Saturday | August 22, 2026 |

ಆರಂಭಗೊಳ್ಳದ ಕಾಮಗಾರಿ; 65 ಕೋಟಿ ಬಿಡುಗಡೆಗೆ ಸಿಎಂ ಸಚಿವಾಲಯ ಒತ್ತಡ

ಬೆಂಗಳೂರು; ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಬಹುತೇಕ ಜಿಲ್ಲಾ ಪಂಚಾಯ್ತಿಗಳು ಕ್ರಿಯಾ ಯೋಜನೆಗಳನ್ನೇ ರೂಪಿಸಿಲ್ಲ. ಹಾಗೆಯೇ ಕಾಮಗಾರಿಯನ್ನೂ ಅನುಷ್ಠಾನಗೊಳಿಸಿಲ್ಲ. ಆದರೂ ಕಾಮಗಾರಿ ಹೆಸರಿನಲ್ಲಿ ಕೋಟ್ಯಂತರ ರು. ಮೊತ್ತದ ಅನುದಾನ ಬಿಡುಗಡೆಗೊಳಿಸಲು ಮುಖ್ಯಮಂತ್ರಿಗಳ ಸಚಿವಾಲಯವು ಆರ್ಥಿಕ ಇಲಾಖೆ ಮೇಲೆ ಒತ್ತಡ ಹೇರುತ್ತಿದೆ ಎಂಬ ಬಲವಾದ ಆರೋಪ ಕೇಳಿ ಬಂದಿದೆ.

ಕ್ರಿಯಾ ಯೋಜನೆ ತಯಾರಾಗದಿದ್ದ ಮೇಲೆ ಅನುದಾನವನ್ನು ಹೇಗೆ ಬಿಡುಗಡೆ ಮಾಡಬೇಕು ಎಂದು ಆರ್ಥಿಕ ಇಲಾಖೆ ಅಧಿಕಾರಿಗಳು ತಲೆ ಮೇಲೆ ಕೈಹೊತ್ತು ಕುಳಿತಿದ್ದರೆ, ಇತ್ತ ಮುಖ್ಯಮಂತ್ರಿಗಳ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯ ರಸ್ತೆ ಕಾಮಗಾರಿ ಸಂಬಂಧಿಸಿದಂತೆ 65 ಕೋಟಿ ರು.ಅನುದಾನ ಬಿಡುಗಡೆ ಮಾಡಲು ಆರ್ಥಿಕ ಇಲಾಖೆ ಮೇಲೆ ನಿರಂತರ ಒತ್ತಡ ಹಾಕುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿ ಅಧ್ಯಕ್ಷರಾಗಿರುವ ಮರಿಸ್ವಾಮಿ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕುಟುಂಬದ ನಿಕಟವರ್ತಿಗಳು ಎಂಬ ಒಂದೇ ಕಾರಣಕ್ಕೆ ಮುಖ್ಯಮಂತ್ರಿಗಳ ಸಚಿವಾಲಯದ ಹಿರಿಯ ಅಧಿಕಾರಿ ಮುತುವರ್ಜಿ ವಹಿಸುತ್ತಿದ್ದಾರೆ ಎಂದು ಗೊತ್ತಾಗಿದೆ.

ಕಾಮಗಾರಿಗೆ ಅನುಮೋದನೆ ದೊರೆತಿದೆಯಾದರೂ ಇದನ್ನು ತುಂಡು ಗುತ್ತಿಗೆ ಕೊಡಬೇಕೇ ಅಥವಾ ನೇರವಾಗಿ ಟೆಂಡರ್‌ ಕರೆಯಬೇಕೆ ಎಂಬ ಬಗ್ಗೆ ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿಯೂ ನಿರ್ಧರಿಸಿಲ್ಲ. ಕಾಮಗಾರಿ ನಡೆಸಲು ಟೆಂಡರ್‌ ಪ್ರಕ್ರಿಯೆ ನಡೆಯದೆಯೇ ಅಷ್ಟೊಂದು ಮೊತ್ತವನ್ನು ಏಕಾಏಕಿ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಆರ್ಥಿಕ ಇಲಾಖೆ ಹೇಳುತ್ತಿದೆ. ಆದರೂ ಮುಖ್ಯಮಂತ್ರಿಗಳ ಸಚಿವಾಲಯವು ಹಣ ಬಿಡುಗಡೆ ಸಂಬಂಧ ಒತ್ತಡವನ್ನು ಮುಂದುವರೆಸಿದೆ.

ಕಳೆದ ಬಾರಿ ಬಿದ್ದ ಭಾರೀ ಮಳೆಯಿಂದ ಉತ್ತರ ಕರ್ನಾಟಕದ ಬಹುತೇಕ ಗ್ರಾಮೀಣ ಭಾಗಗಳಲ್ಲಿ ರಸ್ತೆಗಳು ಹಾಳಾಗಿವೆ. ಬೊಕ್ಕಸದಲ್ಲಿ ಹಣವಿಲ್ಲ ಎಂಬ ನೆಪವನ್ನೊಡ್ಡುತ್ತಿರುವ ಸರ್ಕಾರ ರಸ್ತೆ ದುರಸ್ತಿಗೆ ಅನುದಾನ ನೀಡುತ್ತಿಲ್ಲ. ಅಲ್ಲದೆ ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸಿರುವ ಗುತ್ತಿಗೆದಾರರಿಗೆ 1,600 ಕೋಟಿ ರು.ಗಳನ್ನು ಬಾಕಿ ಉಳಿಸಿಕೊಂಡಿದೆ.

ಹೀಗಿರುವಾಗ ಕ್ರಿಯಾ ಯೋಜನೆಯನ್ನೇ ತಯಾರಿಸದ ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿಗೆ 65 ಕೋಟಿ ರು. ಬಿಡುಗಡೆ ಮಾಡಿಸಲು ಮುಖ್ಯಮಂತ್ರಿಗಳ ಸಚಿವಾಲಯವು ತರಾತುರಿಯಿಂದ ಓಡಾಡುತ್ತಿರುವುದು ಸಂಶಯಗಳಿಗೆ ದಾರಿಮಾಡಿಕೊಟ್ಟಿದೆ.

Hot this week

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...

ನೀಟ್‌ ಪರೀಕ್ಷೆಯಿಂದ ವಿನಾಯಿತಿ; ತಮಿಳುನಾಡು ಮಾದರಿಯಲ್ಲಿ ನಿರ್ಣಯ ಮಂಡಿಸಲು ರಾಜ್ಯ ಸಜ್ಜು, ಕಾನೂನುಬದ್ಧ ವಿನಾಯಿತಿಗೆ ಪ್ರಸ್ತಾವ

ಬೆಂಗಳೂರು; ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶ ವ್ಯವಸ್ಥೆಯು ರಾಜ್ಯದ ಶೈಕ್ಷಣಿಕ...

2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ

ಬೆಂಗಳೂರು; ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ...
Please Scan to make Your Contribution

Topics

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...

ನೀಟ್‌ ಪರೀಕ್ಷೆಯಿಂದ ವಿನಾಯಿತಿ; ತಮಿಳುನಾಡು ಮಾದರಿಯಲ್ಲಿ ನಿರ್ಣಯ ಮಂಡಿಸಲು ರಾಜ್ಯ ಸಜ್ಜು, ಕಾನೂನುಬದ್ಧ ವಿನಾಯಿತಿಗೆ ಪ್ರಸ್ತಾವ

ಬೆಂಗಳೂರು; ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶ ವ್ಯವಸ್ಥೆಯು ರಾಜ್ಯದ ಶೈಕ್ಷಣಿಕ...

2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ

ಬೆಂಗಳೂರು; ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ...

ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ; ಹಲವು ಟೆಂಡರ್‍‌ಗಳಿಗೆ ಬಿಡ್ಡರ್‍‌ಗಳೇ ಇಲ್ಲ, ಮರು ಟೆಂಡರ್‍ ಹಿಂದಿದೆಯೇ ಲಂಚಾವತಾರ?

ಬೆಂಗಳೂರು; ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ ಕಾಣಿಸಿಕೊಂಡಿದೆ....

30,01,169 ರೈತರಿಂದ 25,180.77 ಕೋಟಿ ಹೊರಬಾಕಿ; ರೈತರ ಸಾಲ ಮನ್ನಾ ಪ್ರಸ್ತಾವವಿಲ್ಲ, ರೈತರ ಕೆಂಗಣ್ಣಿಗೆ ಗುರಿಯಾಗಲಿದೆಯೇ ಸರ್ಕಾರ?

ಬೆಂಗಳೂರು; ಸಹಕಾರ ಸಂಸ್ಥೆಗಳ ಮೂಲಕ ರೈತರು ಪಡೆದಿರುವ ಕೃಷಿ ಸಾಲವನ್ನು ಮನ್ನಾ...

Related Articles

Popular Categories

error: Content is protected !!