Wednesday | August 19, 2026 |

ಹಣಕ್ಕಾಗಿ ಬೇಡಿಕೆ; ಸಚಿವ ಅಶೋಕ್‌ ಆಪ್ತ ಸಹಾಯಕನ ವಿರುದ್ಧ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರು; ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು ಎಂಬ ಆರೋಪಕ್ಕೆ ಒಳಗಾಗಿರುವ ಸಚಿವ ಆರ್‌ ಅಶೋಕ್‌ ಅವರ ಆಪ್ತ ಸಹಾಯಕ ಗಂಗಾಧರ್‌ ಅವರ ವಿರುದ್ಧ ಶೃಂಗೇರಿ ಸಬ್‌ ರಿಜಿಸ್ಟ್ರಾರ್‌ ಚೆಲುವರಾಜು ಅವರು ಶೃಂಗೇರಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

ಪ್ರಕರಣದ ಹಿನ್ನೆಲೆ

ಶೃಂಗೇರಿಯ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಅಕ್ಷರ ಮಿತ್ರ ಕಾರ್ಯಕ್ರಮದಲ್ಲಿ ಸಚಿವ ಆರ್‌ ಅಶೋಕ್‌ ಅವರು ಭಾಗವಹಿಸಿದ್ದರು. 2021ರ ಜನವರಿ 21ರಂದು ಕಂದಾಯ ಸಚಿವರ ಪ್ರವಾಸ ವೇಳಾಪಟ್ಟಿಯನ್ನು ಉಪ ನೋಂದಣಾಧಿಕಾರಿ ಎಚ್‌ ಎಸ್‌ ಚೆಲುವರಾಜು ಅವರ ಖಾಸಗಿ ಮೊಬೈಲ್‌ ನಂಬರ್‌ 9741114815ಗೆ ಸಂದೇಶ ಕಳಿಸಲಾಗಿತ್ತು. ಆದರೆ ಸಂದೇಶ ಕಳಿಸಿದವ ಇವರಿಗೆ ಪರಿಚಯವಿರಲಿಲ್ಲ. ಇದಾಗಿ 3 ದಿನದ ನಂತರ 2021ರ ಜನವರಿ 24ರಂದು ಸಚಿವ ಆರ್‌ ಅಶೋಕ್‌ ಅವರ ಆಪ್ತ ಸಹಾಯಕ ಎಂದು ಪರಿಚಯಿಸಿಕೊಂಡ ಗಂಗಾಧರ್‌ ಎಂಬ ವ್ಯಕ್ತಿಯು ತಮ್ಮನ್ನು ಮತ್ತು ಸಚಿವ ಅಶೋಕ್‌ ಅವರನ್ನು ಭೇಟಿ ಆಗಬೇಕು ಎಂದು ಸೂಚಿಸಿದ್ದರು ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

2021ರ ಜನವರಿ 24ರಂದು ಸಚಿವ ಆರ್‌ ಅಶೋಕ್‌ ಅವರನ್ನು ಭೇಟಿಯಾಗಲು ಶರಂಗೇರಿಯ ಆದಿಚುಂಚನಗಿರಿ ಸಮುದಾಯ ಭವನಕ್ಕೆ ತೆರಳಿದ್ದ ವೇಳೆಯಲ್ಲಿ ಗಂಗಾಧರ ಎಂಬಾತ ತನಗೆ ಹಣ ನೀಡಬೇಕು ಎಂದು ಬೇಡಿಕೆ ಇಟ್ಟರು ಎಂದು ದೂರಿದ್ದಾರೆ. ಈ ಬಗ್ಗೆ ನನಗೆ ಯಾರಿಗೂ ಈ ರೀತಿ ಹಣ ನೀಡುವ ಅಥವಾ ಯಾರಿಂದಲೂ ಹಣ ಪಡೆಯುವ ಅಭ್ಯಾಸ ನನಗೆ ಇಲ್ಲ ಎಂದು ಸ್ಥಳದಲ್ಲಿಯೇ ತಿಳಿಸಿ ಆತನ ಬೇಡಿಕೆಯನ್ನು ತಿರಸ್ಕರಿಸಿದ್ದೆ ಎಂದು ವಿವರಿಸಿದ್ದಾರೆ.

ಅದೇ ದಿನ ಗಂಗಾಧರ್‌ (ದೂರವಾಣಿ ಸಂಖ್ಯೆ ; 7760666222) 8-30ರ ಸಮಯದಲ್ಲಿ ತನ್ನ ಮೊಬೈಲ್‌ನಿಂದ ವಾಟ್ಸಾಪ್‌ ಧ್ವನಿ ಕರೆ ಮಾಡಿದ್ದ ಎಂದು ದೂರಿನಲ್ಲಿ ಹೇಳಿರುವ ಚೆಲುವರಾಜು ಅವರು ಗಂಗಾಧರ್‌ ಎಂಬುವರು ಸರ್ಕಾರಿ ಅಧಿಕಾರಿಯನ್ನು ಅಕ್ರಮ ಹಣಕ್ಕಾಗಿ ಬಳಸಿಕೊಳ್ಳಲು ಪ್ರಯತ್ನಿಸಿದ್ದಾರೆ ಎಂದು ಚೆಲುವರಾಜು ಅವರು ಆರೋಪಿಸಿದ್ದಾರೆ.

ಅಬಕಾರಿ ಸಚಿವರಾಗಿದ್ದ ಎಚ್‌ ನಾಗೇಶ್‌ ವಿರುದ್ಧವೂ ಒಂದು ಕೋಟಿ ಲಂಚದ ಆರೋಪ ಕೇಳಿ ಬಂದಿತ್ತು. ಈ ಕುರಿತು ಅಬಕಾರಿ ಇಲಾಖೆಯ ಜಂಟಿ ಆಯುಕ್ತರ ಪುತ್ರಿ ಪ್ರಧಾನಮಂತ್ರಿ ಕಚೇರಿಗೆ ದೂರು ದಾಖಲಿಸಿದ್ದರು. ಹಾಗೆಯೇ ಕೃಷಿ ಇಲಾಖೆ ಅಧಿಕಾರಿ, ನೌಕರರು ಸಚಿವ ಬಿ ಸಿ ಪಾಟೀಲ್‌ ಅವರ ವಿರುದ್ಧ ಹಣ ವಸೂಲಿ ಆರೋಪ ಮಾಡಿ ಮುಖ್ಯಮಂತ್ರಿ ಯಡಿಯೂರಪ್ಪ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವರಿಗೆ ದೂರು ಸಲ್ಲಿಸಿದ್ದನ್ನು ಸ್ಮರಿಸಬಹುದು.

Hot this week

30,01,169 ರೈತರಿಂದ 25,180.77 ಕೋಟಿ ಹೊರಬಾಕಿ; ರೈತರ ಸಾಲ ಮನ್ನಾ ಪ್ರಸ್ತಾವವಿಲ್ಲ, ರೈತರ ಕೆಂಗಣ್ಣಿಗೆ ಗುರಿಯಾಗಲಿದೆಯೇ ಸರ್ಕಾರ?

ಬೆಂಗಳೂರು; ಸಹಕಾರ ಸಂಸ್ಥೆಗಳ ಮೂಲಕ ರೈತರು ಪಡೆದಿರುವ ಕೃಷಿ ಸಾಲವನ್ನು ಮನ್ನಾ...

ಇ-ಆಫೀಸ್‌ ತಂತ್ರಾಂಶದಲ್ಲೇ ಬೆಟ್ಟದಷ್ಟು ಬೆಳೆದು ನಿಂತ ಕಡತಗಳ ರಾಶಿ; ಗರಿಷ್ಠ 3,187, ಕನಿಷ್ಟ 32 ದಿನಗಳಾದರೂ ವಿಲೇವಾರಿಯಾಗಿಲ್ಲ, ಜಡ್ಡುಗಟ್ಟಿದೆಯೇ ಆಡಳಿತ?

ಬೆಂಗಳೂರು;   ಭೌತಿಕ ಕಡತಗಳ ವಿಲೇವಾರಿಯಲ್ಲಿ ಆಗುತ್ತಿದ್ದ ವಿಳಂಬವನ್ನು ತಪ್ಪಿಸುವ ಉದ್ದೇಶದಿಂದ ಇ-ಆಫೀಸ್‌...

ಹಿಂದುಳಿದ ಸಮುದಾಯ ಅಭಿವೃದ್ಧಿ ನಿಗಮಗಳಿಗೆ 473.41 ಕೋಟಿ ಅನುದಾನ ಹಂಚಿಕೆ; ನಾಲ್ಕೂವರೆ ತಿಂಗಳಾದರೂ ನಯಾಪೈಸೆಯೂ ಬಿಡುಗಡೆಯಾಗಿಲ್ಲ

ಬೆಂಗಳೂರು; ಆರ್ಥಿಕ ವರ್ಷ ಆರಂಭವಾಗಿ ನಾಲ್ಕೂವರೆ ತಿಂಗಳಾದರೂ ಸಹ ಹಿಂದುಳಿದ ವರ್ಗಗಳ...
Please Scan to make Your Contribution

Topics

30,01,169 ರೈತರಿಂದ 25,180.77 ಕೋಟಿ ಹೊರಬಾಕಿ; ರೈತರ ಸಾಲ ಮನ್ನಾ ಪ್ರಸ್ತಾವವಿಲ್ಲ, ರೈತರ ಕೆಂಗಣ್ಣಿಗೆ ಗುರಿಯಾಗಲಿದೆಯೇ ಸರ್ಕಾರ?

ಬೆಂಗಳೂರು; ಸಹಕಾರ ಸಂಸ್ಥೆಗಳ ಮೂಲಕ ರೈತರು ಪಡೆದಿರುವ ಕೃಷಿ ಸಾಲವನ್ನು ಮನ್ನಾ...

ಇ-ಆಫೀಸ್‌ ತಂತ್ರಾಂಶದಲ್ಲೇ ಬೆಟ್ಟದಷ್ಟು ಬೆಳೆದು ನಿಂತ ಕಡತಗಳ ರಾಶಿ; ಗರಿಷ್ಠ 3,187, ಕನಿಷ್ಟ 32 ದಿನಗಳಾದರೂ ವಿಲೇವಾರಿಯಾಗಿಲ್ಲ, ಜಡ್ಡುಗಟ್ಟಿದೆಯೇ ಆಡಳಿತ?

ಬೆಂಗಳೂರು;   ಭೌತಿಕ ಕಡತಗಳ ವಿಲೇವಾರಿಯಲ್ಲಿ ಆಗುತ್ತಿದ್ದ ವಿಳಂಬವನ್ನು ತಪ್ಪಿಸುವ ಉದ್ದೇಶದಿಂದ ಇ-ಆಫೀಸ್‌...

ಫ್ರೀಡಂ ಹಬ್ಬಕ್ಕೆ 6 ಕೋಟಿ ವೆಚ್ಚ!; ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳುವ ಮುನ್ನವೇ ಕೆಲಸ ಆರಂಭಿಸಿದ ಕಂಪನಿ

ಬೆಂಗಳೂರು; ಹೊಸದಾಗಿ ವಿದ್ಯಾರ್ಥಿ ನಿಲಯಗಳ ಆರಂಭ, ಅನುಮೋದಿತ ಕಾಮಗಾರಿಗಳ ಕಾರ್ಯಭಾರಕ್ಕೆ ನಲುಗಿ...

3,206 ಪಂಚಾಯ್ತಿಗಳಲ್ಲಿ ಶಾಸನಬದ್ಧ ತೆರಿಗೆ ವಸೂಲು; ಸರ್ಕಾರಕ್ಕೆ ಪಾವತಿಯಾಗದ 17.28 ಕೋಟಿ ಎಲ್ಲಿದೆ?

ಬೆಂಗಳೂರು; ರಾಜ್ಯದ 27 ಜಿಲ್ಲೆಗಳ 3,206 ಪಂಚಾಯ್ತಿಗಳು ಸರಕು ಸೇವಾ ತೆರಿಗೆ,...

Related Articles

Popular Categories

error: Content is protected !!