Saturday | March 7, 2026 |

ಸಾರಿಗೆ ಸಚಿವ ಸವದಿ ತವರು ಜಿಲ್ಲೆಯ ಹಳ್ಳಿಗಳಿಗಿಲ್ಲ ಸರ್ಕಾರಿ ಬಸ್‌ ಸೌಲಭ್ಯ

Support THE-FILE

spot_img

ಬೆಂಗಳೂರು; ದೇಶಕ್ಕೆ ಸ್ವಾತಂತ್ರ್ಯ ಬಂದು 74 ವರ್ಷಗಳಾಗಿದ್ದರೂ ರಾಜ್ಯದ ಹಲವು ಗ್ರಾಮಗಳು ಸರ್ಕಾರಿ ಬಸ್‌ಗಳನ್ನೇ ಕಂಡಿಲ್ಲ. ವಿಪರ್ಯಾಸವೆಂದರೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರ ತವರು ಜಿಲ್ಲೆ ಬೆಳಗಾವಿ ವಿಭಾಗದ ಹಲವು ಗ್ರಾಮಗಳಿಗೆ ಈವರೆವಿಗೂ ಸರ್ಕಾರಿ ಬಸ್‌ಗಳು ಸಂಚಾರವನ್ನೇ ಆರಂಭಿಸಿಲ್ಲ.

ವಿಶೇಷವೆಂದರೆ ಲಕ್ಷ್ಮಣ ಸವದಿ ಅವರು ಪ್ರತಿನಿಧಿಸುವ ಚಿಕ್ಕೋಡಿ ವಿಭಾಗದ(ಅಥಣಿ) ಎಲ್ಲಾ ಗ್ರಾಮಗಳಿಗೆ ಸರ್ಕಾರಿ ಬಸ್ ಸೌಲಭ್ಯ ಇದೆ. ಇಲ್ಲಿನ ಯಾವ ಗ್ರಾಮಗಳು ಕೂಡ ಸರ್ಕಾರಿ ಬಸ್ ಸೌಲಭ್ಯದಿಂದ ವಂಚಿತವಾಗಿಲ್ಲ. ಆದರೆ ಈ ವಿಭಾಗ ಹೊರತುಪಡಿಸಿ ಬೆಳಗಾವಿ ಜಿಲ್ಲೆಯ ಇತರ ವಿಭಾಗಗಳಲ್ಲಿನ ಗ್ರಾಮಗಳಿಗೆ ಸರ್ಕಾರಿ ಬಸ್‌ ಸಂಚಾರ ಸೌಲಭ್ಯ ನೀಡದೇ ತಾರತಮ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.

ಬೆಳಗಾವಿ ಜಿಲ್ಲೆಯ ಹಲವು ಗ್ರಾಮಗಳಿಗೆ ಸರ್ಕಾರಿ ಬಸ್‌ ಸೌಲಭ್ಯವಿಲ್ಲ ಎಂದು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬೆಳಗಾವಿ ವಿಭಾಗೀಯ ಸಂಚಾರ ಅಧಿಕಾರಿಯು ಅಥಣಿ ಮೂಲದ ಮಾಹಿತಿ ಹಕ್ಕು ಕಾರ್ಯಕರ್ತ ಭೀಮನಗೌಡ ಪರಗೊಂಡ ಅವರಿಗೆ ಮಾಹಿತಿ ಒದಗಿಸಿದ್ದಾರೆ.

ವಿಭಾಗೀಯ ಕೇಂದ್ರ ಸ್ಥಾನಮಾನ ಹೊಂದಿರುವ ಬೆಳಗಾವಿ ವಿಧಾನಸಭಾ ವ್ಯಾಪ್ತಿಯ ಹೆಗ್ಗೇರಿ, ಕುದರಿ, ರಾಮದುರ್ಗ ವಿಧಾನಸಭಾ ವ್ಯಾಪ್ತಿಯ ನಾಗನೂರು ತಾಂಡಾ, ಖಾನಾಪುರ ವಿಧಾನಸಭಾ ವ್ಯಾಪ್ತಿಯ ಬಾಳಗುಂದ, ಅಮಗಾಂವ್, ಹೊಳದಾ, ಜಮಗಾಂವ, ಮತ್ತು ಗವಳಿ ಸೇರಿ 8 ಗ್ರಾಮಗಳಿಗೆ ಸರ್ಕಾರಿ ಬಸ್‌ಗಳ ಸೌಲಭ್ಯವೇ ಇಲ್ಲ ಎಂಬ ಸಂಗತಿಯನ್ನು ಭೀಮನಗೌಡ ಅವರು ಬಹಿರಂಗಗೊಳಿಸಿದ್ದಾರೆ.

ಬೆಳಗಾವಿ ವಿಭಾಗದ ಬೆಳಗಾವಿಯಲ್ಲಿ 162, ಬೈಲಹೊಂಗಲದಲ್ಲಿ 124, ರಾಮದುರ್ಗದಲ್ಲಿ 134, ಖಾನಾಪುರದಲ್ಲಿ 215 ಸೇರಿದಂತೆ ಒಟ್ಟು 635 ಸರ್ಕಾರಿ ಬಸ್ಸುಗಳು ಸಂಚರಿಸುತ್ತಿವೆ. ಆದರೆ ಇನ್ನೂ 8 ಗ್ರಾಮಗಳಿಗೆ ಬಸ್‌ ಸಂಚಾರ ಸೌಲಭ್ಯ ಕಲ್ಪಿಸಿಲ್ಲವೇಕೆ ಎಂಬ ಪ್ರಶ್ನೆಗೆ ವಿಭಾಗೀಯ ಸಂಚಾರ ಅಧಿಕಾರಿ ಮಾಹಿತಿಯಲ್ಲಿ ಉತ್ತರಿಸಿಲ್ಲ.

ಕರ್ನಾಟಕ ಸರ್ಕಾರದ ಡಿಸಿಎಂ ಮತ್ತು ಸಾರಿಗೆ ಸಚಿವ ಹುದ್ದೆ ಪಡೆದಿರುವ ಲಕ್ಷ್ಮಣ ಸವದಿ ಅವರ ಸ್ವಂತ ಜಿಲ್ಲೆಯ 8 ಹಳ್ಳಿಗಳು ಸರ್ಕಾರಿ ಬಸ್‌ ಸೌಲಭ್ಯ ವಂಚಿತ ಆಗಿವೆ. ಇದೊಂದು ದೌರ್ಭಾಗ್ಯ. ಈ ಕೂಡಲೇ ಸಾರಿಗೆ ಸಚಿವರು ತಮ್ಮ ತವರು ಜಿಲ್ಲೆಯಲ್ಲಿ ಸರ್ಕಾರಿ ಬಸ್ ವಂಚಿತ ಗ್ರಾಮಗಳಿಗೆ ಸೌಲಭ್ಯ ಕಲ್ಪಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ  ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಲಿದ್ದೇನೆ

ಭೀಮನಗೌಡ ಪರಗೊಂಡ, ಮಾಹಿತಿ ಹಕ್ಕು ಕಾರ್ಯಕರ್ತ

ಸತೀಶ್‌ ಜಾರಕಿಹೊಳಿ, ರಮೇಶ್‌ ಜಾರಕಿಹೊಳಿ, ಉಮೇಶ್‌ ಕತ್ತಿ ಸೇರಿದಂತೆ ಸಕ್ಕರೆ ಸಾಹುಕಾರರನ್ನೇ ಹೊಂದಿರುವ ಬೆಳಗಾವಿ ಜಿಲ್ಲೆಯ ಹಲವು ಗ್ರಾಮಗಳಿಗೆ ಈವರೆವಿಗೂ ಸರ್ಕಾರಿ ಬಸ್‌ಗಳ ಸಂಚಾರ ಇಲ್ಲ. ಸರ್ಕಾರವನ್ನೂ ತಮ್ಮ ಅಂಕೆಯಲ್ಲಿಟ್ಟುಕೊಳ್ಳುವ ಅಥವಾ ನಿಯಂತ್ರಿಸುವ ಪ್ರಭಾವಿಗಳಿದ್ದರೂ ಜಿಲ್ಲೆಯ ಹಲವು ಗ್ರಾಮಗಳಿಗೆ ಸರ್ಕಾರಿ ಬಸ್‌ ಸಂಚಾರ ಸೌಲಭ್ಯವಿಲ್ಲದಿರುವುದು ಅವರೆಲ್ಲರ ಆಡಳಿತ ವೈಖರಿಗೆ ಕೈಗನ್ನಡಿ ಹಿಡಿದಂತಾಗಿದೆ.

Hot this week

ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ರಾಜ್ಯದ ಪಾಲು ಕುಸಿತ; ಕರ್ನಾಟಕಕ್ಕೆ ತೀವ್ರ ಸವಾಲು ಒಡ್ಡಲಿದೆಯೇ?

ಬೆಂಗಳೂರು;  ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ವರ್ಷದಿಂದ ವರ್ಷಕ್ಕೆ  ರಾಜ್ಯ ಪಾಲು ಕುಸಿತವಾಗುತ್ತಿರುವ...

ಕೃಷಿ, ಕೈಗಾರಿಕೆ ವಲಯದ ಪಾಲು ಇಳಿಕೆ; ಒಟ್ಟಾರೆ ಆಂತರಿಕ ಉತ್ಪನ್ನದಲ್ಲಿ ಹಿನ್ನಡೆ

ಬೆಂಗಳೂರು;  ರಾಜ್ಯದ ಒಟ್ಟು ಆಂತರಿಕ ಉತ್ಪನ್ನದಲ್ಲಿ 2024-25ರಲ್ಲಿ ಕೃಷಿ ವಲಯದ ಪಾಲು...

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

Topics

ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ರಾಜ್ಯದ ಪಾಲು ಕುಸಿತ; ಕರ್ನಾಟಕಕ್ಕೆ ತೀವ್ರ ಸವಾಲು ಒಡ್ಡಲಿದೆಯೇ?

ಬೆಂಗಳೂರು;  ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ವರ್ಷದಿಂದ ವರ್ಷಕ್ಕೆ  ರಾಜ್ಯ ಪಾಲು ಕುಸಿತವಾಗುತ್ತಿರುವ...

ಕೃಷಿ, ಕೈಗಾರಿಕೆ ವಲಯದ ಪಾಲು ಇಳಿಕೆ; ಒಟ್ಟಾರೆ ಆಂತರಿಕ ಉತ್ಪನ್ನದಲ್ಲಿ ಹಿನ್ನಡೆ

ಬೆಂಗಳೂರು;  ರಾಜ್ಯದ ಒಟ್ಟು ಆಂತರಿಕ ಉತ್ಪನ್ನದಲ್ಲಿ 2024-25ರಲ್ಲಿ ಕೃಷಿ ವಲಯದ ಪಾಲು...

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

Related Articles

Popular Categories

spot_imgspot_img
error: Content is protected !!