Tuesday | May 26, 2026 |

ಹಣ-ಆಸ್ತಿ ದುರುಪಯೋಗ ಆರೋಪ; ಮುರುಘಾ ಶರಣರಿಗೆ ಹೈಕೋರ್ಟ್ ತುರ್ತು ನೋಟಿಸ್

ಬೆಂಗಳೂರು: ಚಿತ್ರದುರ್ಗ ಮುರುಘಾ ಮಠದ ಕೋಟ್ಯಂತರ ಹಣ ಹಾಗೂ ಭಾರಿ ಪ್ರಮಾಣದ ಸ್ಥಿರಾಸ್ತಿ ದುರುಪಯೋಗ ಆರೋಪದ ಅಸಲು ದಾವೆಗೆ ಸಂಬಂಧಿಸಿದಂತೆ ಬೃಹನ್ಮಠದ ಪೀಠಾಧಿಪತಿ ಮುರುಘಾ ಶರಣರಿಗೆ ತುರ್ತು ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

ಮಧ್ಯಂತರ ಅರ್ಜಿ‌ ಸೇರ್ಪಡೆ ಮೇಲ್ಮನವಿ ಕುರಿತಂತೆ ವಿಜಯಕುಮಾರ್ ಎಸ್.ದುರ್ಗದ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ (ಫೆ.23) ವಿಚಾರಣೆ ನಡೆಸಿತು.

ರಿಟ್ ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿರುವ ನ್ಯಾಯಪೀಠ, ಪ್ರತಿವಾದಿ ಮುರುಘಾ ಶರಣರು ಮತ್ತು ಮಠದ ಮಾಜಿ ಆಡಳಿತಾಧಿಕಾರಿ ಹಾಗೂ ಮಾಜಿ ಶಾಸಕ ಎಸ್.ಕೆ.ಬಸವರಾಜನ್ ಸೇರಿದಂತೆ ಏಳು ಜನ ಪ್ರತಿವಾದಿಗಳಿಗೆ ತುರ್ತು ನೋಟಿಸ್ ಜಾರಿಗೊಳಿಸಲು ಆದೇಶಿಸಿದೆ. ವಿಚಾರಣೆಯನ್ನು ಎರಡು ವಾರಗಳ ಕಾಲ ಮುಂದೂಡಲಾಗಿದೆ.

ಶರಣರ ವಿರುದ್ಧದ ಆರೋಪಗಳೇನು?

* ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿಯಾಗಿರುವ ಮುರುಘಾ ಶರಣರು ಶ್ರೀಮಠದ ಪದ್ಧತಿ, ಸಂಪ್ರದಾಯ ಹಾಗೂ ಧಾರ್ಮಿಕ ಕ್ರಿಯೆಗಳ ಅನೂಚಾನ ಪಾಲನೆ ಉಲ್ಲಂಘಿಸಿದ್ದಾರೆ.

* ಮಠದ ಹಣ, ಸ್ಥಿರಾಸ್ತಿಗಳನ್ನು ದುರುಪಯೋಗಪಡಿಸಿಕೊಳ್ಳುತ್ತಾ ಅವಿವೇಕದ ನಿರ್ವಹಣೆ ಮಾಡುತ್ತಿದ್ದಾರೆ.

* ಪೀಠಾಧಿಪತಿಯಾಗಿ ಧಾರ್ಮಿಕ ಕಟ್ಟುಪಾಡುಗಳನ್ನು ಮೀರಿ ನಡೆಯುತ್ತಿದ್ದಾರೆ.

ಆದ್ದರಿಂದ, “ಮುರುಘಾ ಶರಣರು ಚಿತ್ರದುರ್ಗ ಮುರುಘಾ ಮಠದ ಪೀಠಾಧಿಕಾರಿಯಾಗಿ ಕಾರ್ಯ ನಿರ್ವಹಣೆ ಮಾಡುವುದನ್ನು ಈ ಕೂಡಲೇ ಸ್ಥಗಿತಗೊಳಿಸಲು ಆದೇಶಿಸಬೇಕು” ಎಂಬುದು ಅರ್ಜಿದಾರರ ಅಸಲು ದಾವೆಯ ಕೋರಿಕೆ.

“ಬೆಂಗಳೂರು ನಗರದ ಸಿಸಿಎಚ್ ಕೋರ್ಟ್-56ರಲ್ಲಿ ಶರಣರ ವಿರುದ್ಧದ ಈ ಆರೋಪಗಳಿಗೆ ಸಂಬಂಧಿಸಿದಂತೆ ಯೋಜನಾ ದಾವೆ (ಸ್ಕೀಮ್ ಸೂಟ್) ದಾಖಲಾಗಿದ್ದು ಈ ಅಸಲು ದಾವೆಯಲ್ಲಿ ನನ್ನನ್ನೂ ಪ್ರತಿವಾದಿಯನ್ನಾಗಿ ಸೇರ್ಪಡೆ ಮಾಡಲು ಅಧೀನ ನ್ಯಾಯಾಲಯಕ್ಕೆ ನಿರ್ದೇಶಿಸಬೇಕು” ಎಂದು ಅರ್ಜಿದಾರ ವಿಜಯಕುಮಾರ್ ಕೋರಿದ್ದರು.

ಈ ಅರ್ಜಿಯನ್ನು ಅಧೀನ ನ್ಯಾಯಾಲಯ ತಿರಸ್ಕರಿಸಿತ್ತು. ಈ ಆದೇಶ ಪ್ರಶ್ನಿಸಿ ವಿಜಯಕುಮಾರ್ ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.

Hot this week

ಸರ್ಕಾರದ ಹಿತಾಸಕ್ತಿ, ಘನತೆಗೆ ಧಕ್ಕೆ ನೆಪ; ಸಮಿತಿ ರಚನೆಯಿಲ್ಲದೇ 21 ಪ್ಯಾಕೇಜ್‌ ಟೆಂಡರ್ ಅನುಮೋದನೆ, 4,791.95 ಕೋಟಿ ರು ಹಗರಣ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣೆಯ 21  ಪ್ಯಾಕೇಜ್‌ಗಳಿಗೆ ಟೆಂಡರ್‌ ಪ್ರಕ್ರಿಯೆಗೆ ಸಂಬಂಧಿಸಿದಂತೆ  ಐಎಎಸ್...

ಐಎಎಸ್‌ ವೃಂದದಲ್ಲಿ ಅನರ್ಹ 7 ಅಧಿಕಾರಿಗಳು ಮುಂದುವರಿಕೆ; ಬಂಡೆದ್ದ 25 ಕೆಎಎಸ್‌ ಅಧಿಕಾರಿಗಳು, ಅಖಾಡಕ್ಕಿಳಿದ ಡಿ ಕೆ ಶಿವಕುಮಾರ್

ಬೆಂಗಳೂರು;  ಕನಿಷ್ಟ 8 ವರ್ಷಗಳ ನಿಯಮಿತವಾಗಿ ಸೇವೆ ಸಲ್ಲಿಸಿರುವ  ಕೆಎಎಸ್‌ ಅಧಿಕಾರಿಗಳಿಗೆ...

‘ನಾನು ಹೇಳೋವರೆಗೂ ಕೂಡಂಗಿಲ್ಲ, ಗೆಟ್‌ ಔಟ್‌, ಗೆಟ್‌ ಔಟ್’; ಮಂಡಳಿ ಕಾರ್ಯದರ್ಶಿಯಿಂದಲೇ ಪ್ರಾಜೆಕ್ಟ್ ಇಂಜಿನಿಯರ್ ಸಮೀರ್ ಗೆ ಅವಮಾನ?

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧ್ಯಕ್ಷರಾಗಿರುವ  ಕರ್ನಾಟಕ ರಾಜ್ಯ ವಿಜ್ಞಾನ ಮತ್ತು...
Please Scan to make Your Contribution

Topics

ಸರ್ಕಾರದ ಹಿತಾಸಕ್ತಿ, ಘನತೆಗೆ ಧಕ್ಕೆ ನೆಪ; ಸಮಿತಿ ರಚನೆಯಿಲ್ಲದೇ 21 ಪ್ಯಾಕೇಜ್‌ ಟೆಂಡರ್ ಅನುಮೋದನೆ, 4,791.95 ಕೋಟಿ ರು ಹಗರಣ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣೆಯ 21  ಪ್ಯಾಕೇಜ್‌ಗಳಿಗೆ ಟೆಂಡರ್‌ ಪ್ರಕ್ರಿಯೆಗೆ ಸಂಬಂಧಿಸಿದಂತೆ  ಐಎಎಸ್...

ಐಎಎಸ್‌ ವೃಂದದಲ್ಲಿ ಅನರ್ಹ 7 ಅಧಿಕಾರಿಗಳು ಮುಂದುವರಿಕೆ; ಬಂಡೆದ್ದ 25 ಕೆಎಎಸ್‌ ಅಧಿಕಾರಿಗಳು, ಅಖಾಡಕ್ಕಿಳಿದ ಡಿ ಕೆ ಶಿವಕುಮಾರ್

ಬೆಂಗಳೂರು;  ಕನಿಷ್ಟ 8 ವರ್ಷಗಳ ನಿಯಮಿತವಾಗಿ ಸೇವೆ ಸಲ್ಲಿಸಿರುವ  ಕೆಎಎಸ್‌ ಅಧಿಕಾರಿಗಳಿಗೆ...

‘ನಾನು ಹೇಳೋವರೆಗೂ ಕೂಡಂಗಿಲ್ಲ, ಗೆಟ್‌ ಔಟ್‌, ಗೆಟ್‌ ಔಟ್’; ಮಂಡಳಿ ಕಾರ್ಯದರ್ಶಿಯಿಂದಲೇ ಪ್ರಾಜೆಕ್ಟ್ ಇಂಜಿನಿಯರ್ ಸಮೀರ್ ಗೆ ಅವಮಾನ?

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧ್ಯಕ್ಷರಾಗಿರುವ  ಕರ್ನಾಟಕ ರಾಜ್ಯ ವಿಜ್ಞಾನ ಮತ್ತು...

52 ಕ್ರಿಮಿನಲ್ ಪ್ರಕರಣಗಳ ಹಿಂತೆಗೆತಕ್ಕೆ ಮತ್ತೆ ಚಾಲನೆ; ಡಿಜಿಐಜಿಪಿ, ಕಾನೂನು ಇಲಾಖೆ ಅಸಮ್ಮತಿ ನಡುವೆಯೂ ಪ್ರಸ್ತಾವ

ಬೆಂಗಳೂರು; ರಾಜ್ಯದ ವಿವಿಧ ಪೊಲೀಸ್‌ ಠಾಣೆಗಳಲ್ಲಿ  ಜನಪ್ರತಿನಿಧಿಗಳ ವಿರುದ್ಧ  ದಾಖಲಾಗಿರುವ ಮತ್ತು...

ಸ್ವಚ್ಛ ನಗರಿಯ ಕಸದ ಕರಾಳತೆ; ಪರೀಕ್ಷೆಯಿಲ್ಲದೇ ವಿಷಕಾರಿ ತ್ಯಾಜ್ಯ ನಿರ್ವಹಣೆ, ಸಿಎಂ ತವರಿನಲ್ಲೇ ಅವೈಜ್ಞಾನಿಕ ವಿಲೇವಾರಿ?

ಬೆಂಗಳೂರು;  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ  ಮೈಸೂರು ಮಹಾನಗರಪಾಲಿಕೆ ವ್ಯಾಪ್ತಿಯ ...

Related Articles

Popular Categories

error: Content is protected !!