Thursday | September 17, 2026 |

ಲೈಸೆನ್ಸ್‌ಗೆ ‘ಪಿಂಕ್‌’ ನೋಟ್‌ ಕೊಡಿ; ವಾಟ್ಸಾಪ್‌ ಸಂದೇಶ ಕಳಿಸಿ ಭ್ರಷ್ಟಾಚಾರ ಬೆಂಬಲಿಸಿದ ಅಧಿಕಾರಿ

ಬೆಂಗಳೂರು; ಹಳೆಯ 100 ರು. ಮುಖಬೆಲೆ ನೋಟುಗಳನ್ನು ಅಮಾನ್ಯ ಮಾಡಲಾಗುತ್ತದೆ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ ಪತ್ರಿಕಾ ಪ್ರಕಟಣೆ ಹೊರಡಿಸಿದೆ ಎಂಬ ಸುದ್ದಿ ಹರಿದಾಡಿದ ಬೆನ್ನಲ್ಲೇ ಸರ್ಕಾರಿ ಇಲಾಖೆಗಳಲ್ಲಿರುವ ಲಂಚಕೋರ ಅಧಿಕಾರಿಗಳು 100ರ ಮುಖಬೆಲೆ ನೋಟುಗಳಿಗೆ ಬದಲಾಗಿ ಗುಲಾಬಿ ಬಣ್ಣ ಹೊಂದಿರುವ 2,000 ರು. ಮುಖಬೆಲೆ ನೋಟುಗಳನ್ನು ಕೊಡಿ ಎಂದು ಕೇಳಲಾರಂಭಿಸಿದ್ದಾರೆ!

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವ್ಯಾಪ್ತಿಯೊಳಗೆ ಬರುವ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಜಂಟಿ ಆಯುಕ್ತ ಡಾ ಹರ್ಷವರ್ಧನ್‌ ಎಂಬುವರು ಇಲಾಖೆಯ ಅಧಿಕಾರಿಗಳ ಗ್ರೂಪ್‌ಗೆ ಇಂತದ್ದೊಂದು ಸಂದೇಶವನ್ನು ಹರಿಬಿಟ್ಟಿದ್ದಾರೆ. ಸಂದೇಶವನ್ನು ಗ್ರೂಪ್‌ಗೆ ಹಾಕಿದ್ದರಿಂದ ಭ್ರಷ್ಟಾಚಾರವನ್ನು ಹರ್ಷವರ್ಧನ್‌ ಅವರು ಬೆಂಬಲಿಸಿದ್ದಾರೆ ಎಂಬ ಆರೋಪದಡಿಯಲ್ಲಿ ಅವರನ್ನು ಇಲಾಖೆಯಿಂದ ಬಿಡುಗಡೆಗೊಳಿಸಲಾಗಿದೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಆಯುಕ್ತರಾಗಿರುವ ಐಎಎಸ್‌ ಅಧಿಕಾರಿ ಮಂಜುಶ್ರೀ ಅವರು ಹರ್ಷವರ್ಧನ್‌ ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ ಮಾತೃ ಇಲಾಖೆಯಾಗಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಬಿಡುಗಡೆಗೊಳಿಸಿದ್ದಾರೆ. ಈ ಸಂಬಂಧ 2021ರ ಜನವರಿ 21ರಂದು ಅಧಿಕೃತ ಜ್ಞಾಪನಾ ಪತ್ರ ಹೊರಡಿಸಿದ್ದಾರೆ. ಇದರ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

ಹಳೆಯ 100 ರು.ಮುಖಬೆಲೆಯ ನೋಟುಗಳು ಅಮಾನ್ಯ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ ಇತ್ತೀಚೆಗಷ್ಟೇ ಪ್ರಕಟಣೆ ಹೊರಡಿಸಿತ್ತು. ಇದರ ಬೆನ್ನಲ್ಲೇ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಅಧಿಕಾರಿಗಳ ವಾಟ್ಸಾಪ್‌ ಗ್ರೂಪ್‌ನಲ್ಲಿ ಹರ್ಷವರ್ಧನ್‌ ಅವರು ಸಂದೇಶವನ್ನು ಕಳಿಸಿದ್ದರು. ‘ನಾವು ಇನ್ನು ಮೇಲೆ ಎಫ್‌ಎಸ್‌ಎಸ್‌ಎಐ ಲೈಸೆನ್ಸ್‌ಗಾಗಿ ಪಿಂಕ್‌ ನೋಟ್‌ ಕೊಡಿ ಅಂತ ಪೇಪರ್‌ಗೆ ಹಾಕಿಸಬೇಕು,’ ಎಂದು ಸಂದೇಶ ಕಳಿಸಿದ್ದರು. ಈ ಸಂದೇಶದ ಸ್ಕ್ರೀನ್‌ ಶಾಟ್‌ ಸಹ ‘ದಿ ಫೈಲ್‌’ಗೆ ಲಭ್ಯವಾಗಿದೆ.

ಇಲಾಖೆ ಅಧಿಕಾರಿಗಳ ವಾಟ್ಸಾಪ್‌ ಗ್ರೂಪ್‌ನಲ್ಲಿ ಇದು ಚರ್ಚೆಗೆ ಒಳಗಾಗುತ್ತಿದ್ದಂತೆ ಗ್ರೂಪ್‌ನಲ್ಲಿದ್ದ ಇಲಾಖೆಯ ಆಯುಕ್ತರಾದ ಮಂಜುಶ್ರೀ ಅವರು ಇದನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ‘ಸದರಿ ಅಧಿಕಾರಿಗಳು ಭ್ರಷ್ಟಾಚಾರವನ್ನು ಬೆಂಬಲಿಸುತ್ತಿರುವುದು ಮೇಲ್ನೋಟಕ್ಕೆ ಕಂಡು ಬಂದಿರುತ್ತದೆ. ಸರ್ಕಾರದ ಅಧಿಕಾರಿಗಳಿಗೆ ತರವಲ್ಲದ ರೀತಿಯಲ್ಲಿ ವರ್ತಿಸಿರುತ್ತಾರೆ. ಈ ನಡವಳಿಕೆಯು ಕರ್ನಾಟಕ ನಾಗರಿಕ ಸೇವಾ (ಸಿಸಿಎ) ನಿಯಮಗಳು 1957ಗೆ ವಿರುದ್ಧವಾಗಿರುತ್ತದೆ. ಇಂತಹ ಅಧಿಕಾರಿಗಳ ಸೇವೆಯು ಈ ಇಲಾಖೆಗೆ ಅವಶ್ಯಕವಿರುವುದಿಲ್ಲ. ಹೀಗಾಗಿ ಇವರನ್ನು ಮಾತೃ ಇಲಾಖೆಯಾದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಬಿಡುಗಡೆಗೊಳಿಸಲಾಗಿದೆ,’ ಎಂದು ಜನವರಿ 21ರಂದು ಹೊರಡಿಸಿರುವ ಅಧಿಕೃತ ಜ್ಞಾಪನಾ ಪತ್ರದಲ್ಲಿ ವಿವರಿಸಿದ್ದಾರೆ.

ಡಾ ಹರ್ಷವಧನ್‌ ಅವರು ಮಂಡ್ಯ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 1995ರಲ್ಲಿ ವೈದ್ಯಾಧಿಕಾರಿಯಾಗಿ ಸೇವೆ ಆರಂಭಿಸಿದ್ದರು. ಇದಾದ ನಂತರ ತಾಲೂಕು ಆರೋಗ್ಯ ಅಧಿಕಾರಿ, ಉಪ ನಿರ್ದೇಶಕ, ಶಿಷ್ಟಾಚಾರ, ನೋಡಲ್‌ ಅಧಿಕಾರಿ ಆ ನಂತರ ಆಹಾರ ಸುರಕ್ಷತೆ ಇಲಾಖೆಯ ಜಂಟಿ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Hot this week

ಅನಂತ್‌ ನಾಗ್‌ ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಗೌರವ; 8 ವರ್ಷದ ಹಿಂದಿನ ವಿಸ್ತೃತ ಸಂದರ್ಶನ

ಬೆಂಗಳೂರು;  ಕನ್ನಡ ಚಿತ್ರರಂಗದ  ಹಿರಿಯ ನಟ ಅನಂತ್ ನಾಗ್ ಅವರಿಗೆ 2024ರ...

ಭೂಗತ ಸುರಂಗ ಮಾರ್ಗ; ರಿಯಾಯಿತಿ ಅವಧಿಯಲ್ಲೇ ಗರಿಷ್ಠ ಟೋಲ್‌ ಸಂಗ್ರಹಣೆ, ದರ ಪರಿಷ್ಕರಣೆಯ ಹಿಂದಿನ ರಹಸ್ಯ ಬಯಲು

ಬೆಂಗಳೂರು; ಭೂಗತ ಸುರಂಗ ಮಾರ್ಗದಲ್ಲಿ ರಿಯಾಯಿತಿ ಅವಧಿಯಲ್ಲಿ ಗರಿಷ್ಠ ಟೋಲ್‌ ಸಂಗ್ರಹಣೆ...

ಕೋವಿಡ್ ವೆಚ್ಚದಲ್ಲಿ ಅಕ್ರಮ ಆರೋಪ; ಐಎಎಸ್‌ ಗೌರವ್ ಗುಪ್ತಾ, ರಾಜೇಂದ್ರ ಚೋಳನ್ ಆರೋಪ ಮುಕ್ತ, ಕುನ್ಹಾ ವರದಿಗಿಲ್ಲ ಕಿಮ್ಮತ್ತು

ಬೆಂಗಳೂರು;  ಕೋವಿಡ್‌ 19ರ ಸಂದರ್ಭದಲ್ಲಿ ಸಕ್ಷಮ ಪ್ರಾಧಿಕಾರದ ಅಧಿಕಾರಿಗಳಿಂದ ಅನುಮೋದನೆ ಇಲ್ಲದೆಯೇ,...
Please Scan to make Your Contribution

Topics

ಅನಂತ್‌ ನಾಗ್‌ ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಗೌರವ; 8 ವರ್ಷದ ಹಿಂದಿನ ವಿಸ್ತೃತ ಸಂದರ್ಶನ

ಬೆಂಗಳೂರು;  ಕನ್ನಡ ಚಿತ್ರರಂಗದ  ಹಿರಿಯ ನಟ ಅನಂತ್ ನಾಗ್ ಅವರಿಗೆ 2024ರ...

ಭೂಗತ ಸುರಂಗ ಮಾರ್ಗ; ರಿಯಾಯಿತಿ ಅವಧಿಯಲ್ಲೇ ಗರಿಷ್ಠ ಟೋಲ್‌ ಸಂಗ್ರಹಣೆ, ದರ ಪರಿಷ್ಕರಣೆಯ ಹಿಂದಿನ ರಹಸ್ಯ ಬಯಲು

ಬೆಂಗಳೂರು; ಭೂಗತ ಸುರಂಗ ಮಾರ್ಗದಲ್ಲಿ ರಿಯಾಯಿತಿ ಅವಧಿಯಲ್ಲಿ ಗರಿಷ್ಠ ಟೋಲ್‌ ಸಂಗ್ರಹಣೆ...

ಕೋವಿಡ್ ವೆಚ್ಚದಲ್ಲಿ ಅಕ್ರಮ ಆರೋಪ; ಐಎಎಸ್‌ ಗೌರವ್ ಗುಪ್ತಾ, ರಾಜೇಂದ್ರ ಚೋಳನ್ ಆರೋಪ ಮುಕ್ತ, ಕುನ್ಹಾ ವರದಿಗಿಲ್ಲ ಕಿಮ್ಮತ್ತು

ಬೆಂಗಳೂರು;  ಕೋವಿಡ್‌ 19ರ ಸಂದರ್ಭದಲ್ಲಿ ಸಕ್ಷಮ ಪ್ರಾಧಿಕಾರದ ಅಧಿಕಾರಿಗಳಿಂದ ಅನುಮೋದನೆ ಇಲ್ಲದೆಯೇ,...

ಶಿವಮೊಗ್ಗ ಜಿಲ್ಲೆಯಿಂದ ಅತೀ ಹೆಚ್ಚು, ಕಲ್ಬುರ್ಗಿ ಜಿಲ್ಲೆಯಿಂದ ಅತೀ ಕಡಿಮೆ ಅನುದಾನಕ್ಕೆ ಬೇಡಿಕೆ; ಜಿಲ್ಲಾಡಳಿತ ನಿಷ್ಕ್ರೀಯವಾಯಿತೇ?

ಬೆಂಗಳೂರು;  ಜಿಲ್ಲಾ ವಾರ್ಷಿಕ ಕರಡು ಅಭಿವೃದ್ಧಿಯ ಅನುದಾನ ಬೇಡಿಕೆ ಮುಂದಿರಿಸಿರುವ ಇಲಾಖೆಗಳ ...

ಪೆರಿಫೆರಲ್ ರಿಂಗ್‌ ರೋಡ್‌- 2; 4,500 ಕೋಟಿ ಭೂ ಪರಿಹಾರ, 15,450 ಕೋಟಿ ಅಂದಾಜು ವೆಚ್ಚ, ಸರ್ಕಾರಕ್ಕೆ ಪರಿಷ್ಕೃತ ಯೋಜನೆ ಸಲ್ಲಿಕೆ

ಬೆಂಗಳೂರು; ರೈತರು ಮತ್ತು  ಸ್ಥಳೀಯರ ವಿರೋಧದ ನಡುವೆಯೂ ಫೆರಿಫೆರಲ್ ರಿಂಗ್‌ ರಸ್ತೆ (ಭಾಗ...

Related Articles

Popular Categories

error: Content is protected !!