Saturday | May 9, 2026 |

ಆರಂಭಗೊಳ್ಳದ ಕಾಮಗಾರಿ; 65 ಕೋಟಿ ಬಿಡುಗಡೆಗೆ ಸಿಎಂ ಸಚಿವಾಲಯ ಒತ್ತಡ

ಬೆಂಗಳೂರು; ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಬಹುತೇಕ ಜಿಲ್ಲಾ ಪಂಚಾಯ್ತಿಗಳು ಕ್ರಿಯಾ ಯೋಜನೆಗಳನ್ನೇ ರೂಪಿಸಿಲ್ಲ. ಹಾಗೆಯೇ ಕಾಮಗಾರಿಯನ್ನೂ ಅನುಷ್ಠಾನಗೊಳಿಸಿಲ್ಲ. ಆದರೂ ಕಾಮಗಾರಿ ಹೆಸರಿನಲ್ಲಿ ಕೋಟ್ಯಂತರ ರು. ಮೊತ್ತದ ಅನುದಾನ ಬಿಡುಗಡೆಗೊಳಿಸಲು ಮುಖ್ಯಮಂತ್ರಿಗಳ ಸಚಿವಾಲಯವು ಆರ್ಥಿಕ ಇಲಾಖೆ ಮೇಲೆ ಒತ್ತಡ ಹೇರುತ್ತಿದೆ ಎಂಬ ಬಲವಾದ ಆರೋಪ ಕೇಳಿ ಬಂದಿದೆ.

ಕ್ರಿಯಾ ಯೋಜನೆ ತಯಾರಾಗದಿದ್ದ ಮೇಲೆ ಅನುದಾನವನ್ನು ಹೇಗೆ ಬಿಡುಗಡೆ ಮಾಡಬೇಕು ಎಂದು ಆರ್ಥಿಕ ಇಲಾಖೆ ಅಧಿಕಾರಿಗಳು ತಲೆ ಮೇಲೆ ಕೈಹೊತ್ತು ಕುಳಿತಿದ್ದರೆ, ಇತ್ತ ಮುಖ್ಯಮಂತ್ರಿಗಳ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯ ರಸ್ತೆ ಕಾಮಗಾರಿ ಸಂಬಂಧಿಸಿದಂತೆ 65 ಕೋಟಿ ರು.ಅನುದಾನ ಬಿಡುಗಡೆ ಮಾಡಲು ಆರ್ಥಿಕ ಇಲಾಖೆ ಮೇಲೆ ನಿರಂತರ ಒತ್ತಡ ಹಾಕುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿ ಅಧ್ಯಕ್ಷರಾಗಿರುವ ಮರಿಸ್ವಾಮಿ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕುಟುಂಬದ ನಿಕಟವರ್ತಿಗಳು ಎಂಬ ಒಂದೇ ಕಾರಣಕ್ಕೆ ಮುಖ್ಯಮಂತ್ರಿಗಳ ಸಚಿವಾಲಯದ ಹಿರಿಯ ಅಧಿಕಾರಿ ಮುತುವರ್ಜಿ ವಹಿಸುತ್ತಿದ್ದಾರೆ ಎಂದು ಗೊತ್ತಾಗಿದೆ.

ಕಾಮಗಾರಿಗೆ ಅನುಮೋದನೆ ದೊರೆತಿದೆಯಾದರೂ ಇದನ್ನು ತುಂಡು ಗುತ್ತಿಗೆ ಕೊಡಬೇಕೇ ಅಥವಾ ನೇರವಾಗಿ ಟೆಂಡರ್‌ ಕರೆಯಬೇಕೆ ಎಂಬ ಬಗ್ಗೆ ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿಯೂ ನಿರ್ಧರಿಸಿಲ್ಲ. ಕಾಮಗಾರಿ ನಡೆಸಲು ಟೆಂಡರ್‌ ಪ್ರಕ್ರಿಯೆ ನಡೆಯದೆಯೇ ಅಷ್ಟೊಂದು ಮೊತ್ತವನ್ನು ಏಕಾಏಕಿ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಆರ್ಥಿಕ ಇಲಾಖೆ ಹೇಳುತ್ತಿದೆ. ಆದರೂ ಮುಖ್ಯಮಂತ್ರಿಗಳ ಸಚಿವಾಲಯವು ಹಣ ಬಿಡುಗಡೆ ಸಂಬಂಧ ಒತ್ತಡವನ್ನು ಮುಂದುವರೆಸಿದೆ.

ಕಳೆದ ಬಾರಿ ಬಿದ್ದ ಭಾರೀ ಮಳೆಯಿಂದ ಉತ್ತರ ಕರ್ನಾಟಕದ ಬಹುತೇಕ ಗ್ರಾಮೀಣ ಭಾಗಗಳಲ್ಲಿ ರಸ್ತೆಗಳು ಹಾಳಾಗಿವೆ. ಬೊಕ್ಕಸದಲ್ಲಿ ಹಣವಿಲ್ಲ ಎಂಬ ನೆಪವನ್ನೊಡ್ಡುತ್ತಿರುವ ಸರ್ಕಾರ ರಸ್ತೆ ದುರಸ್ತಿಗೆ ಅನುದಾನ ನೀಡುತ್ತಿಲ್ಲ. ಅಲ್ಲದೆ ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸಿರುವ ಗುತ್ತಿಗೆದಾರರಿಗೆ 1,600 ಕೋಟಿ ರು.ಗಳನ್ನು ಬಾಕಿ ಉಳಿಸಿಕೊಂಡಿದೆ.

ಹೀಗಿರುವಾಗ ಕ್ರಿಯಾ ಯೋಜನೆಯನ್ನೇ ತಯಾರಿಸದ ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿಗೆ 65 ಕೋಟಿ ರು. ಬಿಡುಗಡೆ ಮಾಡಿಸಲು ಮುಖ್ಯಮಂತ್ರಿಗಳ ಸಚಿವಾಲಯವು ತರಾತುರಿಯಿಂದ ಓಡಾಡುತ್ತಿರುವುದು ಸಂಶಯಗಳಿಗೆ ದಾರಿಮಾಡಿಕೊಟ್ಟಿದೆ.

Hot this week

120 ಎಕರೆ ಗೋಮಾಳ ಕಬಳಿಕೆ ಪ್ರಕರಣ; ಕಂದಾಯ ನಿರೀಕ್ಷಕರ ವರದಿಯನ್ನೇ ಮುಚ್ಚಿಟ್ಟ ತಹಶೀಲ್ದಾರ್, ಸಚಿವರ ಒತ್ತಡ?

ಬೆಂಗಳೂರು; ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ ಗ್ರಾಮದ ವಿವಿಧ ಸರ್ವೆ ನಂಬರ್‍‌ಗಳಲ್ಲಿರುವ...

ಕೌನ್ಸಲಿಂಗ್‌ಗೂ ಮುನ್ನವೇ ಪಿಡಿಒಗಳ ವರ್ಗಾವಣೆ; ಹಣ ಕೊಟ್ಟವರಿಗೆ ಆದೇಶ, ಕೊಡದವರಿಗೆ ಕೌನ್ಸಲಿಂಗ್, ಆರೋಪ

ಬೆಂಗಳೂರು; ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗಳ ವರ್ಗಾವಣೆಯನ್ನು ಕೌನ್ಸಲಿಂಗ್‌ ಮೂಲಕವೇ ನಡೆಸಲಾಗುವುದು ಎಂದು...

ಪಿಟಿಸಿಎಲ್, ಗೋಮಾಳ, ಅರಣ್ಯ ಜಮೀನು ಸ್ವರೂಪ ಮರೆಮಾಚಿ ಪರಿವರ್ತನೆ; ದಿ ಫೈಲ್ ವರದಿ ಬೆನ್ನಲ್ಲೇ ಸರ್ಕಾರದ ಮೆಟ್ಟಿಲೇರಿದ ಕೆಆರ್‍‌ಎಸ್‌

ಬೆಂಗಳೂರು; ಪಿಟಿಸಿಎಲ್,  ಸರ್ಕಾರಿ ಗೋಮಾಳ ಮತ್ತು ಅರಣ್ಯ ಪ್ರದೇಶದ ಜಮೀನುಗಳ ಸ್ವರೂಪವನ್ನೇ...

30 ವರ್ಷಗಳ ನಂತರ ಎಲ್‌ಎಸಿ ಪ್ರಕರಣ ದಾಖಲು; ಸರ್ಕಾರದ ಬೊಕ್ಕಸಕ್ಕೆ 80 ಕೋಟಿ ಆರ್ಥಿಕ ಹೊರೆ

ಬೆಂಗಳೂರು; ಮಂಡ್ಯ ತಾಲೂಕು ಕೊತ್ತತ್ತಿ ಹೋಬಳಿಯ ಗುತ್ತಲು ಗ್ರಾಮದಲ್ಲಿ 30 ವರ್ಷಗಳ...
Please Scan to make Your Contribution

Topics

120 ಎಕರೆ ಗೋಮಾಳ ಕಬಳಿಕೆ ಪ್ರಕರಣ; ಕಂದಾಯ ನಿರೀಕ್ಷಕರ ವರದಿಯನ್ನೇ ಮುಚ್ಚಿಟ್ಟ ತಹಶೀಲ್ದಾರ್, ಸಚಿವರ ಒತ್ತಡ?

ಬೆಂಗಳೂರು; ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ ಗ್ರಾಮದ ವಿವಿಧ ಸರ್ವೆ ನಂಬರ್‍‌ಗಳಲ್ಲಿರುವ...

ಕೌನ್ಸಲಿಂಗ್‌ಗೂ ಮುನ್ನವೇ ಪಿಡಿಒಗಳ ವರ್ಗಾವಣೆ; ಹಣ ಕೊಟ್ಟವರಿಗೆ ಆದೇಶ, ಕೊಡದವರಿಗೆ ಕೌನ್ಸಲಿಂಗ್, ಆರೋಪ

ಬೆಂಗಳೂರು; ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗಳ ವರ್ಗಾವಣೆಯನ್ನು ಕೌನ್ಸಲಿಂಗ್‌ ಮೂಲಕವೇ ನಡೆಸಲಾಗುವುದು ಎಂದು...

ಪಿಟಿಸಿಎಲ್, ಗೋಮಾಳ, ಅರಣ್ಯ ಜಮೀನು ಸ್ವರೂಪ ಮರೆಮಾಚಿ ಪರಿವರ್ತನೆ; ದಿ ಫೈಲ್ ವರದಿ ಬೆನ್ನಲ್ಲೇ ಸರ್ಕಾರದ ಮೆಟ್ಟಿಲೇರಿದ ಕೆಆರ್‍‌ಎಸ್‌

ಬೆಂಗಳೂರು; ಪಿಟಿಸಿಎಲ್,  ಸರ್ಕಾರಿ ಗೋಮಾಳ ಮತ್ತು ಅರಣ್ಯ ಪ್ರದೇಶದ ಜಮೀನುಗಳ ಸ್ವರೂಪವನ್ನೇ...

30 ವರ್ಷಗಳ ನಂತರ ಎಲ್‌ಎಸಿ ಪ್ರಕರಣ ದಾಖಲು; ಸರ್ಕಾರದ ಬೊಕ್ಕಸಕ್ಕೆ 80 ಕೋಟಿ ಆರ್ಥಿಕ ಹೊರೆ

ಬೆಂಗಳೂರು; ಮಂಡ್ಯ ತಾಲೂಕು ಕೊತ್ತತ್ತಿ ಹೋಬಳಿಯ ಗುತ್ತಲು ಗ್ರಾಮದಲ್ಲಿ 30 ವರ್ಷಗಳ...

ಶೌಚಾಲಯ, ಸ್ನಾನದ ಗೃಹ, ಮೂತ್ರಾಲಯ ಶುಲ್ಕ ವಸೂಲಿ; ಸುಲಭ್‌ ಇಂಟರ್ ನ್ಯಾಷನಲ್‌, ಬಿಬಿಎಂಪಿ ಖಾತೆಗೆ ಹಣ ಜಮೆ ಮಾಡಿದೆಯೇ, ನುಂಗಿದೆಯೇ?

ಬೆಂಗಳೂರು;  ಸುಲಭ್ ಶೌಚಾಲಯ ಮತ್ತು ಸಾರ್ವಜನಿಕ ಮೂತ್ರಾಲಯ  ನಿರ್ವಹಣೆಗೆ ಸಂಬಂಧಿಸಿದಂತೆ ಗುತ್ತಿಗೆದಾರರು...

ಬಿಜೆಪಿ ಅವಧಿಯಲ್ಲಿದ್ದ 120 ಎಕರೆ ಗೋಮಾಳ, ಕಾಂಗ್ರೆಸ್‌ ಅವಧಿಯಲ್ಲಿ ಕಣ್ಮರೆ!; 24 ಕೋಟಿ ಮೌಲ್ಯದ ಜಮೀನು, ಖಾಸಗಿ ವ್ಯಕ್ತಿಗಳ ಪಾಲು?

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ...

Related Articles

Popular Categories

error: Content is protected !!