Saturday | April 11, 2026 |

ಸೋಲಾರ್‌ ಹಗರಣದ ಮತ್ತೊಂದು ಮುಖ;ಗುಣಮಟ್ಟ ಪರಿಶೀಲಿಸದೆಯೇ 618 ಕೋಟಿ ಪಾವತಿ

ಬೆಂಗಳೂರು; ಉಗ್ರಾಣ ನಿಗಮಗಳ ಮೇಲ್ಛಾವಣಿಗಳ ಮೇಲೆ ಸೋಲಾರ್‌ ಅಳವಡಿಸುವ ಯೋಜನೆಗೆ ಸಂಬಂಧಿಸಿದಂತೆ ಕಾಮಗಾರಿಗಳ ಪರಿಮಾಣ ಮತ್ತು ಗುಣಮಟ್ಟ ಪರಿಶೀಲಿಸದೆಯೇ ಗುತ್ತಿಗೆದಾರರಿಗೆ 618 ಕೋಟಿ ಕೋಟಿ ಪಾವತಿಸಿರುವುದು ಇದೀಗ ಬಹಿರಂಗವಾಗಿದೆ.

ಈ ಯೋಜನೆಯ ಕಾಮಗಾರಿ ನಿರ್ವಹಿಸಿರುವ ಗುತ್ತಿಗೆದಾರರು ಸಲ್ಲಿಸಿದ್ದ 34 ಬಿಲ್‌ಗಳ ಪೈಕಿ 24 ಬಿಲ್‌ಗಳಿಗೆ ಶೇ. 80ರಷ್ಟು ಹಣ ಪಾವತಿಸಿಲಾಗಿದೆ. ಕಾಮಗಾರಿಗಳ ಪರಿಮಾಣ ಮತ್ತು ಗುಣಮಟ್ಟ ಪರಿಶೀಲಿಸದೆಯೇ ಪಾವತಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಈ ಸಂಬಂಧ ‘ದಿ ಫೈಲ್‌’ಗೆ ಟಿಪ್ಪಣಿ ಹಾಳೆಗಳು ಲಭ್ಯವಾಗಿವೆ.

24 ಬಿಲ್‌ಗಳಿಗೆ ಹಣ ಪಾವತಿಸಿರುವುದಷ್ಟೇ ಅಲ್ಲ, ಉಳಿದ ಶೇ.20ರಷ್ಟು ಮೊತ್ತದಲ್ಲಿನ ಎಲ್ಲಾ ಬಿಲ್‌ಗಳಿಗೂ ಶೇ.80ರಷ್ಟು ಪಾವತಿಯನ್ನು ಸಹ ಮಾಡಲಾಗಿದೆ. ಇಲ್ಲಿಯೂ ಸಹ ಪರಿಮಾಣ ಮತ್ತು ಗುಣಮಟ್ಟ ಪರಿಶೀಲಿಸದೆಯೇ ಪಾವತಿಸಿರುವುದು ಟಿಪ್ಪಣಿ ಹಾಳೆಯಿಂದ ಗೊತ್ತಾಗಿದೆ.
ಹಣ ಪಾವತಿಸಿದ ನಂತರ ಪರಿಮಾಣ ಮತ್ತು ಗುಣಮಟ್ಟವನ್ನು ಪಿಎಂಸಿಗಳಿಂದ ವರದಿ ಪಡೆದು 25ರಿಂದ 28ರವರೆಗಿನ 4 ಬಿಲ್‌ಗಳ ಮೊತ್ತದಲ್ಲಿ 21.15 ಕೋಟಿ ರು. ಪಾವತಿಸಲಾಗಿದೆ.

ಅದೇ ರೀತಿ ಒಟ್ಟಾರೆ 28 ಬಿಲ್‌ಗಳಿಗೆ ಸಂಬಂಧಿಸಿದಂತೆ ಒಟ್ಟು 612.18 ಕೋಟಿ ರು. ಗುತ್ತಿಗೆದಾರರಿಗೆ ಪಾವತಿಸಲಾಗಿದೆ. ಹಣ ಪಾವತಿಸುವ ಮೊದಲು ಪರಿಮಾಣ ಮತ್ತು ಗುಣಮಟ್ಟ ಪರಿಶೀಲಿಸದೆಯೇ ಇಷ್ಟೊಂದು ದೊಡ್ಡ ಮೊತ್ತವನ್ನು ಗುತ್ತಿಗೆದಾರರಿಗೆ ಪಾವತಿಸಿರುವುದೇ ಅಕ್ರಮ ನಡೆದಿದೆ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ.

 

ಇನ್ನು, ಹೆಚ್ಚುವರಿ/ಬದಲಾಯಿಸಿರುವ ಕಾಮಗಾರಿಗಳನ್ನು ಪೂರೈಸಿರುವ ಗುತ್ತಿಗೆದಾರರು ಹಣ ಪಾವತಿ ಸಂಬಂಧ ಕೌಂಟರ್ ಕ್ಲೈಮ್‌ಗಳನ್ನು ಮಧ್ಯಸ್ಥಿಕೆದಾರರಿಗೆ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಧ್ಯಸ್ಥಿಕೆದಾರರ ತೀರ್ಪಿನಂತೆ ಕ್ರಮ ಕೈಗೊಳ್ಳಬೇಕಾದ ಅನಿವಾರ್ಯತೆ ನಿಗಮಕ್ಕೆ ಬಂದೊದಗಿರುವುದು ಟಿಪ್ಪಣಿ ಹಾಳೆಯಿಂದ ತಿಳಿದು ಬಂದಿದೆ.

ಹಾಗೆಯೇ 600ರಿಂದ 800 ಕೋಟಿ ರು.ವರೆಗಿನ ಕಾಮಗಾರಿಗಳು ನಡೆಯುವ ಉಗ್ರಾಣ ನಿಗಮದಲ್ಲಿ ಪಿಡಬ್ಲ್ಯೂಡಿಯಿಂದ ನಿಯೋಜನೆ ಮೇರೆಗೆ ಒಬ್ಬ ಕಾರ್ಯನಿರ್ವಾಹಕ ಇಂಜಿನಿಯರ್‌, ನಿಗಮದ ಸಹಾಯಕ ಕಾರ್ಯಪಾಲಕ ಇಂಜಿಯರ್‌, ಮತ್ತು 5 ಸಹಾಯಕ ಇಂಜಿನಿಯರ್‌ಗಳಷ್ಟೇ ಇದ್ದಾರೆ. ಹೀಗಾಗಿ ಕಾಮಗಾರಿಗಳ ನಿರ್ವಹಣೆ ಕಷ್ಟಸಾಧ್ಯ ಎಂದು ತಾಂತ್ರಿಕ ಸಮಿತಿ ಸರ್ಕಾರಕ್ಕೆ ತಿಳಿಸಿದೆ.

ಬಹುತೇಕ ಕಾಮಗಾರಿಗಳು ವಿವಿಧ ಹಂತದಲ್ಲಿ ಇನ್ನೂ ಬಾಕಿ ಇದೆ. ಉಳಿದ ಕಾಮಗಾರಿಗಳನ್ನು ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸದಿದ್ದರೆ ಕಾಮಗಾರಿಗಳಿಗೆ ಈಗಾಗಲೇ ವಿನಿಯೋಗಿಸಿದ ಮೊತ್ತ ನಿರರ್ಥಕವಾಗಲಿದೆ. ಅಲ್ಲದೆ ಉಗ್ರಾಣಗಳ ನಿರ್ಮಾಣ ಉದ್ದೇಶವೇ ಈಡೇರದು. ಈ ಎಲ್ಲಾ ಹಿನ್ನೆಲೆಯಲ್ಲಿ ಹೆಚ್ಚುವರಿ ಮೊತ್ತ ಒದಗಿಸಬೇಕು ಎಂದು ಸಮರ್ಥನೆ ಮಾಡಿಕೊಂಡಿರುವ ನಿಗಮವು ಪರಿಷ್ಕೃತ ಅಂದಾಜಿಗೆ ಸರ್ಕಾರದ ಮಂಜೂರಾತಿ ಪಡೆಯುವುದು ಸೂಕ್ತ ಎಂದು ಸಮಿತಿ ಅಭಿಪ್ರಾಯಿಸಿರುವುದು ಟಿಪ್ಪಣಿ ಹಾಳೆಯಿಂದ ಗೊತ್ತಾಗಿದೆ.

Hot this week

ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ; ಅಧಿಕಾರಿಗಳ ವಿರುದ್ಧ ದಾಖಲಾಗದ ಎಫ್‌ಐಆರ್, ವರದಿ ಸಲ್ಲಿಸಲು ಸೂಚನೆ

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ತವರು ಕ್ಷೇತ್ರದಲ್ಲಿ...

13 ಪರ್ಸೆಂಟ್ ಕಮಿಷನ್‌ಗೆ ಬೇಡಿಕೆ; ಗುತ್ತಿಗೆದಾರರ ಸಂಘದಿಂದ ಮತ್ತೊಂದು ಪತ್ರ, ಕೋರ್ಟ್‌ ಕದ ತಟ್ಟಿದ ಗುತ್ತಿಗೆದಾರರು

ಬೆಂಗಳೂರು;  ಮಹಾತ್ಮಗಾಂಂಧಿ ನಗರ ವಿಕಾಸ ಯೋಜನೆ -1 ರ ಅಡಿಯಲ್ಲಿ ಕಾಮಗಾರಿ...

ಬಳಕೆಯಾಗದ ಅನುದಾನ; ಸರ್ಕಾರದ ಬೊಕ್ಕಸಕ್ಕೆ ಸಂದಾಯವಾಗಿಲ್ಲ 10,546.42 ಕೋಟಿ, ಸಿಎಜಿ ಆಕ್ಷೇಪಣೆ

ಬೆಂಗಳೂರು; ಕೃಷಿ ಮತ್ತು ತೋಟಗಾರಿಕೆ ಇಲಾಖೆ ಸೇರಿದಂತೆ 2024-25ನೇ ಸಾಲಿನಲ್ಲಿ   ಒಟ್ಟು...

ತರಕಾರಿ ಬೀಜಗಳ ಕಿಟ್ ವಿತರಣೆ; ದಾಸ್ತಾನು ಇಲ್ಲದ ಏಜೆನ್ಸಿಗೆ 4 ಜಿ ವಿನಾಯಿತಿ, ಬಹುಕೋಟಿ ಅಕ್ರಮ, ಭ್ರಷ್ಟಾಚಾರ ಸುಳಿಯಲ್ಲಿ ಸರ್ಕಾರ?

ಬೆಂಗಳೂರು; 2023-24 ಮತ್ತು 2025-26ನೇ ಸಾಲಿನವರೆಗೆ  ತೋಟಗಾರಿಕೆ ಇಲಾಖೆಯು ಜಾರಿಗೊಳಿಸಿದ್ದ  ...

Topics

ಬಳಕೆಯಾಗದ ಅನುದಾನ; ಸರ್ಕಾರದ ಬೊಕ್ಕಸಕ್ಕೆ ಸಂದಾಯವಾಗಿಲ್ಲ 10,546.42 ಕೋಟಿ, ಸಿಎಜಿ ಆಕ್ಷೇಪಣೆ

ಬೆಂಗಳೂರು; ಕೃಷಿ ಮತ್ತು ತೋಟಗಾರಿಕೆ ಇಲಾಖೆ ಸೇರಿದಂತೆ 2024-25ನೇ ಸಾಲಿನಲ್ಲಿ   ಒಟ್ಟು...

13,646.51 ಕೋಟಿ ಹೆಚ್ಚುವರಿ ವೆಚ್ಚ; ಗೃಹ ಲಕ್ಷ್ಮಿಯದ್ದೇ ಸಿಂಹಪಾಲು, ಹೆಚ್ಚುವರಿ ಖರ್ಚಿಗೆ ಕಾರಣಗಳೇ ಇಲ್ಲ, ಸಿಎಜಿ ಆಕ್ಷೇಪ

ಬೆಂಗಳೂರು;  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಇಲಾಖೆಯು 2024-25ನೇ ಸಾಲಿನಲ್ಲಿ ...

2,298 ಕೋಟಿ ರು ಮೊತ್ತದ ಬಿಲ್‌ ಬಾಕಿ; 276 ಕಾಮಗಾರಿ ಅಪೂರ್ಣ, ಬೊಕ್ಕಸ ಬರಿದಾಯಿತೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು ಕೈಗೆತ್ತಿಕೊಂಡಿದ್ದ  ಕಾಮಗಾರಿಗಳು ನಿಗದಿತ ಅವಧಿಯಲ್ಲಿ...

ಪುಸ್ತಕಗಳ ಖರೀದಿಯಲ್ಲಿ ವಂಚನೆ, ಭ್ರಷ್ಟಾಚಾರ ಆರೋಪ;ಎಚ್ ಟಿ ಪೋತೆ ಅವರ ವಿರುದ್ಧ ಕ್ರಮಕ್ಕೆ ಮೀನಮೇಷ

ಬೆಂಗಳೂರು;  ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ...

Related Articles

Popular Categories

error: Content is protected !!