Friday | March 27, 2026 |

ಸಾರಿಗೆ ಸಚಿವ ಸವದಿ ತವರು ಜಿಲ್ಲೆಯ ಹಳ್ಳಿಗಳಿಗಿಲ್ಲ ಸರ್ಕಾರಿ ಬಸ್‌ ಸೌಲಭ್ಯ

Support THE-FILE

spot_img

ಬೆಂಗಳೂರು; ದೇಶಕ್ಕೆ ಸ್ವಾತಂತ್ರ್ಯ ಬಂದು 74 ವರ್ಷಗಳಾಗಿದ್ದರೂ ರಾಜ್ಯದ ಹಲವು ಗ್ರಾಮಗಳು ಸರ್ಕಾರಿ ಬಸ್‌ಗಳನ್ನೇ ಕಂಡಿಲ್ಲ. ವಿಪರ್ಯಾಸವೆಂದರೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರ ತವರು ಜಿಲ್ಲೆ ಬೆಳಗಾವಿ ವಿಭಾಗದ ಹಲವು ಗ್ರಾಮಗಳಿಗೆ ಈವರೆವಿಗೂ ಸರ್ಕಾರಿ ಬಸ್‌ಗಳು ಸಂಚಾರವನ್ನೇ ಆರಂಭಿಸಿಲ್ಲ.

ವಿಶೇಷವೆಂದರೆ ಲಕ್ಷ್ಮಣ ಸವದಿ ಅವರು ಪ್ರತಿನಿಧಿಸುವ ಚಿಕ್ಕೋಡಿ ವಿಭಾಗದ(ಅಥಣಿ) ಎಲ್ಲಾ ಗ್ರಾಮಗಳಿಗೆ ಸರ್ಕಾರಿ ಬಸ್ ಸೌಲಭ್ಯ ಇದೆ. ಇಲ್ಲಿನ ಯಾವ ಗ್ರಾಮಗಳು ಕೂಡ ಸರ್ಕಾರಿ ಬಸ್ ಸೌಲಭ್ಯದಿಂದ ವಂಚಿತವಾಗಿಲ್ಲ. ಆದರೆ ಈ ವಿಭಾಗ ಹೊರತುಪಡಿಸಿ ಬೆಳಗಾವಿ ಜಿಲ್ಲೆಯ ಇತರ ವಿಭಾಗಗಳಲ್ಲಿನ ಗ್ರಾಮಗಳಿಗೆ ಸರ್ಕಾರಿ ಬಸ್‌ ಸಂಚಾರ ಸೌಲಭ್ಯ ನೀಡದೇ ತಾರತಮ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.

ಬೆಳಗಾವಿ ಜಿಲ್ಲೆಯ ಹಲವು ಗ್ರಾಮಗಳಿಗೆ ಸರ್ಕಾರಿ ಬಸ್‌ ಸೌಲಭ್ಯವಿಲ್ಲ ಎಂದು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬೆಳಗಾವಿ ವಿಭಾಗೀಯ ಸಂಚಾರ ಅಧಿಕಾರಿಯು ಅಥಣಿ ಮೂಲದ ಮಾಹಿತಿ ಹಕ್ಕು ಕಾರ್ಯಕರ್ತ ಭೀಮನಗೌಡ ಪರಗೊಂಡ ಅವರಿಗೆ ಮಾಹಿತಿ ಒದಗಿಸಿದ್ದಾರೆ.

ವಿಭಾಗೀಯ ಕೇಂದ್ರ ಸ್ಥಾನಮಾನ ಹೊಂದಿರುವ ಬೆಳಗಾವಿ ವಿಧಾನಸಭಾ ವ್ಯಾಪ್ತಿಯ ಹೆಗ್ಗೇರಿ, ಕುದರಿ, ರಾಮದುರ್ಗ ವಿಧಾನಸಭಾ ವ್ಯಾಪ್ತಿಯ ನಾಗನೂರು ತಾಂಡಾ, ಖಾನಾಪುರ ವಿಧಾನಸಭಾ ವ್ಯಾಪ್ತಿಯ ಬಾಳಗುಂದ, ಅಮಗಾಂವ್, ಹೊಳದಾ, ಜಮಗಾಂವ, ಮತ್ತು ಗವಳಿ ಸೇರಿ 8 ಗ್ರಾಮಗಳಿಗೆ ಸರ್ಕಾರಿ ಬಸ್‌ಗಳ ಸೌಲಭ್ಯವೇ ಇಲ್ಲ ಎಂಬ ಸಂಗತಿಯನ್ನು ಭೀಮನಗೌಡ ಅವರು ಬಹಿರಂಗಗೊಳಿಸಿದ್ದಾರೆ.

ಬೆಳಗಾವಿ ವಿಭಾಗದ ಬೆಳಗಾವಿಯಲ್ಲಿ 162, ಬೈಲಹೊಂಗಲದಲ್ಲಿ 124, ರಾಮದುರ್ಗದಲ್ಲಿ 134, ಖಾನಾಪುರದಲ್ಲಿ 215 ಸೇರಿದಂತೆ ಒಟ್ಟು 635 ಸರ್ಕಾರಿ ಬಸ್ಸುಗಳು ಸಂಚರಿಸುತ್ತಿವೆ. ಆದರೆ ಇನ್ನೂ 8 ಗ್ರಾಮಗಳಿಗೆ ಬಸ್‌ ಸಂಚಾರ ಸೌಲಭ್ಯ ಕಲ್ಪಿಸಿಲ್ಲವೇಕೆ ಎಂಬ ಪ್ರಶ್ನೆಗೆ ವಿಭಾಗೀಯ ಸಂಚಾರ ಅಧಿಕಾರಿ ಮಾಹಿತಿಯಲ್ಲಿ ಉತ್ತರಿಸಿಲ್ಲ.

ಕರ್ನಾಟಕ ಸರ್ಕಾರದ ಡಿಸಿಎಂ ಮತ್ತು ಸಾರಿಗೆ ಸಚಿವ ಹುದ್ದೆ ಪಡೆದಿರುವ ಲಕ್ಷ್ಮಣ ಸವದಿ ಅವರ ಸ್ವಂತ ಜಿಲ್ಲೆಯ 8 ಹಳ್ಳಿಗಳು ಸರ್ಕಾರಿ ಬಸ್‌ ಸೌಲಭ್ಯ ವಂಚಿತ ಆಗಿವೆ. ಇದೊಂದು ದೌರ್ಭಾಗ್ಯ. ಈ ಕೂಡಲೇ ಸಾರಿಗೆ ಸಚಿವರು ತಮ್ಮ ತವರು ಜಿಲ್ಲೆಯಲ್ಲಿ ಸರ್ಕಾರಿ ಬಸ್ ವಂಚಿತ ಗ್ರಾಮಗಳಿಗೆ ಸೌಲಭ್ಯ ಕಲ್ಪಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ  ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಲಿದ್ದೇನೆ

ಭೀಮನಗೌಡ ಪರಗೊಂಡ, ಮಾಹಿತಿ ಹಕ್ಕು ಕಾರ್ಯಕರ್ತ

ಸತೀಶ್‌ ಜಾರಕಿಹೊಳಿ, ರಮೇಶ್‌ ಜಾರಕಿಹೊಳಿ, ಉಮೇಶ್‌ ಕತ್ತಿ ಸೇರಿದಂತೆ ಸಕ್ಕರೆ ಸಾಹುಕಾರರನ್ನೇ ಹೊಂದಿರುವ ಬೆಳಗಾವಿ ಜಿಲ್ಲೆಯ ಹಲವು ಗ್ರಾಮಗಳಿಗೆ ಈವರೆವಿಗೂ ಸರ್ಕಾರಿ ಬಸ್‌ಗಳ ಸಂಚಾರ ಇಲ್ಲ. ಸರ್ಕಾರವನ್ನೂ ತಮ್ಮ ಅಂಕೆಯಲ್ಲಿಟ್ಟುಕೊಳ್ಳುವ ಅಥವಾ ನಿಯಂತ್ರಿಸುವ ಪ್ರಭಾವಿಗಳಿದ್ದರೂ ಜಿಲ್ಲೆಯ ಹಲವು ಗ್ರಾಮಗಳಿಗೆ ಸರ್ಕಾರಿ ಬಸ್‌ ಸಂಚಾರ ಸೌಲಭ್ಯವಿಲ್ಲದಿರುವುದು ಅವರೆಲ್ಲರ ಆಡಳಿತ ವೈಖರಿಗೆ ಕೈಗನ್ನಡಿ ಹಿಡಿದಂತಾಗಿದೆ.

Hot this week

ಕದಂಬೋತ್ಸವ ಸೇರಿ ಸಾಂಸ್ಕೃತಿಕ ಉತ್ಸವಗಳಿಗೆ ಅನುದಾನ; 12.50 ಕೋಟಿ ರು ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಮೈಸೂರು ದಸರಾ ಸೇರಿದಂತೆ ಇನ್ನಿತರೆ ಜಿಲ್ಲಾಮಟ್ಟದ ವಿವಿಧ ಉತ್ಸವಗಳಿಗೆ 2024-25ಮತ್ತು...

ಪ್ರಚೋದನಕಾರಿ ಭಾಷಣ, ಕೋಮು ಗಲಭೆ; 3 ವರ್ಷದಲ್ಲಿ 50 ಪ್ರಕರಣಗಳು ದಾಖಲು, ಪಟ್ಟಿ ಬಹಿರಂಗ

ಬೆಂಗಳೂರು; ರಾಜ್ಯದ  ಕರಾವಳಿ ಭಾಗ ಸೇರಿದಂತೆ ವಿವಿಧೆಡೆ ಪ್ರಚೋದನಾಕಾರಿ ಭಾಷಣ ಮಾಡಿದವರು...

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

Topics

ಕದಂಬೋತ್ಸವ ಸೇರಿ ಸಾಂಸ್ಕೃತಿಕ ಉತ್ಸವಗಳಿಗೆ ಅನುದಾನ; 12.50 ಕೋಟಿ ರು ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಮೈಸೂರು ದಸರಾ ಸೇರಿದಂತೆ ಇನ್ನಿತರೆ ಜಿಲ್ಲಾಮಟ್ಟದ ವಿವಿಧ ಉತ್ಸವಗಳಿಗೆ 2024-25ಮತ್ತು...

ಪ್ರಚೋದನಕಾರಿ ಭಾಷಣ, ಕೋಮು ಗಲಭೆ; 3 ವರ್ಷದಲ್ಲಿ 50 ಪ್ರಕರಣಗಳು ದಾಖಲು, ಪಟ್ಟಿ ಬಹಿರಂಗ

ಬೆಂಗಳೂರು; ರಾಜ್ಯದ  ಕರಾವಳಿ ಭಾಗ ಸೇರಿದಂತೆ ವಿವಿಧೆಡೆ ಪ್ರಚೋದನಾಕಾರಿ ಭಾಷಣ ಮಾಡಿದವರು...

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

Related Articles

Popular Categories

error: Content is protected !!