Thursday | March 26, 2026 |

ಹಣಕ್ಕೆ ಬೇಡಿಕೆ; ಎಸಿಬಿ ಮೆಟ್ಟಿಲೇರಿದ ಸಚಿವ ಅಶೋಕ್‌ ಆಪ್ತ ಸಹಾಯಕ ಗಂಗಾಧರ್‌ ಪ್ರಕರಣ

Support THE-FILE

spot_img

ಬೆಂಗಳೂರು; ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು ಎಂಬ ಆರೋಪಕ್ಕೆ ಒಳಗಾಗಿರುವ ಸಚಿವ ಆರ್‌ ಅಶೋಕ್‌ ಅವರ ಆಪ್ತ ಸಹಾಯಕ ಗಂಗಾಧರ್‌ ಅವರ ವಿರುದ್ಧ ಶೃಂಗೇರಿ ಪಟ್ಟಣ ಪೊಲೀಸರು ಎಫ್‌ಐಆರ್‌ ದಾಖಲಿಸಿರುವ ಬೆನ್ನಲ್ಲೇ ಸಬ್‌ ರಿಜಿಸ್ಟ್ರಾರ್‌ ಚೆಲುವರಾಜು ಅವರು ಭ್ರಷ್ಟಾಚಾರ ನಿಗ್ರಹ ದಳಕ್ಕೂ ದೂರು ದಾಖಲಿಸಿದ್ದಾರೆ.

ಶೃಂಗೇರಿ ಠಾಣೆಯಲ್ಲಿ ಈಗಾಗಲೇ ಐಪಿಸಿ 506ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಗಂಗಾಧರ್‌ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ನ್ನು ಎಸಿಬಿ ಠಾಣೆಗೆ ವರ್ಗಾಯಿಸಿಕೊಳ್ಳಬೇಕು ಎಂದು ಚೆಲುವರಾಜು ಅವರು ದೂರಿನಲ್ಲಿ ಕೋರಿದ್ದಾರೆ.

‘ಎಫ್‌ಐಆರ್‌ನಲ್ಲಿ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ನಮೂದಿಸಿರುವ ಅಪರಾಧ ಕೃತ್ಯ ಹಾಗೂ ಐಪಿಸಿ ಅಡಿಯಲ್ಲಿ ನಮೂದಿಸಿರುವ ಅಪರಾಧ ಕೃತ್ಯವನ್ನು ಸೇರ್ಪಡಿಸಿ ತನಿಖೆ ನಡೆಸಬೇಕು ಎಂದು ದೂರಿನಲ್ಲಿ ಕೋರಿರುವುದು ತಿಳಿದು ಬಂದಿದೆ. ಎಸಿಬಿಗೆ ಸಲ್ಲಿಸಿರುವ ದೂರಿನ ಪ್ರತಿ ‘ದಿ ಫೈಲ್‌’ಗೆ ಲಭ್ಯವಾಗಿದೆ.

ಶೃಂಗೇರಿ ಪಟ್ಟಣದ ಸಬ್‌ ರಿಜಿಸ್ಟ್ರಾರ್‌ ಚೆಲುವರಾಜು ಅವರು ಸಚಿವ ಆರ್‌ ಅಶೋಕ್‌ ಅವರ ಆಪ್ತ ಸಹಾಯಕ ಗಂಗಾಧರ್‌ ಅವರ ವಿರುದ್ಧ ಹಣಕ್ಕಾಗಿ ಬೇಡಿಕೆ ಇಟ್ಟಿರುವ ಬಗ್ಗೆ ದೂರು ಸಲ್ಲಿಸಿದ್ದರು. 72 ಗಂಟೆಗಳಾದರೂ ಕ್ರಮ ಕೈಗೊಳ್ಳದ ಶೃಂಗೇರಿ ಪೊಲೀಸರು ಎಫ್‌ಐಆರ್‌ ದಾಖಲಿಸಲು ಮೀನಮೇಷ ಎಣಿಸುತ್ತಿದ್ದರು. ಈ ಕುರಿತು ‘ದಿ ಫೈಲ್‌’ ವರದಿ ಪ್ರಕಟಿಸಿತ್ತು. ವರದಿ ಪ್ರಕಟವಾದ ಬೆನ್ನಲ್ಲೆ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದನ್ನು ಸ್ಮರಿಸಬಹುದು.

ಪ್ರಕರಣದ ಹಿನ್ನೆಲೆ

ಶೃಂಗೇರಿಯ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಅಕ್ಷರ ಮಿತ್ರ ಕಾರ್ಯಕ್ರಮದಲ್ಲಿ ಸಚಿವ ಆರ್‌ ಅಶೋಕ್‌ ಅವರು ಭಾಗವಹಿಸಿದ್ದರು. 2021ರ ಜನವರಿ 21ರಂದು ಕಂದಾಯ ಸಚಿವರ ಪ್ರವಾಸ ವೇಳಾಪಟ್ಟಿಯನ್ನು ಉಪ ನೋಂದಣಾಧಿಕಾರಿ ಎಚ್‌ ಎಸ್‌ ಚೆಲುವರಾಜು ಅವರ ಖಾಸಗಿ ಮೊಬೈಲ್‌ ನಂಬರ್‌ 9741114815ಗೆ ಸಂದೇಶ ಕಳಿಸಲಾಗಿತ್ತು. ಆದರೆ ಸಂದೇಶ ಕಳಿಸಿದವ ಇವರಿಗೆ ಪರಿಚಯವಿರಲಿಲ್ಲ. ಇದಾಗಿ 3 ದಿನದ ನಂತರ 2021ರ ಜನವರಿ 24ರಂದು ಸಚಿವ ಆರ್‌ ಅಶೋಕ್‌ ಅವರ ಆಪ್ತ ಸಹಾಯಕ ಎಂದು ಪರಿಚಯಿಸಿಕೊಂಡ ಗಂಗಾಧರ್‌ ಎಂಬ ವ್ಯಕ್ತಿಯು ತಮ್ಮನ್ನು ಮತ್ತು ಸಚಿವ ಅಶೋಕ್‌ ಅವರನ್ನು ಭೇಟಿ ಆಗಬೇಕು ಎಂದು ಸೂಚಿಸಿದ್ದರು ಎಂದು ಠಾಣೆಗೆ ಸಲ್ಲಿಸಿರುವ ದೂರಿನಲ್ಲಿ ಆರೋಪಿಸಿದ್ದಾರೆ.

2021ರ ಜನವರಿ 24ರಂದು ಸಚಿವ ಆರ್‌ ಅಶೋಕ್‌ ಅವರನ್ನು ಭೇಟಿಯಾಗಲು ಶರಂಗೇರಿಯ ಆದಿಚುಂಚನಗಿರಿ ಸಮುದಾಯ ಭವನಕ್ಕೆ ತೆರಳಿದ್ದ ವೇಳೆಯಲ್ಲಿ ಗಂಗಾಧರ ಎಂಬಾತ ತನಗೆ ಹಣ ನೀಡಬೇಕು ಎಂದು ಬೇಡಿಕೆ ಇಟ್ಟರು ಎಂದು ದೂರಿದ್ದಾರೆ. ಈ ಬಗ್ಗೆ ನನಗೆ ಯಾರಿಗೂ ಈ ರೀತಿ ಹಣ ನೀಡುವ ಅಥವಾ ಯಾರಿಂದಲೂ ಹಣ ಪಡೆಯುವ ಅಭ್ಯಾಸ ನನಗೆ ಇಲ್ಲ ಎಂದು ಸ್ಥಳದಲ್ಲಿಯೇ ತಿಳಿಸಿ ಆತನ ಬೇಡಿಕೆಯನ್ನು ತಿರಸ್ಕರಿಸಿದ್ದೆ ಎಂದು ವಿವರಿಸಿದ್ದಾರೆ.

ಅದೇ ದಿನ ಗಂಗಾಧರ್‌ (ದೂರವಾಣಿ ಸಂಖ್ಯೆ ; 7760666222) 8-30ರ ಸಮಯದಲ್ಲಿ ತನ್ನ ಮೊಬೈಲ್‌ನಿಂದ ವಾಟ್ಸಾಪ್‌ ಧ್ವನಿ ಕರೆ ಮಾಡಿದ್ದ ಎಂದು ದೂರಿನಲ್ಲಿ ಹೇಳಿರುವ ಚೆಲುವರಾಜು ಅವರು ಗಂಗಾಧರ್‌ ಎಂಬುವರು ಸರ್ಕಾರಿ ಅಧಿಕಾರಿಯನ್ನು ಅಕ್ರಮ ಹಣಕ್ಕಾಗಿ ಬಳಸಿಕೊಳ್ಳಲು ಪ್ರಯತ್ನಿಸಿದ್ದಾರೆ ಎಂದು ಚೆಲುವರಾಜು ಅವರು ಆರೋಪಿಸಿದ್ದನ್ನು ಸ್ಮರಿಸಬಹುದು.

Hot this week

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

Topics

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

ಮೋಸದ ವಹಿವಾಟು, ಹೆಚ್ಚಿನ ಪಾವತಿ, ಅಕ್ರಮ ವೆಚ್ಚ; ನರೇಗಾದ ಮತ್ತೊಂದು ಮುಖ ಬಯಲು ಮಾಡಿದ ಸಿಎಜಿ

ಬೆಂಗಳೂರು; ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಂಡಿದ್ದ ಕಾಮಗಾರಿಗಳು...

ಗೃಹಜ್ಯೋತಿ; 23,823.06 ಮಿಲಿಯನ್ ಯೂನಿಟ್ ವಿದ್ಯುತ್ ಬಳಕೆ, ಎಸ್ಕಾಂಗಳಿಗೆ 631.75 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಗೃಹ ಜ್ಯೋತಿ ಯೋಜನೆ ಅನುಷ್ಠಾನಗೊಳಿಸಿರುವ ವಿದ್ಯುತ್ ಸರಬರಾಜು ಕಂಪನಿಗಳಿಗೆ ಸರ್ಕಾರವು...

ವಿನಾಶಕಾರಿ ಭೂ ಕುಸಿತ; ಕೊಡಗು ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದಲ್ಲಿ ಸಭೆಯೇ ನಡೆದಿಲ್ಲ, ಪುರಾವೆಯೂ ಇಲ್ಲ

ಬೆಂಗಳೂರು; ಕೊಡಗಿನಲ್ಲಿ 2018-19ನೇ ಸಾಲಿನಲ್ಲಿ  ಭಾರೀ ಪ್ರಮಾಣದ ವಿನಾಶಕಾರಿ ಭೂ ಕುಸಿತಗಳಾಗಿದ್ದರೂ ...

Related Articles

Popular Categories

error: Content is protected !!