Friday | April 10, 2026 |

ಲೈಸೆನ್ಸ್‌ಗೆ ‘ಪಿಂಕ್‌’ ನೋಟ್‌ ಕೊಡಿ; ವಾಟ್ಸಾಪ್‌ ಸಂದೇಶ ಕಳಿಸಿ ಭ್ರಷ್ಟಾಚಾರ ಬೆಂಬಲಿಸಿದ ಅಧಿಕಾರಿ

ಬೆಂಗಳೂರು; ಹಳೆಯ 100 ರು. ಮುಖಬೆಲೆ ನೋಟುಗಳನ್ನು ಅಮಾನ್ಯ ಮಾಡಲಾಗುತ್ತದೆ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ ಪತ್ರಿಕಾ ಪ್ರಕಟಣೆ ಹೊರಡಿಸಿದೆ ಎಂಬ ಸುದ್ದಿ ಹರಿದಾಡಿದ ಬೆನ್ನಲ್ಲೇ ಸರ್ಕಾರಿ ಇಲಾಖೆಗಳಲ್ಲಿರುವ ಲಂಚಕೋರ ಅಧಿಕಾರಿಗಳು 100ರ ಮುಖಬೆಲೆ ನೋಟುಗಳಿಗೆ ಬದಲಾಗಿ ಗುಲಾಬಿ ಬಣ್ಣ ಹೊಂದಿರುವ 2,000 ರು. ಮುಖಬೆಲೆ ನೋಟುಗಳನ್ನು ಕೊಡಿ ಎಂದು ಕೇಳಲಾರಂಭಿಸಿದ್ದಾರೆ!

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವ್ಯಾಪ್ತಿಯೊಳಗೆ ಬರುವ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಜಂಟಿ ಆಯುಕ್ತ ಡಾ ಹರ್ಷವರ್ಧನ್‌ ಎಂಬುವರು ಇಲಾಖೆಯ ಅಧಿಕಾರಿಗಳ ಗ್ರೂಪ್‌ಗೆ ಇಂತದ್ದೊಂದು ಸಂದೇಶವನ್ನು ಹರಿಬಿಟ್ಟಿದ್ದಾರೆ. ಸಂದೇಶವನ್ನು ಗ್ರೂಪ್‌ಗೆ ಹಾಕಿದ್ದರಿಂದ ಭ್ರಷ್ಟಾಚಾರವನ್ನು ಹರ್ಷವರ್ಧನ್‌ ಅವರು ಬೆಂಬಲಿಸಿದ್ದಾರೆ ಎಂಬ ಆರೋಪದಡಿಯಲ್ಲಿ ಅವರನ್ನು ಇಲಾಖೆಯಿಂದ ಬಿಡುಗಡೆಗೊಳಿಸಲಾಗಿದೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಆಯುಕ್ತರಾಗಿರುವ ಐಎಎಸ್‌ ಅಧಿಕಾರಿ ಮಂಜುಶ್ರೀ ಅವರು ಹರ್ಷವರ್ಧನ್‌ ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ ಮಾತೃ ಇಲಾಖೆಯಾಗಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಬಿಡುಗಡೆಗೊಳಿಸಿದ್ದಾರೆ. ಈ ಸಂಬಂಧ 2021ರ ಜನವರಿ 21ರಂದು ಅಧಿಕೃತ ಜ್ಞಾಪನಾ ಪತ್ರ ಹೊರಡಿಸಿದ್ದಾರೆ. ಇದರ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

ಹಳೆಯ 100 ರು.ಮುಖಬೆಲೆಯ ನೋಟುಗಳು ಅಮಾನ್ಯ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ ಇತ್ತೀಚೆಗಷ್ಟೇ ಪ್ರಕಟಣೆ ಹೊರಡಿಸಿತ್ತು. ಇದರ ಬೆನ್ನಲ್ಲೇ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಅಧಿಕಾರಿಗಳ ವಾಟ್ಸಾಪ್‌ ಗ್ರೂಪ್‌ನಲ್ಲಿ ಹರ್ಷವರ್ಧನ್‌ ಅವರು ಸಂದೇಶವನ್ನು ಕಳಿಸಿದ್ದರು. ‘ನಾವು ಇನ್ನು ಮೇಲೆ ಎಫ್‌ಎಸ್‌ಎಸ್‌ಎಐ ಲೈಸೆನ್ಸ್‌ಗಾಗಿ ಪಿಂಕ್‌ ನೋಟ್‌ ಕೊಡಿ ಅಂತ ಪೇಪರ್‌ಗೆ ಹಾಕಿಸಬೇಕು,’ ಎಂದು ಸಂದೇಶ ಕಳಿಸಿದ್ದರು. ಈ ಸಂದೇಶದ ಸ್ಕ್ರೀನ್‌ ಶಾಟ್‌ ಸಹ ‘ದಿ ಫೈಲ್‌’ಗೆ ಲಭ್ಯವಾಗಿದೆ.

ಇಲಾಖೆ ಅಧಿಕಾರಿಗಳ ವಾಟ್ಸಾಪ್‌ ಗ್ರೂಪ್‌ನಲ್ಲಿ ಇದು ಚರ್ಚೆಗೆ ಒಳಗಾಗುತ್ತಿದ್ದಂತೆ ಗ್ರೂಪ್‌ನಲ್ಲಿದ್ದ ಇಲಾಖೆಯ ಆಯುಕ್ತರಾದ ಮಂಜುಶ್ರೀ ಅವರು ಇದನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ‘ಸದರಿ ಅಧಿಕಾರಿಗಳು ಭ್ರಷ್ಟಾಚಾರವನ್ನು ಬೆಂಬಲಿಸುತ್ತಿರುವುದು ಮೇಲ್ನೋಟಕ್ಕೆ ಕಂಡು ಬಂದಿರುತ್ತದೆ. ಸರ್ಕಾರದ ಅಧಿಕಾರಿಗಳಿಗೆ ತರವಲ್ಲದ ರೀತಿಯಲ್ಲಿ ವರ್ತಿಸಿರುತ್ತಾರೆ. ಈ ನಡವಳಿಕೆಯು ಕರ್ನಾಟಕ ನಾಗರಿಕ ಸೇವಾ (ಸಿಸಿಎ) ನಿಯಮಗಳು 1957ಗೆ ವಿರುದ್ಧವಾಗಿರುತ್ತದೆ. ಇಂತಹ ಅಧಿಕಾರಿಗಳ ಸೇವೆಯು ಈ ಇಲಾಖೆಗೆ ಅವಶ್ಯಕವಿರುವುದಿಲ್ಲ. ಹೀಗಾಗಿ ಇವರನ್ನು ಮಾತೃ ಇಲಾಖೆಯಾದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಬಿಡುಗಡೆಗೊಳಿಸಲಾಗಿದೆ,’ ಎಂದು ಜನವರಿ 21ರಂದು ಹೊರಡಿಸಿರುವ ಅಧಿಕೃತ ಜ್ಞಾಪನಾ ಪತ್ರದಲ್ಲಿ ವಿವರಿಸಿದ್ದಾರೆ.

ಡಾ ಹರ್ಷವಧನ್‌ ಅವರು ಮಂಡ್ಯ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 1995ರಲ್ಲಿ ವೈದ್ಯಾಧಿಕಾರಿಯಾಗಿ ಸೇವೆ ಆರಂಭಿಸಿದ್ದರು. ಇದಾದ ನಂತರ ತಾಲೂಕು ಆರೋಗ್ಯ ಅಧಿಕಾರಿ, ಉಪ ನಿರ್ದೇಶಕ, ಶಿಷ್ಟಾಚಾರ, ನೋಡಲ್‌ ಅಧಿಕಾರಿ ಆ ನಂತರ ಆಹಾರ ಸುರಕ್ಷತೆ ಇಲಾಖೆಯ ಜಂಟಿ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Hot this week

ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ; ಅಧಿಕಾರಿಗಳ ವಿರುದ್ಧ ದಾಖಲಾಗದ ಎಫ್‌ಐಆರ್, ವರದಿ ಸಲ್ಲಿಸಲು ಸೂಚನೆ

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ತವರು ಕ್ಷೇತ್ರದಲ್ಲಿ...

13 ಪರ್ಸೆಂಟ್ ಕಮಿಷನ್‌ಗೆ ಬೇಡಿಕೆ; ಗುತ್ತಿಗೆದಾರರ ಸಂಘದಿಂದ ಮತ್ತೊಂದು ಪತ್ರ, ಕೋರ್ಟ್‌ ಕದ ತಟ್ಟಿದ ಗುತ್ತಿಗೆದಾರರು

ಬೆಂಗಳೂರು;  ಮಹಾತ್ಮಗಾಂಂಧಿ ನಗರ ವಿಕಾಸ ಯೋಜನೆ -1 ರ ಅಡಿಯಲ್ಲಿ ಕಾಮಗಾರಿ...

ಬಳಕೆಯಾಗದ ಅನುದಾನ; ಸರ್ಕಾರದ ಬೊಕ್ಕಸಕ್ಕೆ ಸಂದಾಯವಾಗಿಲ್ಲ 10,546.42 ಕೋಟಿ, ಸಿಎಜಿ ಆಕ್ಷೇಪಣೆ

ಬೆಂಗಳೂರು; ಕೃಷಿ ಮತ್ತು ತೋಟಗಾರಿಕೆ ಇಲಾಖೆ ಸೇರಿದಂತೆ 2024-25ನೇ ಸಾಲಿನಲ್ಲಿ   ಒಟ್ಟು...

ತರಕಾರಿ ಬೀಜಗಳ ಕಿಟ್ ವಿತರಣೆ; ದಾಸ್ತಾನು ಇಲ್ಲದ ಏಜೆನ್ಸಿಗೆ 4 ಜಿ ವಿನಾಯಿತಿ, ಬಹುಕೋಟಿ ಅಕ್ರಮ, ಭ್ರಷ್ಟಾಚಾರ ಸುಳಿಯಲ್ಲಿ ಸರ್ಕಾರ?

ಬೆಂಗಳೂರು; 2023-24 ಮತ್ತು 2025-26ನೇ ಸಾಲಿನವರೆಗೆ  ತೋಟಗಾರಿಕೆ ಇಲಾಖೆಯು ಜಾರಿಗೊಳಿಸಿದ್ದ  ...

Topics

ಬಳಕೆಯಾಗದ ಅನುದಾನ; ಸರ್ಕಾರದ ಬೊಕ್ಕಸಕ್ಕೆ ಸಂದಾಯವಾಗಿಲ್ಲ 10,546.42 ಕೋಟಿ, ಸಿಎಜಿ ಆಕ್ಷೇಪಣೆ

ಬೆಂಗಳೂರು; ಕೃಷಿ ಮತ್ತು ತೋಟಗಾರಿಕೆ ಇಲಾಖೆ ಸೇರಿದಂತೆ 2024-25ನೇ ಸಾಲಿನಲ್ಲಿ   ಒಟ್ಟು...

13,646.51 ಕೋಟಿ ಹೆಚ್ಚುವರಿ ವೆಚ್ಚ; ಗೃಹ ಲಕ್ಷ್ಮಿಯದ್ದೇ ಸಿಂಹಪಾಲು, ಹೆಚ್ಚುವರಿ ಖರ್ಚಿಗೆ ಕಾರಣಗಳೇ ಇಲ್ಲ, ಸಿಎಜಿ ಆಕ್ಷೇಪ

ಬೆಂಗಳೂರು;  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಇಲಾಖೆಯು 2024-25ನೇ ಸಾಲಿನಲ್ಲಿ ...

2,298 ಕೋಟಿ ರು ಮೊತ್ತದ ಬಿಲ್‌ ಬಾಕಿ; 276 ಕಾಮಗಾರಿ ಅಪೂರ್ಣ, ಬೊಕ್ಕಸ ಬರಿದಾಯಿತೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು ಕೈಗೆತ್ತಿಕೊಂಡಿದ್ದ  ಕಾಮಗಾರಿಗಳು ನಿಗದಿತ ಅವಧಿಯಲ್ಲಿ...

ಪುಸ್ತಕಗಳ ಖರೀದಿಯಲ್ಲಿ ವಂಚನೆ, ಭ್ರಷ್ಟಾಚಾರ ಆರೋಪ;ಎಚ್ ಟಿ ಪೋತೆ ಅವರ ವಿರುದ್ಧ ಕ್ರಮಕ್ಕೆ ಮೀನಮೇಷ

ಬೆಂಗಳೂರು;  ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ...

Related Articles

Popular Categories

error: Content is protected !!