಟ್ಟಿದ್ದ 2 ಸಾವಿರ ಕೋಟಿಗೂ ಅಧಿಕ ಮೊತ್ತ ದುರುಪಯೋಗವಾಗಿದೆ ಎಂಬ ಆರೋಪ ಕೇಳಿ ಬಂದಿತ್ತು.

ಶಾಸಕ ಅಭಯ ಪಾಟೀಲ್ ಸೇರಿ 60 ಶಾಸಕರಿಂದ ಇ.ಡಿ, ಕೇಂದ್ರ ಹಣಕಾಸು ಇಲಾಖೆ, ರಾಜ್ಯ ಸರ್ಕಾರಕ್ಕೆ ದೂರು ನೀಡಿದ್ದರು. ಪ್ರಕರಣ ಸಂಪೂರ್ಣ ತನಿಖೆಗೆ ಸಹಕಾರ ಇಲಾಖೆಗೆ ಸೂಚಿಸಿತ್ತು. ಇಲಾಖೆ ರಿಜಿಸ್ಟ್ರಾರ್ ಶಿವಪ್ರಕಾಶ್ ನೇತೃತ್ವದಲ್ಲಿ ಅಧಿಕಾರಿಗಳು ಟಿಳಕವಾಡಿ ಬ್ರ್ಯಾಂಚ್​ಗೆ ಭೇಟಿ ನೀಡಿ ದಾಖಲೆಗಳನ್ನ ಪರಿಶೀಲನೆ ನಡೆಸಿದ್ದರು.

ಗೋವಾ, ಮಹಾರಾಷ್ಟ್ರ, ಕರ್ನಾಟಕದ ಹಲವು ರಾಜಕಾರಣಿಗಳು ಈ ಸೊಸೈಟಿಯಲ್ಲಿ ಹಣ ಹೂಡಿಕೆ ಮಾಡಿದ್ದರು ತಿಳಿದುಬಂದಿದೆ.

Hot this week

‘ಅಕ್ರಮ ಗಣಿಗಾರಿಕೆ ಮಾಡಿರುವುದು ಗಮನಕ್ಕೆ ಬಂದಿರಲಿಲ್ಲವೇ?; ಅದಾನಿ ಎಸಿಸಿ ಸಿಮೆಂಟ್ ಪ್ರಕರಣದಲ್ಲಿ ಮಾಹಿತಿ ಕೋರಿದ ಆರ್ಥಿಕ ಇಲಾಖೆ

ಬೆಂಗಳೂರು; ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌ ಲಿಮಿಟೆಡ್‌ನ ಗಣಿ ಗುತ್ತಿಗೆ ಅವಧಿ...

15ನೇ ಹಣಕಾಸು ಆಯೋಗ;1,764.83 ಕೋಟಿ ಬಳಕೆ ಮಾಡದ ಪಂಚಾಯ್ತಿಗಳು, ನರೇಗಾ ಅನುದಾನವೂ ಅನ್ಯ ಉದ್ದೇಶಕ್ಕೆ ಬಳಕೆ

ಬೆಂಗಳೂರು; ಪ್ರಿಯಾಂಕ್‌ ಖರ್ಗೆ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌  ಸಚಿವರಾಗಿದ್ದ ಸಂದರ್ಭದಲ್ಲೇ ಅದೂ...

ಐಎಎಸ್‌ ಅಧಿಕಾರಿಗಳ ಸಂಘಕ್ಕೆ ಕೋಟಿ ಕೋಟಿ ಅನುದಾನ; ನಿಯಮಬಾಹಿರ ಬಳಕೆ, 9.50 ಕೋಟಿ ವೆಚ್ಚಕ್ಕೆ ದಾಖಲೆಗಳೇ ಇಲ್ಲವೆಂದ ಎಜಿ

ಬೆಂಗಳೂರು; ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಐಎಎಸ್‌ ಅಧಿಕಾರಿಗಳ ಸಂಘಕ್ಕೆ ನೀಡಲಾಗಿದ್ದ ಅನುದಾನವನ್ನು ನಿಯಮಬಾಹಿರವಾಗಿ...
Please Scan to make Your Contribution

Topics

15ನೇ ಹಣಕಾಸು ಆಯೋಗ;1,764.83 ಕೋಟಿ ಬಳಕೆ ಮಾಡದ ಪಂಚಾಯ್ತಿಗಳು, ನರೇಗಾ ಅನುದಾನವೂ ಅನ್ಯ ಉದ್ದೇಶಕ್ಕೆ ಬಳಕೆ

ಬೆಂಗಳೂರು; ಪ್ರಿಯಾಂಕ್‌ ಖರ್ಗೆ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌  ಸಚಿವರಾಗಿದ್ದ ಸಂದರ್ಭದಲ್ಲೇ ಅದೂ...

ಐಎಎಸ್‌ ಅಧಿಕಾರಿಗಳ ಸಂಘಕ್ಕೆ ಕೋಟಿ ಕೋಟಿ ಅನುದಾನ; ನಿಯಮಬಾಹಿರ ಬಳಕೆ, 9.50 ಕೋಟಿ ವೆಚ್ಚಕ್ಕೆ ದಾಖಲೆಗಳೇ ಇಲ್ಲವೆಂದ ಎಜಿ

ಬೆಂಗಳೂರು; ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಐಎಎಸ್‌ ಅಧಿಕಾರಿಗಳ ಸಂಘಕ್ಕೆ ನೀಡಲಾಗಿದ್ದ ಅನುದಾನವನ್ನು ನಿಯಮಬಾಹಿರವಾಗಿ...

54 ತಾಲೂಕುಗಳಲ್ಲಿ ತೀವ್ರ, 40 ತಾಲೂಕುಗಳಲ್ಲಿ ಮಧ್ಯಮ ಬರ; ಇನ್ನೂ ರಚನೆಯಾಗದ ನೈಸರ್ಗಿಕ ವಿಕೋಪಗಳ ಸಚಿವ ಸಂಪುಟ ಉಪ ಸಮಿತಿ

ಬೆಂಗಳೂರು; ರಾಜ್ಯದಲ್ಲಿ ಎದುರಾಗಿರುವ ಬರ ಪರಿಸ್ಥಿತಿ ಕುರಿತು ಪ್ರತಿಪಕ್ಷಗಳು ಜಿಲ್ಲಾವಾರು, ಪ್ರದೇಶವಾರು...

ಒಳ ಮೀಸಲಾತಿ; ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗಕ್ಕೆ 86.19 ಕೋಟಿ ರು ವೆಚ್ಚ, ಆರ್‍‌ಟಿಐ ಮಾಹಿತಿ ಬಹಿರಂಗ

ಬೆಂಗಳೂರು;  ಕರ್ನಾಟಕದಲ್ಲಿ ಪರಿಶಿಷ್ಟ ಜಾತಿಗಳ (ಎಸ್‌ಸಿ) ಒಳಮೀಸಲಾತಿ ಹಂಚಿಕೆ ಮತ್ತು ಸಾಮಾಜಿಕ...

Related Articles

Popular Categories

error: Content is protected !!